Site icon Vistara News

Road accident | ತುಮಕೂರು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಅರ್ಚಕ ಬಲಿ

Tumkur priest accident

ತುಮಕೂರು: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ದೇವಾಲಯಕ್ಕೆ ತೆರಳುತ್ತಿದ್ದ ಅರ್ಚಕರೊಬ್ಬರು ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಬೆಳಧರ ಬಳಿ (Road accident) ನಡೆದಿದೆ.

ಚಿತ್ರದುರ್ಗ ಮೂಲದ ಅರ್ಚಕ ಬಾಬು ಮೃತ ದುರ್ದೈವಿಯಾಗಿದ್ದು, ಅವರು ಬೆಳಧರ ಬಳಿಯ ಹನುಮಗಿರಿ ದೇವಾಲಯಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಕೋರ ಪೊಲೀಸರು ಭೇಟಿ ನೀಡಿದ್ದು, ಅಲ್ಲೇ ಪ್ರಕರಣ ದಾಖಲಾಗಿದೆ. ತುಮಕೂರು ಜಿಲ್ಲಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ಬಾಬು ಅವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಸ್ಥಳದಲ್ಲಿ ಎಲ್ಲಾದರೂ ಸಿಸಿ ಟಿವಿ ಕ್ಯಾಮೆರಾಗಳಿವೆಯೇ ಎಂದು ಪರಿಶೀಲನೆ ನಡೆಸುತ್ತಿರುವ ಪೊಲೀಸರು ಅದರಲ್ಲಿರುವ ದಾಖಲೆಗಳನ್ನು ಗಮನಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ | Accident news | ಬೆಂಗಳೂರು- ಮೈಸೂರು ದಶಪಥದಲ್ಲಿ ಅಪಘಾತ, 2 ಸಾವು, ಹಲವರಿಗೆ ಗಾಯ

Exit mobile version