Site icon Vistara News

Road Accident | ಕಂದಕಕ್ಕೆ ಬಿದ್ದ ಕಾರು; ಅಪಾಯದಿಂದ ಪಾರಾದ ಪ್ರಯಾಣಿಕರು

Road accident

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣ ಸಮೀಪ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ (Road Accident) ಘಟನೆ ಮಂಗಳವಾರ ಸಂಜೆ (ಡಿ.೨೭) ನಡೆದಿದೆ. ದಾವಣಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಸಾಗುತ್ತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ | Salman Khan | ಬರ್ತ್​ಡೇ ದಿನ ಮಾಜಿ ಪ್ರಿಯತಮೆಗೆ ಮುತ್ತಿಟ್ಟ ಸಲ್ಮಾನ್ ಖಾನ್​​; ಯಾರವರು?

Exit mobile version