Site icon Vistara News

Road Accident: ಸಾಗರದಲ್ಲಿ ಕಾರು ಡಿಕ್ಕಿಯಾಗಿ ಪಾದಚಾರಿ ಸಾವು; ಚಾಲಕ ಪರಾರಿ

Road Accident

Road Accident

ಶಿವಮೊಗ್ಗ: ಸಾಗರದ ಆನಂದಪುರದಲ್ಲಿ ಕಾರೊಂದು ಡಿಕ್ಕಿ ಹೊಡೆದ (Road Accident) ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಶಿವಕುಮಾರ್ (56) ಮೃತ ದುರ್ದೈವಿ. ಪೊಲೀಸರು ಹಿಟ್ ಆ್ಯಂಡ್ ರನ್‌ ಪ್ರಕರಣ (Hit And Run Case) ದಾಖಲು ಮಾಡಿಕೊಂಡಿದ್ದಾರೆ.

ಶಿವಕುಮಾರ್‌ ಅವರು ಆನಂದಪುರದಿಂದ ಹೊರಟು ಯಡಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಸ್ವಲ್ಪವೇ ದೂರದಲ್ಲಿದ್ದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಶಿವಕುಮಾರ್‌ ಗಂಭೀರ ಗಾಯಗೊಂಡಿದ್ದರು.

ಸ್ಥಳೀಯರು ಗಾಯಗೊಂಡಿದ್ದ ಶಿವಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ನಡೆದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Mobile Addiction: ಅತಿಯಾಗಿ ಮೊಬೈಲ್ ಬಳಸ್ತೀರಾ? ನಿಮ್ಮ ಹೃದಯಕ್ಕಿದುವೇ ಡೇಂಜರ್!

ಖಾಸಗಿ ಬಸ್‌- ಟಿಟಿ ವಾಹನ ನಡುವೆ ಅಪಘಾತ

ಮೈಸೂರು ಹಾಗೂ ತಿ.ನರಸೀಪುರ ಮುಖ್ಯರಸ್ತೆಯ ಮೇಗಳಾಪುರ ಗ್ರಾಮದ ಬಳಿ ಖಾಸಗಿ ಬಸ್- ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಟಿಟಿ ವಾಹನ ಚಾಲಕ ಪಾರಾಗಿದ್ದಾರೆ. ಟಿಟಿ ವಾಹನವು ತಿ.ನರಸೀಪುರ ಕಡೆಯಿಂದ ಮೈಸೂರಿನ ಕಡೆ ತೆರಳುತ್ತಿತ್ತು. ಬಸ್ ಮತ್ತು ಟಿಟಿ ವಾಹನದಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಮೇಗಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version