Site icon Vistara News

Road accident : ಬೆಂಗಳೂರಿನಲ್ಲಿ ಖಾಸಗಿ ಬಸ್‌ ಅಟ್ಟಹಾಸ: ದ್ವಿಚಕ್ರ ವಾಹನದಲ್ಲಿದ್ದ ಮಹಿಳೆ ದಾರುಣ ಮೃತ್ಯು

accident woman death

ಬೆಂಗಳೂರು: ಬೆಂಗಳೂರಿನಲ್ಲಿ ಒಂದು ಕಡೆ ಬಿಎಂಟಿಸಿ ಬಸ್‌ಗಳು ಕಿಲ್ಲರ್‌ಗಳಾಗುತ್ತಿದ್ದರೆ, ಇನ್ನೊಂದು ಕಡೆ ಖಾಸಗಿ ಬಸ್‌ಗಳು ಕೂಡಾ ಸವಾಲೊಡ್ಡುತ್ತಿವೆ. ಯಶವಂತಪುರ ಬಳಿ ಮಂಗಳವಾರ ಮುಂಜಾನೆ ನಡೆದ ಅಪಘಾತದಲ್ಲಿ (Road accident) ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಮಹಿಳೆಯ ಮೇಲೆ ಖಾಸಗಿ ಬಸ್‌ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಸ್‌ ಬಳಿಕ ಸವಾರೆಯ ಮೇಲೆ ಹರಿಯಿತು. ಮಹಿಳೆಯ ತಲೆ ಮೇಲೆಯೇ ಬಸ್‌ ಹರಿದಿದೆ. ಯಶವಂತಪುರದ ಸತ್ವ ಅಪಾರ್ಟ್‌ಮೆಂಟ್‌ ಮುಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಮಹಿಳೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ಹೋಗುತ್ತಿರುವಂತೆ ಕಾಣುತ್ತಿದೆ.

ಶಿವಮೊಗ್ಗದಲ್ಲಿ ನಿವೃತ್ತ ಎಎಸ್‌ಐ ಅಪಘಾತಕ್ಕೆ ಬಲಿ

ಶಿವಮೊಗ್ಗ: ನಿವೃತ್ತ ಎಎಸ್ಐ ಅಪಘಾತದಲ್ಲಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಕುರುತ್ಯಪ್ಪ (64) ಮೃತಪಟ್ಟವರು.

ನಿನ್ನೆ ಹೊನ್ನಾಳಿ ರಸ್ತೆಯ ಮಡಿಕೆಚಿಲೂರ್ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ. ಇವರು ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರು (ಕೆಎ-17 ಎಂಎ-8385) ಡಿಕ್ಕಿಯಾಗಿದೆ. ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.

ಇದನ್ನೂ ಓದಿ | Road Accident: ಹೊಸಕೋಟೆಯಲ್ಲಿ ಸರಣಿ ಅಪಘಾತ, ಹಲವರಿಗೆ ಗಾಯ

Exit mobile version