Site icon Vistara News

Road Accident | ಖಾಸಗಿ ಬಸ್-ಟಿಪ್ಪರ್ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು, 15 ಮಂದಿಗೆ ಗಾಯ

Road Accident

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ಖಾಸಗಿ ಬಸ್ ಮತ್ತು ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ (Road Accident) ಮಹಿಳೆಯೊಬ್ಬರು ಮೃತಪಟ್ಟಿದ್ದು, 15 ಮಂದಿಗೆ ಗಾಯಗಳಾಗಿವೆ.

ರತ್ನಮ್ಮ ಮೃತ ಮಹಿಳೆಯಾಗಿದ್ದಾರೆ. ಎನ್.ಆರ್.ಪುರ ತಾಲೂಕಿನ ಮುತ್ತಿನ ಕೊಪ್ಪದ ಬಳಿ ಸೋಮವಾರ ಖಾಸಗಿ ಬಸ್‌ ಹಾಗೂ ಮರಳು ಸಾಗಿಸುತ್ತಿದ್ದ ಟಿಪ್ಪರ್‌ ಮುಖಾಮುಖಿ ಡಿಕ್ಕಿಯಾಗಿವೆ. ಈ ವೇಳೆ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಉಳಿದ 15 ಗಾಯಾಳುಗಳನ್ನು ಎನ್.ಆರ್.ಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ. ಅಪಘಾತದಲ್ಲಿ ಬಸ್‌ ಹಾಗೂ ಟಿಪ್ಪರ್‌ ಮುಂಭಾಗ ಭಾಗಶಃ ನಜ್ಜುಗುಜ್ಜಾಗಿದೆ. ಎನ್.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Crime News | ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ, ಯುವತಿ ತಂದೆಗೆ ಚಾಕು ಇರಿತ

Exit mobile version