Site icon Vistara News

Road Accident : ಬೆಂಗಳೂರಲ್ಲಿ ಭೀಕರ ಅಪಘಾತ; ಇಬ್ಬರು ಸವಾರರು ಮೃತ್ಯು

Road accident in Bengaluru Two riders Dead

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಎರಡು ಭೀಕರ ಅಪಘಾತಗಳು (Road Accident) ನಡೆದಿದೆ. ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಎರಡು ಅಪಘಾತಗಳಲ್ಲಿ ಇಬ್ಬರ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನ ಮೈಲಸಂದ್ರ ಬಳಿ ಬುಲೆಟ್ ಹಾಗೂ ಬಲೆನೋ ಕಾರಿನ ನಡುವೆ ಅಪಘಾತ ಸಂಭವಿಸಿದೆ.

ಧೃವ (32) ಮೃತ ದುರ್ದೈವಿ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬುಲೆಟ್‌ನಿಂದ ಕೆಳಗೆ ಬಿದ್ದ ಧೃವ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಡಿವೈಡರ್‌ಗೆ ಬೈಕ್‌ ಡಿಕ್ಕಿ

ಮತ್ತೊಂದೆಡೆ ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಚಂದ್ರಶೇಖರ್ (40) ಮೃತಪಟ್ಟ ಹಿಂಬದಿ ಸವಾರ. ಚಂದ್ರಶೇಖರ್ ಬಿಡದಿ ಸಮೀಪದ ಗಾಲ್ಪ್ ಕ್ಲಬ್‌ನಲ್ಲಿ ಕೋಚ್ ಆಗಿ‌ ಕೆಲಸ‌ ಮಾಡುತ್ತಿದ್ದರು. ಚಂದ್ರಶೇಖರ್‌ ತಮ್ಮ ಸ್ನೇಹಿತ ಕಿರಣ್ ಎಂಬಾತನೊಂದಿಗೆ ಬೈಕ್‌ನಲ್ಲಿ ಹೋಗುವಾಗ ಸುಮನಹಳ್ಳಿ ಡಿಪೋ ಮುಂದೆ ಅಪಘಾತ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಬೀದಿ ದೀಪ ಸರಿ‌ಪಡಿಸುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು; ಕಂಬದಲ್ಲೇ ನೇತಾಡಿದ ಶವ

Monish K: ಅಪಘಾತದಲ್ಲಿ ರಾಜ್ಯಮಟ್ಟದ ಫುಟ್‌ಬಾಲ್‌ ಆಟಗಾರ ಮೋನೀಶ್ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಜ್ಯಮಟ್ಟದ ಫುಟ್‌ಬಾಲ್‌ ಆಟಗಾರ ಮೋನೀಶ್‌ (27) (Monish K) ಮೃತಪಟ್ಟಿದ್ದಾರೆ. ಕೆ.ಆರ್.ಪುರಂ ಸಂಚಾರ ಠಾಣೆ ವ್ಯಾಪ್ತಿಯ ರಾಮಮೂರ್ತಿ ನಗರ ಮೇಲ್ಸೇತುವೆ ಬಳಿ ಶನಿವಾರ ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಮೋನೀಶ್‌ ಕೊನೆಯುಸಿರೆಳೆದಿದ್ದಾರೆ.

ಬಾಬುಸಾಪಾಳ್ಯ ನಿವಾಸಿಯಾಗಿದ್ದ ಮೋನೀಶ್ ಅವರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಕೆ.ಆರ್. ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರಿಕ್ರಮ ಎಫ್.ಸಿ, ಡೆಕ್ಕನ್ ಎಫ್.ಸಿ, ಯಂಗ್ ಚಾಲೆಂಜರ್ಸ್ ಎಫ್.ಸಿ ಸೇರಿದಂತೆ ವಿವಿಧ ಕ್ಲಬ್‌ಗಳ ಪರ‌ ಕಣಕ್ಕಿಳಿದಿದ್ದ ಮೋನೀಶ್, ಆಲ್ ಇಂಡಿಯಾ ಫುಟ್‌ಬಾಲ್‌ ‌ಫೆಡರೇಶನ್ (ಎಐಎಫ್ಎಫ್) – ಡಿ ನಿಂದ 2019ರಲ್ಲಿ ಕೋಚಿಂಗ್ ಲೈಸೆನ್ಸ್ ಪಡೆದಿದ್ದರು.

ಪ್ರಸ್ತುತ ಬೆಂಗಳೂರು ಡಿಸ್ಟ್ರಿಕ್ಟ್ ಫುಟ್‌ಬಾಲ್‌ ಅಸೋಸಿಯೇಷನ್ (ಬಿಡಿಎಫ್ಎ) – ಎ ಡಿವಿಷನ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು ಈಗಲ್ಸ್ ಎಫ್.ಸಿ ಪರ ಆಡುತ್ತಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ

ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ರೈಡ್‌ ಕ್ಯಾನ್ಸಲ್‌ ಮಾಡಿ ಮಹಿಳೆ ಮೇಲೆ ಆಟೊ ಚಾಲಕನ ಅಮಾನುಷ ಹಲ್ಲೆ

ಬೆಂಗಳೂರು: ಮಹಿಳಾ ಪ್ರಯಾಣಿಕಳ ಜತೆ ಆಟೋ ಚಾಲಕ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿರುವ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿದೆ. ಈ ಬಗ್ಗೆ ದೂರು ಪಡೆದ ಪೊಲೀಸರು ಆಟೋ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.

ವೈಟ್ ಫೀಲ್ಡ್ ಸಮೀಪದ ತೂಬರಹಳ್ಳಿಗೆ ತೆರಳಲು ಮಹಿಳೆ ಶನಿವಾರ ಆಟೋ ಬುಕ್ ಮಾಡಿದ್ದರು. ಬೆಳಗ್ಗೆ 8.30ಕ್ಕೆ ಆಟೋ ಸ್ಥಳಕ್ಕೆ ಬಂದ ನಂತರ ರೈಡ್‌ ಕ್ಯಾನ್ಸಲ್ ಆಗಿದೆ. ಹೀಗಾಗಿ ಚಾಲಕ ಸಿಟ್ಟಿಗೆದ್ದು ಮಹಿಳೆ ಜತೆ ಗಲಾಟೆ ಮಾಡಿ ರಸ್ತೆಯಲ್ಲಿ ಎಳೆದಾಡಿ ಹಲ್ಲೆ ನಡೆಸಿದ್ದಾನೆ.

ಆಟೋ ಚಾಲಕನ ದುಂಡಾವರ್ತನೆ ತೋರಿದ್ದರಿಂದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಆಟೋ ಚಾಲಕ ಅಲ್ಲಿದ್ದ ಪರಾರಿಯಾಗಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಯಾವುದೇ ದೂರು ದಾಖಲಿಸದೇ ಮಹಿಳೆ ಊರಿಗೆ ತೆರಳಿದ್ದಾರೆ.

ಮಹಿಳೆಯ ಸ್ನೇಹಿತನಿಂದ ಪೊಲೀಸರಿಗೆ ದೂರು

ಮಹಿಳೆ ಮೇಲೆ ಆಟೋ ಚಾಲಕ ಹಲ್ಲೆ ನಡೆಸಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬೇಸರ ಹೊರಹಾಕಿರುವ ಮಹಿಳೆಯ ಸ್ನೇಹಿತ ರಾಜೇಶ್‌ ಪ್ರಧಾನ್‌ ಅವರು, ರ‍್ಯಾಪಿಡೋ ಆಟೋ ರೈಡ್‌ ಸುರಕ್ಷಿತವೇ? ಇದು ನ್ಯಾಯವೇ? ಹಲ್ಲೆಗೊಳಗಾದ ಮಹಿಳೆ ನಮ್ಮ ಸ್ನೇಹಿತರಾಗಿದ್ದು, ನಾವು ಅಸಹಾಯಕರಾಗಿದ್ದೇವೆ. ಆಕೆ ಟ್ರೈನ್‌ಗೆ ಹೋಗಬೇಕಿದ್ದರಿಂದ ದೂರು ದಾಖಲಿಸಲು

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version