Site icon Vistara News

Road Accident: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಬೈಕ್‌ ಅಪಘಾತದಿಂದ ನರಳಾಡುತ್ತಿದ್ದವನ ಸಹಾಯಕ್ಕೆ ಬಂದ ಹೋಂ ಮಿನಿಸ್ಟರ್‌

The car overturned after the driver lost control, Home Minister comes to the aid of a man who was suffering from a bike accident

The car overturned after the driver lost control, Home Minister comes to the aid of a man who was suffering from a bike accident

ಆನೇಕಲ್/ಶಿವಮೊಗ್ಗ: ಬೆಂಗಳೂರು ಹೊರವಲಯ ಆನೇಕಲ್-ಚಂದಾಪುರ ಮುಖ್ಯರಸ್ತೆಯ ಅಲಯನ್ಸ್ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು (Road Accident) ಪಲ್ಟಿಯಾಗಿದೆ. ಶುಕ್ರವಾರ ಮುಂಜಾನೆ 5:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ.

ಪಲ್ಟಿಯಾದ ಕಾರು ನಜ್ಜುಗುಜ್ಜು

ಘಟನೆಯಲ್ಲಿ ಅದೃಷ್ಟವಶಾತ್‌ ಸಣ್ಣ ಪುಟ್ಟ ಗಾಯಗಳಿಂದ ಚಾಲಕ ಪಾರಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Lokayukta Raid: ಲೋಕಾಯುಕ್ತ ದಾಳಿ ವಿಚಾರ ಮಾಧ್ಯಮಗಳ ಮೂಲಕ ತಿಳಿದುಬಂದಿದೆ ಎಂದ ಗೃಹಸಚಿವ ಆರಗ ಜ್ಞಾನೇಂದ್ರ

ಬೈಕ್‌ ಅಪಘಾತ: ಗಾಯಾಳು ರಕ್ಷಣೆಗೆ ಧಾವಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿ ಸಮೀಪ ಯುವಕನೊಬ್ಬ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಹಸು ಅಡ್ಡ ಬಂದ ಪರಿಣಾಮ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದವನಿಗೆ, ಅದೇ ಮಾರ್ಗವಾಗಿ ಬರುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಪಚರಿಸಿದ್ದಾರೆ. ಗಾಯಾಳು ಯುವಕನಿಗೆ ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಗಾಯಾಳು ತೀರ್ಥಹಳ್ಳಿ ತಾಲೂಕಿನ ಸಿಂಗನಬಿದರೆ ನಿವಾಸಿ ಎಂದು ತಿಳಿದು ಬಂದಿದೆ.

ಬೆಂಗಳೂರು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version