Site icon Vistara News

Road Accident : ಬೊಲೆರೋ ಪಲ್ಟಿಯಾಗಿ ಮೂವರು ಸಾವು; 6 ಮಂದಿ ಗಂಭೀರ

Road Accident in daavagere

ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಎಂಬಲ್ಲಿ ಬೊಲೆರೋ ವಾಹನ ಪಲ್ಟಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆರು ಮಂದಿ ಗಂಭೀರ (Road Accident) ಗಾಯಗೊಂಡಿದ್ದಾರೆ.

ಭದ್ರಾವತಿಯ ಚಂದನಕೆರೆ ಗ್ರಾಮದ ನಾಗರಾಜ್(38), ಮಂಜುನಾಥ್(45), ಗೌತಮ್(17) ಮೃತ ದುರ್ದೈವಿಗಳು. ಅಡಿಕೆ ಕೊಯ್ಲು ಮುಗಿಸಿ ವಾಪಾಸ್ ಬರುವಾಗ ರಸ್ತೆಗೆ ಹಸು ಅಡ್ಡ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಪಲ್ಟಿಯಾಗಿದೆ. ಬೊಲೆರೋ ವಾಹನದಡಿ ಸಿಲುಕಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆರು ಮಂದಿ ಗಾಯಗೊಂಡಿದ್ದಾರೆ.

ನ್ಯಾಮತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ದಾಂಡೇಲಿ ಹೊರಟ್ಟಿದ್ದ ಯುವಕರ ಕಾರಿಗೆ ಅಪಘಾತ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಅಪಘಾತಕ್ಕೀಡಾಗಿದೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಹೊರವಲಯಲ್ಲಿ ಘಟನೆ ನಡೆದಿದೆ. ಸಂಕ್ರಮಣ ಹಿನ್ನೆಲೆಯಲ್ಲಿ ರಾಮದುರ್ಗದಿಂದ ನಾಲ್ವರು ದಾಂಡೇಲಿಗೆ ಹೊರಟಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಪೈಪ್‌ಗೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರದಲ್ಲಿದ್ದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದಪುಡೋ ಗ್ರಾಮದವರಾದ ಸಾಗರ್ ಹಿರೇಮಠ್, ಮಹಾಂತೇಶ್ ಬಡಿಗೇರ್, ಮಂಜುನಾಥ್ ಕರಡಿಗುಡ್ಡ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಳ್ಳೇಗಾಲದಲ್ಲಿ ಭತ್ತ ಕಟಾವು ಯಂತ್ರದ ಲಾರಿಗೆ ಬೈಕ್‌ ಡಿಕ್ಕಿ; ಭೀಕರ ಅಪಘಾತಕ್ಕೆ ಮೂವರು ಬಲಿ

ಚಾಮರಾಜನಗರ: ಭತ್ತ ಕಟಾವು ಮಾಡುವ ಯಂತ್ರದ ಲಾರಿ ಹಾಗೂ ಬೈಕ್ ನಡುವೆ ಅಪಘಾತ (Road Accident) ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಜಿನಕನಹಳ್ಳಿ ಬಳಿ ಭೀಕರ ಅಪಘಾತ (Kolegala Accident) ನಡೆದಿದೆ. ಲಾರಿಗೆ ಬೈಕ್‌ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಬಾಲಕ ಗಾಯಗೊಂಡಿದ್ದಾನೆ. ಸಂತೋಷ್(32), ಸೌಮ್ಯ (27), ನಿತ್ಯಸಾಕ್ಷಿ (4) ಮೃತ ದುರ್ದೈವಿಗಳು. ಗಾಯಾಳು ಅಭಿ (9) ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತಪಟ್ಟವರೆಲ್ಲ ಕೊಳ್ಳೇಗಾಲದ ಪಾಳ್ಯ ಗ್ರಾಮದವರು ಎನ್ನಲಾಗಿದೆ. ಒಂದೇ ಕುಟುಂಬದ ನಾಲ್ವರು ಬೈಕ್‌ನಲ್ಲಿ ಬರುವಾಗ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬೈಕ್‌ನಿಂದ ಬಿದ್ದ ರಭಸಕ್ಕೆ ಸಂತೋಷ್‌, ಸೌಮ್ಯ ದಂಪತಿ ಹಾಗೂ ಮಗಳು ನಿತ್ಯಸಾಕ್ಷಿ ಮೂವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗ ಅಭಿ ಗಂಭೀರ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗುತ್ತಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸಲಿದ್ದಾರೆ.

ಮಧ್ಯರಾತ್ರಿ ನಿಯಂತ್ರಣ ತಪ್ಪಿ ಓಡಿದ ಕಾರು; ಯುವಕ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ನಿಯಂತ್ರಣ ತಪ್ಪಿ ಓಡಿದ ಕಾರು ಸರಣಿ ಅಪಘಾತದಿಂದಾಗಿ (Road accident) ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಭಾನುವಾರ ಮಧ್ಯರಾತ್ರಿ (Car Hits tree and driver dead) ಈ ಘಟನೆ ನಡೆದಿದೆ. ಬಾಣಸವಾಡಿ ಸಮೀಪದ ಸಿಎಂಆರ್ ರೋಡ್ ನಲ್ಲಿ ರಾತ್ರಿ 2.30ರ ಸುಮಾರಿಗೆ ನಡೆದ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಮೆಲ್ವಿನ್ ಜೋಸ್ವಾ(25) ಎಂದು ಗುರುತಿಸಲಾಗಿದೆ (Bangalore News).

ಜೋಸ್ವಾ ಮೊದಲು ಮಧ್ಯರಾತ್ರಿ ಚಲಾಯಿಸಿಕೊಂಡು ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದಿತ್ತು. ಬಳಿಕ ಮರದ ಕೆಳಗೆ ನಿಂತಿದ್ದ ಕಾರು ಹಾಗೂ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಈ ಹಂತದಲ್ಲಿ ತೀವ್ರ ಗಾಯಗೊಂಡು ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತ ಸಂಭವಿಸಲು ಕಾರಣವೇನು? ಕುಡಿತದ ಮತ್ತಿನಲ್ಲಿದ್ದರೇ? ನಿದ್ದೆಯ ಮಂಪರೇ? ಅಥವಾ ವಾಹನದಲ್ಲಿ ಏನಾದರೂ ಸಮಸ್ಯೆ ಆಯಿತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version