Site icon Vistara News

Road Accident: ಮಾರುತಿ ಇಕೋ -ಬೈಕ್ ಮುಖಾಮುಖಿ ಡಿಕ್ಕಿ; ಮೂವರ ದುರ್ಮರಣ, ಮತ್ತೊಬ್ಬ ಗಂಭೀರ

car accident

ರಾಮನಗರ: ಮಾರುತಿ ಸುಜುಕಿ ಇಕೋ ಮತ್ತು ಬೈಕ್ ಡಿಕ್ಕಿಯಾಗಿ ಮೂವರು ದುರ್ಮರಣ ಹೊಂದಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ತಾಮಸಂದ್ರ ಗೇಟ್ ಬಳಿ ಶನಿವಾರ ರಾತ್ರಿ ನಡೆದಿದೆ.

ಕನಕಪುರ ಕಡೆಯಿಂದ ಬರುತ್ತಿದ್ದ ಬೈಕ್, ಎದುರಿಗೆ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಉತ್ತರ ಭಾರತ ಮೂಲದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಯುವಕರು, ಕೆಲಸ ಮುಗಿಸಿ ವಾಪಸ್‌ ಬರುವಾಗ ಅಪಘಾತ ನಡೆದಿದೆ. ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಯಾನಂದ್ ಸಾಗರ್ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ.

ಇದನ್ನೂ ಓದಿ | Missing Case : ನಾಪತ್ತೆಯಾದ ಬಾಲಕನ ಹಿಂದೆ ಭಾರಿ ನಿಗೂಢತೆ; ಬಾಂಬ್‌ ತಯಾರಿಕರ ಕೈಗೆ ಸಿಲುಕಿದ್ದನಾ?

ಅಪಘಾತಕ್ಕೆ ಇಬ್ಬರು ಬಲಿ; ಪಲ್ಟಿ ಹೊಡೆದ ಬೊಲೆರೋ, ಸವಾರನ ಮೇಲೆ ಬಿದ್ದ ಕಂಬ

ರಾಯಚೂರು/ದಾವಣಗೆರೆ: ಬೊಲೆರೋ ವಾಹನವು ಪಲ್ಟಿಯಾಗಿ ಯುವಕನೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾಯಚೂರಿನ ಯಾಪಲದಿನ್ನಿ ಬಳಿಯ ಎನ್‌ಎಚ್ 150 (C) ಮಾರ್ಗದಲ್ಲಿ ಅಪಘಾತ (Road Accident ) ಸಂಭವಿಸಿದೆ. ಆಂಜನೇಯ (23) ಮೃತ ದುರ್ದೈವಿ.

ಚಂದ್ರಬಂಡಾ ಗ್ರಾಮದ ಆಂಜನೇಯ ಸೇರಿ ಮೂವರು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದಾಗ ಒಮ್ಮೆಲೆ ಪಲ್ಟಿ ಹೊಡೆದಿದೆ. ಬೊಲೆರೋ ಅಡಿ ಸಿಲುಕಿದ್ದ ಆಂಜನೇಯನಿಗೆ ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ನಾಗರಾಜ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಲಕ ವಿರೇಶ್ ಎಂಬಾತ ನಿರ್ಲಕ್ಷಕ್ಕೆ ಈ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಬೊಲೆರೋ ವಾಹನದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಕಬ್ಬಿಣದ ವಸ್ತುಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ. ಹೀಗಾಗಿ ಭರಕ್ಕೆ ನಿಯಂತ್ರಣ ತಪ್ಪಿ ವಾಹನವು ಪಲ್ಟಿ ಹೊಡೆದಿದೆ ಎನ್ನಲಾಗಿದೆ ಸ್ಥಳಕ್ಕೆ ರಾಯಚೂರು ಎಸ್‌ಪಿ ನಿಖಿಲ್.ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಸ್ತೆ ತುಂಬೆಲ್ಲ ಚೆಲ್ಲಾಪಿಲ್ಲಿಯಾಗಿದ್ದ ಕಬ್ಬಿಣದ ಕಂಬಗಳನ್ನು , ವಾಹನವನ್ನು ತೆರವು ಮಾಡಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident : ಡೆಡ್ಲಿ ಆಕ್ಸಿಡೆಂಟ್‌ಗೆ ಸವಾರ ಮೃತ್ಯು; ಟ್ಯಾಂಕರ್‌ ಡಿಕ್ಕಿಗೆ ಉರುಳಿ ಬಿದ್ದ ಸ್ಕೂಲ್‌ ಬಸ್‌

ದಾವಣಗೆರೆಯಲ್ಲಿ ಬೈಕ್‌ ಸವಾರ ಪ್ರಾಣ ತೆಗೆದ ಕಂಬ

ದಾವಣಗೆರೆ ನಗರದ ನಿಟ್ಟುವಳ್ಳಿ 60 ಅಡಿ ರಸ್ತೆಯ ಆಂಜನೇಯ ದೇವಸ್ಥಾನದ ಬಳಿ ಬ್ಯಾನರ್ ಹಾಗೂ ಫ್ಲೆಕ್ಸ್‌ ಕಟ್ಟಲು ಕಂಬವೊಂದನ್ನು ನಿರ್ಮಿಸಲಾಗಿತ್ತು. ಆದರೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಟಿಟಿ ವಾಹನವು ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಟಿಟಿ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಎದುರಿಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ಕಂಬ ಬಿದ್ದಿದೆ.

ಕಂಬ ಬಿದ್ದ ರಭಸಕ್ಕೆ ಚಲಿಸುತ್ತಿದ್ದಾಗಲೇ ಬೈಕ್‌ನಿಂದ ಬಿದ್ದ ಸವಾರನ ತಲೆಯು ನೆಲಕ್ಕೆ ಬಡಿದಿತ್ತು. ಕೂಡಲೇ ಅಲ್ಲಿದ್ದ ಸ್ಥಳೀಯರು ಸವಾರನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆತ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ನಿಟ್ಟುವಳ್ಳಿ ಭಗೀರಥ ಸರ್ಕಲ್ ಬಳಿಯ ನಿವಾಸಿ ಗಣೇಶ್ (40) ಮೃತ ದುರ್ದೈವಿ. ನಡುರಸ್ತೆಯಲ್ಲಿ ಕಂಬ ನಿರ್ಮಿಸಿದ್ದಕ್ಕೆ ಸ್ಥಳೀಯರು ಆಕ್ರೋಶವನ್ನು ಹೊರಹಾಕಿದ್ದಾರೆ. ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Exit mobile version