Site icon Vistara News

Road Accident: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಮೂವರಿಗೆ ಗಂಭೀರ ಗಾಯ; ಮಂಡ್ಯ ಹೆದ್ದಾರಿಯಲ್ಲಿ ಹಳ್ಳಕ್ಕೆ ಬಿದ್ದ ಓಮ್ನಿ

Three seriously injured in series of accidents on Bengaluru Mysuru highway Omni falls into gorge on Mandya highway

ರಾಮನಗರ/ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ (Road Accident) ಸಂಭವಿಸಿದ್ದು, ಮೂರು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.

ಸರಣಿ ಅಪಘಾತಕ್ಕೊಳಗಾದ ಕಾರು

ಚನ್ನಪಟ್ಟಣ ತಾಲೂಕಿನ ಮತ್ತಿಕೆರೆ ಬಳಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹೈವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿದಿದೆ.

ಮಂಡ್ಯ ಹೆದ್ದಾರಿಯಲ್ಲಿ ಹಳ್ಳಕ್ಕೆ ಬಿದ್ದ ಓಮ್ನಿ ಕಾರು

ಮಂಡ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಹಳ್ಳಕ್ಕೆ ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಭಧ್ರಾವತಿ ಮೂಲದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಮಂಡ್ಯ ತಾಲೂಕಿನ ಗೋಪಾಲಪುರದ ಬಳಿ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: JDS Politics: ಲಕ್ಷ್ಮೀನರಸಿಂಹ ಸ್ವಾಮಿ‌ ದೇವಾಲಯದ ಸಂಪೂರ್ಣ ಉಸ್ತುವಾರಿ ಹೊತ್ತ ಪ್ರಜ್ವಲ್‌ ರೇವಣ್ಣ; ಮುಂದುವರಿದ ಕೈ-ದಳ ಜಟಾಪಟಿ

ಗೋಪಾಲಪುರದ ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಉಪಚರಿಸಿದ್ದಲ್ಲದೆ, ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version