Site icon Vistara News

Road accident | ಕುಷ್ಟಗಿ, ಮೈಸೂರಿನಲ್ಲಿ ಅಪಘಾತ: ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

koppala accident

ಕೊಪ್ಪಳ/ಮೈಸೂರು: ಮಳೆಯಿಂದಾಗಿ ರಸ್ತೆ ಅಪಘಾತಗಳ (Road accident) ಸಂಖ್ಯೆ ಏಕಾಏಕಿ ಹೆಚ್ಚಾಗಿದೆ. ಸಣ್ಣ ಮಳೆಗೆ ರಸ್ತೆಯಲ್ಲಿ ಬೈಕ್‌ಗಳು ಜಾರಿ ಬೀಳುತ್ತಿದ್ದು, ಸಾವೂ ಸಂಭವಿಸುತ್ತಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತ್ತು ಮೈಸೂರಿನಲ್ಲಿ ಸಂಭವಿಸಿದ ಎರಡು ಅಪಘಾತಗಳಲ್ಲಿ ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಪ್ಪಳದಲ್ಲಿ ನಡೆದ ಅಪಘಾತದಲ್ಲಿ ಹಾನಿಗೊಂಡ ಕಾರು

ಕುಷ್ಟಗಿ ಕಲಕೇರಿ ಕ್ರಾಸ್‌ನಲ್ಲಿ
ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೈಕ್ ಮತ್ತು ಕಾರು ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ಜಾಲಿಹಾಳ ಗ್ರಾಮದ ನಿವಾಸಿಯಾಗಿರುವ ಪರನಗೌಡ ಪಾಟೀಲ್ ಮೃತರು. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬೈಕ್
ಮೈಸೂರಿನ ಬನ್ನಿಮಂಟಪದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಬಳಿ ಬೈಕ್‌ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಸವಾರ ಮೃತಪಟ್ಟರು. ಕೈಲಾಸಪುರಂ ನಿವಾಸಿ ಸೋಮು(50) ಮೃತ ದುರ್ದೈವಿ. ಹಿಂಬದಿ ಸವಾರ ನಾಗರಾಜ್‌ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೆಲ್ಮೆಟ್ ಧರಿಸದೆ ಇದ್ದ ಸೋಮು ಅವರ ತಲೆಗೆ ಪೆಟ್ಟು ಬಿದ್ದು ಸಾವು ಸಂಭವಿಸಿದೆ. ಎನ್.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road accident | ಪಾದಚಾರಿಗೆ ಡಿಕ್ಕಿಯಾಗಿ ರಸ್ತೆಯಲ್ಲೇ ಸ್ಕಿಡ್‌ ಆಗಿ ಬಿದ್ದು ಪ್ರಾಣ ಕಳೆದುಕೊಂಡ ಬೈಕ್‌ ಸವಾರ

Exit mobile version