Site icon Vistara News

Road accident : ಜಾತ್ರೆಗೆ ಹೋಗಿ ವಾಪಸ್‌ ಬರುವಾಗ ಬೈಕ್‌ ಉರುಳಿ ಇಬ್ಬರು ಯುವಕರು ದಾರುಣ ಸಾವು

ನೆಲಮಂಗಲ ಅಪಘಾತ

#image_title

ನೆಲಮಂಗಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲಮಂಗಲ ಸಮೀಪದ ಸೂರಪ್ಪನಹಳ್ಳಿ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಅವರಿಬ್ಬರು ಜಾತ್ರೆಗೆ ಹೋಗಿ ವಾಪಸ್ಸಾಗುವಾಗ ದುರಂತ ಸಂಭವಿಸಿದೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೂರಪ್ಪನಹಳ್ಳಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರಿನ ನಿವಾಸಿಗಳಾದ ಗಿರೀಶ್ (22), ಯಶವಂತ್ (23) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಬೆಂಗಳೂರು ಉತ್ತರ ತಾಲೂಕಿನ ಮಾಕಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಾಗಡಿ ತಾಲೂಕಿನ ಹೆಬ್ಬಳಲು ಗ್ರಾಮದ ಜಾತ್ರೆಗೆಂದು ಹೋಗಿ ವಾಪಸ್ ಬರುವಾಗ ರಸ್ತೆಯಲ್ಲಿ ಬೈಕ್‌ ಪಲ್ಟಿಯಾಗಿದೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಸಾವು

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಅರಶಿನಕುಂಟೆಯಲ್ಲಿ ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕರಾಗಿರುವ ಶ್ರೀನಾಥ್ (49) ಮೃತ ಅವರು ಮೃತ ವ್ಯಕ್ತಿ. ಇವರು ನೆಲಮಂಗಲದ ಬಸವನಹಳ್ಳಿ ನಿವಾಸಿ.

ಶ್ರೀನಾಥ್‌ ಅವರು ದಾಸನಪುರದ ಬ್ಯಾಂಕ್‌ವೊಂದಕ್ಕೆ ಹೋಗಿ ವಾಪಸ್ ಬರುವಾಗ ಅವರ ಬೈಕ್‌ಗೆ ಡಿಕ್ಕಿ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಿಂದ ಶ್ರೀನಾಥ್‌ ಅವರ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : Bike Accident: ಹುಬ್ಬಳ್ಳಿಯಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾಗಿ ಯುವತಿ ಸಾವು

Exit mobile version