Site icon Vistara News

Road Accident | ಗವಿ ಸಿದ್ದೇಶ್ವರ ಜಾತ್ರೆಯಿಂದ ವಾಪಸಾಗುವಾಗ ಲಾರಿ ಹರಿದು ಇಬ್ಬರು ಬೈಕ್‌ ಸವಾರರ ಸಾವು

Road Accident

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ಲಾರಿ ಹರಿದು ಇಬ್ಬರು ಬೈಕ್‌ ಸವಾರರು ಮೃತಪಟ್ಟು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಎರಡು ಬೈಕ್‌ಗಳು ಡಿಕ್ಕಿಯಾಗಿ ಸವಾರರು ಕೆಳಗೆ ಬಿದ್ದಾಗ (Road Accident) , ಲಾರಿ ಹರಿದಿದೆ.

ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ನಿವಾಸಿಗಳಾದ ಅಲ್ಲಾಸಾಬ್ ನಧಾಪ್, ರಂಜಾನ್ ಬೇಗಂ ಮೃತರು. ಲಲಿತಾ ಹಂಚಿನಾಳ, ಅಪ್ಪಣ್ಣ ಕವಲೂರು ಗಾಯಾಳುಗಳು. ಕೊಪ್ಪಳ ಜಾತ್ರೆ ಮುಗಿಸಿಕೊಂಡು ಗದಗ ತಾಲೂಕಿನ ಕಣಗಿನಹಾಳಕ್ಕೆ ಇವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬೈಕ್‌ ಡಿಕ್ಕಿಯಾಗಿದ್ದರಿಂದ ಕೆಳಗೆ ಬಿದ್ದಿದ್ದಾರೆ. ಈ ವೇಲೆ ಲಾರಿ ಹರಿದಿದ್ದರಿಂದ ದುರಂತ ಸಂಭವಿಸಿದೆ.

ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಬೈಕ್‌ ಸವಾರರು ಇಬ್ಬರು ಬಲಿಯಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ | Organ Donation | ಬೈಕ್‌ ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

Exit mobile version