Site icon Vistara News

Road Accident : ಯಮ ಸ್ವರೂಪಿಯಾಗಿ ನುಗ್ಗಿ ಕೂಲಿ ಕಾರ್ಮಿಕರ ಮೇಲೆ ಹರಿದ ಕ್ಯಾಂಟರ್‌!

road accident two people dead

ಆನೇಕಲ್: ಇಲ್ಲಿನ ಹೆಬ್ಬಗೋಡಿ ಬಯೋಕಾನ್ ಕಂಪನಿ ಮುಂಭಾಗ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗಳ ಮೇಲೆ ಕ್ಯಾಂಟರ್‌ (Road Accident) ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೋಜ್ ಕುಮಾರ್ (36) ಮತ್ತು ಆದೀಶ್ (33) ಮೃತ ದುರ್ದೈವಿಗಳು.

ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಅಪಘಾತದ ದೃಶ್ಯ

ಹೊಟ್ಟೆಪಾಡಿಗಾಗಿ ದೂರದ ಬಿಹಾರ ಮತ್ತು ತಮಿಳುನಾಡಿನಿಂದ ಕೂಲಿ ಮಾಡಲು ಬಂದಿದ್ದರು. ಹೆಬ್ಬಗೋಡಿ ಸಮೀಪ ರಸ್ತೆ ಬದಿಯಲ್ಲಿ ಒಬ್ಬರ ಹಿಂದೆ ಒಬ್ಬರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಕ್ಯಾಂಟರ್ ವಾಹನವು ಇಬ್ಬರಿಗೂ ಗುದ್ದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ಇಬ್ಬರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಲ್ಟಿಯಾದ ಕ್ಯಾಂಟರ್‌ ವಾಹನ

ಬೆಂಗಳೂರು -ಹೊಸೂರು ಹೆದ್ದಾರಿಯಲ್ಲಿ ನಡೆದ ಈ ಭೀಕರ ಅಪಘಾತ ದೃಶ್ಯವು ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮಾರ್ಕೆಟ್‌ನಿಂದ ಹಣ್ಣುಗಳನ್ನು ತುಂಬಿಸಿಕೊಂಡು ಅತೀ ವೇಗವಾಗಿ ಬರುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಇವರಿಬ್ಬರಿಗೂ ಡಿಕ್ಕಿ ಹೊಡೆದು, ಬಳಿಕ ಬ್ಯಾರಿಕೇಡ್‌ಗೆ ಗುದ್ದಿ ಪಲ್ಟಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರೀಶಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version