Site icon Vistara News

Road Accident : ರಸ್ತೆ ಗುಂಡಿ ತಪ್ಪಿಸಲು ಹೋಗಿ ಪ್ರಾಣ ತೆತ್ತ; ಟಿಪ್ಪರ್‌ ಲಾರಿ ಡಿಕ್ಕಿಯಾಗಿ ಸವಾರ ಮೃತ್ಯು

Road Accident in karnataka

ಚಿತ್ರದುರ್ಗ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು, ಹಿಂಬದಿ ಸವಾರ (Road Accident) ಮೃತಪಟ್ಟಿದ್ದಾನೆ. ಚಿತ್ರದುರ್ಗ ತಾಲೂಕಿನ ಚೌಳಿಹಳ್ಳಿ ಬಳಿ ಈ ಘಟನೆ ನಡೆದಿದೆ. ಗೋಪಿ (24) ಮೃತ ದುರ್ದೈವಿ.

ಕೋಡಿಹಳ್ಳಿ ಗ್ರಾಮದ ಮಹಾಂತೇಶ್ ಎಂಬಾತ ಗೋಪಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೊರಟಿದ್ದ. ಚೌಳಿಹಳ್ಳಿ ಸೇತುವೆ ಬಳಿ ಬಂದಾಗ ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿದೆ. ರಕ್ತದ ಮಡುವಿನಲ್ಲಿ ಬಿದ್ದವರನ್ನು ಕೂಡಲೇ ಭರಮಸಾಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಗೋಪಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಮಳೆಗೆ ಸ್ಕಿಡ್‌ ಆಗಿ ಕಾಲುವೆಗೆ ಬಿದ್ದ ಬಸ್‌; ಟಿಟಿ ವಾಹನ ಪಲ್ಟಿ, ಶೆಡ್‌ಗೆ ನುಗ್ಗಿದ ಲಾರಿ

ಚಿಕ್ಕಬಳ್ಳಾಪುರದಲ್ಲಿ ಲಾರಿಗೆ ಬೈಕ್‌ ಸವಾರ ಬಲಿ

ಟಿಪ್ಪರ್ ಲಾರಿಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಚಲಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಸವಾರ ಗಂಭಿರ ಗಾಯಗೊಂಡಿದ್ದಾನೆ. ಚಿಕ್ಕಬಳ್ಳಾಪುರದ ಪೆರೆಸಂದ್ರ – ಗುಡಿಬಂಡೆ ಮಾರ್ಗದ ಮಂಡಿಕಲ್ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಕಮ್ಮಗುಟ್ಟಹಳ್ಳಿ ಗ್ರಾಮದ ಕಾರ್ತಿಕ್ (30) ಮೃತ ಬೈಕ್ ಸವಾರ, ಹಿಂಬದಿ ಸವಾರ ಆನಂದ್‌ಗೆ ಗಂಭಿರ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪೆರೆಸಂದ್ರದಿಂದ ಊಟ ತೆಗೆದುಕೊಂಡು ಬರುವಾಗ ಈ ಅಪಘಾತ ಸಂಭವಿಸಿದೆ. ಪೆರೆಸಂದ್ರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault Case : ಕೆಲಸ ಕೇಳಿದವಳಿಗೆ ಮನೆಗೆ ಬರಲೇ ಎಂದ ಹಿಗ್ಗಾಮುಗ್ಗಾ ಲತ್ತೆ ತಿಂದ!

ಜಿಟಿ ಜಿಟಿ ಮಳೆಗೆ ಕಾರು ಸ್ಕಿಡ್‌

ಕೊಡಗು ಜಿಲ್ಲೆಯಲ್ಲಿ ಮಳೆಗಾಲದಂತಹ‌ ಜಿಟಿ ಜಿಟಿ ಮಳೆಗೆ ಹೈರಾಣಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸುರಿದ ಮಳೆಯಿಂದ ಕಾರೊಂದು ಸ್ಕಿಡ್ ಆಗಿದೆ. ಶುಂಟಿಕೊಪ್ಪದಿಂದ ಮಡಿಕೇರಿ ಕಡೆಗೆ ಬರುತ್ತಿದ್ದಂತೆ ಮಾರುತಿ‌ ಕಾರು ಸ್ಕಿಡ್‌ ಆಗಿದ್ದು, ಎದುರಿಂದ ಬಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ರಾ.ಹೆ. 275ರ ಕೆದಕಲ್‌ ದೇವಾಲಯದ ಬಳಿ ಈ ಘಟನೆ ನಡೆದಿದೆ. ಕಾರು ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಸ್ಕಿಡ್ ಆಗಿ ಅಪಘಾತಕ್ಕೀಡಾದ ದೃಶ್ಯವು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version