Site icon Vistara News

Road Accident | ಪ್ರತ್ಯೇಕ ಕಡೆ ರಸ್ತೆ ಅಪಘಾತ; ಯುವಕ ಸಾವು, ಸಂಚಾರ ಅಸ್ತವ್ಯಸ್ತ

ವಿಜಯಪುರ/ಬೆಳಗಾವಿ/ಧಾರವಾಡ: ವಿಜಯಪುರದ ಜೆಎಸ್‌ಎಸ್ ಆಸ್ಪತ್ರೆಯ ಬಳಿ ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ (Road Accident) ಸ್ಥಳದಲ್ಲಿ ಒಬ್ಬರು ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ. ಹರೀಶ್‌ ಮೃತಪಟ್ಟಿರುವ ದುರ್ದೈವಿ.

ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಮಾಹಿತಿ ಲಭ್ಯವಾಗಿಲ್ಲ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿ-ಬೈಕ್‌ ನಡುವೆ ಭೀಕರ ರಸ್ತೆ ಅಪಘಾತ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಭೀಕರ ರಸ್ತೆ ಅಪಘಾತವಾಗಿದ್ದು, ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ ಆಗಿದೆ. ಗೋಕಾಕ್‌ನಿಂದ ಬೆಳಗಾವಿ ಕಡೆಗೆ ಬರುತ್ತಿದ್ದ ಬಸ್‌ಗೆ ಬೈಕ್ ಅಡ್ಡ ಬಂದಿದೆ. ಬೈಕ್‌ಗೆ ರಭಸವಾಗಿ ಬಸ್‌ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದವರಿಗೆ ಹಾಗೂ ಬೈಕ್‌ ಸವಾರರಿಗೆ ಯಾವುದೇ ರೀತಿಯ ಹಾನಿಯಾಗಿಲ್ಲ. ಬೈಕ್‌ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಂಕಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಬಿಆರ್‌ಟಿಎಸ್‌ ಬ್ಯಾರಿಕೇಡ್‌ಗೆ ಲಾರಿ ಡಿಕ್ಕಿ
ಧಾರವಾಡದಲ್ಲಿ ನಿಯಂತ್ರಣ ತಪ್ಪಿ ಬಿಆರ್‌ಟಿಎಸ್ ಬ್ಯಾರಿಕೇಡ್‌ಗೆ ಲಾರಿಯೊಂದು ಗುದ್ದಿದೆ. ಧಾರವಾಡ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುವಾಗ ಗಾಂಧಿನಗರದ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬಿಆರ್‌ಟಿಎಸ್ ಎಂಟು ಬ್ಯಾರಿಕೇಡ್ ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ. ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿ ಆಗಿದ್ದಾನೆ. ಇತ್ತ ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ವಾಹನ ತೆರವು ಮಾಡಿದರು.

ಇದನ್ನೂ ಓದಿ | Vulgar Behavior | ಕಿಕ್‌ ಏರಿಸಿಕೊಂಡು ಕಿರಿಕ್‌ ಮಾಡಿದವನಿಗೆ ಚಪ್ಪಲಿ ಸೇವೆ ಮಾಡಿದ ಮಹಿಳೆಯರು

Exit mobile version