Road Problem | ಮಳೆ ನೀರು ಸಮಸ್ಯೆ ಎಂದು ರಸ್ತೆ ಮಧ್ಯೆ ರಾಜಕಾಲುವೆ ಕಿತ್ತರು; 15 ದಿನವಾದರೂ ಸುಳಿಯದಾದರು! - Vistara News

ಕರ್ನಾಟಕ

Road Problem | ಮಳೆ ನೀರು ಸಮಸ್ಯೆ ಎಂದು ರಸ್ತೆ ಮಧ್ಯೆ ರಾಜಕಾಲುವೆ ಕಿತ್ತರು; 15 ದಿನವಾದರೂ ಸುಳಿಯದಾದರು!

Road Problem | ಮಳವಳ್ಳಿ ಪಟ್ಟಣದ ಹೃದಯ ಭಾಗದ ಅನಂತರಾಮ್ ವೃತ್ತದಲ್ಲಿನ ರಾಜ ಕಾಲುವೆಯನ್ನು ದುರಸ್ತಿಗಾಗಿ ತೆರೆದು ಎರಡು ವಾರ ಕಳೆದಿದ್ದರೂ ಕಾಮಗಾರಿ ಮಾಡದೆ ಸಂಚಾರಕ್ಕೆ ಸಮಸ್ಯೆಯಾಗಿದೆ.

VISTARANEWS.COM


on

tumkur readers corner
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಳವಳ್ಳಿ: ಅವೈಜ್ಞಾನಿಕ ಕಾಮಗಾರಿಗಳು ತೊಂದರೆ ಕೊಡುವುದರ ಜತೆಗೆ ದುರಸ್ತಿ ಕಾಮಗಾರಿಗಳು ಸಹ ಭಾರಿ ಸಮಸ್ಯೆಯನ್ನುಂಟು ಮಾಡುತ್ತಿದೆ. ಇಂಥದ್ದೊಂದು ಸಮಸ್ಯೆಗೆ ನಗರದ ಜನತೆ ತುತ್ತಾಗಿದ್ದು, ರಾಜ ಕಾಲುವೆಯನ್ನು ದುರಸ್ತಿಗಾಗಿ ಓಪನ್‌ ಮಾಡಿ 15 ದಿನ ಕಳೆದರೂ ಮುಚ್ಚುವ ಕೆಲಸ ಆಗಿಲ್ಲ. ಸಾರ್ವಜನಿಕ ಸಂಚಾರಕ್ಕೆ (Road Problem) ರಸ್ತೆ ಸಿಗುತ್ತಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಹೃದಯ ಭಾಗದ ಅನಂತರಾಮ್ ವೃತ್ತದಲ್ಲಿ ರಾಜ ಕಾಲುವೆ ಹಾದುಹೋಗಿದ್ದು, ಮಳೆಗಾಲದಲ್ಲಿ ತ್ಯಾಜ್ಯ ನೀರೆಲ್ಲವೂ ತುಂಬಿ ಅಕ್ಕಪಕ್ಕದ ಅಂಗಡಿಗಳಿಗೆ, ಮನಗಳಿಗೆ ನುಗ್ಗುತ್ತಿದೆ. ಈ ಸಂಬಂಧ ದೂರಿದ್ದಕ್ಕೆ ಬಂದ ಅಧಿಕಾರಿಗಳು ಚರಂಡಿಯ ಸ್ಲ್ಯಾಬ್‌ ಅನ್ನು ಕಿತ್ತು ಹೋಗಿದ್ದರು. ಬಳಿಕ ಕಣ್ಣೊರೆಸುವ ತಂತ್ರದಂತೆ ಅಲ್ಪ ಕೆಲಸ ಮಾಡಿ ಹಾಗೆಯೇ ಬಿಟ್ಟು ಹೋಗಲಾಗಿದ್ದು, ೧೫ ದಿನವಾದರೂ ಇತ್ತ ಸುಳಿವಿಲ್ಲದಂತಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕರು, ಮಾಜಿ ಶಾಸಕರು ಹಾಗೂ ಪುರಸಭೆ ಅಧ್ಯಕ್ಷರು ಸೇರಿದಂತೆ ನಾಗರಿಕರು ದಿನನಿತ್ಯ ಈ ರಸ್ತೆ ಮಾರ್ಗದಲ್ಲಿಯೇ ಸಂಚಾರ ಮಾಡುತ್ತಾರೆ. ಅವರಿಗೆ ಇದು ದಿನವೂ ಕಂಡು ರಸ್ತೆ ಬದಲಿಸಿ ಹೋಗುತ್ತಿದ್ದಾರೆಯೇ ವಿನಃ ಇತ್ತ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ.

ಇದನ್ನೂ ಓದಿ | Chess Prodigy | ಎದುರಾಳಿಯೇ ಇಲ್ಲ ಎಂದು ಎದೆ ತಟ್ಟಿಕೊಂಡವನ ಹಣೆಯ ಮೇಲೆ ಸೋಲಿನ ಷರಾ ಬರೆದ ಬಾಲಕ!

ವ್ಯಾಪಾರಕ್ಕೆ ಅನನುಕೂಲ
ಇತ್ತೀಚೆಗೆ ಸುರಿದ ಬಾರಿ ಮಳೆಯಲ್ಲಿ ರಸ್ತೆ ತುಂಬಾ ಮಳೆ ನೀರು ತುಂಬಿಕೊಂಡು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ವರ್ತಕರಿಗೆ ವ್ಯಾಪಾರಕ್ಕೆ ಕಷ್ಟವಾಗಿತ್ತು. ಈ ಬಗ್ಗೆ ದೂರು ನೀಡಿದ್ದರಿಂದ ಬಂದ ಪುರಸಭೆ ಸಿಬ್ಬಂದಿ ರಸ್ತೆ ಮಧ್ಯೆದಲ್ಲಿ ಮಧ್ಯದಲ್ಲಿ ಇದ್ದಂತ ಕಾಂಕ್ರಿಟ್ ಸ್ಲ್ಯಾಬ್‌ ಅನ್ನು ಅರ್ಧ ಭಾಗ ತೆರವುಗೊಳಿಸಿದ್ದರು.

ಸುಮಾರು 15 ದಿನವಾದರೂ ಇದರ ಬಗ್ಗೆ ಪುರಸಭೆ ಆಡಳಿತವಾಗಲಿ ಹಾಗೂ ಕೆಎಸ್‌ಎಚ್‌ಡಿಎ ಆಗಲೀ ಇದರ ಬಗ್ಗೆ ಯಾವುದೇ ಅಧಿಕಾರಿಗಳು ಗಮನ ಕೊಡುತ್ತಿಲ್ಲ. ಇದರಿಂದಾಗಿ ದಿನನಿತ್ಯ ವಾಹನಗಳ ಸಂಚಾರ, ಶಾಲೆ-ಕಾಲೇಜು ಮಕ್ಕಳಿಗೆ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಶನಿವಾರ, ಭಾನುವಾರ ಹಾಗೂ ರಜಾ ದಿನಗಳಲ್ಲಿ ವಾಹನ ದಟ್ಟಣೆಯುಂಟಾಗುತ್ತಿದೆ. ಆದರೂ, ಕ್ರಮವಹಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಸಂಬಂಧಪಟ್ಟ ಜನಪ್ರತಿನಿಧಿಗಳು, ಪುರಸಭೆ ಮತ್ತು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಅಥಾರಿಟಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

(ಚಿತ್ರ-ವರದಿ: ಸಂಜಯ್ ಬಾಬು)

________

ಪ್ರಿಯ ಓದುಗರೇ,
ನಿಮ್ಮ ಅನಿಸಿಕೆ, ಅಭಿಪ್ರಾಯ, ಸಲಹೆ-ಸೂಚನೆ, ನಾಗರಿಕ ಸಮಸ್ಯೆ ಇತ್ಯಾದಿ ಸಂಗತಿಗಳನ್ನು ಹೇಳಿಕೊಳ್ಳಲು ‘ವಿಸ್ತಾರʼದಲ್ಲಿ ನಿಮಗೆ ಮುಕ್ತ ಅವಕಾಶ ಇದೆ. ಸಾಂದರ್ಭಿಕ ಲೇಖನಗಳನ್ನೂ ನೀವು ಬರೆದು ಕಳುಹಿಸಬಹುದು. ಬರಹದ ಜತೆ ನಿಮ್ಮದೊಂದು ಫೋಟೊ ಕೂಡ ಇರಲಿ.
ನಮ್ಮ ಇಮೇಲ್‌ ವಿಳಾಸ: janasamparka@vistaranews.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Car Accident: ಅತಿ ವೇಗದಲ್ಲಿ ಕಾರು ಚಲಿಸುತ್ತಿದ್ದ ವೇಳೆ ಟೈರ್ ಬ್ಲಾಸ್ಟ್​ ಆಗಿದ್ದರಿಂದ ಕಾರಿನ ಚಾಲಕನ ನಿಯಂತ್ರಣ ತಪ್ಪಿದೆ. ಅದು ಬೈಕ್​ಗೆ ಗುದ್ದಿದ್ದು ಬೈಕ್ ಸವಾರು ಎಗರಿಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಅವರನ್ನು ರಾಯಬಾಗ ತಾಲೂಕಿನ ಬೆನ್ನಿವಾಡ ಗ್ರಾಮದ ರಮೇಶ ಪಾಟೀಲ ಎಂದು ತಿಳಿದುಬಂದಿದೆ.

VISTARANEWS.COM


on

Car Accident
Koo

ಬೆಳಗಾವಿ : ವೇಗವಾಗಿ ಚಲಿಸುತ್ತಿದ್ದ ಕಾರಿನ ಹಿಂಭಾಗದ ಟೈರ್​ ಬ್ಲಾಸ್ಟ್​​ ಆದ ಕಾರಣ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗೊಂದಕ್ಕೆ ಗುದ್ದಿ ಪಲ್ಟಿಯಾದ (Car Accident) ಹಿನ್ನೆಲೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ಪಟ್ಟಣದ ರೈಲ್ವೆ ಬ್ರಿಡ್ಜ್ ಬಳಿಯ ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದ ಕಾರಿನ ಟೈರ್​ ಬ್ಲಾಸ್ಟ್ ಆಗಿದ್ದರಿಂದ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂಬುದಾಗಿ ಸ್ಥಳೀಯರು ಹೇಳಿದ್ದಾರೆ.

ಅತಿ ವೇಗದಲ್ಲಿ ಕಾರು ಚಲಿಸುತ್ತಿದ್ದ ವೇಳೆ ಟೈರ್ ಬ್ಲಾಸ್ಟ್​ ಆಗಿದ್ದರಿಂದ ಕಾರಿನ ಚಾಲಕನ ನಿಯಂತ್ರಣ ತಪ್ಪಿದೆ. ಅದು ಬೈಕ್​ಗೆ ಗುದ್ದಿದ್ದು ಬೈಕ್ ಸವಾರು ಎಗರಿಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಅವರನ್ನು ರಾಯಬಾಗ ತಾಲೂಕಿನ ಬೆನ್ನಿವಾಡ ಗ್ರಾಮದ ರಮೇಶ ಪಾಟೀಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

ಕಾರಿನಲ್ಲಿ ಏಳು ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಉಳಿದವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾನಾಪೂರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

ರಿಪ್ಪನ್‌ಪೇಟೆ: ಚಾಲಕನ ನಿಯಂತ್ರಣ ತಪ್ಪಿ ಜೀಪ್‌ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Road Accident) ಸ್ಥಳದಲ್ಲೇ ಚಾಲಕ ಮೃತಪಟ್ಟಿರುವ ಘಟನೆ ಹೊಸನಗರ ತಾಲೂಕಿನ ಅರಸಾಳು ಬಳಿಯ 9ನೇ ಮೈಲಿಕಲ್ಲಿನ ಸಮೀಪ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್‌ ನ ನಡುವಿನ ಶೆಟ್ಟಿಕೆರೆ ಅಭಯಾರಣ್ಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದು ಉರುಳಿ ಬಿದ್ದಿದೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ.ವೈ. ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Lok Sabha Election 2024: ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಎಲ್ಲಿ ಮುಸ್ಲಿಂರಿಗೆ ನೀಡಲಾಗಿದೆ. ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ವಕ್ತಾರ ಹಾಗೂ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

VISTARANEWS.COM


on

Minister Dinesh Gundurao latest statement
Koo

ಬೆಂಗಳೂರು: ಚುನಾವಣೆ ಗೆಲ್ಲಬೇಕು ಎಂಬ ಒಂದೇ ಕಾರಣಕ್ಕೆ ಹಸಿ ಸುಳ್ಳುಗಳನ್ನು ಹರಡುತ್ತಿರುವ ಮೋದಿಯವರು, ಸಮಾಜದಲ್ಲಿ ಒಡುಕು ಮೂಡಿಸುವ ಸ್ವಾರ್ಥ ರಾಜಕಾರಣಕ್ಕೆ ಕೈ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ವಕ್ತಾರ ಹಾಗೂ ಸಚಿವ ದಿನೇಶ್ ಗುಂಡೂರಾವ್ (Lok Sabha Election 2024) ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಎಲ್ಲಿ ಮುಸ್ಲಿಮರಿಗೆ ನೀಡಲಾಗಿದೆ? ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ತಿಳಿಸಿದರು.

10 ವರ್ಷ ಏನು ಕೆಲಸ ಮಾಡದೇ ಅಧಿಕಾರ ಅನುಭವಿಸಿರುವ ಮೋದಿಯವರಿಗೆ ಈಗ ಮುಸ್ಲಿಂ ಮೀಸಲಾತಿ ಎಂಬ ಕಪೋಲ ಕಲ್ಪಿತ ವಿಷಯ ಜ್ಞಾನೋದಯವಾಗಿದೆಯೇ? ಇಷ್ಟು ವರ್ಷ ಸುಮ್ಮನಿದ್ದು ಈಗ ಚುನಾವಣೆ ಸಮಯದಲ್ಲೇ ಸುಳ್ಳು ಹೇಳಿಕೆ ನೀಡುತ್ತಿರುವುದು ಏಕೆ? ಬಹುಮತ ಪಡೆಯುವುದು ಕಷ್ಟ ಎಂಬುದು‌ ಮೋದಿಯವರಿಗೆ ಸ್ಪಷ್ಟವಾದಂತಿದೆ. ಹೀಗಾಗಿ ಈ ರೀತಿಯ ಸಮಾಜದಲ್ಲಿ ಒಡಕು ಮೂಡಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

ದಲಿತರ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗಿಲ್ಲ. ಇದಕ್ಕೆ ಸಂಸತ್ತಿನ ಎರಡು ಸದನಗಳ ಒಪ್ಪಿಗೆ ಮೂಲಕ ಕಾಯ್ದೆ ತಿದ್ದುಪಡಿಯಾಗಬೇಕಾಗುತ್ತೆ. ಪ್ರಧಾನಿಯಾದವರು ಈ ಮಟ್ಟಕ್ಕೆ ಸುಳ್ಳು ಹೇಳಬಾರದು. ಕರ್ನಾಟಕದಲ್ಲಿ ಮುಸ್ಲಿಂರನ್ನು ಹಿಂದುಳಿದ ಜಾತಿಗಳ 2B ವರ್ಗಕ್ಕೆ ಸೇರಿಸಿದ್ದು 30 ವರ್ಷಗಳ ಹಿಂದಿನ ಕಥೆ. ಚೆನ್ನಪ್ಪ ರೆಡ್ಡಿಯವರ ಆಯೋಗದ ವರದಿ ಅನ್ವಯ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಗತಿ‌ ಗಳನ್ನು ಗಮನದಲ್ಲಿಟ್ಟುಕೊಂಡು ಅಂದು 2B ವರ್ಗಕ್ಕೆ ಸೇರಿಸಲಾಯಿತು. ಇಲ್ಲಿಯವರೆಗು ಯಾರು ಇದನ್ನು ಪ್ರಶ್ನೆ ಮಾಡಿಲ್ಲ. ಈಗ ಚುನಾವಣೆ ಸಂದರ್ಭದಲ್ಲಿ ಸಮಾಜದಲ್ಲಿ ಒಡಕು ಮೂಡಿಸಿ ಮತ ಪಡೆಯುವ ಉದ್ದೇಶದಿಂದ ಮೋದಿಯವರು ಪ್ರಸ್ತಾಪಿಸಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್‌ ಎನ್ನುತ್ತಿದ್ದ ಮೋದಿಯವರು ಈಗ ಹೇಳುತ್ತಿರುವುದು ಏನು? ಅವರ ಹೇಳಿಕೆಗಳನ್ನು ಗಮನಿಸಿದರೆ ಸಬ್ ಕಾ ಸಾಥ್ ಎನ್ನುವುದು ಶುದ್ಧ ಸುಳ್ಳು ಎಂದಾಯ್ತು. ಒಂದು ಕೋಮಿನ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಮೋದಿಯವರಿಗೆ ಸಬ್ ಕಾ ಸಾಥ್ ಎಂದು ಹೇಳುವ ನೈತಿಕತೆ ಇದೆಯಾ. ಸಮಾಜದಲ್ಲಿ ಬೆಂಕಿ ಹಚ್ವುವ ಹೇಳಿಕೆಗಳನ್ನು ನೀಡುವುದರಲ್ಲಿ ಮೋದಿಯವರು ಯತ್ನಾಳ್ ಅವರನ್ನೂ ಮೀರಿಸುವ ಹಂತಕ್ಕೆ ಹೋದಂತಿದೆ‌ ಎಂದು ಟೀಕಿಸಿದ ಅವರು, ಸೋಲಿನ ಭೀತಿ ಮೋದಿಯವರನ್ನು ಕಾಡುತ್ತಿದೆ. ಹೀಗಾಗಿ ಮೋದಿಯವರು ಸುಳ್ಳಿನ ಆಶ್ರಯ ಪಡೆಯುತ್ತಿದ್ದಾರೆ. ಯಾವುದೇ ಆಧಾರದವಿಲ್ಲದೇ ದಲಿತರ ಮೀಸಲಾತಿ ಕಡಿತ ಮಾಡ್ತಿದೆ ಕಾಂಗ್ರೆಸ್ ಎಂದು ಹೇಳಿದ್ದಾರೆ. ದಾಖಲೆ ಸಮೇತ ಮಾತನಾಡಲಿ. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಲಿ ಎಂದು ಅವರು ಆಗ್ರಹಿಸಿದರು.‌

ಇದನ್ನೂ ಓದಿ: Karnataka Weather : ನಾಳೆ ಬೆಳಗಾವಿ, ಚಾಮರಾಜನಗರದಲ್ಲಿ ಮಳೆ ; ಉಳಿದೆಡೆ ಬಿಸಿಲ ಶಾಕ್‌

ನ್ಯಾಷನಲ್ ಒಬಿಸಿ ಕಮಿಷನ್‌ಗೆ ನಮ್ಮ ವಿಚಾರದಲ್ಲಿ ಹಸ್ತಕ್ಷೇಪ ಮಾಡುವ ಯಾವ ಅಧಿಕಾರವೂ ಇಲ್ಲ. ಇಷ್ಟು ವರ್ಷದಿಂದ ನ್ಯಾಷನಲ್ ಓಬಿಸಿ ಅಧ್ಯಕ್ಷ ಏನು ಮಾಡ್ತಿದ್ರು? ಕೇವಲ ಗೊಂದಲ ಮೂಡಿಸುವುದಕ್ಕೆ ಮಾತ್ರ ಹೇಳಿಕೆ ಕೊಟ್ಟಿದ್ದಾರೆ. ಅವರು ಮಧ್ಯಪ್ರವೇಶ ಮಾಡುವ ಅವಶ್ಯಕತೆ ಇಲ್ಲ, ನಾವು ಅವರಿಗೆ ಉತ್ತರ ಕೊಡುವ ಅಗತ್ಯವೂ ಇಲ್ಲ ಹಿಂದೆ ಬೊಮ್ಮಾಯಿ ಅವರು ಇದಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡು ಸೋತು ಸುಣ್ಣವಾಗಿ ಹೋಗಿದ್ದಾರೆ. ಇದಕ್ಕೆ ಕೈ ಹಾಕಿ ಕೈ ಸುಟ್ಟುಕೊಂಡೇ ಬಿಜೆಪಿ 65ಕ್ಕೆ ಇಳಿದಿದೆ. ಅವಿವೇಕಿಯ ರೀತಿ ಮಾತನಾಡಿರುವ ನ್ಯಾಷನಲ್ ಒಬಿಸಿ ಅಧ್ಯಕ್ಷರು ಈಗ ಯಾಕೆ ಹಸ್ತಕ್ಷೇಪ ಮಾಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಗುಡುಗಿದರು.

Continue Reading

ಕ್ರೀಡೆ

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

TCS World 10K Run : ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

VISTARANEWS.COM


on

Namma metro
Koo

ಬೆಂಗಳೂರು: ಏಪ್ರಿಲ್​ 28ರಂದು (ಭಾನುವಾರ) ಬೆಂಗಳೂರಿನ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಿಂದ ನಡೆಯಲಿರುವ TCS ವರ್ಲ್ಡ್ 10K ರನ್ (TCS World 10K Run ) ಪ್ರಯುಕ್ತ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ ನಮ್ಮ ಮೆಟ್ರೋ ರೈಲು ಸೇವೆ ಯನ್ನು 07:00 ಗಂಟೆಗೆ ಬದಲಾಗಿ ಮುಂಜಾನೆ 03:35 ಕ್ಕೆ ಆರಂಭಗೊಳ್ಳಲಿದೆ ಎಂದು ಮೆಟ್ರೊ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 03.35 ರಿಂದ 04.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 04.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

ಮತದಾನದ ದಿನದಂದು ನಮ್ಮ ಮೆಟ್ರೋ ಸೇವೆ ಹೀಗಿದೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ಮೆಟ್ರೊ ರೈಲಿನ ಸಂಚಾರ ಅವಧಿ ರಾತ್ರಿ 11.55ರ ಬದಲಿಗೆ 12.35ರವರೆಗೆ ವಿಸ್ತರಣೆಗೊಳ್ಳಲಿದೆ. ಮತದಾನಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗುವುದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.

ಏಪ್ರಿಲ್ 26, 2024 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ತನ್ನ ನಾಲ್ಕು ಪ್ರಮುಖ ನಿಲ್ದಾಣಗಳಾದ ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್, ಚಲ್ಲಘಟ್ಟ, ವೈಟ್ಫೀಲ್ಡ್ (ಕಾಡುಗೋಡು) ನಿಂದ ತನ್ನ ಕೊನೆಯ ರೈಲು ಸೇವೆಗಳನ್ನು 23.55 ಬದಲಿಗೆ (ರಾತ್ರಿ 11.55) 12.35ರವರೆಗೆ ವಿಸ್ತರಿಸುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಉದ್ಯೋಗ

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ನಿಮ್ಮನ್ನು ಹುಡುಕಿಕೊಂಡು ಬಂದಿದೆ ಸುವರ್ಣಾವಕಾಶ. ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಇನ್ಯಾಕೆ ತಡ? ಈಗಲೇ ಅಪ್ಲೈ ಮಾಡಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ (Hutti Gold Mines Company Limited)ಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (HGML Recruitment 2024). ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಉಳಿಕೆ ಮೂಲ / ಸ್ಥಳೀಯೇತರ ವೃಂದ).

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ).

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading
Advertisement
Car Accident
ಪ್ರಮುಖ ಸುದ್ದಿ7 mins ago

Car Accident : ಟೈರ್​ ಬ್ಲಾಸ್ಟ್​ ಆಗಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕಾರು; ಇಬ್ಬರ ದುರ್ಮರಣ

Narendra Modi
ದೇಶ23 mins ago

Narendra Modi: ಪ್ರಧಾನಿ ಮೋದಿಗೆ ಜಿ 7 ಶೃಂಗಸಭೆಯ ಆಹ್ವಾನ ನೀಡಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ

khalistan movement
ಪ್ರಮುಖ ಸುದ್ದಿ30 mins ago

khalistan Movement : ಲಂಡನ್​ ಭಾರತ ಹೈಕಮಿಷನ್​ ಮೇಲೆ ದಾಳಿ ಮಾಡಿದ್ದ ಖಲಿಸ್ತಾನಿ ಉಗ್ರ ಎನ್​ಐಎ ವಶಕ್ಕೆ

Minister Dinesh Gundurao latest statement
ಕರ್ನಾಟಕ1 hour ago

Lok Sabha Election 2024: ಮುಸ್ಲಿಂ ಮೀಸಲಾತಿ ಬಗ್ಗೆ ಮೋದಿ ಹೇಳಿದ್ದು ಸುಳ್ಳು: ದಿನೇಶ್ ಗುಂಡೂರಾವ್

Namma metro
ಕ್ರೀಡೆ1 hour ago

TCS World 10K Run : ಈ ದಿನದಂದು ಮೆಟ್ರೊ ರೈಲು ಸೇವೆ ಬೆಳಗ್ಗೆ 4.10ಕ್ಕೆ ಆರಂಭ

Job Alert
ಉದ್ಯೋಗ2 hours ago

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Viral Video
ವೈರಲ್ ನ್ಯೂಸ್2 hours ago

Viral Video: ಮಕ್ಕಳ ಮುಗ್ಧ ನಗುವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲು ಶಿಕ್ಷಕಿ ಏನು ಮಾಡಿದ್ದಾರೆ ನೋಡಿ…

world record
ಕ್ರೀಡೆ2 hours ago

World Record : ಒಂದೇ ಒಂದು ರನ್​ ನೀಡದೇ 7 ವಿಕೆಟ್​ ಉರುಳಿಸಿದ ಬೌಲರ್​​; ಕ್ರಿಕೆಟ್​ ಕ್ಷೇತ್ರದಲ್ಲಿ ವಿಶ್ವ ದಾಖಲೆ

Viral Video
ವೈರಲ್ ನ್ಯೂಸ್2 hours ago

Viral Video: ಸ್ಕೂಟರ್‌ನಲ್ಲೇ ಆನ್‌ಲೈನ್‌ ಮೀಟಿಂಗ್‌ ನಡೆಸಿದ ಮಹಿಳೆ; ಇದು ವರ್ಕ್‌ ಫ್ರಮ್‌ ಟ್ರಾಫಿಕ್‌ ಬ್ರೋ!

driver lost control and the jeep hit a tree driver died on the spot
ಕ್ರೈಂ2 hours ago

Road Accident: ಚಾಲಕನ ನಿಯಂತ್ರಣ ತಪ್ಪಿ ಜೀಪ್ ಮರಕ್ಕೆ ಡಿಕ್ಕಿ; ಚಾಲಕ ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ7 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ7 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ10 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202412 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET 2024 Exam
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌