ಬ್ರಾಹ್ಮಣರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ರೋಹಿತ್‌ ಚಕ್ರತೀರ್ಥ ಆರೋಪ - Vistara News

ಕರ್ನಾಟಕ

ಬ್ರಾಹ್ಮಣರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ: ಕಾಂಗ್ರೆಸ್‌ ವಿರುದ್ಧ ರೋಹಿತ್‌ ಚಕ್ರತೀರ್ಥ ಆರೋಪ

ಪಠ್ಯಪುಸ್ತಕದಲ್ಲಿ ದೋಷವಿದೆ ಎಂದು ಪ್ರತಿಭಟನೆ ನಡೆಸುತ್ತಿರುವವರು, ಬರಗೂರು ರಾಮಚಂದ್ರಪ್ಪ ಮತ್ತು ನಮ್ಮ ಸಮಿತಿಯ ಪಠ್ಯವನ್ನು ಓದುವ ವಿವೇಚನೆ ತೋರುತ್ತಿಲ್ಲ ಎಂದು ರೋಹಿತ್‌ ಚಕ್ರತೀರ್ಥ ಆಕ್ಷೇಪಿಸಿದರು.

VISTARANEWS.COM


on

Rakshit Shetty Richard Anthony Produce By Hombale
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಠ್ಯಪುಸ್ತಕ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸುತ್ತಿರುವವರು ಈ ವಿವಿಧ ಜಾತಿ, ಸಮುದಾಯಗಳನ್ನು ಟಾರ್ಗೆಟ್‌ ಮಾಡಿಕೊಂಡು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಆರೋಪಿಸಿದ್ದಾರೆ. ಬ್ರಾಹ್ಮಣರ ವಿರುದ್ಧ ಅತ್ಯಂತ ಕೇವಲ ಹಾಗೂ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂದೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ರೋಹಿತ್‌ ಚಕ್ರತೀರ್ಥ, ಪಠ್ಯಪುಸ್ತಕ ಕುರಿತಂತೆ ವಿರೋಧಿಗಳು ಒಂದೊಂದೆ ಸಮುದಾಯವನ್ನು ಕೆರಳಿಸುತ್ತಿದ್ದಾರೆ. ಈ ಹಿಂದೆ ಲಿಂಗಾಯತ, ಬಿಲ್ಲವ, ಒಕ್ಕಲಿಗ, ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು. ಈಗ ದಲಿತರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ನೂರಾರು ಪೋಸ್ಟರ್‌ಗಳನ್ನು ಕ್ರಿಯೇಟ್‌ ಮಾಡುತ್ತಿದ್ದಾರೆ. ಸಮಿತಿ ಹೆಸರಿನಲ್ಲೆ ಬರೆಯುತ್ತಿದ್ದಾರೆ, ಇದೆಲ್ಲವೂ ಸತ್ಯಕ್ಕೆ ದೂರವಾದದ್ದು. ಕಾಂಗ್ರೆಸ್‌ ಪಕ್ಷದ ನಾಯಕರ ಟ್ವೀಟ್‌, ಪೋಸ್ಟರ್‌ಗಳು ನಮಗೆ ಹಾಗೂ ವೈಯಕ್ತಿಕವಾಗಿ ನನಗೆ ಸಂಬಂಧಪಟ್ಟದ್ದಲ್ಲ ಎಂದರು.

ಇದನ್ನೂ ಓದಿ | ರೋಹಿತ್‌ ಚಕ್ರತೀರ್ಥ ಸಮಿತಿ ಮೇಲಿನ ಆರೋಪಕ್ಕೆ ಸಚಿವ ನಾಗೇಶ್‌ರವರ ಸಂಪೂರ್ಣ ವರದಿ ಇಲ್ಲಿದೆ

ಪ್ರತಿಭಟನೆ ಮಾಡುವವರು ವಿವೇಚನೆ ಮಾಡುತ್ತಿಲ್ಲ

ತಮ್ಮ ತೇಜೋವಧೆ ಮಾಡುವ ಹಾಗೂ ಹಣಿಯುವ ಕೆಲಸ ಮಾಡಲಾಗುತ್ತಿದೆ ಎಂದು ಶನಿವಾರ ಬೆಳಗ್ಗೆಯಷ್ಟೆ ಆರೋಪಿಸಿದ್ದ ಚಕ್ರತೀರ್ಥ ಇದೀಗ ಮತ್ತಷ್ಟು ವಿವರ ನೀಡಿದ್ದಾರೆ. ಪಠ್ಯಪುಸ್ತಕದಲ್ಲಿ ತಪ್ಪುಗಳಾಗಿವೆ, ಅವಮಾನಿಸಲಾಗಿದೆ ಎಂದು ಆರೋಪ ಮಾಡುತ್ತಿರುವವರು ಸತ್ಯಾಸತ್ಯತೆಯನ್ನು ವಿವೇಚನೆ ಮಾಡುತ್ತಿಲ್ಲ ಎಂದು ರೋಹಿತ್‌ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆ ಮಾಡುವವರು ಸತ್ಯಾಸತ್ಯತೆ ವಿವೇಚನೆ ಮಾಡುತ್ತಿಲ್ಲ. ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ನಮ್ಮ ಪಠ್ಯ ಇಟ್ಟುಕೊಂಡು ನೋಡಿದ್ದರೂ ಅವರಿಗೆ ವಿಷಯ ಸ್ಪಷ್ಟವಾಗುತ್ತಿತ್ತು. ಆದರೆ ಇವರು ಅದನ್ನು ನೋಡಲು ತಯಾರಿಲ್ಲ. ಕುವೆಂಪು ಅವರ ಪಠ್ಯದಲ್ಲೂ ಹೀಗೆಯೇ ಆಗಿದೆ. ಆದರೆ ಇವೆಲ್ಲವನ್ನೂ ನೋಡದೆ ವಿವಾದ ಮಾಡುತ್ತಿದ್ದಾರೆ. ಯಾರೂ ನಿಜವಾದ ವಿಷಯವನ್ನೇ ನೋಡುತ್ತಿಲ್ಲ ಎಂದರು.

ಸರ್ಕಾರ ಗಂಭೀರವಾಗಬೇಕಿತ್ತು

ಪಠ್ಯಪುಸ್ತಕ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿರುವ ಕುರಿತು ಸರ್ಕಾರ ಗಂಭೀರವಾಗಿ ಚಿಂತನೆ ಮಾಡಬೇಕಿತ್ತು ಎಂದು ರೋಹಿತ್‌ ಚಕ್ರತೀರ್ಥ ಹೇಳಿದರು. ಕುವೆಂಪು ಅವರ ಕುರಿತು ತಪ್ಪಿ ಮಾಹಿತಿ ಹರಿಬಿಡುತ್ತಿದ್ದಾಗ, ಇದನ್ನು ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಗಂಭೀರವಾಗಿ ತನಿಖೆ ಮಾಡಬೇಕಿತ್ತು. ಈ ರೀತಿ ಸರ್ಕಾರ ಗಂಭೀರವಾಗಿ ತನಿಖೆ ಮಾಡಿದೆಯೋ ಇಲ್ಲವೋ ಗೊತ್ತಿಲ್ಲ ಎಂದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ರೋಹಿತ್‌ ಚಕ್ರತೀರ್ಥ, ಸಿದ್ದರಾಮಯ್ಯನವರಿಗೆ ಕುವೆಂಪು ಅವರ ಬಗ್ಗೆ ಅಭಿಮಾನ ಇದ್ದಿದ್ದರೆ ಈ ಹಿಂದೆಯೇ ತನಿಖೆಗೆ ನೀಡಬೇಕಿತ್ತು. ನನ್ನನ್ನು ಬಲಿಪಶು ಮಾಡಿ ದಾಳಿ ಮಾಡುತ್ತಿದ್ದಾರೆ. ನಾನು ಬಲಿಪಶುವಾಗಿದ್ದೇನೆ. ಇವರೆಲ್ಲರೂ ಒಂದು ಜಾತಿಯನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಈ ಸಮಿತಿಯ ಮೂಲಕ ಬ್ರಾಹ್ಮಣ ಸಮುದಾಯವನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಸಮುದಾಯವನ್ನು ಕೇವಲವಾಗಿ, ಅವಹೇಳನಕಾರಿಯಾಗಿ ಚಿತ್ರಿಸುತ್ತಿದ್ದಾರೆ. ನಾನು ಎಂದಿಗೂ ಬ್ರಾಹ್ಮಣ ಪರ ಅಥವಾ ವಿರೋಧ ಮಾತನಾಡಿದವನಲ್ಲ. ಬ್ರಾಹ್ಮಣ ಎನ್ನುವ ಸಿಂಪಥಿಯೂ ನನಗೆ ಬೇಕಾಗಿಲ್ಲ. ಆದರೆ ಈ ವಿಚಾರ ಹೇಳಲೇಬೇಕಿದೆ ಎಂದರು.

ಇದನ್ನೂ ಓದಿ | ರೋಹಿತ್‌ ಚಕ್ರತೀರ್ಥ ಸಮಿತಿ ಒಳ್ಳೆಯ ಕೆಲಸ ಮಾಡಿದೆ, ಸಮಿತಿಯನ್ನು ವಿಸರ್ಜಿಸಲಾಗಿದೆ !: CM ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹುಬ್ಬಳ್ಳಿ

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Murder case : ಹುಬ್ಬಳ್ಳಿಯಲ್ಲಿ‌ ವ್ಯಕ್ತಿಯೊಬ್ಬನ ಬರ್ಬರ ಹತ್ಯೆಯಾಗಿದೆ. ಸರ್ಕಾರಿ ಶಾಲೆಯೊಂದರ ಕೊಠಡಿಯೊಳಗೆ ವ್ಯಕ್ತಿ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

Murder Case in hubballi
Koo

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ (Murder case) ಹೋಗಿದ್ದಾನೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿ (Hubballi News) ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಶರೀಫ್‌ಸಾಬ್ ಕಮಡೊಳ್ಳಿ ಎಂಬಾತ ಹತ್ಯೆಯಾದವನು. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲೆ ಶರೀಪ್‌ಸಾಬ್‌ನ ಕೊಲೆಯಾಗಿದೆ. ಶಶಿಧರ ಚೆನ್ನೋಜಿ ಎಂಬಾತ ಕೊಲೆ ಆರೋಪಿ ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Hit and Run: ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಕ್ಯಾಂಟರ್ ಚಾಲಕ ಅಪಘಾತಕ್ಕೆ ಕಾರಣನಾಗಿದ್ದಾನೆ. ಆಟೋಗೆ ಗುದ್ದಿ ಅದು ಪಲ್ಟಿಯಾದರೂ ನಿಲ್ಲಿಸದೆ ಕ್ಯಾಂಟರ್‌ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ವಿದ್ಯಾರ್ಥಿನಿ ಗಾನವಿ (17) ಸಾವಿಗೀಡಾಗಿದ್ದಾಳೆ.

VISTARANEWS.COM


on

shivamogga road accident hit and run
Koo

ಶಿವಮೊಗ್ಗ: ರಸ್ತೆ ಅಪಘಾತವೊಂದರಲ್ಲಿ (Road Accident) ಆಟೋ ರಿಕ್ಷಾಗೆ ಗುದ್ದಿ (Auto hit by Canter) ವಿದ್ಯಾರ್ಥಿನಿ ಸ್ಥಳದಲ್ಲೇ ಸಾವಿಗೀಡಾಗಲು (Student death) ಕಾರಣನಾಗಿ ನಿಲ್ಲಿಸದೆ ಪರಾರಿಯಾದ (Hit and Run) ಕ್ಯಾಂಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಡೆಡ್ಲಿ ಆಕ್ಸಿಡೆಂಟ್ (Shivamogga accident) ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಮೊಗ್ಗ ತಾಲೂಕಿನ ತಾವರೆ ಚಟ್ನಳ್ಳಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಕ್ಯಾಂಟರ್ ಚಾಲಕ ಅಪಘಾತಕ್ಕೆ ಕಾರಣನಾಗಿದ್ದಾನೆ. ಆಟೋಗೆ ಗುದ್ದಿ ಅದು ಪಲ್ಟಿಯಾದರೂ ನಿಲ್ಲಿಸದೆ ಕ್ಯಾಂಟರ್‌ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಆಟೋದಲ್ಲಿದ್ದ ವಿದ್ಯಾರ್ಥಿನಿ ಗಾನವಿ (17) ಸಾವಿಗೀಡಾಗಿದ್ದಾಳೆ.

ಇನ್ನು ಆಟೋದಲ್ಲಿದ್ದ ಗಾನವಿಯ ತಾಯಿ ಹಾಗೂ ಅಜ್ಜಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಟೋ ಚಾಲಕನಿಗೂ ಗಾಯಗಳಾಗಿವೆ. ಗಾನವಿ ತಾವರೆ ಚಟ್ನಳ್ಳಿಯ ಪೇಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ನಿವಾಸಿಯಾಗಿರುವ ಈಕೆ ರಜೆ ಊರಿಗೆ ತೆರಳಿದ್ದು, ಕಾರ್ಯಕ್ರಮ ಮುಗಿಸಿ ಕಾಲೇಜಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.

ಏಕಾಏಕಿ ಬಂದ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದೆ. ಹಿಂಡ್ ಆಂಡ್ ರನ್ ಮಾಡಿದ ಕ್ಯಾಂಟರ್‌ ಚಾಲಕನನ್ನು ಪೊಲೀಸರು ಚೀಲೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Continue Reading

ಮಳೆ

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Karnataka Rain: ಯಾದಗಿರಿ ಹಾಗೂ ವಿಜಯನಗರದಲ್ಲಿ ಸಿಡಿಲ ಹೊಡೆತಕ್ಕೆ ಇಬ್ಬರು ಕುರಿಗಾಹಿ ಮೃತಪಟ್ಟರೆ, ಜತೆಗಿದ್ದ ಹತ್ತಾರು ಕುರಿಗಳು ದಾರುಣವಾಗಿ ಪ್ರಾಣ ಕಳೆದುಕೊಂಡಿವೆ. ತಡರಾತ್ರಿ ಸುರಿದ ಭಾರಿ ಮಳೆಯು (Heavy Rain) ಅವಾಂತರವನ್ನೇ ಸೃಷ್ಟಿಸಿದೆ. ಮಳೆಯಿಲ್ಲದೆ ಕಂಗಲಾಗಿದ್ದ ಜನತೆಗೆ ಮಳೆಯಿಂದಲೇ ಭೀತಿ ಪಡುವಂತಾಗಿದೆ.

VISTARANEWS.COM


on

By

Karnataka Rain
Koo

ಯಾದಗಿರಿ: ಗುಡುಗು ಸಹಿತ ಬಿರುಗಾಳಿ ಮಳೆಗೆ (Heavy Rain) ಸಾವು-ನೋವು ಸಂಭವಿಸಿದೆ. ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಜನರು ಬೆಚ್ಚಿ ಬಿದ್ದಿದ್ದಾರೆ. ಯಾದಗಿರಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಿಡಿಲಿಗೆ ಕುರಿಗಾಹಿ ಸೇರಿ 20ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಕುರಿಗಾಹಿ ಬುಯೆಪ್ಪ (22) ಎಂಬುವವರು ಮೃತಪಟ್ಟಿದ್ದಾರೆ. ಕುರಿಗಾಹಿ ಜತೆಗೆ ಸ್ಥಳದಲ್ಲೇ 7 ಕುರಿಗಳು ಮೃತಪಟ್ಟಿವೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಐಕೂರು ಗ್ರಾಮದಲ್ಲೂ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಸಿಡಿಲು ಬಡಿದು ಐಕೂರು ಗ್ರಾಮದಲ್ಲಿ 10 ಕುರಿಗಳು ಸಾವನ್ನಪ್ಪಿವೆ. ಐಕೂರು ಗ್ರಾಮದ ರಾಯಪ್ಪ ಎಂಬ ಕುರಿಗಾಹಿಗೆ ಸೇರಿದ ಕುರಿಗಳನ್ನು ಜಮೀನಿನಲ್ಲಿರುವ ಕುರಿ ಹಟ್ಟಿಯಲ್ಲಿ ಬಿಡಲಾಗಿತ್ತು. ನಿನ್ನೆ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ವಿಜಯನಗರದಲ್ಲೂ ಸಿಡಿಲಿಗೆ ರೈತ ಸಾವು

ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಚೌಡಪ್ಪ( 33) ಮೃತ ದುರ್ದೈವಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅಡವಿ ಮಲ್ಲಾಪುರದಲ್ಲಿ ಘಟನೆ ನಡೆದಿದೆ. ಮೇವಿನ ಬಣವೆಗೆ ಹೋದಿಗೆ ಹಾಕುತ್ತಿದ್ದಾಗ ಸಿಡಿಲು ಬಡಿದು ಚೌಡಪ್ಪ ಮೃತಪಟ್ಟಿದ್ದಾರೆ. ಹರಪನಹಳ್ಳಿ ತಾಲೂಕಾಡಳಿತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಪಿಡಬ್ಲೂಡಿ ಕಚೇರಿಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಸುಕಿನ ಜಾವ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಪಿಡಬ್ಲೂಡಿ ಕಚೇರಿ ಆವರಣ ಹಾಗೂ ಮನೆಗೆ ಮಳೆ ನೀರು ನುಗ್ಗಿದೆ. ಯಾದಗಿರಿ ನಗರದ ಸುಭಾಷ್ ವೃತ್ತದ ಸಮೀಪದಲ್ಲಿರುವ ಪಿಡಬ್ಲೂಡಿ ಕಚೇರಿ ಹಾಗೂ ಮನೆಯೊಳಗೆ ನೀರು ನುಗ್ಗಿದ ಕಾರಣಕ್ಕೆ ಪರದಾಡಬೇಕಾಯಿತು. ಸೋಮವಾರ ಬೆಳಗಿನಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಬಿಸಿಲಿಗೆ ತತ್ತರಿಸಿದ ಜನರಿಗೆ ವರುಣ ತಂಪೆರೆದಿದ್ದಾನೆ.

ರಾಯಚೂರಿನಲ್ಲಿ ರಾತ್ರಿ ಇಡೀ ಮಳೆ ಅಬ್ಬರ

ರಾಯಚೂರಿನಲ್ಲಿ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಈ ಬೇಸಿಗೆಯಲ್ಲೇ ಮೊದಲ ಬಾರಿಗೆ ವರುಣ ದರ್ಶನ ಕೊಟ್ಟಿದ್ದಾನೆ. ಬಿಸಿಲಿನ ಸೆಕೆಯಿಂದ ಕಂಗೆಟ್ಟ ಜನರಿಗೆ ಸುಮಾರು 5 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಇಡೀ ರಾಯಚೂರು ನಗರದಾದ್ಯಂತ ವಿದ್ಯುತ್ ವ್ಯತ್ಯಯವಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಯಲ್ಲಿ ರಸ್ತೆ ಕಾಣದೆ ಅಪಘಾತ

ಮಳೆಯಲ್ಲಿ ರಸ್ತೆ ಕಾಣದೆ ಟಿಟಿ ವಾಹನವೊಂದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಟಿಟಿ ವಾಹನ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿತ್ತು. ಭಾರಿ ಮಳೆ ಹಿನ್ನೆಲೆಯಲ್ಲಿ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಅದೃಷ್ಟವಶಾತ್ ವಾಹನದಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದರು. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕುಂಚೆ ಬೈಲು ಗ್ರಾಮದ ಬಳಿ ಘಟನೆ ನಡೆದಿದೆ. ಪ್ರಯಾಣಿಕರು ಟಿಟಿ ವಾಹನದಲ್ಲಿ ಹಾಸನದಿಂದ ಶೃಂಗೇರಿ ಕಡೆಗೆ ತೆರಳುತ್ತಿದ್ದರು.

ವಿಜಯನಗರದಲ್ಲಿ ಮಳೆಗೆ ಕ್ಷಣಾರ್ಧದಲ್ಲೇ ಕೊಚ್ಚಿ ಹೋಯ್ತು ಫಸಲು

ಬಿರುಗಾಳಿ ಸಹಿತ ಭಾರಿ ಮಳೆಗೆ ನೂರಾರು ಎಕರೆ ಬಾಳೆ ಬೆಳೆ ಧರೆಗೆ ಉರುಳಿವೆ. ವಿಜಯನಗರದ ಹೊಸೂರು, ಇಪ್ಪಿತೇರಿ, ನರಸಾಪುರ, ಮಾಗಾಣಿಗಳು, ಕಮಲಾಪುರ ಗ್ರಾಮ ಸೇರಿ ಹತ್ತಾರು ಗ್ರಾಮದ ರೈತ ಬದುಕು ಅಯೋಮಯವಾಗಿದೆ. ಮಕ್ಕಳಂತೆ ಜೋಪಾನ ಮಾಡಿದ್ದ ಬಾಳೆ ಬೆಳೆ ಮೇಲೆ ಪ್ರಕೃತಿಯ ಮುನಿಸಿಗೆ ಸಂಪೂರ್ಣ ನಾಶವಾಗಿದೆ.

ಕಳೆದ ಒಂದು ವಾರದಲ್ಲಿ ಎರಡು ಬಾರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ಎಕರೆ ಹೊಲದಲ್ಲಿ ಬಾಳೆ ಬೆಳೆಯೋದಕ್ಕೆ ರೈತರು ಲಕ್ಷದವರೆಗೆ ಖರ್ಚು ಮಾಡಿದ್ದರು. ಇನ್ನೇನು ಒಂದು ತಿಂಗಳಲ್ಲಿ ಬಾಳೆ ಮಾರಾಟಕ್ಕೆ ರೆಡಿ ಮಾಡಿಕೊಂಡಿದ್ದ ರೈತರಿಗೆ ಮಳೆಯು ಆಘಾತವನ್ನುಂಟು ಮಾಡಿದೆ. ಮಳೆಯು ನಮ್ಮ ಬದುಕನ್ನು ಕಸಿದುಕೊಂಡಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ಬಾಳೆ ಬೆಳೆಗಾರರು ಅಳಲು ತೊಡಿಕೊಂಡಿದ್ದಾರೆ.

ಈ ಬಾರಿ ಮಳೆಯಿಲ್ಲದೇ ತುಂಗಭದ್ರಾ ಜಲಾನಯದ ಪ್ರದೇಶದ ರೈತರು ಕಂಗಾಲಾಗಿದ್ದಾರೆ. ವಿಜಯನಗರ ಕಾಲದ ಕಾಲುವೆಗಳನ್ನು ನಂಬಿ ತಿಂಗಳಿಗೊಮ್ಮೆ ಬಂದ ನೀರಲ್ಲೇ ಬದುಕು, ಬವಣೆ ನಡೆಯುತ್ತಿದ್ದೇವೆ. 2 ಟಿಎಂಸಿ ನೀರಲ್ಲಿ ಆಗೊಮ್ಮೆ, ಈಗೊಮ್ಮೆ ಬಂದ ನೀರಲ್ಲೇ ಬಾಳೆ ಬೆಳೆದಿದ್ದರು. ಇನ್ನೂ 15 ದಿನ ಮುಗಿದಿದ್ದರೆ ಬಾಳೆ ಗೊಣೆಗಳು ಕೈಗೆ ಬರುತ್ತಿದ್ದವು. ಕೈಗೆ ಬಂದ ಬಾಳೆ ಈಗ ನೆಲಕ್ಕೆ ಬಿದ್ದಿದೆ. ಮಳೆರಾಯ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ್ದಾನೆ ಎಂದು ಕಿಡಿಕಾರಿದರು.

ಕೊಡಗು, ಕೊಪ್ಪಳದಲ್ಲೂ ಮಳೆಯ ಸಿಂಚನ

ಕಳೆದ ಮೂರು ತಿಂಗಳಿಂದ‌ ಬಿಸಿಲಿನ ತಾಪಕ್ಕೆ ಕೊಪ್ಪಳದ ಜನತೆ ಹೈರಾಣಾಗಿದ್ದರು. ಭಾನುವಾರ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ವಾತಾವರಣ ತಂಪಾಗಿದೆ. ಕಳೆದ ಎರಡು ದಿನಗಳಿಂದ‌ ಸುರಿಯುತ್ತಿರುವ ಮಳೆಗೆ ಜನರು ಸಂತಸಗೊಂಡಿದ್ದಾರೆ. ಇತ್ತ ಕೊಡಗು‌ ಜಿಲ್ಲೆಯ ವಿವಿಧೆಡೆ ಮಳೆಯ ಸಿಂಚನವಾಗಿದೆ. ಹಲವು‌ ದಿನಗಳಿಂದ ಮಳೆಗಾಗಿ‌ ಕಾದಿದ್ದ ಜನರಿಗೆ ಸೋಮವಾರ ಮುಂಜಾನೆಯಿಂದಲೆ ತುಂತುರು ಮಳೆಯಾಗಿದೆ. ಮಳೆಯಿಂದ ಕೊಡಗಿನ‌ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ರಾಯಚೂರಲ್ಲಿ ಭತ್ತದ ರಾಶಿಗೆ ನುಗ್ಗಿದ ನೀರು

ಇನ್ನೂ ರಾಯಚೂರಿನಲ್ಲಿ ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದರು. ಎರಡು ಗಂಟೆಗಳ ಕಾಲ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆಗೆ ನಗರದ ರಸ್ತೆಗಳು ಹಳ್ಳದಂತಾದರೆ, ನಗರದ ಎಪಿಎಂಸಿಗೆ ನೀರು ನುಗ್ಗಿತ್ತು. ತೆಲಂಗಾಣದ ಮಕ್ತಲ್‌ನಿಂದ ಸಾಕಷ್ಟು ರೈತರು ಭತ್ತ ತಂದು ರಾಶಿ ಮಾಡಿದರು.ಆದರೆ ಮಳೆ ಸುರಿದ ಕಾರಣ ಭತ್ತದ ರಾಶಿ ನೀರುಪಾಲಾಗಿತ್ತು. ಎಪಿಎಂಸಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ರೈತರು ಅಸಮಾಧಾನ ಹೊರಹಾಕಿದ್ದರು.

ಇತ್ತ ರಾಯಚೂರು ನಗರದ ವಾರ್ಡ್‌ನ 34ರಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಮತ್ತು ದೇವಸ್ಥಾನವು ಜಲಾವೃತಗೊಂಡಿತ್ತು. ಚಿಕ್ಕ ಕಾಲುವೆ ಬ್ಲಾಕ್ ಆಗಿದ್ದರಿಂದ ಈ ಆವಾಂತರಗಳು ಸೃಷ್ಟಿಯಾಗಿತ್ತು. ಮಳೆ ನೀರು ನುಗ್ಗಿದ್ದರಿಂದ ರಾತ್ರಿಯಿಡೀ ಜನರು ಜಾಗರಣೆ ಮಾಡುವಂತಾಯಿತು. ಬೆಳಗ್ಗೆಯಿಂದ ಮಳೆ ನೀರು ಹೊರ ಹಾಕಲು ಜನರು ಹರಸಾಹಸ ಪಟ್ಟರು. ನಗರಸಭೆ ಮತ್ತು ಜನ ಪ್ರತಿನಿಧಿಗಳ ವಿರುದ್ಧ ವಾರ್ಡ್‌ನ ಜನರು ಆಕ್ರೋಶ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Murder Case: ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ.

VISTARANEWS.COM


on

shivamogga triple murder case
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿದರು.

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಇದನ್ನೂ ಓದಿ: Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Continue Reading
Advertisement
Murder Case in hubballi
ಹುಬ್ಬಳ್ಳಿ3 mins ago

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Kareena Kapoor Saif Ali Khan share a kiss in front of paparazzi
ಬಾಲಿವುಡ್3 mins ago

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

shivamogga road accident hit and run
ಕ್ರೈಂ24 mins ago

Hit and Run: ಆಟೋಗೆ ಗುದ್ದಿ ವಿದ್ಯಾರ್ಥಿನಿಯನ್ನು ಕೊಂದು ಪರಾರಿಯಾದ ಕ್ಯಾಂಟರ್ ಚಾಲಕ

Karnataka Rain
ಮಳೆ32 mins ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Lok Sabha Election 2024
ದೇಶ52 mins ago

Lok Sabha election 2024: 4ನೇ ಹಂತದ ಮತದಾನ..ಮೈತ್ರಿಕೂಟದಲ್ಲಿ ಬಿಕ್ಕಟ್ಟು ನೂರು.. ಗೆಲುವಿನ ಲೆಕ್ಕಾಚಾರದಲ್ಲಿ ಎನ್‌ಡಿಎ ಮತ್ತು ಇಂಡಿಯಾ

Lok Sabha Elections 2024 Jr NTR, Allu Arjun, Chiranjeevi cast votes
ಟಾಲಿವುಡ್1 hour ago

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

shivamogga triple murder case
ಕ್ರೈಂ1 hour ago

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Turbo Trailer Out mammoottys raj b shetty looks menacing
ಮಾಲಿವುಡ್2 hours ago

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

prajwal revanna case
ಪ್ರಮುಖ ಸುದ್ದಿ2 hours ago

Prajwal Revanna Case: ಎಸ್‌ಐಟಿಗೆ ಸವಾಲೆಸೆದ ನವೀನ್‌ ಗೌಡ; ದೇವರಾಜೇಗೌಡ, ಪ್ರೀತಂಗೌಡ ಆಪ್ತರು ಎಸ್‌ಐಟಿ ಕಸ್ಟಡಿಗೆ?

Health Tips Kannada Stay away from these foods to get rid of acne
ಆಹಾರ/ಅಡುಗೆ2 hours ago

Health Tips Kannada: ಈ ಆಹಾರಗಳಿಂದ ದೂರವಿದ್ದರೆ ಮೊಡವೆ ಸಮಸ್ಯೆಯಿಂದ ಪಾರಾಗಬಹುದು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ32 mins ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ5 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ7 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ17 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ18 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ18 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌