Site icon Vistara News

ಸೇಂಟ್‌ ಮಾರ್ಥಾಸ್‌ ಆಸ್ಪತ್ರೆ ಮುಂದಿನ ಮೇಲ್ಛಾವಣಿ ಕುಸಿತ: ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು

roof collapse

ಬೆಂಗಳೂರು: ನಗರದ ನೃಪತುಂಗ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ ಮುಂಭಾಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಛಾವಣಿ ಕುಸಿದು ಗಾಯಗೊಂಡಿದ್ದ ಬಸವರಾಜ್(24)‌ ಎಂಬ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೇಲ್ಛಾವಣಿ ಕೆಲಸ ಮಾಡುತ್ತಿದ್ದಾಗ ಮಂಗಳವಾರ ಬೆಳಗ್ಗೆ ಏಕಾಏಕಿ ಮೇಲ್ಛಾವಣಿ ಕುಸಿದಿದೆ. ಈ ವೇಳೆ ಗಾಯಗೊಂಡ ಇಬ್ಬರನ್ನು ಕಾರ್ಮಿಕರ ಆಸ್ಪತ್ರೆಗೆ ರವಾನಿಸಲಾಗಿತ್ತು. ಅವಶೇಷಗಳ ಕೆಳಗೆ ಸಿಲುಕಿದ ರಫೀಸಾಬ್‌, ಬಸವರಾಜು ಎಂಬವರನ್ನು ಹೊರತೆಗೆಯಲು ರಕ್ಷಣಾಕಾರ್ಯ ನಡೆಸಲಾಗಿತ್ತು. ಈ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಗಾಯಾಳುಗಳಲ್ಲಿ ಬಸವರಾಜು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಜೆಸಿಬಿ ಸಹಾಯದಿಂದ ತೆರವು ಕಾರ್ಯಾಚರಣೆ ಮಾಡಲಾಗಿದೆ. ಮೇಲ್ಛಾವಣಿ 60 ಅಡಿ ಉದ್ದವಿದ್ದು, ಪಿಲ್ಲರ್‌ಗಳ ನಡುವೆ ಬಹಳ ಅಂತರವಿರುವ ಕಾರಣದಿಂದ ಕುಸಿದಿರಬಹುದು ಎನ್ನಲಾಗಿದೆ.

ಇದನ್ನೂ ಓದಿ | Cyber Crime | ಲಕ್ಷ ಹಣ ಕಳೆದುಕೊಂಡ ಬಿಎಸ್‌ಎಫ್‌ ಯೋಧ

Exit mobile version