Rowdysheeter Murder : ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಮರ್ಡರ್‌ - Vistara News

ಕರ್ನಾಟಕ

Rowdysheeter Murder : ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಮರ್ಡರ್‌

Rowdysheeter Murder : ರೌಡಿ ಶೀಟರ್‌ ಮಾಸ್ತಿ ಗೌಡ ಎಂಬಾತನನ್ನು ಚನ್ನರಾಯಪಟ್ಟಣದಲ್ಲಿ ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಹಂತಕರ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

VISTARANEWS.COM


on

Rowdysheeter Mastigowda Murder
ಕೊಲೆಯಾದ ಮಾಸ್ತಿ ಗೌಡ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ರೌಡಿಶೀಟರ್‌ ಶೀಟರ್‌ (Rowdysheeter) ಒಬ್ಬನ ಬರ್ಬರ ಹತ್ಯೆಗೆ (Rowdysheeter Murder) ಸಾಕ್ಷಿಯಾಗಿದೆ. ಇಲ್ಲಿನ ರೌಡಿಯೊಬ್ಬನನ್ನು ತಂಡವೊಂದು ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.

ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ (Dhanalaxmi Cinema theatre) ಮುಂಭಾಗದಲ್ಲಿ ನಡೆದ ಈ ಭೀಕರ ಘಟನೆಯಲ್ಲಿ ಕೊಲೆಯಾದ ರೌಡಿಶೀಟರ್‌ ಹಸರು ಮಾಸ್ತಿ ಗೌಡ (30). ಹಾಡಹಗಲೇ ನಡೆದ ಈ ಘಟನೆಯಿಂದ ಚನ್ನರಾಯಪಟ್ಟಣ ಜನತೆ ಬೆಚ್ಚಿಬಿದ್ದಿದ್ದಾರೆ.

ಮಾಸ್ತಿ ಗೌಡ ಚನ್ನರಾಯಪಟ್ಟಣ ಭಾಗದಲ್ಲಿ ರೌಡಿಯಾಗಿ ಕುಖ್ಯಾತಿಯನ್ನು ಪಡೆದಿದ್ದ. ಹಲವಾರು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನನ್ನು ನಿಯಂತ್ರಿಸಲು ಪೊಲೀಸರು ರೌಡಿ ಶೀಟ್‌ ತೆರೆದು ಕಾಲಕಾಲಕ್ಕೆ ಠಾಣೆಗೆ ಬಂದು ಸಹಿ ಹಾಕುವಂತೆ ಸೂಚಿಸಿದ್ದರು. ಪೊಲೀಸರು ಆತನನ್ನು ನಿಯಂತ್ರಿಸಲು ಯತ್ನಿಸಿದರೂ ಆತ ಹಿಂದೆ ಕಟ್ಟಿಕೊಂಡಿದ್ದ ದ್ವೇಷಗಳು, ಮಾಡಿದ ಕರಾಳ ಕೃತ್ಯಗಳು ಆತನನ್ನು ಬೆನ್ನಟ್ಟುತ್ತಲೇ ಇದ್ದವು ಅನಿಸುತ್ತದೆ. ಅದರ ಭಾಗವಾಗಿಯೇ ಈ ಕೊಲೆ ನಡೆದಿದೆ ಎನ್ನಲಾಗಿದೆ.

Rowdy sheeter Masti gowda murdered at Channarayapatna
ಕೊಲೆ ನಡೆದ ಪರಿಸರದಲ್ಲಿ ಜನಸಂದಣಿ

ರೌಡಿ ಶೀಟರ್‌ ಮಾಸ್ತಿ ಗೌಡ ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರ ಪ್ರದೇಶದಲ್ಲಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ಯುವಕರು ಆತನನ್ನು ಬೆನ್ನಟ್ಟಿದ್ದಾರೆ. ರಸ್ತೆಯಲ್ಲಿ ಸಾಕಷ್ಟು ದೂರಕ್ಕೆ ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿದ ಈ ದುಷ್ಕರ್ಮಿಗಳು ಸಿನಿಮಾ ಮಂದಿರದ ಮುಂದೆ ಬಂದಾಗ ಕೆಳಗೆ ಬಿದ್ದ ಮಾಸ್ತಿ ಗೌಡನ ಮೇಲೆ ಬೇಕಾಬಿಟ್ಟಿ ಮಾರಕಾಸ್ತ್ರಗಳಿಂದ ಹೊಡೆಯಲಾಗಿದೆ. ಇದರಿಂದ ಮಾಸ್ತಿ ಗೌಡ ತೀವ್ರವಾಗಿ ಗಾಯಗೊಂಡಿದ್ದು, ಅಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟೂ ಅವಕಾಶ ಸಿಗಲಿಲ್ಲ.

ಮಾಸ್ತಿಗೌಡ ಚನ್ನರಾಯಪಟ್ಟಣ ತಾಲ್ಲೂಕಿನ, ಹೊನ್ನಮಾರನಹಳ್ಳಿ ಗ್ರಾಮದವನು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಪೊಲೀಸರು ನಡುರಸ್ತೆಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿ ಟೀವಿ ಫೂಟೇಜ್‌ಗಳನ್ನು ಗಮನಿಸುತ್ತಿದ್ದಾರೆ. ಮಾಸ್ತಿ ಗೌಡನಿಗೆ ಇರಬಹುದಾದ ವೈರಿಗಳನ್ನು ಗುರುತಿಸುವ ಕೆಲಸವೂ ನಡೆದಿದೆ. ಈಗಾಗಲೇ ಪೊಲೀಸರಿಗೆ ಕೆಲವರ ಮೇಲೆ ಸಂಶಯ ಬಂದಿದೆ. ಅವರನ್ನು ವಿಚಾರಣೆಗೆ ಕರೆದು ತಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

Rowdy sheeter Masti gowda murdered at Channarayapatna
ಕೊಲೆ ನಡೆದ ಪ್ರದೇಶ

ಮಾಸ್ತಿ ಗೌಡನನ್ನು ದುಷ್ಕರ್ಮಿಗಳು ನೂರಾರು ಜನರ ನಡುವೆಯೇ ಅಟ್ಟಾಡಿಸಿಕೊಂಡು ಹೋಗಿದ್ದರಿಂದ ಸ್ಥಳದಲ್ಲಿ ಭಾರಿ ಆತಂಕ ಸೃಷ್ಟಿಯಾಗಿತ್ತು. ಕೊಲೆಯಾದ ಪರಿಸರದಲ್ಲಿ ಸಾವಿರಾರು ಜನರು ಸೇರಿದ್ದರು. ಪೊಲೀಸರು ರಸ್ತೆ ಬಂದ್‌ ನಡೆಸಿ ಮಹಜರು ನಡೆಸಿದರು. ಈ ಘಟನೆಯ ಬಳಿಕ ನಗರದಾದ್ಯಂತ ನಾಕಾಬಂದಿ ಮಾಡಿ ದುಷ್ಕರ್ಮಿಗಳು ಪಟ್ಟಣ ಬಿಟ್ಟು ಹೊರಗೆ ಹೋಗುವುದನ್ನು ತಡೆಯಲು ಪ್ರಯತ್ನಿಸಲಾಗಿದೆ.

ಇದನ್ನೂ ಓದಿ: Murder Case : ಪ್ರೀತಿಸಿದ ಪತ್ನಿಯನ್ನೇ ಕೊಂದ ಗಂಡ; 45 ದಿನದ ಮಗುವನ್ನು ಹೆಣದ ಜತೆ ಬಿಟ್ಟು ಪರಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

VISTARANEWS.COM


on

ರಾಜ್ಯದ ಎರಡು ವಿಧಾನಸಭಾ ಕ್ಷೇತಗಳಿಗೆ ನಡೆದ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ನಡುವಿನ ನೇರ ಹಣಾಹಣಿಯಲ್ಲಿ ಯಾರಿಗೆ ಗೆಲುವು ಸಿಗಲಿದೆ ಎಂಬ ಪ್ರಶ್ನೆಗೆ ನಾಳೆ(ಮೇ.4) ಉತ್ತರ ಸಿಗಲಿದೆ. ಬೆಳಗ್ಗೆ 8 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಾರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 2 ಗಂಟೆಯೊಳಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹಾಲಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ರ ಪುತ್ರ ಸಮರ್ಥ್‌ ಶಾಮನೂರು ಕಾಂಗ್ರೆಸ್‌ ಅಭ್ಯರ್ಥಿಯಾದ್ರೆ, ಬಿಜೆಪಿಯಿಂದ ಶ್ರೀನಿವಾಸ ದಾಸ್ ಕರಿಯಪ್ಪ ಕಣದಲ್ಲಿದ್ದಾರೆ.
ಬಾಗಲಕೋಟೆ ಶಾಸಕರಾಗಿದ್ದ ಎಚ್‌.ವೈ.ಮೇಟಿ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದ್ದು, ಎಚ್‌.ವೈ.ಮೇಟಿ ಅವರ ಪುತ್ರ ಉಮೇಶ ಮೇಟಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಬಿಜೆಪಿಯಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಸ್ಪರ್ಧೆಯಲ್ಲಿದ್ದು ಯಾರ ಕೊರಳಿಗೆ ಜಯಮಾಲೆ ಬೀಳಲಿದೆ ಎಂಬುದು ಫಲಿತಾಂಶ ಬಂದ ನಂತರ ಗೊತ್ತಾಗಲಿದೆ. ಈಗಾಗಲೇ ಮತಎಣಿಕಾ ಕೇಂದ್ರಗಳ ಸುತ್ತ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest37 minutes ago

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ

Latest1 hour ago

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ

Latest2 hours ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest1 day ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌