Lantana Craft: ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ.: ಈಶ್ವರ ಖಂಡ್ರೆ - Vistara News

ಕರ್ನಾಟಕ

Lantana Craft: ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ.: ಈಶ್ವರ ಖಂಡ್ರೆ

Lantana Craft: ಲಾಂಟನಾವನ್ನು ಹೆಚ್ಚಿನ ಪ್ರಮಾಣದಲ್ಲಿ ಬುಡಸಮೇತ ತೆಗೆದು ಕಲಾಕೃತಿ ರಚಿಸಲು ಬುಡಕಟ್ಟು ಮತ್ತು ಆದಿವಾಸಿಗಳಿಗೆ ಸೂಕ್ತ ತರಬೇತಿ ನೀಡಿದರೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ಲಭಿಸುತ್ತದೆ. ಲಾಂಟನಾ ಸಮಸ್ಯೆಯೂ ಪರಿಹಾರವಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.

VISTARANEWS.COM


on

Rs 1 crore to encourage Lantana Craft manufacturers Eshwara Khandre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅರಣ್ಯದಲ್ಲಿ ಸಸ್ಯಾಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು (Lantana Craft) ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwara Khandre) ತಿಳಿಸಿದ್ದಾರೆ.

ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ಗುರುವಾರ ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಾಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದ್ದು, ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ. ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಆನ್‌ಲೈನ್‌ ವಹಿವಾಟಿಗೆ ವೇದಿಕೆ ಕಲ್ಪಿಸಲು ಸೂಚನೆ

ಲಾಂಟನಾದಿಂದ ತಯಾರಿಸಿದ ಪೀಠೋಪಕರಣ, ಅಲಂಕಾರಿಕ ವಸ್ತುಗಳು ಮತ್ತು ವನ್ಯಜೀವಿ ಆಕೃತಿಗಳಿಗೆ ದೇಶಾದ್ಯಂತ ಅಷ್ಟೇ ಅಲ್ಲ ವಿದೇಶದಲ್ಲಿಯೂ ಬೇಡಿಕೆ ಸೃಷ್ಟಿಸಲು ವ್ಯಾಪಕ ಪ್ರಚಾರ ನೀಡುವ ಮತ್ತು ಆನ್‌ಲೈನ್ ಮೂಲಕ ಮಾರಾಟ ಮಾಡಲು ವೇದಿಕೆ ಕಲ್ಪಿಸಲು ಕ್ರಮ ವಹಿಸುವ ಸಾಧ್ಯತೆಗಳ ಕುರಿತಂತೆ ವರದಿ ಸಲ್ಲಿಸಲು ಸ್ಥಳದಲ್ಲಿ ಹಾಜರಿದ್ದ ಹಿರಿಯ ಐಎಫ್‌ಎಸ್ ಅಧಿಕಾರಿ ಕುಮಾರ್ ಪುಷ್ಕರ್ ಅವರಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.

ಲಾಂಟನಾ ವಿದೇಶದಿಂದ ನಮ್ಮ ದೇಶಕ್ಕೆ ಆಗಮಿಸಿದ ಕಳೆಯಾಗಿದೆ. ಇದು ಕಾಡನ್ನು ರಕ್ತ ಬೀಜಾಸುರನಂತೆ ಆವರಿಸುತ್ತಿದ್ದು ಇದನ್ನು ವೈಜ್ಞಾನಿಕವಾಗಿ ನಿರ್ಮೂಲನೆ ಮಾಡುವ ಅಗತ್ಯವಿದೆ. ಲಾಂಟನಾವನ್ನು ಹೆಚ್ಚಿನ ಪ್ರಮಾಣದಲ್ಲಿ ಬುಡಸಮೇತ ತೆಗೆದು ಕಲಾಕೃತಿ ರಚಿಸಲು ಬುಡಕಟ್ಟು ಮತ್ತು ಆದಿವಾಸಿಗಳಿಗೆ ಸೂಕ್ತ ತರಬೇತಿ ನೀಡಿದರೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ಲಭಿಸುತ್ತದೆ. ಲಾಂಟನಾ ಸಮಸ್ಯೆಯೂ ಪರಿಹಾರವಾಗುತ್ತದೆ ಎಂದು ಈಶ್ವರ ಖಂಡ್ರೆ ಹೇಳಿದರು.

ಇದನ್ನೂ ಓದಿ: Ragi Malt: ರಾಗಿ ಮಾಲ್ಟ್‌ ಕುಡಿದ ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿನಿಗೂ ಕುಡಿಸಿದರು!

ಸಹಬಾಳ್ವೆ ಅಗತ್ಯ

ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಮನುಷ್ಯನಂತೆಯೇ ಬದುಕುವ ಹಕ್ಕಿದೆ. ಕಾಡಿನಂಚಿನಲ್ಲಿದ್ದ ನಮ್ಮ ಪೂರ್ವಿಕರು ಸೂಕ್ಷ್ಮ ಸಂವೇದಿಗಳಾಗಿದ್ದರು. ಅವರು ವನ್ಯಜೀವಿಗಳೊಂದಿಗೆ ಸಹಬಾಳ್ವೆಯಿಂದ ಬದುಕುವುದನ್ನು ಅರಿತಿದ್ದರು. ಇಂದಿನ ಪೀಳಿಗೆಗೆ ಈ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Road Accident: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ಅಪಘಾತ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ರಾಯಚೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ನಡೆದಿದೆ. ಬೈಕ್ ಸವಾರ ಭೀಮಣ್ಣ (55) ಮೃತರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ.

ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲು

ರಾಯಚೂರು: ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ‌ ಕೊಠಾ ಗ್ರಾಮದ ಬಳಿ ನಡೆದಿದೆ. ಅಯ್ಯನ್ ಶಫಿ (17) ನೀರು ಪಾಲಾದ ಬಾಲಕ. ಮೂವರು ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದಾಗ ದುರ್ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ತೆರಳಿ, ಶೋಧಕಾರ್ಯ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

HD Revanna: ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬು ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಮನೆಯಿಂದಲೇ ವಶಪಡಿಸಿಕೊಂಡಿಸಿಕೊಂಡಿದ್ದಾರೆ. ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ (A 1) ಆಗಿರುವ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ವಶಕ್ಕೆ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ (Bowring Hospital) ವೈದ್ಯಕೀಯ ಪರೀಕ್ಷೆ (Medical Test) ಮಾಡಿಸಿದ್ದಾರೆ. ಇದಾದ ಬಳಿಕ ಎಚ್‌.ಡಿ.ರೇವಣ್ಣ ಅವರನ್ನು ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ಇಡೀ ರಾತ್ರಿ ಎಸ್‌ಐಟಿ ಸೆಲ್‌ನಲ್ಲಿಯೇ ಮಾಜಿ ಸಚಿವ ಕಳೆಯಲಿದ್ದಾರೆ.

ಎಚ್‌.ಡಿ.ದೇವೇಗೌಡರ ಮನೆಯಲ್ಲಿ ಎಚ್‌.ಡಿ. ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಮೊದಲು ಅವರನ್ನು ಸಿಐಡಿ ಕಚೇರಿಗೆ ಕರೆದುಕೊಂಡು ಹೋದರು. ಇದಾದ ಬಳಿಕ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಮತ್ತೆ ಸಿಐಡಿ ಕಚೇರಿಗೆ ಕರೆತಂದು, ಎಸ್‌ಐಟಿ ಸೆಲ್‌ನಲ್ಲಿ ಇರಿಸಿದರು. ಎಚ್‌.ಡಿ.ರೇವಣ್ಣ ಅವರು ಮಲಗಲು ಹಾಸಿಗೆ ಹಾಗೂ ಬೆಡ್‌ಶೀಟ್‌ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿದುಬಂದಿಎ.

ಭಾನುವಾರ ಬೆಳಗ್ಗೆ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ. ಕೋರಮಂಗಲದಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಲಿರುವ ಅಧಿಕಾರಿಗಳು, ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ನ್ಯಾಯಾಧೀಶರು ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲು ಎಸ್‌ಐಟಿ ಅಧಿಕಾರಿಗಳಿಗೆ ಭಾನುವಾರ ಸಂಜೆವರೆಗೆ ಸಮಯವಿದೆ.

ನಮ್ಮನ್ನೆಲ್ಲ ಸಾಯಿಸ್ತಾರೆ ಎಂದ ಮಹಿಳೆ

ಮೈಸೂರಿನ ತೋಟದ ಮನೆಯಿಂದ ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯು ಎಸ್‌ಐಟಿ ಅಧಿಕಾರಿಗಳ ಕಸ್ಟಡಿಯಲ್ಲಿದ್ದರೂ ರೇವಣ್ಣ ಕುಟುಂಬದ ಭಯದಲ್ಲಿದ್ದಾರೆ. “ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Continue Reading

ಕರ್ನಾಟಕ

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Dingaleshwar Swamiji: ನವಲಗುಂದದಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶದಲ್ಲಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿದ್ದರಿಂದ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Dingaleshwar Swamiji
Koo

ಧಾರವಾಡ: ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ ಆರೋಪದಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಜಿಲ್ಲೆಯ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನವಲಗುಂದ ಮಾರ್ಕೆಟ್‌ನಲ್ಲಿ ನಡೆದಿದ್ದ ಸ್ವಾಭಿಮಾನಿ ಮತದಾರರ ಸಮಾವೇಶ ಚುನಾವಣೆ ಭಾಷಣದ ವೇಳೆ ಸ್ವಾಮೀಜಿ ಎಡವಟ್ಟು ಮಾಡಿದ್ದರು. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸ್ವಾಮೀಜಿ, ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು ಎಂದು ಭಾಷಣ ಮಾಡಿದ್ದರು. ಹೀಗಾಗಿ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡಿದ್ದಾರೆ ಎಂಬ ಆರೋಪದಲ್ಲಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ | Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Jai Shri Ram Slogan

ರಾಯಚೂರು: ಜೈ ಶ್ರೀರಾಮ್ ಘೋಷಣೆ (Jai Shri Ram Slogan) ಕೂಗಿದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆ ಚುನಾವಣೆ ಹೊತ್ತಿನಲ್ಲಿ ಪಕ್ಷ ಮತ್ತು ನಾಯಕರಿಗೆ ಮುಜುಗಗರವಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರಿಂದ ನಿಮ್ಮನ್ನು ಕಾಂಗ್ರೆಸ್ ‌ಪಕ್ಷದಿಂದ ಅಮಾನತು ಮಾಡಲಾಗಿದೆ. ತಾವು 7 ದಿನಗಳೊಳಗಾಗಿ ಈ ಹೇಳಿಕೆಗಳ ವಿವರಣೆ ನೀಡಬೇಕು ಎಂದು ಕೈ ಮುಖಂಡ ಬಷೀರುದ್ದೀನ್‌ ಅವರಿಗೆ ಅಮಾನತು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದರು. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದರು. ಹೀಗಾಗಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗಿತ್ತು. ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ಅಮಾತುಗೊಳಿಸಲಾಗಿದೆ.

Continue Reading

ಕರ್ನಾಟಕ

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Prajwal Revanna Case: ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಭದ್ರತೆ ಇದ್ದರೂ, ಅವರನ್ನು ಬೆಂಗಳೂರಿಗೆ ಕರೆಸಿಕೊಂಡರೂ, ರೇವಣ್ಣ ಕುಟುಂಬಸ್ಥರ ದೌರ್ಜನ್ಯದ ಕುರಿತು ಅವರು ಯಾವುದೇ ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದಿದೆ. ಇದರ ಬೆನ್ನಲ್ಲೇ, ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ.

ಹೌದು, ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬಣ್ಣ ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅವರು ತನಿಖಾಧಿಕಾರಿಗಳ ಎದುರು ಎಲ್ಲವನ್ನೂ ಹೇಳಲು ಆಗುತ್ತಿಲ್ಲ. ಇದರಿಂದಾಗಿ ಪ್ರಕರಣದಲ್ಲಿ ಮಹತ್ವದ ಪ್ರಗತಿ ಸಾಧಿಸಲು ಎಸ್‌ಐಟಿ ಅಧಿಕಾರಿಗಲು ಹೆಣಗಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯನ್ನು ಅಪಹರಿಸಿ ಇರಿಸಲಾಗಿದ್ದ ಹುಣಸೂರಿನ ತೋಟದ ಮನೆ.

“ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading
Advertisement
Road Accident
ಕರ್ನಾಟಕ4 mins ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ4 mins ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ26 mins ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ40 mins ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ42 mins ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ48 mins ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ1 hour ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ2 hours ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ2 hours ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

IPL 2024
Latest2 hours ago

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌