Site icon Vistara News

Mohan Bhagwat:‌ ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ ಭಾಗವತ್‌ ಇಂದು ಶಿವಮೊಗ್ಗದಲ್ಲಿ

mohan bhagavath in shimogga

ಶಿವಮೊಗ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದಾರೆ.

ಬೆಳಗ್ಗೆ 5ಕ್ಕೆ ರೈಲಿನ ಮೂಲಕ ಆಗಮಿಸಿದ ಅವರು ನೇರವಾಗಿ ಮತ್ತೂರು ಗ್ರಾಮಕ್ಕೆ ತೆರಳಿದ್ದು, ಆರ್‌ಎಸ್‌ಎಸ್ ಮುಖಂಡ ಪಟ್ಟಾಭಿರಾಮ ಅವರ ಮನೆಯಲ್ಲಿ ಆತಿಥ್ಯದ ವ್ಯವಸ್ಥೆ ಮಾಡಲಾಗಿದೆ. ಅವರು ಬೆಳಗ್ಗೆ ಮತ್ತೂರು ಗ್ರಾಮದಲ್ಲಿ ನಡೆಯುವ ಹೋಮ ಹವನ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ನಗರದ ಮತ್ತೂರು ಗ್ರಾಮದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 10 ಗಂಟೆಯ ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: Mohan Bhagwat: ಎಲ್ಲರೂ ಸಮಾನರು, ಪುರೋಹಿತರು ಜಾತಿ ಪದ್ಧತಿ ಹುಟ್ಟುಹಾಕಿದ್ದು ತಪ್ಪು; ಮೋಹನ್‌ ಭಾಗವತ್‌

Exit mobile version