Ram Mandir: ಅಯೋಧ್ಯೆಯಲ್ಲಿ ರಾಮನ ದರ್ಶನ ಪಡೆದು ಕೊನೆಯುಸಿರೆಳೆದ ಉಡುಪಿಯ ಭಕ್ತ - Vistara News

ಕರ್ನಾಟಕ

Ram Mandir: ಅಯೋಧ್ಯೆಯಲ್ಲಿ ರಾಮನ ದರ್ಶನ ಪಡೆದು ಕೊನೆಯುಸಿರೆಳೆದ ಉಡುಪಿಯ ಭಕ್ತ

Ram Mandir: ಉಡುಪಿಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ರಾಮನ ದರ್ಶನ ಪಡೆದ ಬೆನ್ನಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

VISTARANEWS.COM


on

RSS Worker
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ರಾಮ ಮಂದಿರ (Ram Mandir) ಉದ್ಘಾಟನೆಯಾದ ಬಳಿಕ ರಾಮನ ದರ್ಶನ ಪಡೆಯಲು ದೇಶದ ವಿವಿಧೆಡೆಯಿಂದ ಕೋಟ್ಯಂತರ ಭಕ್ತರು ಅಯೋಧ್ಯೆಗೆ ತೆರಳುತ್ತಿದ್ದಾರೆ. ಈ ನಡುವೆ ರಾಮಲಲ್ಲಾ ದರ್ಶನ ಪಡೆಯಲು ಉಡುಪಿಯಿಂದ ತೆರಳಿದ್ದ ಭಕ್ತರೊಬ್ಬರು, ರಾಮನ ದರ್ಶನ ಪಡೆದು ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.

ಉಡುಪಿಯ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ ಪಾಂಡುರಂಗ ಶಾನುಭೋಗ್ ಮೃತರು. ರಾಮಲಲ್ಲಾನ ಮಂದಿರಕ್ಕೆ ಹೋಗಬೇಕೆಂದು ಅಯೋಧ್ಯೆಗೆ ತೆರಳಿದ್ದ ಇವರು, ಬೆಳಗ್ಗೆ ರಾಮಲಲ್ಲಾನಿಗೆ ಕೈಮುಗಿದು, ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ಪ್ರಸಾದ ಪಡೆದಿದ್ದರು. ಮಧ್ಯಾಹ್ನ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವ ವೇಳೆ ಹೃದಯಘಾತ ಸಂಭವಿಸಿ ಪಾಂಡುರಂಗ ಶಾನುಭೋಗ್ ನಿಧನರಾಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಶಾನುಭಾಗ್‌ ಅವರು, ದೃಷ್ಟಿ ಇಲ್ಲದಿದ್ದರೂ ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು.

ಇದನ್ನೂ ಓದಿ | Physical Abuse : ಚರ್ಚ್‌ ಧರ್ಮಗುರು ವಿರುದ್ಧ ಎಫ್‌ಐಆರ್‌; ಪ್ರಾರ್ಥನೆಗೆ ಬಂದವಳ ಮೇಲೆ ಅತ್ಯಾಚಾರ

ಕಾರಲ್ಲಿ ಬಂದು ಕಾಲೇಜು ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್‌ ಮಾಡಿದ ಯುವಕರು!

College student kidnapped by youths in car

ಹಾವೇರಿ: ಹಾವೇರಿಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕಿಡ್ನ್ಯಾಪ್ (Kidnap Case) ಮಾಡಲಾಗಿದೆ. ಶನಿವಾರ ಬೆಳಗ್ಗೆ ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯನ್ನು ಯುವಕರ ಗುಂಪೊಂದು ಹಾವೇರಿಯ ದ್ಯಾಮವ್ವನ ಗುಡಿ ಸಮೀಪ ಕಿಡ್ನಾಪ್ ಮಾಡಿದೆ.

ವಿಜಯಲಕ್ಷ್ಮಿ ಒಬಣ್ಣನವರ ಎಂಬಾಕೆ ಕಿಡ್ನ್ಯಾಪ್‌ ಆದವಳು. ಕಾರಿನಲ್ಲಿ ಬಂದ ಯುವಕರ ಗುಂಪು ರಸ್ತೆ ಬದಿ ನಡೆದುಹೋಗುತ್ತಿದ್ದ ವಿಜಯಲಕ್ಷ್ಮೀಯನ್ನು ಕಿಡ್ನಾಪ್ ಮಾಡಿದ್ದಾರೆ. ವಿಷ್ಣು ಹೊನ್ನಪ್ಪ ತಗಡಿನಮನಿ ಎಂಬಾತ ತನ್ನಿಬ್ಬರು ಸ್ನೇಹಿತರ ಜತೆಗೆ ಸೇರಿಕೊಂಡು ಕಿಡ್ನ್ಯಾಪ್‌ ಮಾಡಿದ್ದ. ಕಿಡ್ನ್ಯಾಪ್‌ ಮಾಡಿ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಸಮೀಪದ ಗೌಪ್ಯವಾದ ಸ್ಥಳದಲ್ಲಿ ಕೂಡಿಹಾಕಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆ ಕಿಡ್ನ್ಯಾಪ್‌ ಆದ ಕೆಲವೇ ಗಂಟೆಯಲ್ಲಿ ಹಾವೇರಿ ಪೊಲೀಸರು ವಿಜಯಲಕ್ಷ್ಮಿಯನ್ನು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಕುಡಿತದ ಚಟ ಸಹಿಸದೆ ಬೆಂಗಳೂರಿನಲ್ಲಿ ಮಗನನ್ನೇ ಕೊಂದ ತಂದೆ; ಇಲ್ಲಿದೆ ಒಂದು ಟ್ವಿಸ್ಟ್

ಈ ವಿಷ್ಟು ಕಳೆದೊಂದು ವರ್ಷದಿಂದ ವಿಜಯಲಕ್ಷ್ಮೀ ಹಿಂದೆ ಹೋಗುವುದು, ಮಾತಾಡಿಸುವುದು, ಚೂಡಾಯಿಸುವುದು ಮಾಡುತ್ತಿದ್ದ. ಈ ವಿಷಯವನ್ನು ವಿಜಯಲಕ್ಷ್ಮೀ ಮನೆಯಲ್ಲಿ ತಿಳಿಸಿದ್ದಳು. ಆಗ ಆರೋಪಿ ವಿಷ್ಟುವಿನ ತಂದೆಯ ಸಮ್ಮುಖದಲ್ಲಿ ಮಗಳ ತಂಟೆಗೆ ಬಾರದಂತೆ ವಾರ್ನಿಂಗ್‌ ಕೊಟ್ಟಿದ್ದರು. ಮಗನಿಗೆ ಸರಿಯಾಗಿ ಬುದ್ಧಿ ಕಲಿಸುವಂತೆ ಹೇಳಿದ್ದರು.

ಇಷ್ಟಾದರೂ ಸುಮ್ಮನೆ ಆಗದ ವಿಷ್ಟು ಮಾ.9ರ ಬೆಳಗ್ಗೆ 9:30ಕ್ಕೆ ವಿಜಯಲಕ್ಷ್ಮೀಯನ್ನು ಕಿಡ್ನಾಪ್‌ ಮಾಡಿದ್ದಾನೆ. ಯಾವಾಗ ಆಕೆಯ ತಂದೆ ದೂರು ನೀಡಿದ್ದರೂ, ಅರ್ಧದಾರಿಯಲ್ಲೇ ಬಿಟ್ಟು ಪರಾರಿ ಆಗಿದ್ದ. ನಂತರ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ವಿಜಯಲಕ್ಷ್ಮೀ ತಂದೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ, ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder Case : ಬೆಂಗಳೂರಿನಲ್ಲಿ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ರಕ್ತಕಾರಿದ ರೌಡಿಶೀಟರ್‌

Bengaluru News : ಬೆಂಗಳೂರಲ್ಲಿ ರೌಡಿಶೀಟರ್‌ (Rowdy Sheeter) ಮೇಲೆ ಎದುರಾಳಿ ಗ್ಯಾಂಗ್‌ ಅಟ್ಯಾಕ್‌ ಮಾಡಿ ಕೊಂದು (Murder case) ಹಾಕಿದೆ. ನಡು ರಸ್ತೆಯಲ್ಲೇ ರೌಡಿಶೀಟರ್‌ ಸತ್ತು ಬಿದ್ದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

VISTARANEWS.COM


on

By

murder case
Koo

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ (Murder case) ಬರ್ಬರ ಹತ್ಯೆಯಾಗಿದೆ. ಅಂಚೇಪಾಳ್ಯ ನಾಗ ಕೊಲೆಯಾದ ರೌಡಿಶೀಟರ್ ಆಗಿದ್ದಾನೆ. ರಾತ್ರೋರಾತ್ರಿ ಮುತ್ತುರಾಯನಗರ ಸಮೀಪದ ರೈಲ್ವೇ ಟ್ರಾಕ್ ಸಮೀಪ ಎದುರಾಳಿ ಗ್ಯಾಂಗ್‌ವೊಂದು ಅಟ್ಯಾಕ್‌ ಮಾಡಿ ಕೊಂದು ಹಾಕಿದೆ.

ಮುಖಮೂತಿ ನೋಡದೆ ಮಾರಕಾಸ್ತ್ರಗಳಿಂದ ರೌಡಿ ನಾಗನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಮಾರಣಾಂತಿಕ ಹಲ್ಲೆಯಿಂದಾಗಿ ತೀವ್ರ ರಕ್ತಸ್ರಾವವಾಗಿ ನಾಗ ಬೀದಿ ಹೆಣವಾಗಿದ್ದಾನೆ. ಸ್ಥಳೀಯರ ಮಾಹಿತಿ ಮೇರೆಗೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕೊಲೆಗಾರರಿಗಾಗಿ ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Actor Darshan: ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

ಬೆಂಗಳೂರು : ತನ್ನ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪೊಲೀಸ್​​ ಕಸ್ಟಡಿಯಲ್ಲಿರುವ ನಟ ದರ್ಶನ್ (Actor Darshan Arrested) ಹಾಗೂ ಆತನ ಸಹಚರರಿಗೆ ಕಾಮಾಕ್ಷಿ ಪಾಳ್ಯ ಪೊಲೀಸರು ಮಂಗಳವಾರ ರಾತ್ರಿಯ ಊಟಕ್ಕೆ ಚಿಕ್ಕಪೇಟೆ ಬಿರಿಯಾನಿ ತಂದುಕೊಟ್ಟಿದ್ದಾರೆ. ಪ್ರಕರಣದಲ್ಲಿ ದರ್ಶನ್​ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಲಯ ಪೊಲೀಸರ ಕಸ್ಟಡಿಗೆ ನೀಡಿದೆ. ಪವಿತ್ರಾ ಸಾಂತ್ವನ ಕೇಂದ್ರದಲ್ಲಿ ಇದ್ದರೆ ಉಳಿದವರು ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ರಾತ್ರಿಯ ಊಟಕ್ಕೆ ಪೊಲೀಸರು ಅವರೆಲ್ಲರಿಗೂ ಚಿಕ್ಕಪೇಟೆ ಬಿರಿಯಾನಿ ಪ್ಯಾಕೇಟ್​ಗಳನ್ನು ತೆಗೆದುಕೊಂಡು ಹೋಗಿರುವ ದೃಶ್ಯಗಳು ಸೆರೆಯಾಗಿವೆ.

ದೊಡ್ಡ ಪ್ರಮಾಣದಲ್ಲಿ ಬಿರಿಯಾನಿ ಪ್ಯಾಕೆಟ್​ಗಳನ್ನು ಕ್ಯಾರಿ ಬ್ಯಾಗ್​ನಲ್ಲಿ ತುಂಬಿಸಿಕೊಂಡು ಹೋಗಿದ್ದು, ಜತೆಗೆ ಎಲ್ಲರಿಗೂ ಮಿನರಲ್ ವಾಟರ್​ ನೀಡಲಾಗಿದೆ. ಆರೋಪಿಗಳು ಕೆಲವರು ಬೆಳಗ್ಗಿನಿಂದ ಬಂಧನ ಹಾಗೂ ಇನ್ನಿತರ ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮೈಕೈ ನೋವು, ತಲೆ ನೋವು ಎಂದಿದ್ದು ಅವರೆಲ್ಲರಿಗೂ ಡೋಲೋ 650 ಮಾತ್ರೆಯನ್ನೂ ತಂದಕೊಟ್ಟಿದ್ದಾರೆ.

ಆರೋಪಿ ಚಿತ್ರನಟ ಹಾಗೂ ಇದು ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಪ್ರಕರಣವಾಗಿರುವ ಕಾರಣ ತಮ್ಮ ವಶದಲ್ಲಿರುವ ಆರೋಪಿಗಳನ್ನು ಸರಿಯಾಗಿ ನೋಡಿಕೊಳ್ಳುವುದು ಪೊಲೀಸರಿಗೆ ಅನಿವಾರ್ಯ. ಹೀಗಾಗಿ ಅವರ ಊಟ, ತಿಂಡಿ ಹಾಗೂ ಇನ್ನಿತರ ಉಪಚಾರಗಳನ್ನು ಮಾಡಲು ಪೊಲೀಸರ ತಂಡ ನಾನಾ ರೀತಿಯ ಶ್ರಮಗಳನ್ನು ಹಾಕುತ್ತಿದೆ.

ಹಾಸಿಗೆ, ತಲೆದಿಂಬು

ಆರೋಪಿ ನಂಬರ್ 1 ದರ್ಶನ್ ಹಾಗೂ ಉಳಿದ ಆರೋಪಿಗಳಿಗೆ ಪೊಲೀಸರು ರಾತ್ರಿ ವೇಳೆ ಮಲಗಲು ಹಾಸಿಗೆ ಹಾಗೂ ತಲೆ ದಿಂಬು ವ್ಯವಸ್ಥೆಯನ್ನೂ ಮಾಡಿದ್ದಾರೆ. 9 ಗಂಟೆ ವೇಳೆಗೆ ಪೊಲೀಸರು ನಾನಾ ಕಡೆಯಿಂದ ಆರೋಪಿಗಳೆಲ್ಲರಿಗೂ ಮಲಗಲು ಕಾರ್ಪೆಟ್​, ಬೆಡ್​ಶೀಟ್​ ಹಾಗೂ ತಲೆ ದಿಂಬಿನ ವ್ಯವಸ್ಥೆ ಮಾಡಿದ್ದಾರೆ. ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿರುವ ಪೊಲೀಸರಿಗೆ ಮುಂದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡುವೆ ಇಷ್ಟೊಂದು ವ್ಯವಸ್ಥೆಗಳನ್ನು ಮಾಡಲೇಬೇಕಾಗುತ್ತದೆ.

ಇದನ್ನೂ ಓದಿ: Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

ಏತನ್ಮಧ್ಯೆ, ಆರೋಪಿ ನಂಬರ್​ 2 ಪವಿತ್ರಾಗೌಡ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಂಡಿದ್ದಾರೆ. ಪೊಲೀಸರು ಅವರನ್ನು ಅಲ್ಲಿಗೆ ಜೀಪ್​ನಲ್ಲಿ ಕರೆದುಕೊಂಡು ಹೋಗಿ ಬಿಡುತ್ತಿದ್ದಂತೆ ನಗುನಗುತ್ತಾ ಅವರು ಸಾಂತ್ವನ ಕೇಂದ್ರ ಸೇರಿಕೊಂಡಿದ್ದಾರೆ. ನಡೆದ ಘಟನೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಅವರು ಕೇಂದ್ರ ಸೇರಿಕೊಂಡಿದ್ದಾರೆ.

ಕೊಲೆಗೆ ಕಾರಣ

ರೇಣುಕಾಸ್ವಾಮಿ ಪವಿತ್ರಗೌಡಗೆ ಮೆಸೇಜ್ ಮಾಡುತ್ತಿದ್ದ. ಈ ವಿಷಯ ತಿಳಿದು ದರ್ಶನ್ ಆಪ್ತರು ನಕಲಿ ಅಕೌಂಟ್ ತೆರೆದಿದ್ದರು. ಬಳಿಕ ರೇಣುಕಾಸ್ವಾಮಿ ಜತೆ ಚಾಟಿಂಗ್ ನಡೆಸಲಾಗಿತ್ತು. ಬಳಿಕ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹಲ್ಲೆ ನಡೆಸಲಾಗಿತ್ತು. ಈ ವೇಳೆ ಆತ ಸಾವನ್ನಪ್ಪಿದ್ದ. ಆತ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ದರ್ಶನ್‌ ಆಪ್ತರು ಸ್ಕಾರ್ಪಿಯೋ ಕಾರಿನಲ್ಲಿ ಶವವನ್ನು ತಂದು ಬಿಸಾಡಿ ಹೋಗಿದ್ದರು. ಬಳಿಕ ಪೊಲೀಸರಿಗೆ ಕಾಲ್‌ ಮಾಡಿ ತಪ್ಪಾಗಿದೆ ಸರ್ ಅಂದಿದ್ದರು. ಬಳಿಕ ಬಂದು ಮೂವರು ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೂಡ ದರ್ಶನ್‌ ಅಭಿಮಾನಿಯಾಗಿದ್ದ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Prajwal Revanna Case : ಭವಾನಿ ರೇವಣ್ಣ ಕಾರಿನ ಚಾಲಕ ಅಜಿತ್ ಸಂಬಂಧಿಕನ ಮನೆಗೆ ನುಗ್ಗಿ ಹಲ್ಲೆ

Prajwal Revanna Case : ಲ್ಲೆಯಿಂದ ಗಾಯಗೊಂಡಿರುವ ಮೋಹಿತ್ ಗೆ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಗೆ ನುಗ್ಗಿರುವ ಮೂರ್ನಾಲ್ಕು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

prajwal revanna case
Koo

ಹಾಸನ : ಪ್ರಜ್ವಲ್​ ರೇವಣ್ಣ ಸೆಕ್ಸ್​ ವಿಡಿಯೊ ಹಗರಣದಲ್ಲಿ (Prajwal Revanna Case) ಪೊಲೀಸರಿಗೆ ಬೇಕಾಗಿರುವ ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಮೇಲೆ ಕಳೆದ ಕೆಲವು ದಿನಗಳಿಂದ ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದಾರೆ. ಮನೆಗೆ ಕಲ್ಲು ಎಸೆಯುತ್ತಿದ್ದ ಆರೋಪಿಗಳು ಇದೀಗ ರಾತ್ರಿ ವೇಳೆ ಮನೆಗೆ ನುಗ್ಗಿ ಅಜಿತ್​ನ ಅಕ್ಕನ ಮಗ ಮೋಹಿತ್​ ಮೇಲೆ ಹಲ್ಲೆ ನಡೆಸಿದ್ದಾರೆ. ಬುಧವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮನೆ ಮಂದಿಯ ಮುಂದೆಯೇ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಮೂಡಲಹಿಪ್ಪೆಯಲ್ಲಿ ಅಜಿತ್ ಅವರ ಮನೆಯಿದ್ದು, ಎರಡು ದಿನಗಳ ಹಿಂದೆ ಮುಂಜಾನೆ 4 ಗಂಟೆಗೆ ಮನೆ ಮೇಲೆ ಕಲ್ಲೆಸೆದಿದ್ದ ಕಿಡಿಗೇಡಿಗಳು ಪರಾರಿಯಾಗಿದ್ದರು. ಆದರೆ, ಬುಧವಾರ ರಾತ್ರಿ ಮನೆ ಮೇಲೆ ದಾಳಿ ಮಾಡಿ ಅಜಿತ್ ಸಂಬಂಧಿಗೆ ಹಲ್ಲೆ ಮಾಡಲಾಗಿದೆ. ಹಲ್ಲೆಯಿಂದ ಗಾಯಗೊಂಡಿರುವ ಮೋಹಿತ್ ಗೆ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಗೆ ನುಗ್ಗಿರುವ ಮೂರ್ನಾಲ್ಕು ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Tungabhadra Dam : ಅಬ್ಬರದ ಮಳೆ; ವಿಶ್ವ ವಿಖ್ಯಾತಿಯ ತುಂಗಭದ್ರಾ ಡ್ಯಾಮ್​​ನಲ್ಲಿ​ ಹೆಚ್ಚಿದ ಒಳ ಹರಿವು

ಸಂತ್ರಸ್ತೆಯನ್ನು ಅಪಹರಣ ಮಾಡಿರುವ ಪ್ರಕರಣ ದಲ್ಲಿ ಭವಾನಿ ರೇವಣ್ಣ ಕಾರು ಚಾಲಕ ತಲೆ ಮರೆಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ದ ಅತ್ಯಾಚಾರ ಆರೋಪ ಪ್ರಕರಣ ದ ಸಂತ್ರಸ್ಥ ಮಹಿಳೆ ಕಿಡ್ನಾಪ್ ವಿಚಾರದಲ್ಲಿ ಅಜಿತ್ ವಿರುದ್ದ ವಾರಂಟ್ ಜಾರಿಯಾಗಿದೆ. ಹಲವು ಬಾರಿ ವಾರಂಟ್ ಜಾರಿಯಾದರೂ ಎಸ್​ಐಟಿ ಮುಂದೆ ಅಜಿತ್ ಹಾಜರಾಗಿಲ್ಲ.

ಪ್ರಜ್ವಲ್‌ ರೇವಣ್ಣಗೆ ಮತ್ತೆ 6 ದಿನ ಎಸ್‌ಐಟಿ ಕಸ್ಟಡಿ

ಬೆಂಗಳೂರು: ಆತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಮತ್ತೆ 6 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಕಸ್ಟಡಿಗೆ ನೀಡುವಂತೆ 42ನೇ ಎಸಿಎಂಎಂ ಕೋರ್ಟ್‌ಗೆ ಎಸ್‌ಐಟಿ ಅರ್ಜಿ ಸಲ್ಲಿಸಿತ್ತು. ಮನವಿಯನ್ನು ಪುರಸ್ಕರಿಸಿರುವ ಕೋರ್ಟ್, ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಸೂಚಿಸಿದೆ.

10 ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ ರೇವಣ್ಣನನ್ನು ಜೂನ್‌ 10ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲು ಸೂಚಿಸಲಾಗಿತ್ತು. ಇನ್ನೂ ವಿಚಾರಣೆ ಬಾಕಿ ಇರುವುದರಿಂದ ಕಸ್ಟಡಿಗೆ ನೀಡುವಂತೆ ಎಸ್‌ಐಟಿ ಮನವಿ ಮಾಡಿದ್ದರಿಂದ, ಇದೀಗ ಮತ್ತೆ 6 ದಿನಗಳ ಕಾಲ ಪ್ರಜ್ವಲ್‌ ರೇವಣ್ಣನನ್ನು ಎಸ್‌ಐಟಿ ಕಸ್ಟಡಿಗೆ ನೀಡಲು ಕೋರ್ಟ್‌ ಸಮ್ಮತಿಸಿದೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲಿನಲ್ಲಿ ಎರಡು ದಿನ ಕಾಲ ಕಳೆದಿದ್ದರು. ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿ ಸಾಮಾನ್ಯ ಕೈದಿಯಂತೆ ಪ್ರಜ್ವಲ್ ಇದ್ದರು. ಮಂಗಳವಾರ ರಾತ್ರಿ ಜೈಲಿನಲ್ಲಿ ನೀಡಿದ್ದ ಮುದ್ದೆ, ಚಪಾತಿ, ಅನ್ನ, ಸಾಂಬರ್‌, ಊಟ ಮಾಡಿದ್ದ ಪ್ರಜ್ವಲ್, ಬೇಗನೇ ನಿದ್ರೆಗೆ ಜಾರಿದ್ದರು. ಇಂದು ಬೆಳಗ್ಗೆ 5 ಗಂಟೆಗೆ ನಿದ್ದೆಯಿಂದ ಎದ್ದು ವಾಕಿಂಗ್ ಮಾಡಿದ್ದರು.

ಕೆಲ ಹೊತ್ತು ವಾಕಿಂಗ್ ಮಾಡಿ ಜೈಲ್ ಸಿಬ್ಬಂದಿ ಕೊಟ್ಟ ಕಾಫಿ ಕುಡಿದ ಬಳಿಕ ದಿನ ಪತ್ರಿಕೆಗಳನ್ನು ಓದಿ ಹೊರಗಿನ ವಿದ್ಯಮಾನಗಳ ಕಡೆ ಕಣ್ಣಾಡಿಸಿದರು. ಮತ್ತೆ ಜೈಲಿನ ಮೆನುವಿನಂತೆ ಪ್ರಜ್ವಲ್‌ಗೆ ಅವಲಕ್ಕಿ ಉಪ್ಪಿಟ್ಟು ನೀಡಲಾಗಿದೆ. ಹೊರಗೆ ಬಿಂದಾಸ್ ಆಗಿ ಓಡಾಡಿಕೊಂಡಿದ್ದ ಮಾಜಿ ಸಂಸದನಿಗೆ ಜೈಲುವಾಸದಲ್ಲಿ ಚಡಪಡಿಸುತ್ತಿರರುವುದು ಕಂಡುಬಂದಿದೆ.

Continue Reading

ಪ್ರಮುಖ ಸುದ್ದಿ

Tungabhadra Dam : ಅಬ್ಬರದ ಮಳೆ; ವಿಶ್ವ ವಿಖ್ಯಾತಿಯ ತುಂಗಭದ್ರಾ ಡ್ಯಾಮ್​​ನಲ್ಲಿ​ ಹೆಚ್ಚಿದ ಒಳ ಹರಿವು

Tungabhadra Dam : ಉತ್ತಮ ಮಳೆ ಆಗಿದ್ದರಿಂದ ಸದ್ಯ ಜಲಾಶಯದಲ್ಲಿ ಆರು ಟಿಎಂಸಿಗೂ ಅಧಿಕ ನೀರು ಸಂಗ್ರಹವಾಗುತ್ತಿದೆ. ಈ ಜಲಾಶಯದ ನೀರನ್ನು ನಂಬಿಕೊಂಡು ಈ ಪ್ರದೇಶದ ಕೋಟ್ಯಂತರ ಜನರು ಜೀವನ ಸಾಗಿಸ್ತಿದ್ದಾರೆ. ಅವರ ಮುಖದಲ್ಲಿ ಇದೀಗ ನಗು ಮೂಡಿದೆ.

VISTARANEWS.COM


on

Tungabhadra Dam
Koo

ವಿಜಯನಗರ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು ಬರಗಾಲದ ಭಯದಿಂದ ಜನ ಪಾರಾಗಿದ್ದಾರೆ. ಇದೇ ವೇಳೆ ಇಲ್ಲಿನ ವಿಶ್ವ ಪ್ರಸಿದ್ಧ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ನೀರಿನ ಒಳ ಹರಿವು ಹೆಚ್ಚಾಗಿದೆ. ಒಂದು ವಾರದಲ್ಲಿ ಮೂರು ಟಿಎಂಸಿ ನೀರು ಹರಿದು ಬಂದಿದ್ದು ಜೀವ ಜಲ ನಳನಳಿಸಲು ಆರಂಭಿಸಿದೆ. ಕಳೆದ ವರ್ಷ ಕಳೆ ಕಡಿಮೆಯಾಗಿದ್ದ ಕಾರಣ ಜಲಾಶಯ ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಡೆಡ್​ ಸ್ಟೋರೇಜ್ ನೀರು ಮಾತ್ರ ಉಳಿದಿತ್ತು. ಇದೀಗ ಮತ್ತೆ ಡ್ಯಾಮ್​ನಲ್ಲಿ ನಿಧಾನವಾಗಿ ನೀರು ತುಂಬಿಕೊಳ್ಳುವುದಕ್ಕೆ ಆರಂಭಿಸಿದೆ.

ಬೇಸಿಗೆ ಕೊನೆಯಲ್ಲಿ ಮಳೆ ಬಂದಿದ್ದ ಕಾರಣ ವಾರದ ಹಿಂದೆ ಕೇವಲ ಮೂರು ಟಿಎಂಸಿ ನೀರು ಮಾತ್ರ ಸಂಗ್ರಹವಾಗಿತ್ತು. ಉತ್ತಮ ಮಳೆ ಆಗಿದ್ದರಿಂದ ಸದ್ಯ ಜಲಾಶಯದಲ್ಲಿ ಆರು ಟಿಎಂಸಿಗೂ ಅಧಿಕ ನೀರು ಸಂಗ್ರಹವಾಗುತ್ತಿದೆ. ಈ ಜಲಾಶಯದ ನೀರನ್ನು ನಂಬಿಕೊಂಡು ಈ ಪ್ರದೇಶದ ಕೋಟ್ಯಂತರ ಜನರು ಜೀವನ ಸಾಗಿಸ್ತಿದ್ದಾರೆ. ಅವರ ಮುಖದಲ್ಲಿ ಇದೀಗ ನಗು ಮೂಡಿದೆ.

ಈ ಡ್ಯಾಮ್​ನಿಂದ ಲಕ್ಷಾಂತರ ಎಕರೆ ಕೃಷಿ ಪ್ರದೇಶಕ್ಕೆ ನೀರು ಹೋಗುತ್ತದೆ. ಅಷ್ಟೇ ಅಲ್ಲದೇ ತುಂಗಭದ್ರಾ ಜಲಾಶಯದಿಂದ ಆಂಧ್ರಪ್ರದೇಶದ, ತೆಲಂಗಾಣ ಎರಡು ರಾಜ್ಯಕ್ಕೂ ನೀರು ಹರಿಯುತ್ತದೆ. ಕಳೆದ ವರ್ಷ ಮಳೆ ಕಡಿಮೆಯಾಗಿದ್ದ ಕಾರಣ ಕೇವಲ 90 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹಣೆ ಆಗಿತ್ತು. ಈ ಜಲಾಶಯದಲ್ಲಿ 105 ಟಿಎಂಸಿ ಸಂಗ್ರಹಣಾ ಸಾಮರ್ಥ್ಯವಿದೆ. ಹೀಗಾಗಿ ಕಳೆದ ವರ್ಷ ಡ್ಯಾಮ್ ತುಂಬಿರಲಿಲ್ಲ. ಭೀಕರ ಬರಗಾಲದಿಂದ ಕುಡಿಯೋ ನೀರಿಗೂ ಭಾರೀ ಹಾಹಾಕಾರ ಶುರು ಆಗಿತ್ತು. ಆದರೆ, ಈ ಬಾರಿ ಬೇಗ ಮಳೆ ಬಂದ ಕಾರಣ ಸಮಸ್ಯೆ ಸರಿಯಾಗುವ ಲಕ್ಷಣ ಕಂಡು ಬಂದಿದೆ. 100 ಟಿಎಂಸಿ ನೀರು ತುಂಬಿದರೆ ಹೊರಕ್ಕೆ ಹರಿಯಬಿಡಲಾಗುತ್ತದೆ

ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

ಬೆಂಗಳೂರು: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Polluted Water : ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ಇನ್ನು ಜೂನ್‌ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಜೂನ್‌ 16ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ: ಮೂಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಗೆ ಹೈ ವೇವ್ ಅಲರ್ಟ್‌ ಇದೆ. . ಜೂನ್ 12‌ರಿಂದ 13ರ ಬೆಳಗ್ಗೆ 11:30 ಗಂಟೆಗಳವರೆಗೆ 1.9 – 2.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉಡುಪಿ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಹೈ ವೇವ್ ಅಲರ್ಟ್‌ ಇದೆ. ಜೂನ್‌ 12ರಿಂದ 13ರ ಬೆಳಗ್ಗೆ 11:30ರವರೆಗೆ 1.9- 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉತ್ತರ ಕನ್ನಡ: ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ಅಲರ್ಟ್‌ ನೀಡಲಾಗಿದೆ. ಜೂನ್‌ 12ರಿಂದ 13ರ ರಾತ್ರಿ 11.30ರವರೆ 2.0 – 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29ನೇC ಮತ್ತು 21c ಆಗಿರಬಹುದು.

Continue Reading

ಧಾರವಾಡ

Dharwad News: ಜ್ಯೋತಿರ್ವಿಜ್ಞಾನ ಕಲಿಕೆಯಲ್ಲಿ ವಿದೇಶಿಯರ ಆಸಕ್ತಿ ಹೆಚ್ಚಳ: ಡಾ. ನವೀನಶಾಸ್ತ್ರಿ ಪುರಾಣಿಕ

Dharwad News: ಜ್ಯೋತಿಷ್ಯಶಾಸ್ತ್ರ ಒಂದು ವಿಜ್ಞಾನ ಎಂಬುದನ್ನು ಅರ್ಥ ಮಾಡಿಕೊಂಡಿರುವ ವಿದೇಶಿಯರು ಉತ್ಸಾಹದಿಂದ ಕಲಿಯುತ್ತಿದ್ದಾರೆ. ವಿದೇಶಿ ಜ್ಯೋತಿಷಿಗಳು ನಮ್ಮ ಭವಿಷ್ಯ ಹೇಳಿದರೂ ಅಚ್ಚರಿಪಡಬೇಕಿಲ್ಲ ಎಂದು ವಿದ್ವಾನ್ ಡಾ. ನವೀನಶಾಸ್ತ್ರಿ ಪುರಾಣಿಕ ತಿಳಿಸಿದ್ದಾರೆ.

VISTARANEWS.COM


on

Increasing interest of foreigners in learning astrology says Dr Navinashastri Puranika
Koo

ಧಾರವಾಡ: ಜ್ಯೋತಿಷ್ಯ ಜನರನ್ನು ಹೆದರಿಸುವ ಶಾಸ್ತ್ರವಲ್ಲ, ಮಾನವನನ್ನು ಉನ್ನತಿಯೆಡೆಗೆ ಕರೆದೊಯ್ಯುವುದು ಜ್ಯೋತಿಷ್ಯಶಾಸ್ತ್ರದ ಉದ್ದೇಶ ಎಂದು ವಿದ್ವಾನ್ ಡಾ. ನವೀನಶಾಸ್ತ್ರಿ ಪುರಾಣಿಕ (Dharwad News) ತಿಳಿಸಿದರು.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಆಯೋಜಿಸಿದ್ದ ಎನ್.ಕೆ. ಜೋಗಳೇಕರ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ “ಜ್ಯೋತಿಷ್ಯಶಾಸ್ತ್ರ ಮತ್ತು ವೈಜ್ಞಾನಿಕ ಚಿಂತನೆಗಳು’ ಕುರಿತು ಉಪನ್ಯಾಸ ನೀಡಿ, ಅವರು ಮಾತನಾಡಿದರು.

ವ್ಯಕ್ತಿಯ ಹಿಂದಿನ ಮೂರು ತಲೆಮಾರು ಹಾಗೂ ಮುಂದಿನ ಮೂರು ತಲೆಮಾರು ಜ್ಯೋತಿಷ್ಯ ಹೇಳುವ ಜ್ಯೋತಿಷಿಗಳು ಪ್ರಸ್ತುತ ನಮ್ಮ ಸಮಾಜದಲ್ಲಿದ್ದಾರೆ. ಆದರೆ ಅವರನ್ನು ನಾವು ಗುರುತಿಸುತ್ತಿಲ್ಲ. ರೋಗಗಳ ಬಗ್ಗೆ ಮುನ್ನೆಚ್ಚರಿಕೆ ನೀಡುವ ಜ್ಯೋತಿಷ್ಯದಲ್ಲಿ ರೋಗಗಳಿಗೂ ಚಿಕಿತ್ಸೆ ತಿಳಿಸಲಾಗಿದೆ. ಆಯುಷ್ಯ ವೃದ್ಧಿ ಹಾಗೂ ಮನಸನ್ನು ಸ್ಥಿರವಾಗಿಡಲು ಜ್ಯೋತಿಷ್ಯ ನಮಗೆ ಅಗತ್ಯವಾಗಿದೆ ಎಂದರು.

ಇದನ್ನೂ ಓದಿ: Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

ಜ್ಯೋತಿಷ್ಯಶಾಸ್ತ್ರ ಒಂದು ವಿಜ್ಞಾನ ಎಂಬುದನ್ನು ಅರ್ಥ ಮಾಡಿಕೊಂಡಿರುವ ವಿದೇಶಿಯರು ಉತ್ಸಾಹದಿಂದ ಕಲಿಯುತ್ತಿದ್ದಾರೆ. ವಿದೇಶಿ ಜ್ಯೋತಿಷಿಗಳು ನಮ್ಮ ಭವಿಷ್ಯ ಹೇಳಿದರೂ ಅಚ್ಚರಿಪಡಬೇಕಿಲ್ಲ. ಕೆಲ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಜ್ಯೋತಿಷ್ಯ ಕೂಡ ಬರಲಿದೆ ಎಂದರು.

ಜ್ಯೋತಿಷ್ಯಶಾಸ್ತ್ರ ಕಾಲ ಗಣನೆ ಮಾಡಿ ಹೇಳುವ ಶಾಸ್ತ್ರ, ಇದು ಗಣಿತ, ಖಗೋಳಶಾಸ್ತ್ರ ಎಂಬುದನ್ನು ಒಪ್ಪಿಕೊಂಡ ಪಾಶ್ಚಾತ್ಯರು ಜ್ಯೋತಿಷ್ಯ ಕಲಿಯುವುದರೊಂದಿಗೆ ಅದಕ್ಕನುಗುಣವಾಗಿ ಜೀವನ ಕ್ರಮ ರೂಪಿಸಿಕೊಳ್ಳುತ್ತಿದ್ದಾರೆ ತಿಳಿಸಿದರು.

ಸಹಸ್ರಾರು ವರ್ಷಗಳ ಇತಿಹಾಸ ಹೊಂದಿರುವ ಜ್ಯೋತಿಷ್ಯಶಾಸ್ತ್ರದ ಜ್ಞಾನ, ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಯಾಗದಿರುವುದು ಬೇಸರದ ಸಂಗತಿ. ಜ್ಯೋತಿಷ್ಯವು ಮೂಢನಂಬಿಕೆ ಎಂದು ಹೇಳುವ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಕೂಡ ಭವಿಷ್ಯಕ್ಕಾಗಿ ಜ್ಯೋತಿಷಿಗಳ ಮನೆ ಮುಂದೆ ಸರದಿಯಲ್ಲಿ ನಿಲ್ಲುತ್ತಾರೆ ಎಂದ ಅವರು, ನಿರಂತರ ಕಲಿಕೆ ಇದ್ದರೆ ಮಾತ್ರ ಜ್ಯೋತಿಷ್ಯಶಾಸ್ತ್ರದಲ್ಲಿ ಪ್ರಾವಿಣ್ಯ ಗಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಮಾನಸಿಕ ಆರೋಗ್ಯ ತಜ್ಞ ಡಾ. ಆನಂದ ಹಂದಿಗೋಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಈ ಸಂದರ್ಭದಲ್ಲಿ ದತ್ತಿದಾನಿ ಸುಹಾಸ ಜೋಗಳೇಕರ ಹಾಗೂ ಇತರರು ಉಪಸ್ಥಿತರಿದ್ದರು. ಗುರು ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿನದತ್ತ ಹಡಗಲಿ ನಿರೂಪಿಸಿದರು.

Continue Reading
Advertisement
murder case
ಬೆಂಗಳೂರು5 mins ago

Murder Case : ಬೆಂಗಳೂರಿನಲ್ಲಿ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ರಕ್ತಕಾರಿದ ರೌಡಿಶೀಟರ್‌

Khalistan Terror
ವಿದೇಶ6 mins ago

Khalistan Terror: ಇಟಲಿಯಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ವಿರೂಪಗೊಳಿಸಿದ ಖಲಿಸ್ತಾನಿಗಳು

Actor Darshan Another Sandalwood actor arrested for supporting Darshan
ಸ್ಯಾಂಡಲ್ ವುಡ್22 mins ago

Actor Darshan: ದರ್ಶನ್‌ಗೆ ನೆರವು ಕೊಟ್ಟ ಮತ್ತೊಬ್ಬ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌!

prajwal revanna case
ಪ್ರಮುಖ ಸುದ್ದಿ29 mins ago

Prajwal Revanna Case : ಭವಾನಿ ರೇವಣ್ಣ ಕಾರಿನ ಚಾಲಕ ಅಜಿತ್ ಸಂಬಂಧಿಕನ ಮನೆಗೆ ನುಗ್ಗಿ ಹಲ್ಲೆ

Actor Darshan Pavitra Gowda's ex-husband Sanjay Singh statement
ಸ್ಯಾಂಡಲ್ ವುಡ್33 mins ago

Actor Darshan: ಪವಿತ್ರಾ ಗೌಡ ಜೈಲು ಸೇರುತ್ತಿದ್ದಂತೆ ಮಾಜಿ ಪತಿ ಪ್ರತ್ಯಕ್ಷ; ಅವರು ಹೇಳಿದ್ದೇನು?

Tollgates
ದೇಶ51 mins ago

Tollgates: ಇನ್ನು ಫಾಸ್ಟ್‌ಟ್ಯಾಗ್‌‌ ಮರೆತುಬಿಡಿ; ಟೋಲ್‌ ಸಂಗ್ರಹಕ್ಕೆ ಬರುತ್ತಿದೆ ಸ್ಯಾಟಲೈಟ್‌ ಆಧಾರಿತ ವ್ಯವಸ್ಥೆ: ಏನಿದರ ಪ್ರಯೋಜನ?

WI vs NZ
ಕ್ರೀಡೆ52 mins ago

WI vs NZ: ಕಿವೀಸ್​ ಕಿವಿ ಹಿಂಡಿ ಸೂಪರ್​-8ಗೆ ಪ್ರವೇಶಿಸಿದ ವೆಸ್ಟ್​ ಇಂಡೀಸ್​

Pushpa 2 Allu Arjun postponed
ಟಾಲಿವುಡ್54 mins ago

Pushpa 2: ಅಗಸ್ಟ್ 15 ರಂದು ರಿಲೀಸ್‌ ಆಗ್ತಿಲ್ಲ ಪುಷ್ಪ 2; ಮತ್ತೆ ಶುರುವಾಯ್ತು ಚರ್ಚೆ!

Anushka Sharma
ಕ್ರೀಡೆ1 hour ago

Anushka Sharma: ಕೊಹ್ಲಿಯಂತೆ ತಾಳ್ಮೆ ಕಳೆದುಕೊಂಡ ಪತ್ನಿ ಅನುಷ್ಕಾ; ವಿಡಿಯೊ ವೈರಲ್​

Kannada New Movie Fire Fly Sheetal Shetty
ಸ್ಯಾಂಡಲ್ ವುಡ್2 hours ago

Kannada New Movie: ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾದಲ್ಲಿ ಖ್ಯಾತ ಆ್ಯಂಕರ್​ ನಟನೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌