Site icon Vistara News

Karnataka Election Results: ಕೆ.ಆರ್‌.ನಗರದಲ್ಲಿ ಸಾ.ರಾ.ಮಹೇಶ್ ಸೋಲಿಗೆ ಮನನೊಂದು ಅಭಿಮಾನಿ ಆತ್ಮಹತ್ಯೆಗೆ ಯತ್ನ

attempts suicide in K R Nagar

attempts suicide in K R Nagar

ಮೈಸೂರು: ಕೆ.ಆರ್‌.ನಗರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸಾ.ರಾ.ಮಹೇಶ್ ಚುನಾವಣೆಯಲ್ಲಿ (Karnataka Election Results) ಸೋತ ಹಿನ್ನೆಲೆಯಲ್ಲಿ ಮನನೊಂದು ಅಭಿಮಾನಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಕೆ.ಆರ್.ನಗರ ತಾಲೂಕಿನ ದಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ವೆಂಕಟೇಶ್ (47) ಆತ್ಮಹ್ಯತ್ಯೆಗೆ ಯತ್ನಿಸಿದ ವ್ಯಕ್ತಿ. ಜೆಡಿಎಸ್ ಅಭ್ಯರ್ಥಿ ಸಾ.ರಾ.ಮಹೇಶ್ ಸೋಲಿನಿಂದ ಮನನೊಂದಿದ್ದ ವೆಂಕಟೇಶ್, ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಟೀಕೆಗಳಿಂದ ಹತಾಶರಾಗಿದ್ದರು ಎನ್ನಲಾಗಿದೆ. ಹೀಗಾಗಿ ಅವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸ್ಥಳೀಯರು ರಕ್ಷಿಸಿ ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ | Karnataka Election Results: ಗೆಲ್ಲಲು ಘಟಾನುಘಟಿಗಳಿಗೆ ನೀರು ಕುಡಿಸಿದ ಕ್ಷೇತ್ರಗಳಿವು!

ವಿದ್ಯುತ್ ತಂತಿ ತುಳಿದು ಯುವಕ ಸಾವು

ಕೋಲಾರ: ವಿದ್ಯುತ್ ತಂತಿ ತುಳಿದು ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಾಗೊಂದಿ ಗ್ರಾಮದಲ್ಲಿ ನಡೆದಿದೆ. ಮಾಗೊಂದಿ ಗ್ರಾಮದ ಸುದರ್ಶನ್ (23) ಮೃತ ಯುವಕ. ತೋಟದಲ್ಲಿ ಕೊಳವೆಬಾವಿ ಮೋಟರ್‌ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಯುವಕ ಗಂಭೀರವಾಗಿ ಗಾಯಗೊಂಡಿದ್ದ. ಹೀಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version