Sabarimala yatre | ಮೈಸೂರಿನಿಂದ ತೆರಳಿದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ: ತಪ್ಪಿಲ್ಲದಿದ್ದರೂ ಹೊಡೆದು ಕೊನೆಗೆ ಕ್ಷಮೆ ಯಾಚನೆ - Vistara News

ಕರ್ನಾಟಕ

Sabarimala yatre | ಮೈಸೂರಿನಿಂದ ತೆರಳಿದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ: ತಪ್ಪಿಲ್ಲದಿದ್ದರೂ ಹೊಡೆದು ಕೊನೆಗೆ ಕ್ಷಮೆ ಯಾಚನೆ

ಮೈಸೂರಿನಿಂದ ಶಬರಿಮಲೆಗೆ ಹೋಗುತ್ತಿದ್ದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆದಿದೆ. ಸ್ಥಳೀಯರು ಏರಿಬಂದಾಗ ಪೊಲೀಸರು ಬಂದು ಶಾಂತಗೊಳಿಸಬೇಕಾಯಿತು. ಆದರೆ, ಕನ್ನಡಿಗರ ತಪ್ಪಿರಲಿಲ್ಲ.

VISTARANEWS.COM


on

sabarimle yatre
ಶಬರಿಮಲೆಗೆ ಹೋಗುತ್ತಿದ್ದ ಮೈಸೂರಿನ ಭಕ್ತರ ಮೇಲೆ ಹಲ್ಲೆ ನಡೆದ ಘಟನೆಯ ದೃಶ್ಯ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಶಬರಿಮಲೆಗೆ ಯಾತ್ರೆ (Sabarimala yatre) ತೆರಳಿದ್ದ ಮೈಸೂರಿನ ಅಯ್ಯಪ್ಪ ಭಕ್ತರ ಮೇಲೆ ಕಾಲಡಿ ಹೆದ್ದಾರಿಯಲ್ಲಿ ಹಲ್ಲೆ ನಡೆಸಿದೆ. ಕಾರು ಚಾಲಕ ಅಜಾಗರೂಕತೆಯಿಂದ ಕಾರು ಚಲಾಯಿಸಿಕೊಂಡು ಮೈಸೂರಿನ ಭಕ್ತರಿದ್ದ ಟೆಂಪೋ ಟ್ರಾವೆಲರ್‌ಗೆ ಡಿಕ್ಕಿ ಹೊಡೆದಿದ್ದರೂ ಕನ್ನಡಿಗರ ಮೇಲೆಯೇ ಏರಿ ಬಂದಿದ್ದರು. ಕೊನೆಗೆ ಸಿಸಿಟಿವಿ ಫೂಟೇಜ್‌ ಪರಿಶೀಲನೆ ವೇಳೆ ಸತ್ಯ ಗೊತ್ತಾಗಿ ಪೊಲೀಸರು ಕನ್ನಡಿಗ ಭಕ್ತರ ಕ್ಷಮೆ ಯಾಚಿಸುವಂತೆ ಮಾಡಿದರು.

ಮೈಸೂರಿನಿಂದ ತೆರಳಿದ್ದ ಅಯ್ಯಪ್ಪ ಭಕ್ತರು ಕಾಲಡಿ ಹೆದ್ದಾರಿಯಲ್ಲಿ ಸಾಗುತ್ತಿದ್ದಂತೆಯೇ ಶಬರಿಮಲೆಗೆ ಇನ್ನು ಕೆಲವೇ ಕಿಲೋಮೀಟರ್‌ ಬಾಕಿ ಇರುತ್ತಿದ್ದಂತೆಯೇ ಅವರು ಸಾಗುತ್ತಿದ್ದ ಟೆಂಪೋ ಟ್ರಾವೆಲರ್‌ಗೆ ಕಾರೊಂದು ಡಿಕ್ಕಿ ಹೊಡೆದಿತ್ತು.

ಕಾರು ಚಾಲಕನ ಅಜಾಗರೂಕತೆಯಿಂದಲೇ ಈ ಘಟನೆ ನಡೆದಿದ್ದರೂ ಕಾರಿನಲ್ಲಿದ್ದವರು ಟೆಂಟೋ ಟ್ರಾವೆಲರ್‌ ಚಾಲಕನ ಮೇಲೆಯೇ ಏರಿ ಹೋಗಿದ್ದಾರೆ. ಇದನ್ನು ಪ್ರಶ್ನೆ ಮಾಡಿದ ಕರ್ನಾಟಕದ ಅಯ್ಯಪ್ಪ ಭಕ್ತರ ಮೇಲೂ ಹಲ್ಲೆ ನಡೆದಿದೆ. ಜತೆಗೆ ಸ್ಥಳೀಯರು ಕೂಡಾ ಸೇರಿಕೊಂ)ಡು ಟ್ರಾವೆಲರ್‌ ಚಾಲಕನದೇ ತಪ್ಪು ಎಂದು ವಾದಿಸಿದರು. ಈ ನಡುವೆ ಟ್ರಾವೆಲರ್‌ನಲ್ಲಿದ್ದವರು ಶಬರಿಮಲೆಗೆ ತೆರಳುತ್ತಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿಗೆ ಮನವಿ ಮಾಡಿದರು. ಕನ್ನಡಿಗರ ಮೇಲೆ ಹಲ್ಲೆ ನಡೆದಿದೆ, ಬಂದು ರಕ್ಷಿಸಿ ಎಂದು ಕೋರಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಕೇರಳ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಸಿಸಿಟಿವಿ ದೃಶ್ಯ ಪರಿಶೀಲಿಸಿದ ಬಳಿಕ ಕರ್ನಾಟಕ ಅಯ್ಯಪ್ಪ ಭಕ್ತರ ಕ್ಷಮೆ ಕೇಳುವಂತೆ ಮಾಡಿದರು.

ಇದನ್ನೂ ಓದಿ | Sabarimala News | ಶಬರಿಮಲೆಗೆ ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರ ಆಗಮನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ರಾಜಕೀಯ

CM Siddaramaiah: ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧರಿದ್ದೇವೆ. ಆದರೆ, ಲೋಕಸಭಾ ಚುನಾವಣೆ ಫಲಿತಾಂಶ ಬರಬೇಕಿದೆ ಎಂದ ಸಿಎಂ ಸಿದ್ದರಾಮಯ್ಯ, ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದು ಹೇಳಿದ್ದಾರೆ.

VISTARANEWS.COM


on

We are ready for taluk and zilla panchayat and BBMP elections Says CM Siddaramaiah
Koo

ಮೈಸೂರು: ಲೋಕಸಭಾ ಚುನಾವಣೆ (Lok Sabha Election 2024) ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ (Taluk and Zilla panchayat Election) ಹಾಗೂ ಬಿಬಿಎಂಪಿ ಚುನಾವಣೆಯನ್ನು (BBMP Election) ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಉಚ್ಚ ನ್ಯಾಯಾಲಯಕ್ಕೆ ಹೋಗಲಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಹೀಗೆ ಉತ್ತರಿಸಿದರು.

ಕ್ಷೇತ್ರ ಪುನರ್ವಿಂಗಡನೆಗೆ ಜನವರಿವರೆಗೆ ಗಡುವು ಇದ್ದುದರ ಬಗ್ಗೆ ಮಾತನಾಡಿ ಈ ಬಗ್ಗೆ ಅಡ್ವೋಕೇಟ್ ಜನರಲ್ ಜತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕು ಎಂದು ಹೇಳಿದರು.

ಹೈಕಮಾಂಡ್ ನಿರ್ಧಾರದ ಬಗ್ಗೆ ತಿಳಿದಿಲ್ಲ

ಈ ಬಾರಿ ಡಾ. ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸುವ ಬಗ್ಗೆ ಕಾಂಗ್ರೆಸ್‌ನಲ್ಲಿ ಚಟುವಟಿಕೆ ನಡೆಯುತ್ತಿರುವುದರ ಬಗ್ಗೆ ಮಾಧ್ಯಮದವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್‌ನವರು ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಏನು ಮಾಡುತ್ತಾರೆ ಎಂದು ನನಗೆ ಗೊತ್ತಿಲ್ಲ. ಹೋದ ನಾನು ಬಾರಿ ವರುಣಾದಲ್ಲಿಯೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು. ಈಗ ಏನು ಮಾಡುತ್ತಾರೆ ಎಂದು ತಿಳಿದಿಲ್ಲ ಎಂದು ಹೇಳಿದರು.

ಪ್ರಕರಣ ದುರ್ಬಲಗೊಳಿಸಲು ಹೇಳಿಕೆ

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಆಡಿಯೊ ಇರುವುದರಿಂದ ಅವರನ್ನೇ ವಿಚಾರಣೆ ಮಾಡಬೇಕೆಂದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌ಡಿಕೆ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವಿಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ. ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ. ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು. ಅಣ್ಣನ ಮಗ ಅಪರಾಧಿಯಲ್ಲ, ಆರೋಪಿ ಅಷ್ಟೇ ಎಂದಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ ಎಂದರು.

ನಂಬಿರುವುದು ನಿಮ್ಮ ತಪ್ಪು

ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಇನ್ನು ಎಲ್ಲರಿಗೂ ಪ್ರಧಾನ ಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂದು ನೀವೆಲ್ಲ ನಂಬಿರುವುದೇ ನಿಮ್ಮ ತಪ್ಪು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಮೋದಿಯವರು ಸೆಲೆಕ್ಟಿವ್ ಎಂದು ಹೇಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ಚುನಾಯಿತ ಸರ್ಕಾರದ ಮುಖ್ಯಮಂತ್ರಿಯೊಬ್ಬರು ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೆನೋ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರನ್ನು ಪ್ರಶ್ನಿಸಿ

ಲೋಕಸಭಾ ಚುನಾವಣಾ ಫಲಿತಾಂಶಕ್ಕಾಗಿ ಪಾಸ್‌ಪೋರ್ಟ್‌ ರದ್ದತಿ ವಿಚಾರವಾಗಿ ವಿಳಂಬ ಧೋರಣೆಯನ್ನು ಅನುಸರಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಈ ಪ್ರಶ್ನೆಯನ್ನು ಬಿಜೆಪಿಯ ಪ್ರಲ್ಹಾದ್‌ ಜೋಶಿ ಅವರನ್ನು ಕೇಳಿ ಎಂದರು.

ಮನೆಯವರಿಗೆ ಹೇಳದೆ ವಿದೇಶಕ್ಕೆ ತೆರಳಿದರೇ?

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರಜ್ವಲ್‌ ರೇವಣ್ಣ ಅವರಿಗೆ ಪತ್ರ ಬರೆದು ಶರಣಾಗಬೇಕು. ಇಲ್ಲದಿದ್ದರೆ ಒಬ್ಬಂಟಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇವರಿಗೆ ಗೊತ್ತಿಲ್ಲದೆ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೊರಟು ಹೋಗಿದ್ದಾರಾ? ಎಂದು ಪ್ರಶ್ನೆ ಮಾಡಿದರು.

ಪ್ರಚಾರಕ್ಕೆ ಏಕೆ ಹೋಗಿದ್ದರು?

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲಿನಿಂದಲೂ ಪ್ರಜ್ವಲ್ ರೇವಣ್ಣ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಹೇಳಿಕೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಹಾಗಾದರೆ ನನ್ನ ಮಗ ಎಂದು ಮತ ನೀಡಲು ಪ್ರಚಾರ ಮಾಡಿದ್ದು ಏನು? ಇದು ಸಂಪರ್ಕವೋ? ಅಲ್ಲವೋ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

ಪ್ರಕರಣದ ಬಗ್ಗೆ ಗಮನ ಕೇಂದ್ರೀಕರಿಸಲು ಎಸ್.ಐ.ಟಿ ರಚನೆ

ಎಸ್.ಐ.ಟಿ ತನಿಖೆ ತಾತ್ವಿಕ ಅಂತ್ಯ ಪಡೆಯುವುದಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನಮಗೆ ಎಸ್.ಐ.ಟಿ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಕುಮಾರಸ್ವಾಮಿ ಕಾಲದಲ್ಲಿ ಎಷ್ಟು ಪ್ರಕರಣಗಳನ್ನು ಎಸ್ಐಟಿಗೆ ವಹಿಸಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಎಸ್ಐಟಿ ರಚನೆ ಮಾಡುವುದು ಪ್ರಕರಣದ ಬಗ್ಗೆ ಗಮನವನ್ನು ಕೇಂದ್ರೀಕರಿಸಲು ಎಂದು ಹೇಳಿದರು.

ಕಾವೇರಿ ನದಿ ಮಲಿನವಾಗುತ್ತಿದೆ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಕೆಲವು ಕಡೆ ಕೈಗಾರಿಕೆಗಳಿಂದ ಬಿಡುವ ನೀರಿನಿಂದ ಮಲಿನವಾಗಿರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

Continue Reading

ತುಮಕೂರು

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

Road Accident : ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಮಗನ ಜತೆ ಬರುತ್ತಿದ್ದ ತಾಯಿ ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಸವಾರರು ಗಂಭೀರ ಗಾಯಗೊಂಡಿದ್ದು,ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

VISTARANEWS.COM


on

By

road Accident
Koo

ತುಮಕೂರು: ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ (Road Accident) ಮೃತಪಟ್ಟಿದ್ದಾರೆ. ತುಮಕೂರಿನ ಮಧುಗಿರಿ ತಾಲೂಕಿನ ಪುರವರ ಗ್ರಾಮದ ಹೊರವಲಯದ ಜಯಮಂಗಲಿ ನದಿ ಸೇತುವೆ ಬಳಿ ಘಟನೆ ನಡೆದಿದೆ. ಜೋಗೆನಹಳ್ಳಿ ಗ್ರಾಮದ ಹನುಮಕ್ಕ (45) ಮೃತ ದುರ್ದೈವಿ.

ಪುರವರದಿಂದ ಜೋಗೆನಹಳ್ಳಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಹನುಮಕ್ಕಳ ಮಗನಿಗೂ (25) ಗಂಭೀರ ಗಾಯವಾಗಿದೆ. ಮತ್ತೊಂದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಉಪ್ಪಾರಹಳ್ಳಿ ಗ್ರಾಮದ ಹನುಮಂತ ರೆಡ್ಡಿ (65), ಗಂಗಾಧರಪ್ಪ (67) ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕೊಡಿಗೇನಹಳ್ಳಿ ಪೊಲೀಸರು ಮೃತದೇಹವನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಬೆಂಗಳೂರು: ಗಂಡ – ಹೆಂಡತಿ ಜಗಳ (Couples Fight) ಉಂಡು ಮಲಗುವ ತನಕ ಎಂಬುದು ಹಳೇ ಗಾಧೆ. ಈಗ ಲೇಟೆಸ್ಟ್‌ ಗಾಧೆಯೊಂದು ಬಂದಿದೆ. “ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ (Police Station) ಗ್ಲಾಸ್ ಪೀಸ್ ಪೀಸ್ ಆಗುವ ತನಕ!” ಎಂದು ಮಾರ್ಪಾಟು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ನಾಲ್ಕು ಗೋಡೆಗಳ ಮಧ್ಯೆ ಇರಬೇಕಿದ್ದ ಜಗಳ ಬೀದಿಗೆ ಬಂದಿದ್ದಲ್ಲದೆ, ಪೊಲೀಸ್‌ ಠಾಣೆ ಮೆಟ್ಟಿಲನ್ನೂ ಏರಿತ್ತು. ಪತ್ನಿ ಮನೆಯವರನ್ನು ಠಾಣೆಗೆ ಕರೆಸಿದ್ದ ಆರೋಪಿ ಅಲ್ಲಿಯೂ ಜಗಳ ತೆಗೆದಿದ್ದ, ಕೊನೆಗೆ ಸಿಟ್ಟು ನೆತ್ತಿಗೇರಿ ಠಾಣೆಯ ಮುಂಭಾಗದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದ ಗುದ್ದಿ ಒಡೆದು ಹಾಕಿದ್ದಾನೆ.

ಜಯನಗರದ ಶ್ರೀಧರ್ ಎಂಬಾತನೇ ಪೊಲೀಸ್‌ ಠಾಣೆಯ ಗಾಜಿನ ಬಾಗಿಲನ್ನು ಒಡೆದು ಹಾಕಿದ ಆರೋಪಿಯಾಗಿದ್ದಾನೆ. ಪತಿ ಹಾಗೂ ಪತ್ನಿಯ ಜಗಳದಿಂದ ಈಗ ಸಾರ್ವಜನಿಕ ಆಸ್ತಿ ನಷ್ಟವಾಗುವಂತೆ ಆಗಿದೆ. ಅಲ್ಲದೆ, ಪತ್ನಿ ಹಾಗೂ ಆಕೆಯ ಮನೆಯವರ ಮೇಲೆ ಕಂಪ್ಲೇಂಟ್‌ ಕೊಡಲು ಬಂದಾತ ಸಿಟ್ಟಿನಿಂದ ಮಾಡಿಕೊಂಡ ಅವಾಂತರದಿಂದ ತನ್ನ ಮೇಲೆಯೇ ಕೇಸ್‌ ಹಾಕಿಸಿಕೊಂಡಂತೆ ಆಗಿದೆ.

ಇದನ್ನೂ ಓದಿ: Rave party: ಬೆಂಗಳೂರು ರೇವ್‌ ಪಾರ್ಟಿ ಕೇಸ್‌; ಬಿಲ್ಡಪ್‌ ಕೊಡಲು ಹೋಗಿ ಲಾಕ್‌ ಆದ ತೆಲುಗು ನಟಿ ಹೇಮಾ!

ಜಯನಗರದ ಶ್ರೀಧರ್ ಎಂಬಾತ ಕಳೆದ ಎರಡು ವರ್ಷಗಳ ಹಿಂದೆ ಅರ್ಚನಾ ಎಂಬಾಕೆ ಮದುವೆಯಾಗಿದ್ದ. ಮಗುವಾದ ನಂತರ ಪತ್ನಿ ಅರ್ಚನಾ ಅವರು ಪತಿ ಶ್ರೀಧರ್ ಮನೆಗೆ ಬಾರದೇ ತಂದೆ ಮನೆಯಾದ ಮಾರೇನಹಳ್ಳಿಯಲ್ಲಿಯೇ ಉಳಿದುಕೊಂಡಿದ್ದರು. ಶ್ರೀಧರ್‌ ಎಷ್ಟೇ ಕರೆದರೂ ಮನೆಗೆ ಬರಲು ಒಪ್ಪಲಿಲ್ಲ. ಈ ಬಗ್ಗೆ ಠಾಣೆಗೆ ದೂರು ನೀಡಲು ಜಯನಗರ ಪೊಲೀಸ್‌ ಠಾಣೆಗೆ ಶ್ರೀಧರ್ ಬಂದಿದ್ದ.

ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ವಿರುದ್ಧ ದೂರು ನೀಡಬೇಕು. ಮಗುವಾದ ಮೇಲೆ ಪತ್ನಿಯು ತವರು ಮನೆಯಿಂದ ವಾಪಸ್‌ ಬರುತ್ತಿಲ್ಲ. ನೀವೇ ನನಗೆ ನ್ಯಾಯ ಕೊಡಿ ಎಂದು ಪೊಲೀಸರಿಗೆ ಕೇಳಿಕೊಂಡಿದ್ದ. ಹೀಗಾಗಿ ನಾನು ದೂರು ಕೊಡುತ್ತೇನೆ ಎಂದು ಹೇಳಿದ್ದ. ಆಗ ಪೊಲೀಸರು ಸಹ ಕೌಟುಂಬಿಕ ಸಮಸ್ಯೆಯನ್ನು ಬಗೆಹರಿಸಿದರಾಯಿತು ಎಂದು ಶ್ರೀಧರ ಪತ್ನಿಯ ಕುಟುಂಬಸ್ಥರನ್ನು ಠಾಣೆಗೆ ಕರೆಸಿದ್ದರು. ಮೊದಲು ಮಾತನಾಡಿಕೊಂಡು ಎಲ್ಲವನ್ನೂ ಬಗೆಹರಿಸಿಕೊಳ್ಳಿ. ಕುಟುಂಬ ಎಂದ ಮೇಲೆ ಮಾತುಗಳು ಬರುತ್ತವೆ, ಹೋಗುತ್ತವೆ. ಎಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂಬ ಕಿವಿ ಮಾತನ್ನೂ ಪೊಲೀಸರು ನೀಡಿದ್ದಾರೆ.

ಶ್ರೀಧರ್‌ ಮೇಲೆ ಎಫ್‌ಐಆರ್‌

ಈ ವೇಳೆ ಮಾತುಕತೆ ಮಾಡುತ್ತಿದ್ದ ವೇಳೆ ಶ್ರೀಧರ್‌ಗೂ ಹಾಗೂ ಆತನ ಪತ್ನಿಯ ಮನೆಯವರಿಗೂ ಜಗಳ ಶುರುವಾಗಿದೆ. ಶ್ರೀಧರ್‌ಗೆ ತನ್ನ ಕೋಪವನ್ನು ನಿಯಂತ್ರಣ ಮಾಡಿಕೊಳ್ಳಲು ಆಗಿಲ್ಲ. ಹಾಗಾಗಿ ಗಲಾಟೆ ಭರದಲ್ಲಿ ಅಲ್ಲಿಯೇ ಇದ್ದ ಬಾಗಿಲ ಗ್ಲಾಸ್‌ಗಳಿಗೆ ಕೈಯಿಂದಲೇ ಬಲವಾಗಿ ಗುದ್ದಿದ್ದಾನೆ. ಆಗ ಗ್ಲಾಸ್‌ಗಳು ಪೀಸ್‌ ಪೀಸ್‌ ಆಗಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಕೇಸ್‌ ಅಡಿ ಶ್ರೀಧರ್‌ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲು ಮಾಡಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

Bank fraud: ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ತಿಳಿದುಬಂದಿದೆ.

VISTARANEWS.COM


on

Bank fraud Scam in Urban Co operative Bank of Karwar
Koo

ಕಾರವಾರ: ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಸೇರಿದಂತೆ ಹಲವಾರು ಕಡೆ ಸಹಕಾರಿ ಬ್ಯಾಂಕ್‌ಗಳ ಹಗರಣ (Bank fraud) ನಡೆದು ಗ್ರಾಹಕರು ಪರದಾಡುತ್ತಿರುವ ಹೊತ್ತಿನಲ್ಲಿಯೇ ಈಗ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ (Karwar Urban Co operative Bank) ಅವ್ಯವಹಾರ ನಡೆದಿದೆ ಎಂಬ ಸಂಗತಿ ಗೊತ್ತಾಗಿದೆ. ಆದರೆ, ಗ್ರಾಹಕರು ಯಾವುದೇ ರೀತಿಯಲ್ಲಿ ಭಯ ಪಡುವುದು ಬೇಡ. ನಿಮ್ಮ ಹಣ ಸುರಕ್ಷಿತವಾಗಿದೆ ಎಂದು ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ.

ಬ್ಯಾಂಕ್ ಮ್ಯಾನೇಜರ್‌ನಿಂದ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಸಂಗತಿ ವರ್ಷಗಳ ಬಳಿಕ ಗೊತ್ತಾಗಿದೆ. ಅದೂ ಆ ಮ್ಯಾನೇಜರ್ ಮೃತಪಟ್ಟಿದ್ದರಿಂದ ಈ ಅವ್ಯವಹಾರ ಬೆಳಕಿಗೆ ಬಂದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಈ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ಗುರುದಾಸ್ ಬಾಂದೇಕರ್ ಎನ್ನುವ ಮ್ಯಾನೇಜರ್ ಈ ಕೃತ್ಯ ಎಸೆಗಿದ್ದಾರೆಂದು ಗೊತ್ತಾಗಿದೆ.

54 ಕೋಟಿ ರೂಪಾಯಿ ಅವ್ಯವಹಾರ

ಸುಮಾರು 54 ಕೋಟಿ ರೂಪಾಯಿ ಅವ್ಯವಹಾರವನ್ನು ಈ ಮ್ಯಾನೇಜರ್ ಗುರುದಾಸ್ ಬಾಂದೇಕರ್ ಮಾಡಿದ್ದಾರೆನ್ನಲಾಗಿದೆ. ವರ್ಷದ ಹಿಂದೆ ಇವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ತಮ್ಮ ಸಂಬಂಧಿ ಹಾಗೂ ಪರಿಚಯಸ್ಥರ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ಮಾಡಿದ್ದಾರೆ ಎಂದು ಈಗ ತಿಳಿದುಬಂದಿದೆ.

ಪ್ರತಿ ವರ್ಷ ‌ಆಡಿಟ್‌ನಲ್ಲೂ ಗುರುದಾಸ್ ವ‌ಂಚನೆ ಮಾಡಿದ್ದರು. ಈಗ ಮ್ಯಾನೇಜರ್ ಮೃತಪಟ್ಟಿದ್ದರಿಂದ ಆಡಳಿತ ಮಂಡಳಿಗೆ ದೊಡ್ಡ ತಲೆನೋವಾಗಿದೆ. ಆಡಿಟ್ ಮಾಡಿಸುವ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ. ಕಾರವಾರ ನಗರ ಠಾಣೆಯಲ್ಲಿ ಈ ಸಂಬಂಧ ಬ್ಯಾಂಕ್ ಆಡಳಿತ ಮಂಡಳಿ ದೂರು ನೀಡಿದೆ.

ಬ್ಯಾಂಕ್‌ ದಿವಾಳಿ ಆಗಿಲ್ಲವೆಂದ ಆಡಳಿತ ಮಂಡಳಿ

ಈ ನಡುವೆ ಅವ್ಯವಹಾರದ ಸುದ್ದಿ ಎಲ್ಲೆಡೆ ಹರಡಿದ್ದರಿಂದ ಗ್ರಾಹಕರು ಆತಂಕಗೊಂಡಿದ್ದಾರೆ. ಬ್ಯಾಂಕ್ ದಿವಾಳಿಯಾಗಿದೆ ಎಂದು ತಮ್ಮ ಖಾತೆಯಲ್ಲಿಟ್ಟಿದ್ದ ಹಣವನ್ನು ವಾಪಸ್ ಪಡೆಯಬೇಕು ಎಂದು ಗ್ರಾಹಕರು ಮುಗಿಬಿದ್ದಿದ್ದಾರೆ. ಆದರೆ, ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಆಡಳಿತ ಮಂಡಳಿಯು, ಗ್ರಾಹಕರ ಹಣಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದೆ.

ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಹಗರಣದ (Bank fraud) ತನಿಖೆ ಹೊಣೆಯನ್ನು ಎಸ್‌ಐಟಿಗೆ (SIT Investigation) ವಹಿಸುವಂತೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಕಳೆದ ಏಪ್ರಿಲ್‌ 25ರಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DCM DK Shivakumar) ಭರವಸೆ ನೀಡಿದ್ದರು. ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ಗುರುವಾರ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಮನವಿ ಮಾಡಿದ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈ ಭರವಸೆ ನೀಡಿದ್ದರು.

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರಿಗೆ ಪ್ರಿಯಾಂಕಾ ಗಾಂಧಿ (Priyanka Gandhi) ಆಗಮಿಸಿದ್ದ ವೇಳೆ ಅವರನ್ನು ಭೇಟಿ ಮಾಡಿದ್ದ ಗುರು ರಾಘವೇಂದ್ರ ಸಹಕಾರ ಬ್ಯಾಂಕ್, ವಸಿಷ್ಠ ಸೌಹಾರ್ಧ ಬ್ಯಾಂಕ್ ಠೇವಣಿದಾರರು ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಈ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂಪಾಯಿಯನ್ನು ಹೂಡಿಕೆ ಮಾಡಿದ್ದೇವೆ. ಈಗ ಹಗರಣದಿಂದಾಗಿ ನಮಗೆ ನಯಾ ಪೈಸೆ ಸಿಗುತ್ತಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕಷ್ಟಪಟ್ಟು ನಾವು ದುಡಿದಿದ್ದ ಹಣವನ್ನೆಲ್ಲ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿಟ್ಟಿದ್ದೇವೆ. ಇದರಿಂದ ನಮಗೆ ತೀವ್ರ ಸಮಸ್ಯೆಯಾಗುತ್ತಿದೆ. ಈವರೆಗೆ ಯಾವ ಸರ್ಕಾರಗಳೂ ಈ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ನಮಗೆ ದಿಕ್ಕೇ ತೋಚದಂತಾಗಿದೆ. ಹೀಗಾಗಿ ಕೂಡಲೇ ಕ್ರಮವಹಿಸುವಂತೆ ಮನವಿ ಮಾಡಿದ್ದರು. ‌

ಎಸ್‌ಐಟಿ ತನಿಖೆಯ ಭರವಸೆ ನೀಡಿದ್ದ ಪ್ರಿಯಾಂಕಾ ಗಾಂಧಿ

ಠೇವಣಿದಾರರ ಮನವಿ ಸ್ವೀಕಾರ ಮಾಡಿದ್ದ ಪ್ರಿಯಾಂಕಾ ಗಾಂದಿ, ರಾಜ್ಯ ಸರ್ಕಾರದಿಂದ ಎಸ್‌ಐಟಿ ತನಿಖೆ ನಡೆಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಠೇವಣಿದಾರರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ. ತಮಗೆ ಸಾಕಷ್ಟು ಅನ್ಯಾಯ ಆಗಿದೆ. ಕೋಟಿ ಕೋಟಿ ಕಳೆದುಕೊಂಡಿದ್ದೇವೆ. ನ್ಯಾಯ ಕೇಳೋಕೆ ಹೋದರೆ ಯಾವುದೇ ಪರಿಹಾರ ಇಲ್ಲ. ಮೂರು ವರ್ಷದಿಂದ ಒಂದು ದೂರು ಕೂಡ ದಾಖಲಾಗಿಲ್ಲ. ಕಾಂಗ್ರೆಸ್‌ ಮುಖಂಡ ಶಂಕರ್ ಗುಹಾ ಅವರು ಬಂದ ಮೇಲೆ ದೂರು ದಾಖಲಾಗಿದೆ ಎಂದು ಅಳಲು ತೋಡಿಕೊಂಡಿದ್ದರು.

ಸಿಎಂಗೆ ಪತ್ರ ಬರೆಯಲು ಮುಂದಾದ ಡಿ.ಕೆ. ಶಿವಕುಮಾರ್

ಮನವಿ ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುತ್ತೇನೆ. ಶೀಘ್ರವೇ ಎಸ್‌ಐಟಿ ರಚನೆ ಮಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಕೂಡಲೇ ಈ ಸಂಬಂಧ ಸಿಎಂಗೆ ಪತ್ರವನ್ನು ಸಿದ್ಧಪಡಿಸಲು ಸಿಬ್ಬಂದಿಗೆ ಸೂಚನೆ ನೀಡಿದ್ದರು.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರೆದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ: Couples Fight: ಗಂಡ-ಹೆಂಡಿರ ಜಗಳ ಪೊಲೀಸ್ ಸ್ಟೇಷನ್ ಗ್ಲಾಸ್ ಪೀಸ್ ಪೀಸ್ ಆಗುವ ತನಕ!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್‌​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

Continue Reading

ಶಿಕ್ಷಣ

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

COMEDK UGET Result 2024 : ಯುಜಿ ಪ್ರವೇಶಕ್ಕಾಗಿ ಮೇ 12ರಂದು ನಡೆದಿದ್ದ ಕಾಮೆಡ್ ಕೆ ಫಲಿತಾಂಶ ಮೇ 24ರಂದು ಪ್ರಕಟಗೊಂಡಿದೆ. ಮೊದಲ ನಾಲ್ಕು ಸ್ಥಾನದಲ್ಲಿ ಕರ್ನಾಟಕದವರೇ ಇದ್ದು, ಮೊದಲ 10 ರ‍್ಯಾಂಕ್‌ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರೇ ಆಗಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕಾಮೆಡ್‌ ಕೆ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

VISTARANEWS.COM


on

By

COMEDK UGET Result 2024 Out
ಫಸ್ಟ್‌ ರ‍್ಯಾಂಕ್‌ ಪಡೆದ ಬಾಲಸತ್ಯ ಸರವಣನ್ ಹಾಗೂ ಎರಡನೇ ರ‍್ಯಾಂಕ್‌ ದೇವಾಂಶ್ ತ್ರಿಪಾಠಿ
Koo

ಬೆಂಗಳೂರು: ಕಾಮೆಡ್‌ ಕೆ ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರ ಶುಕ್ರವಾರ ಮಧ್ಯಾಹ್ನ ಪ್ರಕಟಗೊಂಡಿದೆ. ಬೆಂಗಳೂರಿನ ಬಾಲಸತ್ಯ ಸರವಣನ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಅಭ್ಯರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕಾಮೆಡ್‌ಕೆ www.comedk.org ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ. ರ‍್ಯಾಂಕ್‌ ಮತ್ತು ಸ್ಕೋರ್ ಕಾರ್ಡ್‌ಗಳನ್ನು 24ರ ಮಧ್ಯಾಹ್ನ 3 ಗಂಟೆಯಿಂದ ಅಭ್ಯರ್ಥಿಗಳಿಗೆ ಲಭ್ಯವಿರುತ್ತವೆ. ಮೊದಲ 10 ರ‍್ಯಾಂಕ್‌ ಪಡೆದವರಲ್ಲಿ 8 ಅಭ್ಯರ್ಥಿಗಳು ಕರ್ನಾಟಕದವರೇ ಆಗಿದ್ದಾರೆ.

ಕರ್ನಾಟಕದ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

2024ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ 12 ರಂದು ಪರೀಕ್ಷೆ ನಡೆದಿತ್ತು. ಕಾಮೆಡ್‌ ಕೆ ಕೀ ಉತ್ತರಗಳನ್ನು ಮೇ 21ರಂದು ಬಿಡುಗಡೆ ಮಾಡಿತ್ತು. ದೇಶಾದ್ಯಾಂತ 191 ನಗರಗಳಲ್ಲಿರುವ 264 ಪರೀಕ್ಷಾ ಕೇಂದ್ರಗಳಲ್ಲಿ ಮೂರು ಸೆಷನ್‌ಗಳಲ್ಲಿ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎಂಜಿನಿಯರಿಂಗ್ ಯುಜಿ ಸೀಟುಗಳನ್ನು ಕೋರಿ 1,18,005 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಸುಮಾರು 1,03,799 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 35,124 ಮಂದಿ ಕರ್ನಾಟಕದವರು ಮತ್ತು 68,675 ಕರ್ನಾಟಕೇತರ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು.

COMEDK UGET Result 2024

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.

ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ಇಂದಿನಿಂದಲೇ ಕೌನ್ಸೆಲಿಂಗ್‌ ನೋಂದಣಿ ಆರಂಭ

ಕೌನ್ಸೆಲಿಂಗ್ ನೋಂದಣಿ ಮತ್ತು ಡಾಕ್ಯುಮೆಂಟ್ ಅಪ್ಲೋಡ್ ಮೇ 24 ರ ಸಂಜೆ 4 ರಿಂದ ಪ್ರಾರಂಭವಾಗುತ್ತದೆ. ಅಭ್ಯರ್ಥಿಗಳ ಶೇಕಡವಾರು ಅಂಕ ಹಾಗೂ ರ‍್ಯಾಂಕ್‌ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ ಕೌನ್ಸಿಲಿಂಗ್‌ ನಡೆಸುವುದಾಗಿ ಕಾಮೆಡ್‌ಕೆ ತಿಳಿಸಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಟಾಪ್‌ 10 ರ‍್ಯಾಂಕ್‌ ಪಡೆದವರು

1) ಬಾಲಸತ್ಯ ಸರವಣನ್- ಕರ್ನಾಟಕ
2) ದೇವಾಂಶ್ ತ್ರಿಪಾಠಿ – ಕರ್ನಾಟಕ
3) ಸನಾ ತಬಸ್ಸುಮ್ – ಕರ್ನಾಟಕ
4) ಪ್ರಕೇತ್ ಗೋಯೆಲ್- ಕರ್ನಾಟಕ
5)ಮಾನಸ್ ಸಿಂಗ್ ರಜಪೂತ- ಹಿಮಾಚಲ ಪ್ರದೇಶ
6)ಗಾನಿಪಿಸೆಟ್ಟಿ ನಿಸ್ಚಲ್- ಆಂಧ್ರಪ್ರದೇಶ
7)ನಿಕೇತ್ ಪ್ರಕಾಶ್ ಅಚಂತಾ- ಕರ್ನಾಟಕ
8) ನೇಹಾ ಪ್ರಭು -ಕರ್ನಾಟಕ
9)ಜಗದೀಶ್ ರೆಡ್ಡಿ ಮಾರ್ಲ -ಕರ್ನಾಟಕ
10) ಈಶ್ವರ್ ಚಂದ್ರ ರೆಡ್ಡಿ ಮುಲ್ಕಾ- ಕರ್ನಾಟಕ

COMEDK UGET Result 2024 Comed K on May 24  Published Result

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
We are ready for taluk and zilla panchayat and BBMP elections Says CM Siddaramaiah
ರಾಜಕೀಯ17 seconds ago

CM Siddaramaiah: ತಾಲೂಕು, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

road Accident
ತುಮಕೂರು4 mins ago

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

lok sabha election 2024 supreme court
ಪ್ರಮುಖ ಸುದ್ದಿ7 mins ago

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

meghana Goankar
ಸಿನಿಮಾ13 mins ago

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Hardik Pandya & Natasa Stankovic
ಕ್ರೀಡೆ25 mins ago

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Sandalwood Movie
ಪ್ರಮುಖ ಸುದ್ದಿ32 mins ago

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Bank fraud Scam in Urban Co operative Bank of Karwar
ಕರ್ನಾಟಕ1 hour ago

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

RR vs SRH
ಕ್ರೀಡೆ1 hour ago

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

COMEDK UGET Result 2024 Out
ಶಿಕ್ಷಣ1 hour ago

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Rotary June Run
ಪ್ರಮುಖ ಸುದ್ದಿ2 hours ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌