Sachin Tendulkar | ಬೆಳಗಾವಿಯ ರಸ್ತೆ ಬದಿ ಹೋಟೆಲ್‌ನಲ್ಲಿ ಚಹಾ ಕುಡಿದ ಸಚಿನ್‌ ತೆಂಡೂಲ್ಕರ್‌ Vistara News
Connect with us

ಕರ್ನಾಟಕ

Sachin Tendulkar | ಬೆಳಗಾವಿಯ ರಸ್ತೆ ಬದಿ ಹೋಟೆಲ್‌ನಲ್ಲಿ ಚಹಾ ಕುಡಿದ ಸಚಿನ್‌ ತೆಂಡೂಲ್ಕರ್‌

ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅವರು ರಸ್ತೆ ಬದಿ ಹೋಟೆಲೊಂದರಲ್ಲಿ ಚಹಾ ಸೇವಿಸಿದ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Koo

ಬೆಳಗಾವಿ: ಭಾರತದ ಕ್ರಿಕೆಟ್‌ ದೇವರು, ಮಾಸ್ಟರ್‌ ಬ್ಲಾಸ್ಟರ್ ಖ್ಯಾತಿಯ ಸಚಿನ್‌ ತೆಂಡೂಲ್ಕರ್ (Sachin Tendulkar) ಅವರು ಬೆಳಗಾವಿಯ ರಸ್ತೆ ಬದಿಯ ಹೋಟೆಲೊಂದರಲ್ಲಿ ಚಹಾ ಸೇವಿಸಿ ಸಂಭ್ರಮಿಸಿದ್ದಾರೆ. ಬೆಳಗಾವಿ ತಾಲೂಕಿನ ಮಚ್ಚೆಯಲ್ಲಿರುವ ಫೌಜಿ ಟೀ ಸ್ಟಾಲ್‌ನಲ್ಲಿ ಚಹಾ ಸೇವನೆ ಮಾಡಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ರಾಷ್ಟ್ರೀಯ ಹೆದ್ದಾರಿ ‘4ಎ’ ಪಕ್ಕದಲ್ಲಿರುವ ವೈಜು ನಿಟ್ಟೂರ್‌ಕರ್‌ ಎಂಬುವರ ಹೋಟೆಲ್‌ನಲ್ಲಿ ಅವರ ಮುಂದೆ ಸಚಿನ್‌ ತೆಂಡೂಲ್ಕರ್ ಅವರು ಕಾರು ನಿಲ್ಲಿಸಿದ್ದಾರೆ. ಜತೆಗಿದ್ದ ಕಾರಿನಿಂದ ಇಳಿದ ಅಂಗರಕ್ಷಕರು ಸಚಿನ್ ಹೋಟೆಲ್‌ಗೆ ಬಂದು ಚಹಾ ಆರ್ಡರ್‌ ಮಾಡಿದ್ದರು. ಚಹಾ ಕುಡಿದ ಸಚಿನ್‌ ಅವರು ಕಾರಿನಿಂದ ಇಳಿದು ಬಂದು ಚಹಾ ಮಾಡಿದ ಹೋಟೆಲ್ ಮಾಲೀಕರಿಗೆ ಧನ್ಯವಾದ ತಿಳಿಸಿದ್ದಾರೆ. ಈ ವೇಳೆ ಅವರಿಗೆ ಕಾರಿನಲ್ಲಿ ಇದ್ದದ್ದು ಸಚಿನ್‌ ಅವರೆಂಬುದು ಗೊತ್ತಾಗಿದೆ.

ಸಚಿನ್‌ ಅವರು ಹೋಟೆಲ್‌ ಮಾಲೀಕ ವೈಜು ಅವರಿಗೆ ಸೆಲ್ಫಿ ನೀಡುವ ಜತೆಗೆ ಆಟೋಗ್ರಾಫ್‌ ಕೂಡ ಕೊಟ್ಟಿದ್ದಾರೆ. ಅಂತೆಯೆ ಹೋಟೆಲ್‌ನಲ್ಲಿದ್ದ ಮಗುವೊಂದರ ಜತೆಯೂ ಫೋಟೋ ತೆಗೆಸಿಕೊಂಡಿದ್ದಾರೆ. ಸಚಿನ್ ಅವರು ಅಲ್ಲಿಂದ ಗೋವಾ ಕಡೆಗೆ ಪ್ರಯಾಣ ಬೆಳೆಸಿದರು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಕ್ರೈಂ

Murder Case: ಸರಗಳ್ಳರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

ಹತ್ಯೆಯಾದವನು ಹಾಗೂ ಹಂತಕರು ಎಲ್ಲರೂ ಚೈನ್ ಸ್ನ್ಯಾಚರ್ಸ್ (Chain snatchers) ಆಗಿದ್ದು, ಇವರ ನಡುವಿನ ಕಲಹವೇ ಕೊಲೆಗೆ ಕಾರಣವಾಗಿದೆ.

VISTARANEWS.COM


on

Edited by

chain snatchers murderes
Koo

ಬೆಂಗಳೂರು: ಬೆಸವನಗುಡಿಯ ಅರ್ಬಾಝ್‌ ಎಂಬ ಸರಗಳ್ಳನ ಕೊಲೆಯ (Murder Case) ಹಿಂದಿನ ಅಸಲಿಯತ್ತನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಹತ್ಯೆಯಾದವನು ಹಾಗೂ ಹಂತಕರು ಎಲ್ಲರೂ ಚೈನ್ ಸ್ನ್ಯಾಚರ್ಸ್ (Chain snatchers) ಆಗಿದ್ದು, ಇವರ ನಡುವಿನ ಕಲಹವೇ ಕೊಲೆಗೆ ಕಾರಣವಾಗಿದೆ.

ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಕಾಸೀಫ್, ಸಬೀರ್, ಅರ್ಮಾನ್ ಹಾಗು ಶಫಿ ಬಂಧಿತ ಆರೋಪಿಗಳು. ಈ ಹಿಂದೆ ಇವರು ಕೊಲೆಯಾದ ಅರ್ಬಾಝ್ ಜತೆ ಸೇರಿ ಐವರೂ ಬೈಕುಗಳಲ್ಲಿ ಸುತ್ತಾಡುತ್ತಾ ಸರಗಳ್ಳತನ ಮಾಡುತ್ತಿದ್ದರು.

ಹಂತಕರು ನಾಲ್ವರೂ ಪೊಲೀಸರ ಕೈಗೆ ಈ ಮೊದಲು ಸಿಕ್ಕಿಬಿದ್ದಿದ್ದರು. ತಾವು ಮಾತ್ರ ಯಾಕೆ ಸಿಕ್ಕಿಬೀಳಬೇಕೆಂದು ಅರ್ಬಾಝ್‌ನ ಹೆಸರನ್ನೂ ಹೇಳಿ, ಪ್ರಕರಣದಲ್ಲಿಲ್ಲದಿದ್ದರೂ ಆತನನ್ನೂ ಆರೋಪಿಯನ್ನಾಗಿಸಿದ್ದರು.
ಆದರೆ ಆ ಕಳ್ಳತನದಲ್ಲಿ ಅರ್ಬಾಝ್ ಪಾತ್ರ ಇರಲಿಲ್ಲ. ಆ ವೇಳೆ ಅರ್ಬಾಝ್‌ನನ್ನೂ ಆರೋಪಿಯನ್ನಾಗಿಸಿ ಪೊಲೀಸರು ತೀವ್ರವಾಗಿ ವರ್ಕ್ ಮಾಡಿದ್ದರು.

ಕೇಸಿನಲ್ಲಿಲ್ಲದಿದ್ದರೂ ಸುಮ್ಮನೆ ವರ್ಕ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಸಿಟ್ಟಾಗಿದ್ದ ಅರ್ಬಾಝ್, ನಂತರ ಇದೇ ಸಿಟ್ಟಿನಲ್ಲಿ ಜಯನಗರ ಬಳಿ ನಾಲ್ವರ ಮೇಲೆ ಒಬ್ಬನೇ ಹಲ್ಲೆ ನಡೆಸಿದ್ದ. ನಾಲ್ವರಿಗೂ ಒಬ್ಬನೇ ಹಲ್ಲೆ ಮಾಡಿ ತಲೆ ಸೀಳಿದ್ದ. ಇದೇ ದ್ವೇಷವಿಟ್ಟುಕೊಂಡು ಹಂತಕರು ಅರ್ಬಾಝ್ ಹತ್ಯೆಗೆ ಹೊಂಚು ಹಾಕಿದ್ದರು. ಶುಕ್ರವಾರ ಖಾಜಿ ರಸ್ತೆ ಬಳಿ ಬರುತ್ತಿದ್ದಂತೆ ಅಟ್ಯಾಕ್ ಮಾಡಿದ್ದರು. ತಲೆಗೆ ನೇರವಾಗಿ ಮಾರಕಾಸ್ತ್ರದಿಂದ ಹೊಡೆದ ಹಿನ್ನೆಲೆಯಲ್ಲಿ ಅರ್ಬಾಝ್ ಅರೆಜೀವವಾಗಿದ್ದ.

ತಕ್ಷಣ ಆಸ್ಪತ್ರೆಗೆ ಸೇರಿಸಿದ್ದರೂ ಚಿಕಿತ್ಸೆ ಫಲ ನೀಡದೆ ಸಾವಿಗೀಡಾಗಿದ್ದಾನೆ. ಆರೋಪಿಗಳನ್ನು ಮೂರು ದಿನಗಳ ಕಾಲ ವಿಶೇಷ ಪೊಲೀಸ್‌ ತಂಡ ಹುಡುಕಾಡಿ ನಂತರ ಬಂಧಿಸಿದೆ. ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Continue Reading

ಕರ್ನಾಟಕ

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Honorary Doctorate: ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದ ಸಾಧನೆಗೆ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಹಾಗೂ ರಾಜಕೀಯ ಕ್ಷೇತ್ರಕ್ಕೆ ನೀಡಿರುವ ಗಣನೀಯ ಕೊಡುಗೆ ಪರಿಗಣಿಸಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಿಸಿದೆ.

VISTARANEWS.COM


on

Edited by

S somanath and HD DeveGowda
Koo

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌ ಹಾಗೂ ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಭಾಜನರಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಆಯ್ಕೆ ಸಮಿತಿಯು ಈ ಇಬ್ಬರು ಗಣ್ಯರ ಹೆಸರನ್ನು ಗೌರವ ಡಾಕ್ಟರೇಟ್‌ಗೆ (Honorary Doctorate) ಶಿಫಾರಸು ಮಾಡಿತ್ತು. ಇದಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅನುಮೋದನೆ ನೀಡಿದ್ದಾರೆ. ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವದಂದು ಗೌರವ ಡಾಕ್ಟರೇಟ್‌ ಪ್ರಧಾನ ಮಾಡಲಾಗುತ್ತದೆ.

ಕರ್ನಾಟಕ ಬಂದ್‌ನಿಂದ ಘಟಿಕೋತ್ಸವ ಮುಂದೂಡಿಕೆ

ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 29ಕ್ಕೆ ನಿಗದಿಯಾಗಿದ್ದ ಘಟಿಕೋತ್ಸವವನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಶೀಘ್ರದಲ್ಲಿಯೇ ಹೊಸ ದಿನಾಂಕ ನಿಗದಿ ಮಾಡಿ ಘಟಿಕೋತ್ಸವ ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಇದನ್ನೂ ಓದಿ | NEP 2020: ಜೈನ್‌ ವಿವಿಯಲ್ಲಿ ಸೆ.28ರಂದು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾಗೃತಿಗಾಗಿ ವಿಚಾರಗೋಷ್ಠಿ

Continue Reading

ಕಲೆ/ಸಾಹಿತ್ಯ

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

World Culture Festival ಆರ್ಟ್‌ ಆಫ್‌ ಲಿವಿಂಗ್‌ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ.

VISTARANEWS.COM


on

Edited by

World culture fest
Koo

ಬೆಂಗಳೂರು: ಆರ್ಟ್‌ ಆಫ್‌ ಲಿವಿಂಗ್‌ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ವನ್ನು (World Culture Festival) ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ. 17,000 ಕಲಾವಿದರು ಭಾಗವಹಿಸುವ ಈ ʼಸಾಂಸ್ಕೃತಿಕ ಒಲಿಂಪಿಕ್ಸ್ʼನ ಮುಂದಾಳತ್ವವನ್ನು ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರು ವಹಿಸಲಿದ್ದಾರೆ.

ಆರ್ಟ್‌ ಆಫ್‌ ಲಿವಿಂಗ್‌ನ ಅವಿಸ್ಮರಣೀಯವಾದಂತಹ ವೈವಿಧ್ಯತೆಯ ಹಾಗೂ ಏಕತೆಯ ಉತ್ಸವಕ್ಕೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ. ಆತಿಥ್ಯ ವಹಿಸಿದೆ. ವಿಶ್ವ ವಿಖ್ಯಾತ ಯುಎಸ್ ಕ್ಯಾಪಿಟಲ್‌ನ ಹಿನ್ನೆಲೆಯನ್ನು ಹೊಂದಿರುವ ವೇದಿಕೆಯೇ ಒಂದು ಫುಟ್ಬಾಲ್‌ ಆಟದ ಮೈದಾನದಷ್ಟಿದೆ. ಈ ಉತ್ಸವದಲ್ಲಿ 17,000 ಕಲಾವಿದರು, ಅನೇಕ ರಾಜ್ಯಗಳ ಮುಖ್ಯಸ್ಥರು, 100ಕ್ಕಿಂತಲೂ ಹೆಚ್ಚು ದೇಶಗಳ ಚಿಂತಕರು ಭಾಗವಹಿಸಲಿದ್ದು, ಎಲ್ಲರೂ ನ್ಯಾಷನಲ್ ಮಾಲ್‌ನಲ್ಲಿ ಸೇರಲಿದ್ದಾರೆ.

ಅರ್ಧ ಮಿಲಿಯನ್ ಜನರು ಈ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದರಿಂದಾಗಿ ಈ ಉತ್ಸವವು ವ್ಯಾಪಕವಾದ ಜಾಗತಿಕ ಉತ್ಸವವಾಗಲಿದೆ. ಈ ಉತ್ಸವದಲ್ಲಿ 50 ಪ್ರದರ್ಶನಗಳು ನಡೆಯಲಿವೆ.

ಇದನ್ನೂ ಓದಿ | Raja Marga Column : ಸೆ. 27, ವಿಶ್ವ ಪ್ರವಾಸೋದ್ಯಮ ದಿನ; ನೀವು ಹೋಗಲೇಬೇಕಾದ ಭಾರತದ TOP 10 ತಾಣ

ವಿಶ್ವ ಸಾಂಸ್ಕೃತಿಕ ಉತ್ಸವದ ವಿಶೇಷತೆ

  • ಪಾರಂಪರಿಕ ಚೀನಾದ ಸಾಂಸ್ಕೃತಿಕ ಪ್ರದರ್ಶನ: ಇದರಲ್ಲಿ 1,000 ಹಾಡುಗಾರರು ಮತ್ತು ನರ್ತಕರು ಭಾಗವಹಿಸಲಿದ್ದಾರೆ.
  • 7,000 ನರ್ತಕರನ್ನೊಳಗೊಂಡ ಗಾರ್ಬಾ ನೃತ್ಯ ವೈಭವ.
  • ನೇರ ಸ್ವರಮೇಳದ ಸಹಿತ 700 ಭಾರತೀಯ ಶಾಸ್ತ್ರೀಯ ನರ್ತಕರು.
  • ಹಿಪ್ ಹಾಪ್‌ನ 50ನೇ ವರ್ಷದ ಸಂಭ್ರಮ, ಕುರ್ಟಿಸ್ ಬ್ಲೋ, ಎಸ್ ಹೆಚ್ ಎ- ರಾಕ್, ಸೀಕ್ವೆನ್ಸ್ ಗರ್ಲ್ಸ್, ಡಿಜೆಕೂಲ್ ಮತ್ತಿತರ ಹಿಪ್ ಹಾಪ್‌ನ ಖ್ಯಾತನಾಮರು. ಇವರೊಂದಿಗೆ , ಕಿಂಗ್ ಚಾರ್ಲ್ಸ್ ಹಾಗೂ ಕೆಲ್ಲಿ ಫಾರ್ಮನ್ ರವರಿಂದ ಸಂಯೋಜಿಸಲ್ಪಟ್ಟ ನೃತ್ಯ ಸಂಯೋಜನೆಯಲ್ಲಿ 100 ಬ್ರೇಕ್ ಡಾನ್ಸ್ ನ ನರ್ತಕರು ತಮ್ಮ ಚೊಚ್ಚಲ ಪ್ರದರ್ಶನವನ್ನು ನೀಡಲಿದ್ದಾರೆ.
  • ತಮ್ಮ ಪಾರಂಪರಿಕ ನೃತ್ಯವಾದ ಹೋಪಾಕ್ ನೃತ್ಯ ಪ್ರದರ್ಶನವನ್ನು ನೀಡಲಿರುವ 1000 ಯೂಕ್ರೇನ್ ನ ನರ್ತಕರು.
  • ಗ್ರ್ಯಾಮಿ ಪ್ರಶಸ್ತಿ ವಿಜೇತರಾದ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1000 ಗಿಟಾರ್ ವಾದ್ಯ.
  • ಬಾಬ್ ಮಾರ್ಲೆಯವರ ಖ್ಯಾತ ” ಒನ್ ಲವ್” ನ ಮರುಸೃಷ್ಟಿ ಅವರ ಮೊಮ್ಮಗ ಸ್ಕಿಪ್ ಮಾರ್ಲಿನ್ ಅವರಿಂದ.

ನ್ಯಾಷನಲ್ ಮಾಲ್‌ನಲ್ಲಿ 1963ಯಲ್ಲಿ, ಮಾರ್ಟಿನ್ ಲೂಥರ್ ಕಿಂಗ್ ತಮ್ಮ ಖ್ಯಾತ ” ಐ ಹ್ಯಾವ್‌ ಎ ಡ್ರೀಮ್” ಭಾಷಣವನ್ನು ನೀಡಿ, ಜಗತ್ತಿಗೆ ಸಮನ್ವಯತೆಯ, ಏಕತೆಯ ಸಂದೇಶವನ್ನು ಸಾರಿದರು. ಅದಕ್ಕಿಂತಲೂ ನೂರು ವರ್ಷಗಳ ಹಿಂದೆ (1893) ಚಿಕಾಗೋನಲ್ಲಿ ನಡೆದ ಪ್ರಥಮ ವಿಶ್ವ ಧಾರ್ಮಿಕ ಸಂಸತ್‌ನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಮಿಂಚಿನ ಭಾಷಣವನ್ನು ನೀಡಿ, ಸಭಿಕರನ್ನು ತಮ್ಮ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದರು. ಜಗತ್ತಿನ ದೊಡ್ಡ ಧರ್ಮಗಳ ಪ್ರತಿನಿಧಿಗಳನ್ನು ಸಹೋದರ, ಸಹೋದರಿಯರೇ ಎಂದು ಕರೆದು, ಧಾರ್ಮಿಕ ದ್ವಂದ್ವತೆ ಅಸಹಿಷ್ಣುತೆಯನ್ನು ಕೊನೆಗಾಣಿಸಬೇಕೆಂಬ ಕರೆಯನ್ನು ನೀಡಿದರು.

ಅದೇ ರೀತಿ 2023ರ ಸೆ.29ರಂದು ನ್ಯಾಷನಲ್ ಮಾಲ್‌ನಲ್ಲಿ ಗುರುದೇವ್ ಶ್ರೀ ಶ್ರೀ ರವಿಶಂಕರರು ” ಒಂದೇ ಜಾಗತಿಕ ಕುಟುಂಬ” ದ ಫಲಕದಡಿ ಎಲ್ಲಾ ಗಡಿಗಳ, ಧರ್ಮಗಳ, ಪಂಥಗಳ, 180 ದೇಶಗಳ ಜನರನ್ನು ಒಗ್ಗೂಡಿಸಿ, ಎಲ್ಲರ ನಡುವೆಯೂ ಇರುವ ವಿಭನೆಗಳನ್ನು ಜೋಡಿಸುವ ಸೇತುವೆಯಾಗಲಿದ್ದಾರೆ.

ಆಹಾರದಂತಹ ಒಗ್ಗೂಡಿಸುವ ವಿಷಯ ಮತ್ತೊಂದಿಲ್ಲ. ಈ ಉತ್ಸವದಲ್ಲಿ ಜಗತ್ತಿನ ಎಲ್ಲೆಡೆಯ ಆಹಾರಗಳ ಮೇಳವೂ ನಡೆಯಲಿದೆ. ಈ ಉತ್ಸವದ ವಿಶೇಷತೆಯೆಂದರೆ, ಚಿಗುರುತ್ತಿರುವ ಕಲಾವಿದರಿಗೆ, ಪ್ರದರ್ಶಕರಿಗೆ, ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ನೀಡುತ್ತಿರುವುದು.

ಇದನ್ನೂ ಓದಿ | UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

ಉತ್ಸವದಲ್ಲಿ ಭಾಗವಹಿಸಲಿರುವ ಗಣ್ಯ ಭಾಷಣಕಾರರು

ವಿಶ್ವ ಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಎಚ್. ಇ. ಬಾನ್ ಕೀ ಮೂನ್, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್, ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ, ಯುಎಸ್‌ ಸಂಸದರಾದ ರಿಕ್ ಸ್ಕಾಟ್, ನಾನ್ಸಿ ಪೆಲೋಸಿ, ಭಾರತದ ಮಾಜಿ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

Continue Reading

ಕರ್ನಾಟಕ

Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Kolar News: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಬಳಿ ಇರುವ ಬಾರ್ ಒಂದರಲ್ಲಿ ವ್ಯಕ್ತಿಗೆ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.

VISTARANEWS.COM


on

Edited by

Knives
Koo

ಕೋಲಾರ: ಬಾರ್‌ನಲ್ಲಿ ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ (Kolar News) ಮಾಲೂರು ತಾಲೂಕಿನ ಲಕ್ಕೂರು ಬಳಿ ಇರುವ ಬಾರ್ ಒಂದರಲ್ಲಿ ನಡೆದಿದೆ. ಜಗದೇನಹಳ್ಳಿ ಗ್ರಾಮದ ನಿವಾಸಿ ಬೈಯ್ಯರೆಡ್ಡಿ (35) ಮೃತರು. ಲಕ್ಕೂರು-ಚಿಕ್ಕ ತಿರುಪತಿ ರಸ್ತೆಯಲ್ಲಿರುವ ಬಾರ್‌ನಲ್ಲಿ ಹತ್ಯೆ ನಡೆದಿದೆ. ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Electric Fence : ಜಮೀನಿಗೆ ಹಾಕಿದ್ದ ಹೈವೋಲ್ಟೇಜ್ ವಿದ್ಯುತ್‌ ಬೇಲಿ ಸ್ಪರ್ಶಿಸಿ ಇಬ್ಬರು ರೈತರು ದಾರುಣ ಸಾವು

ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ಭಾರತೀಯ ಕರೆನ್ಸಿ ನೋಟು

Indian currency

ದೇವನಹಳ್ಳಿ: ವಿದೇಶಿ ಮಹಿಳೆ ಬಳಿ ಕಂತೆ‌ ಕಂತೆ ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿರುವುದು ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಕಂಡುಬಂದಿದೆ. ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF) ವಶಕ್ಕೆ ಪಡೆದು, ಹಣವನ್ನು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ | Car Accident: ಮರಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು

ವಿದೇಶಿ ಮಹಿಳೆ ಬಳಿ ಗರಿಗರಿ ನೋಟು ನೋಡಿ ಅಧಿಕಾರಿಗಳು ಶಾಕ್‌ ಆಗಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿದೇಶಿ ಮೂಲದ ಮಹಿಳೆಯ ಬ್ಯಾಗ್‌ನಲ್ಲಿ ಲಗೇಜ್ ಸ್ಕ್ಯಾನಿಂಗ್ ವೇಳೆ 15 ಲಕ್ಷ ರೂ. ಪತ್ತೆಯಾಗಿದೆ. ಹಣದ ಸಮೇತ ಮಹಿಳೆಯನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆ ನಡಸುತ್ತಿದ್ದಾರೆ. ನಂತರ ಹಣ ಹಾಗೂ ಮಹಿಳೆಯನ್ನು ಆದಾಯ ತೆರಿಗೆ ಇಲಾಖೆ‌ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ.

ಜಮೀನಿಗೆ ಹಾಕಿದ್ದ ಹೈವೋಲ್ಟೇಜ್ ವಿದ್ಯುತ್‌ ಬೇಲಿ ಸ್ಪರ್ಶಿಸಿ ಇಬ್ಬರು ರೈತರು ದಾರುಣ ಸಾವು

ಚಿಕ್ಕಬಳ್ಳಾಪುರ: ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ (Electric Fence) ಸ್ಪರ್ಷಿಸಿ ಇಬ್ಬರು ರೈತರು ದಾರುಣವಾಗಿ ಪ್ರಾಣ (Two Farmers dead) ಕಳೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ (Chikkaballapura News) ಗೌರಿಬಿದನೂರು ತಾಲ್ಲೂಕಿನ ಕುರುಡಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟವರನ್ನು ಕುರುಡಿ ಗ್ರಾಮದ ತಿಪ್ಪೇಸ್ವಾಮಿ (26) ಹಾಗೂ ಅಂಬರೀಶ್ (28) ಎಂದು ಗುರುತಿಸಲಾಗಿದೆ.

ವೆಂಕಟೇಶಪ್ಪ ಎನ್ನುವವರಿಗೆ ಸೇರಿದ ಜಮೀನು ಬಳಿ ಘಟನೆ ನಡೆದಿದೆ. ವೆಂಕಟೇಶಪ್ಪ ತನ್ನ ಜಮೀನಿಗೆ ಕಾಡು ಪ್ರಾಣಿಗಳ ಕಾಟವನ್ನು ತಡೆಯಲು ಅನಧಿಕೃತವಾಗಿ ವಿದ್ಯುತ್‌ ಬೇಲಿ (Illegal Electric Fence) ಹಾಕಿದ್ದರು. ತಿಪ್ಪೇಸ್ವಾಮಿ ಮತ್ತು ಅಂಬರೀಷ್‌ ಅವರು ತಮ್ಮ ಪಕ್ಕದ ಜಮೀನಿಗೆ ಅಳವಡಿಸಿದ್ದ ವಿದ್ಯುತ್ ಬೇಲಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್‌ ಶಾಕ್‌ ಹೊಡೆದು ಪ್ರಾಣ ಕಳೆದುಕೊಂಡಿದ್ದಾರೆ.

ಸಾಮಾನ್ಯವಾಗಿ ವಿದ್ಯುತ್‌ ಬೇಲಿ ಹಾಕುವುದಿದ್ದರೆ ಅಲ್ಪ ಪ್ರಮಾಣದ ವಿದ್ಯುತ್‌ ಹಾಯಿಸಲಾಗುತ್ತದೆ. ಸಾಮಾನ್ಯವಾಗಿ ಸೋಲಾರ್‌ ಬೇಲಿ ಬಳಸಲಾಗುತ್ತದೆ. ಪ್ರಾಣಿಗಳು ಬಂದರೆ ಅವುಗಳಿಗೆ ಸಣ್ಣದಾಗಿ ಶಾಕ್‌ ಹೊಡೆಯುವಂತೆ ವೋಲ್ಟೇಜ್‌ ಸೆಟ್‌ ಮಾಡಲಾಗುತ್ತದೆ. ಅಂದರೆ ಇದಕ್ಕೆ ಪ್ರತ್ಯೇಕ ಸಲಕರಣೆ ಬೇಕಾಗುತ್ತದೆ. ಆದರೆ, ವೆಂಕಟೇಶಪ್ಪ ಮಾತ್ರ ಬೋರ್ ವೆಲ್‌ ವಯರನ್ನೇ ನೇರವಾಗಿ ತಂತಿ ಬೇಲಿಗೆ ಕನೆಕ್ಟ್‌ ಮಾಡಿ ವಿದ್ಯುತ್‌ ಹರಿಸಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ.

ಇದನ್ನೂ ಓದಿ | PSI Recruitment Scam: ಕೊನೆಗೂ ಅಮೃತ್‌ ಪಾಲ್‌ ಸೆಂಟ್ರಲ್‌ ಜೈಲಿನಿಂದ ಬಿಡುಗಡೆ

ಸ್ಥಳಕ್ಕೆ ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್ಪಿ ಶಿವಕುಮಾರ್, ವೃತ್ತ ನಿರೀಕ್ಷಕ ಸತ್ಯನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೌರೀಬಿದನೂರು ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
chain snatchers murderes
ಕ್ರೈಂ8 mins ago

Murder Case: ಸರಗಳ್ಳರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

Kiran Bedi tihar jail
ಅಂಕಣ26 mins ago

Raja Marga Column : ಕಿರಣ್‌ ಬೇಡಿ IPS ; ವರ್ಷ 74 ಆದರೂ ಇಂದಿಗೂ ಅವರು ಯೂತ್ ಐಕಾನ್!

castor oil
ಆರೋಗ್ಯ40 mins ago

Hair Care Tips: ಹರಳೆಣ್ಣೆಯನ್ನು ಹೇಗೆ ಬಳಸುವ ಮೂಲಕ ಉದ್ದವಾದ ಕಪ್ಪುಗೂದಲು ಪಡೆಯಬಹುದು ಗೊತ್ತೇ?

Vistara Editorial, Indian Government must act against Khalistani Terrorists
ದೇಶ2 hours ago

ವಿಸ್ತಾರ ಸಂಪಾದಕೀಯ: ಖಲಿಸ್ತಾನಿ ಭಯೋತ್ಪಾದಕರ ಹೆಡೆಮುರಿ ಕಟ್ಟಲೇಬೇಕಿದೆ

dina bhavishya September 27
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯವರಿಗೆ ಇಂದು ಕಿರಿಕಿರಿ, ಆತಂಕದ ಭಾವವೇ ಹೆಚ್ಚು; ಸ್ವಲ್ಪ ಎಚ್ಚರವಹಿಸಿ!

Sphoorti Salu
ಸುವಚನ3 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

S somanath and HD DeveGowda
ಕರ್ನಾಟಕ7 hours ago

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Gujarat High Court
ದೇಶ8 hours ago

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

World culture fest
ಕಲೆ/ಸಾಹಿತ್ಯ8 hours ago

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

credit cards
ದೇಶ9 hours ago

Flipkart, Amazon Sale: ಹಬ್ಬದ ಸೀಸನ್‌ ಆನ್‌ಲೈನ್ ಖರೀದಿ, ಕ್ರೆಡಿಟ್‌ ಕಾರ್ಡ್‌ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

bangalore bandh
ಕರ್ನಾಟಕ2 days ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ3 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ3 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ3 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ4 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌