Sagara News: ಸಾಗರ ಮಾಜಿ ಶಾಸಕ ಬಿ.ಧರ್ಮಪ್ಪ ನಿಧನ; ಇಂದು ಅಂತ್ಯಕ್ರಿಯೆ - Vistara News

ಉತ್ತರ ಕನ್ನಡ

Sagara News: ಸಾಗರ ಮಾಜಿ ಶಾಸಕ ಬಿ.ಧರ್ಮಪ್ಪ ನಿಧನ; ಇಂದು ಅಂತ್ಯಕ್ರಿಯೆ

ಧರ್ಮಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದರು. ರಾಮಕೃಷ್ಣ ಹೆಗಡೆ, ಕಾಗೋಡು ತಿಮ್ಮಪ್ಪನವರ ಸಮಕಾಲೀನರು. 80ರ ದಶಕದಲ್ಲಿ ಜನತಾದಳದಿಂದ ಸ್ಪರ್ಧಿಸಿ, ಕಾಂಗ್ರೆಸಿನ ಎಲ್.ಟಿ. ತಿಮ್ಮಪ್ಪ ಹೆಗಡೆಯವರನ್ನು ಸೋಲಿಸಿ ಸಾಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

VISTARANEWS.COM


on

Sagara Former MLA B Dharmappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಗರ: ಇಲ್ಲಿನ ಮಾಜಿ ಶಾಸಕ ಬಿ.ಧರ್ಮಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 87ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರಿಗೆ ಪತ್ನಿ ಸುನಂದಮ್ಮ, ಪುತ್ರ ಸಂತೋಷ್​ ಮತ್ತು ಪುತ್ರಿ ರೂಪಾ ಇದ್ದಾರೆ. ಬಿ.ಧರ್ಮಪ್ಪ ನಿಧನಕ್ಕೆ ಅವರ ಅಪಾರ ಅಭಿಮಾನಿಗಳು, ಬಂಧುಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಸ್ವಗ್ವಾಮ ಗಿಳಾಲಗುಂಡಿಯಲ್ಲಿ ಶನಿವಾರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಧರ್ಮಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದರು. ರಾಮಕೃಷ್ಣ ಹೆಗಡೆ, ಕಾಗೋಡು ತಿಮ್ಮಪ್ಪನವರ ಸಮಕಾಲೀನರು. 80ರ ದಶಕದಲ್ಲಿ ಜನತಾದಳದಿಂದ ಸ್ಪರ್ಧಿಸಿ, ಕಾಂಗ್ರೆಸಿನ ಎಲ್.ಟಿ. ತಿಮ್ಮಪ್ಪ ಹೆಗಡೆಯವರನ್ನು ಸೋಲಿಸಿ ಸಾಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಶಾಸಕರಾಗಿದ್ದ ಸಂದರ್ಭದಲ್ಲಿ ಸಾಗರದ ಮುಳುಗಡೆ ಪ್ರಾಂತ್ಯವಾದ ತುಮರಿ, ಬ್ಯಾಕೋಡು ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿ ಜನಮನ್ನಣೆ ಪಡೆದುಕೊಂಡಿದ್ದರು. ಆಗಿನ ತಾಲೂಕು ಬೋರ್ಡ್‍ಗೆ (ಈಗಿನ ತಾಲೂಕು ಪಂಚಾಯತ್) ಆನಂದಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು, ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಪತ್ನಿ-ಮಕ್ಕಳನ್ನು ನೋಡಿ ಬರುತ್ತೇನೆ ಎಂದು ಅಮೆರಿಕಕ್ಕೆ ಹೊರಟ ಶಾಸಕ; 10 ದಿನ ಲಭ್ಯವಿರೋಲ್ಲ ಇವರು

ಇವರ ನಿಧನಕ್ಕೆ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಮಾಜಿ ವಿಧಾನ ಸಭಾಧ್ಯಕ್ಷರಾದ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ಪ್ರಫುಲ್ಲ ಮಧುಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಆರ್. ಜಯಂತ್,ನಗರಸಭಾ ಸದಸ್ಯ ತಸ್ರೀಫ್ ಇಬ್ರಾಹಿಂ, ಮಹಮ್ಮದ್ ಖಾಸಿಂ,ಸಾಗರ ವಕೀಲರ ಸಂಘದ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉತ್ತರ ಕನ್ನಡ

Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

Boat Capsizes: ಇಂದು ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ.

VISTARANEWS.COM


on

boat capsizes in bhatkal
Koo

ಕಾರವಾರ: ಅರಬ್ಬೀ ಸಮುದ್ರದಲ್ಲಿ (arabian sea) ಭಾರಿ ಗಾಳಿ ಮಳೆಯಿಂದಾಗಿ ಒಂದು ಮೀನುಗಾರಿಕಾ ಬೋಟ್ (Fishing boat capsizes) ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು (fishermen) ರಕ್ಷಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾದೇವ ಖಾರ್ವಿ ಎಂಬವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದೆ.

ಇಂದು ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ಇಂದು ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಗಾಳಿ ಮಳೆ ಪ್ರಾರಂಭಗೊಂಡಿದೆ. ಸಮುದ್ರಕ್ಕೆ ತೆರಳುವವರಿಗೆ ಜಿಲ್ಲಾಡಳಿತ ಈ ಕುರಿತು ಅಲರ್ಟ್‌ ನೀಡಿದೆ.

ದೋಣಿ ಮುಳುಗಿ ಇಬ್ಬರು ಸಾವು, 7 ಮಂದಿ ನಾಪತ್ತೆ

ಭುವನೇಶ್ವರ:‌ ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿ (Mahanadi River)ಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿ ಬಿದ್ದ (Boat Capsizes) ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನಂತರ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಇನ್ನೂ ಏಳು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇತರ ಏಳು ಪ್ರಯಾಣಿಕರು ಇನ್ನೂ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಜತೆಗೆ ಐದು ಡೈವರ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿ, ನಾಲ್ವರು ಶಾಲಾ ಮಕ್ಕಳು ಜಲಸಮಾಧಿಯಾಗಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಇಂದೂ ಅಂತಹದ್ದೇ ದುರಂತ ಸಂಭವಿಸಿದೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿತ್ತು. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ದೋಣಿ ಮಗುಚಿತ್ತು.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Rain News: ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಹಲವೆಡೆ ವಾರಾಂತ್ಯದಲ್ಲಿ ಗುಡುಗು ಸಹಿತ ಗಾಳಿ, ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.

ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Lok Sabha Election 2024: ಕಾರವಾರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ನಡೆಯಿತು.

VISTARANEWS.COM


on

kaalnadige Jatha programme in Uttara kannada
Koo

ಕಾರವಾರ: ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ (Voting Awareness) ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಕಳೆದ ವಿಧಾನಸಭಾ ಚುನಾವಣೆಗಿಂತ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾರರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪಾರರ್ದಶಕ ಮತ್ತು ನ್ಯಾಯ ಸಮ್ಮತವಾದ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನೋಂದಾಯಿತ ನಾಗರಿಕರು ಹಾಗೂ ದಿವ್ಯಾಂಗ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತದಾರರನ್ನು ಜಾಗೃತಗೊಳಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಮಾತನಾಡಿ, ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ತಾವೆಲ್ಲರೂ ಯಾವುದೇ ಆಮಿಷಗಳಿಗೆ ಒಳಗಾಗದೇ ಜಾಗೃತ ಮತದಾರರಾಗಬೇಕು.

ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ಅಕ್ಕಪಕ್ಕದ ಮನೆಯವರಿಗೆ ಕಡ್ಡಾಯ ಮತದಾನದ ಮಹತ್ವವನ್ನು ಮನವರಿಕೆ ಮಾಡಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ಸಮಾಜಕ್ಕೆ ಉತ್ತಮರೆನಿಸಬಹುದಾದ ನಾಯಕರನ್ನು ಆರಿಸುವಲ್ಲಿ ಪ್ರಜ್ಞಾವಂತ ಯುವ ಮತದಾರರು ನೆರವಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಆವರಣದಿಂದ ಆರಂಭಗೊಂಡ ಜಾಥಾವು ಡಾ.ಪಿಕಳೆ ರಸ್ತೆ, ಸುಭಾಷ್ ಚಂದ್ರ ಬೋಸ್ ವೃತ್ತ, ಸವಿತಾ ಹೋಟೆಲ್ ವೃತ್ತ, ಟಿಎಚ್‌ಒ ಆಫೀಸ್ ಸರ್ಕಲ್ ಮಾರ್ಗವಾಗಿ ಸಾಗಿ ಜಿ.ಪಂ. ಆವರಣದಲ್ಲಿ ಅಂತ್ಯಗೊಂಡಿತು. ಬಳಿಕ ಜಿ.ಪಂ. ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ‘ನಾ ಭಾರತ’ ಚುನಾವಣಾ ಜಾಗೃತಿ ಗೀತೆಯನ್ನು ಪ್ರದರ್ಶಿಸಲಾಯಿತು.

ಇದನ್ನೂ ಓದಿ: Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಬನವಾಸಿಯ ಐತಿಹಾಸಿಕ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವ

Uttara Kannada News: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

VISTARANEWS.COM


on

Mathobara Sri Umamadhukeshwara devara Maharathotsava at Banavasi
Koo

ಬನವಾಸಿ: ಬನವಾಸಿಯ ಐತಿಹಾಸಿಕ ಮಾತೋಬರ ಶ್ರೀ ಉಮಾಮಧುಕೇಶ್ವರ ದೇವರ ಮಹಾರಥೋತ್ಸವು ಭಕ್ತ ಸಾಗರದ ಮಧ್ಯೆ ವಿಜೃಂಭಣೆಯಿಂದ (Uttara Kannada News) ನಡೆಯಿತು.

ಮಹಾರಥೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ ಶ್ರೀ ಮಧುಕೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ, ಬಳಿಕ ದೇವರ ಉತ್ಸವ ಮೂರ್ತಿಯನ್ನು ಅಲಂಕೃತ ಪಲ್ಲಕ್ಕಿಯಲ್ಲಿಟ್ಟು ವಿವಿಧ ವಾದ್ಯ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು. ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀ ಉಮಾಮಧುಕೇಶ್ವರ ದೇವರ ಉತ್ಸವ ಮೂರ್ತಿಯನ್ನು ಮನ್ಮಹಾಸ್ಯಂದನ ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಇದನ್ನೂ ಓದಿ: Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

ಪ್ರತಿಷ್ಟಾಪನೆಯ ನಂತರ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು, ಭಕ್ತಿ ಸಮರ್ಪಿಸಿದರು. ರಾತ್ರಿ 12 ಗಂಟೆಯವರೆಗೆ ಸಾವಿರಾರು ಭಕ್ತರು ದರ್ಶನ ಪಡೆದರು.

ಬಳಿಕ ರಾತ್ರಿ 12-30ಕ್ಕೆ ಮಹಾಮಂಗಳಾರತಿ ನೆರವೇರಿದ ಬಳಿಕ ಭಕ್ತರ ಹರ್ಷೋದ್ಗಾರದ ನಡುವೆ ಶ್ರೀ ಮಧುಕೇಶ್ವರ ದೇವರ ಮಹಾರಥೋತ್ಸವ ಆರಂಭಗೊಂಡಿತು. ಬೃಹತ್ ರುದ್ರಾಕ್ಷಿ ಮಾಲೆ, ವಿವಿಧ ಫಲ-ಪುಷ್ಪ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ಮಹಾರಥವನ್ನು ಭಕ್ತ ಸಮೂಹ ಹರಹರ ಮಹಾದೇವ ಎಂಬ ಜಯ ಘೋಷ ಮೊಳಗಿಸುತ್ತ ಎಳೆಯುತ್ತ ಸಾಗಿದರು.

ಇದನ್ನೂ ಓದಿ: Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

ನೆರೆದಿದ್ದ ಸಾವಿರಾರು ಭಕ್ತರು ಹೂ, ಬಾಳೆಹಣ್ಣು ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು. ಮಹಾ ರಥೋತ್ಸವವು ಶುಕ್ರವಾರ ಬೆಳಿಗ್ಗೆ 5 ಗಂಟೆ ವೇಳೆಗೆ ಸಂಪನ್ನಗೊಂಡಿತು.

Continue Reading
Advertisement
Nysa Devgan Kajol shares 3 new pics
ಸಿನಿಮಾ4 mins ago

Nysa Devgan: ಕಾಜೋಲ್‌ ಮಗಳಿಗೆ ಹುಟ್ಟು ಹಬ್ಬದ ಸಂಭ್ರಮ! ನೈಸಾಗೆ ವಯಸ್ಸೆಷ್ಟು?

IPL 2024
ಕ್ರೀಡೆ10 mins ago

IPL 2024 : ಬಿಸಿಸಿಐ ನಿಯಮ ಉಲ್ಲಂಘನೆ; ಋತುರಾಜ್​, ರಾಹುಲ್​ಗೆ ದಂಡ

Neha Murder Case
ಹುಬ್ಬಳ್ಳಿ38 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Lok sabha election-2024
Latest50 mins ago

Lok sabha election-2024: ಶತಾಯುಷಿಗಳೇ ಚುನಾವಣೆಯ ಬ್ರಾಂಡ್​ ಅಂಬಾಸಿಡರ್​ಗಳು!

Viral Video
ದೇಶ53 mins ago

Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!

AC Helmet
ದೇಶ59 mins ago

AC Helmet: ಬೇಸಿಗೆ ಎಫೆಕ್ಟ್​​; ಟ್ರಾಫಿಕ್ ಪೊಲೀಸರ ಹೆಲ್ಮೆಟ್​ಗೆ ಎಸಿ!

Tarak Ponnappa out of udho udho sri renuka yellamma serial
ಕಿರುತೆರೆ1 hour ago

Tarak Ponnappa: ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ಧಾರಾವಾಹಿಗೆ ವಿದಾಯ ಹೇಳಿದ ʻಕೆಜಿಎಫ್‌ʼ ಖ್ಯಾತಿಯ ನಟ!

electoral Bond
ಪ್ರಮುಖ ಸುದ್ದಿ1 hour ago

Electoral Bond : ಎನ್​ಡಿಎ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್​ ವ್ಯವಸ್ಥೆ ಮರುಜಾರಿ; ನಿರ್ಮಲಾ ಸೀತಾರಾಮನ್​

boat capsizes in bhatkal
ಉತ್ತರ ಕನ್ನಡ1 hour ago

Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

Mahesh Babu SS Rajamouli return from Dubai
South Cinema2 hours ago

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ38 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ21 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

ಟ್ರೆಂಡಿಂಗ್‌