Site icon Vistara News

Sagara News: ರಾಹುಲ್‍ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆ ಐತಿಹಾಸಿಕ ದಾಖಲೆ: ಕಾಗೋಡು ತಿಮ್ಮಪ್ಪ

Kagodu Thimmappa sagara

#image_title

ಸಾಗರ : ಬಿಜೆಪಿ ಸರ್ಕಾರ ದೇಶವನ್ನು ದುರ್ಬಲಗೊಳಿಸಿದ್ದು, ಈಗ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ನಡೆಸಿದ ಭಾರತ್ ಜೋಡೋ ಯಾತ್ರೆ ಮೂಲಕ ಭಾರತವನ್ನು ಸದೃಢಗೊಳಿಸುತ್ತಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಪ್ರಾಯಪಟ್ಟರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಾಗರದ ಗಾಂಧಿ ಮಂದಿರದಲ್ಲಿ (Sagara News) ಸೋಮವಾರ (ಜ.೩೦) ಹಮ್ಮಿಕೊಳ್ಳಲಾಗಿದ್ದ ಭಾರತ್ ಜೋಡೋ ಯಾತ್ರೆ ಸಮಾರೋಪದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದನ್ನೂ ಓದಿ | Voter Data : ಶಿವಾಜಿನಗರದ 8,000 ಮುಸ್ಲಿಂ, ಕ್ರೈಸ್ತರನ್ನು ಪಟ್ಟಿಯಿಂದ ತೆಗೆಯಲಾಗುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ ಶಾಸಕ ಆರೋಪ

ರಾಹುಲ್‍ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆ ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ದೇಶಕ್ಕೆ ಸಮರ್ಥ ನಾಯಕತ್ವ ನೀಡುವ ಶಕ್ತಿ ರಾಹುಲ್ ಗಾಂಧಿ ಅವರಿಗೆ ಇದೆ. ಕಾಂಗ್ರೆಸ್ ಪಕ್ಷ ನೀಡಿದ ಅನೇಕ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಮೂಲೆ ಗುಂಪು ಮಾಡಿದೆ. ದುಡಿಯುವ ಕೈಗೆ ಕೆಲಸ ನೀಡುವ ಉದ್ಯೋಗ ಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಗ್ರಾಮೀಣ ನಿರುದ್ಯೋಗ ಸೃಷ್ಟಿಯಾಗಲು ಕಾರಣವಾಗಿದೆ. ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಮೂಲೆ ಗುಂಪು ಮಾಡಿರುವ ಬಿಜೆಪಿಗೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾತನಾಡಿ, ರಾಹುಲ್ ಗಾಂಧಿ ಅವರು ನಡೆಸಿದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಪಾದಯಾತ್ರೆ ಹಿಮ್ಮೆಟ್ಟಿಸುವ ಕೆಲಸವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ಮಾಡಿತ್ತು. ಆದರೆ ದೇಶದ ಜನರು ರಾಹುಲ್ ಗಾಂಧಿ ಅವರಿಗೆ ಅಭೂತಪೂರ್ವ ಬೆಂಬಲ ನೀಡಿದ್ದರಿಂದ ಎಲ್ಲ ಕಡೆ ಜೋಡೋ ಯಾತ್ರೆಗೆ ಜನ ಸಾಗರವೇ ಹರಿದು ಬರಲು ಕಾರಣವಾಗಿದೆ. ಸಂವಿಧಾನದ ಬಗ್ಗೆ ಗೌರವ ಇಲ್ಲದ ಬಿಜೆಪಿಯವರಿಗೆ ಗಾಂಧೀಜಿ ಅವರ ಬಗ್ಗೆ ಗೌರವ ಇಲ್ಲ ಎಂದರು.

ಇದನ್ನೂ ಓದಿ | Teacher Recruitment :15 ಸಾವಿರ ಶಿಕ್ಷಕರ ನೇಮಕ; ಆಯ್ಕೆ ಪಟ್ಟಿ ರದ್ದು ಪಡಿಸಿದ ಹೈಕೋರ್ಟ್‌

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶವನ್ನು ಎಲ್ಲರೂ ಪಾಲಿಸಬೇಕು. ಭಾರತ್ ಜೋಡೋ ಯಾತ್ರೆ ಯಶಸ್ಸಿಗೆ ಸಹಕಾರ ನೀಡಿದ ಎಲ್ಲರನ್ನೂ ಕಾಂಗ್ರೆಸ್ ಪಕ್ಷ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಅಧ್ಯಕ್ಷತೆ ವಹಿಸಿದ್ದರು. ಐ.ಎನ್.ಸುರೇಶ ಬಾಬು, ಎನ್.ಲಲಿತಮ್ಮ, ಮಧುಮಾಲತಿ, ಕಲಗೋಡು ರತ್ನಾಕರ್, ಗಣಪತಿ ಮಂಡಗಳಲೆ, ಮಕ್ಬೂಲ್ ಅಹ್ಮದ್, ರಫೀಕ್ ಬಾಬಾಜಾನ್, ಮಹಾಬಲ ಕೌತಿ, ಎಲ್.ಚಂದ್ರಪ್ಪ, ವೆಂಕಟೇಶ್ ಮೆಳವರಿಗೆ, ಸೋಮಶೇಖರ್ ಲ್ಯಾವಿಗೆರೆ, ಅಣ್ಣಪ್ಪ ಭೀಮನೇರಿ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ | G20 Meeting : ಬೆಂಗಳೂರಿನಲ್ಲಿ ನಡೆಯಲಿದೆ ಜಿ20 ಎನರ್ಜಿ ಟ್ರಾನ್ಸಿಶನ್‌ ವರ್ಕಿಂಗ್‌ ಗ್ರೂಪ್‌ ಸಭೆ

Exit mobile version