Site icon Vistara News

Mysuru Dasara | ಕ್ರೀಡಾಪಟುಗಳಿಗೆ ಸಾಕ್ಷಿ ಮಲ್ಲಿಕ್ ಸ್ಫೂರ್ತಿ: ಸಚಿವ ಎಸ್ ಟಿ ಸೋಮಶೇಖರ್

Mysuru dasara

ಮೈಸೂರು: ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ, ಕುಸ್ತಿಪಟು ಸಾಕ್ಷಿ ಮಲ್ಲಿಕ್ ಅವರು ಮೈಸೂರು ದಸರಾ (Mysuru Dasara) ಕ್ರೀಡಾಕೂಟಕ್ಕೆ ಆಗಮಿಸಿರುವುದು ಕ್ರೀಡಾಪಟುಗಳಿಗೆ ಸ್ಫೂರ್ತಿ ಸಿಕ್ಕಂತಾಗಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಚಾಮುಂಡಿ ವಿಹಾರದಲ್ಲಿ ಆಯೋಜಿಸಿರುವ ದಸರಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದರು.

ದಸರಾ ಕುಸ್ತಿ ಪಂದ್ಯಾವಳಿಗೆ ನಾನಾ ರಾಜ್ಯಗಳಿಂದ ಕುಸ್ತಿಪಟುಗಳು ಆಗಮಿಸಿದ್ದಾರೆ. ಸಾಕ್ಷಿ ಮಲ್ಲಿಕ್ ಅವರು ಕುಸ್ತಿಪಟ್ಟುಗಳಿಗೆ ಸಲಹೆ, ಸೂಚನೆಗಳನ್ನು ನೀಡಬೇಕು ಎಂದು ಸಚಿವರು ಹೇಳಿದರು.

4600 ಕ್ರೀಡಾ ಸ್ಪರ್ಧಿಗಳು, 800 ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 5400 ಕ್ಕೂ ಹೆಚ್ಚು ಜನರು ಈ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಕ್ರೀಡಾಪಟುಗಳಿಗೆ ಸಕಲ ಸೌಕರ್ಯ ಕಲ್ಪಿಸುವುದರ ಜೊತೆಗೆ ಕ್ರೀಡಾ ಇಲಾಖೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಸಚಿವ ನಾರಾಯಣ ಗೌಡ ಅವರು ಮಾಡುತ್ತಿದ್ದಾರೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗೆ ಸಾಕ್ಷಿ ಮಲ್ಲಿಕ್ ಚಾಲನೆ
ನಾಡ ಕುಸ್ತಿ ಪಂದ್ಯಕ್ಕೆ ಸ್ಟಾರ್ ಸಾಕ್ಷಿ ಮಲ್ಲಿಕ್ ಚಾಲನೆ‌ ಅವರು ಚಾಲನೆ ನೀಡಿದರು. ವಿಶೇಷ ಎಂದರೆ, ಸಾಕ್ಷಿ ಮಲ್ಲಿಕ್ ಅವರು ಖುದ್ದ ಅಖಾಡಕ್ಕೆ ಇಳಿದಿದ್ದು ವಿಶೇಷವಾಗಿತ್ತು. ಮೈಸೂರಿಮನ ದೊಡ್ಡ ಕೆರೆ ಮೈದಾನದಲ್ಲಿ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಮೈಸೂರು ಶೈಲಿಯ ನಾಡ ಕುಸ್ತಿ ಪಂದ್ಯಗಳನ್ನು ಸಾಕ್ಷಿ ಮಲ್ಲಿಕ್ ವೀಕ್ಷಿಸಿದರು.

ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಕೆ.ಗೋವಿಂದರಾಜು, ಮೈಸೂರು ಮೇಯರ್ ಶಿವಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಎಸ್ಪಿ ಚೇತನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ |Mysuru Dasara | ಮೈಸೂರು ದಸರಾ ಉತ್ಸವಕ್ಕೆ ರಾಷ್ಟ್ರಪತಿ ಮುರ್ಮು ಚಾಲನೆ

Exit mobile version