Samsung Galaxy A05s, A54 5G, A34 5G ಫೋನ್‌ ಖರೀದಿಗೆ ಅತ್ಯಾಕರ್ಷಕ ಆಫರ್ಸ್! - Vistara News

ಕರ್ನಾಟಕ

Samsung Galaxy A05s, A54 5G, A34 5G ಫೋನ್‌ ಖರೀದಿಗೆ ಅತ್ಯಾಕರ್ಷಕ ಆಫರ್ಸ್!

Samsung: ಸ್ಯಾಮ್ಸಂಗ್ ಗ್ಯಾಲಕ್ಸಿ ಸರಣಿ ಫೋನುಗಳ ಮೇಲೆ ಅತ್ಯಾಕರ್ಷಕ ಆಫರ್ಸ್ ಘೋಷಣೆ ಮಾಡಲಾಗಿದ್ದು, ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಫೋನ್‌ಗಳು ದೊರೆಯುತ್ತಿವೆ.

VISTARANEWS.COM


on

Samsung Announces Exciting Offers on Galaxy A05s, A54 5G, A34 5G
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಅತಿದೊಡ್ಡ ಬಳಕೆಯ ಇಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಸ್ಯಾಮ್‌ಸಂಗ್, ಇಂದು ಅಪಾರ ಜನಪ್ರಿಯತೆ ಗಳಿಸಿರುವ ಗ್ಯಾಲಕ್ಸಿ A05s, A54 5G ಮತ್ತು ಗ್ಯಾಲಕ್ಸಿ A34 5G ಸ್ಮಾರ್ಟ್‌ಫೋನ್‌ಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ(Samsung Galaxy Series Phones).

ಒಂದು ವಿಶೇಷ ಕೊಡುಗೆಯಾಗಿ ಗ್ರಾಹಕರು ಈಗ, ಮೂಲ ಬೆಲೆ 13499 ರೂಗಳು (4ಜಿಬಿ+128ಜಿಬಿ) ಮತ್ತು 14999 (6ಜಿಬಿ+128ಜಿಬಿ) ರೂಗಳ ಗೆಲ್ಯಾಕ್ಸಿ A05ಎಸ್ ಅನ್ನು ತಕ್ಷಣವೇ 2000 ರೂಗಳ ರಿಯಾಯಿತಿಯೊಂದಿಗೆ ಖರೀದಿಸಬಹುದು. ಎಂದರೆ, ಈಗ ಗ್ರಾಹಕರು ಇವುಗಳನ್ನು ಕ್ರಮವಾಗಿ ಕೇವಲ 11499 ರೂಗಳು ಮತ್ತು 12999 ರೂಗಳಿಗೆ ಪಡೆಯಬಹುದು. ಅಸಾಧಾರಣ ಕಾರ್ಯಕ್ಷಮತೆಯುಳ್ಳ ಕ್ವಾಲ್ಕಾಮ್ ಸ್ನ್ಯಾಪ್ಡ್ರೇಗಾನ್ (Qualcomm Snapdragon) 680 ನಿಂದ ನಡೆಸಲ್ಪಡುವ ಮತ್ತು ದೊಡ್ಡದಾದ 6.71″ ಪೂರ್ಣ ಎಚ್.ಡಿ+ 90Hz ಡಿಸ್ಪ್ಲೇ ಉಳ್ಳ ಗ್ಯಾಲಕ್ಸಿ A05s ಸಮಸ್ಯಾತೀತವಾಗಿ ಬಹುಕೆಲಸಗಳನ್ನು ಒಮ್ಮೆಗೇ ಮಾಡಬಲ್ಲುದು ಮತ್ತು ಮನಸೆಳೆಯುವ ವೀಕ್ಷಣೆಗೆ ಸೂಕ್ತವಾಗಿದೆ. 50MP ಮುಖ್ಯ ಶೂಟರ್‌ ನಿಂದ ರೋಮಾಂಚಕಾರಿ ಫೋಟೋಗಳನ್ನು ಸೆರೆಹಿಡಿಯಬಹುದು ಮತ್ತು 25W ಸೂಪರ್-ಫಾಸ್ಟ್ ಚಾರ್ಜಿಂಗ್ ಗಾಗಿ 5000 mAh ಬ್ಯಾಟರಿ ಇರುವುದರಿಂದ ದೀರ್ಘಾವಧಿಯವರೆಗೆ ಬಳಸಬಹುದು. ಗ್ಯಾಲಕ್ಸಿ A05s, 4 ವರ್ಷಗಳ ಸುರಕ್ಷತಾ ನವೀಕರಣಗಳು ಮತ್ತು 2 ತಲೆಮಾರುಗಳ OS ನವೀಕರಣಗಳೊಂದಿಗೆ ಭವಿಷ್ಯತ್ತಿನಲ್ಲೂ ಉಪಯೋಗಿಸಬಲ್ಲ ಸಾಧನವಾಗಿದೆ. ಗ್ಯಾಲಕ್ಸಿ A05s, ಚಿಲ್ಲರೆ ಅಂಗಡಿಗಳು, Samsung.com ಮತ್ತು ಇತರ ಆನ್‌ಲೈನ್ ವೇದಿಕೆಗಳ ಮೂಲಕ ಲಭ್ಯವಿದೆ.

ಈಗ ಗ್ರಾಹಕರು ಮೂಲ ಬೆಲೆ 30999 ರೂಗಳ ಗ್ಯಾಲಕ್ಸಿ A34 5G ಅನ್ನು ಕೇವಲ 25999 ರೂಗಳಿಗೆ ಖರೀದಿಸಬಹುದು; 3500 ರೂಗಳ ಬ್ಯಾಂಕ್ ಕ್ಯಾಶ್‌ಬ್ಯಾಕ್ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಕೆದಾರರಿಗೆ 1500 ರೂಗಳ ಹೆಚ್ಚುವರಿ ಕ್ಯಾಶ್‌ಬ್ಯಾಕ್. ಆಸಮ್ (Awesome) ಗ್ಯಾಲಕ್ಸಿ A54 5G ಖರೀದಿಸಲು ಬಯಸುವವರು ಇದೀಗ 8ಜಿಬಿ+128ಜಿಬಿ ರೂಪಾಂತರವನ್ನು ಕೇವಲ 33499 ರೂಗಳಿಗೆ ಹೊಂದಬಹುದು. ಮೊದಲು ಇದರ ಬೆಲೆ 38999 ರೂಗಳು. ಈ ಕೊಡುಗೆಯಲ್ಲಿ 3500 ರೂಗಳ ಬ್ಯಾಂಕ್ ಕ್ಯಾಶ್‌ಬ್ಯಾಕ್ ಇರುತ್ತದೆ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್ ಬಳಕೆದಾರರಿಗೆ ಹೆಚ್ಚುವರಿ 2000 ರೂಗಳ ಬ್ಯಾಂಕ್ ಕ್ಯಾಶ್‌ಬ್ಯಾಕ್. ಇಷ್ಟೇ ಅಲ್ಲದೆ, ಅನುಕೂಲಕರ ಇಎಂಐ ಯೋಜನೆಗಳೂ ಇವೆ.

ಗ್ಯಾಲಕ್ಸಿ A54 5G ಮತ್ತು ಗ್ಯಾಲಕ್ಸಿ A34 5G ಬಹಳ ಸದೃಢ; IP67 ರೇಟಿಂಗ್‌ನ ಸ್ಪಿಲ್ ಮತ್ತು ಸ್ಪ್ಲಾಶ್ ಪ್ರತಿರೋಧ ನೀಡುತ್ತದೆ. 30 ನಿಮಿಷಗಳ ಕಾಲ 1 ಮೀಟರ್ ಸಿಹಿ ನೀರಿನ ಒತ್ತಡವನ್ನು ತಡೆದುಕೊಳ್ಳಬಲ್ಲುದು ಮತ್ತು ಧೂಳು-ನಿರೋಧಕ. ಈ ಮೊಬೈಲ್ ಸಾಹಸಪ್ರಿಯರಿಗೆ ಸೂಕ್ತವಾಗಿದೆ. A54 ನಲ್ಲಿ 50MP OIS ಪ್ರಾಥಮಿಕ ಲೆನ್ಸ್ ಮತ್ತು A34 ನಲ್ಲಿ 48MP, ಜೊತೆಗೆ 5MP ಮ್ಯಾಕ್ರೋ ಲೆನ್ಸ್ ಸೇರಿದಂತೆ ಶಕ್ತಿಯುತ ಕ್ಯಾಮೆರಾಗಳಿವೆ. ಇವುಗಳಲ್ಲಿ ಹೊಸದಾದ, ಜನಪ್ರಿಯ ‘ನೈಟೋಗ್ರಫಿ’ ವೈಶಿಷ್ಟ್ಯವೂ ಇದೆ. ಈ ಸೊಗಸಾದ ಸಾಧನಗಳು ಫ್ಲೋಟಿಂಗ್ ಕ್ಯಾಮೆರಾ ಸೆಟಪ್, ಬಣ್ಣ-ಹೊಂದಾಣಿಕೆಯ ಲೋಹದ ಕ್ಯಾಮೆರಾ ಡೆಕೊ ಮತ್ತು 5000 mAh ಬ್ಯಾಟರಿ ಹೊಂದಿದ್ದು ಒಂದು ಸಲ ಚಾರ್ಜ್‌ ಮಾಡಿದರೆ 2 ದಿನಗಳಿಗೆ ಸಾಕು. ಶ್ರೇಷ್ಠ ಮನರಂಜನೆಗಾಗಿ ಸ್ಯಾಮ್‌ಸಂಗ್ ವಾಲಿಟ್, ವಾಯ್ಸ್ ಫೋಕಸ್ ಮತ್ತು ಡ್ಯುಯಲ್ ಡಾಲ್ಬಿ-ಇಂಜಿನಿಯರಿಂಗ್ ಸ್ಟೀರಿಯೊ ಸ್ಪೀಕರ್‌ಗಳೂ ಇವೆ.

ಸೂಪರ್ ಎಎಮ್ಒಎಲ್ಇಡಿ (AMOLED) ಡಿಸ್ಪ್ಲೇ, 1000 ನಿಟ್ಸ್ ಬ್ರೈಟ್ನೆಸ್ ಗಳಿದ್ದು ನಿಜ-ಜೀವನದ ಬಣ್ಣಗಳನ್ನು ಅನುಭವಿಸಬಹುದು ಮತ್ತು ಸುಗಮ ಪರಿವರ್ತನೆಗಳಿಗಾಗಿ 120Hz ರಿಫ್ರೆಶ್ ದರ ಇದೆ. ಸುರಕ್ಷಿತತೆಗಾಗಿ ಸ್ಯಾಮ್‌ಸಂಗ್‌ನ ನಾಕ್ಸ್‌ ಇದ್ದು ನೈಜ-ಸಮಯದಲ್ಲಿ ಡೇಟ ರಕ್ಷಣೆ ನೀಡುತ್ತದೆ. ನಾಲ್ಕು OS ನವೀಕರಣಗಳು ಮತ್ತು 5 ವರ್ಷಗಳ ಭದ್ರತಾ ನವೀಕರಣಗಳಿದ್ದು ಗ್ಯಾಲಕ್ಸಿ A54 5G ಮತ್ತು ಗ್ಯಾಲಕ್ಸಿ A34 5G ಖಚಿತವಾಗಿ ದೀರ್ಘಕಾಲಿಕ ಕಾರ್ಯಕ್ಷಮತೆಯನ್ನು ಒದಗಿಸುತ್ತದೆ. ಗ್ಯಾಲಕ್ಸಿ A05s, ಗ್ಯಾಲಕ್ಸಿ A34 5G ಮತ್ತು ಗ್ಯಾಲಕ್ಸಿ A54 5G ಚಿಲ್ಲರೆ ಅಂಗಡಿಗಳು, Samsung.com ಮತ್ತು ಇತರ ಆನ್‌ಲೈನ್ ವ್ಯಾಪಾರಿಗಳಲ್ಲಿ ಲಭ್ಯವಿದೆ.

ಈ ಸುದ್ದಿಯನ್ನೂ ಓದಿ: Aadhaar Card: ಕಳೆದು ಹೋದ ಆಧಾರ್‌ ಸಂಖ್ಯೆ ಮರಳಿ ಪಡೆಯುವುದು ಹೇಗೆ? ಜಸ್ಟ್‌ ಹೀಗೆ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

Prajwal Revanna case: ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

VISTARANEWS.COM


on

Prajwal Revanna case Interpol issues messages against Prajwal to 196 countries
Koo

ಬೆಂಗಳೂರು: ಲೈಂಗಿಕ ಹಗರಣದ (Pen Drive Case) ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna case) ಪತ್ತೆಗೆ ಬ್ಲೂ ಕಾರ್ನರ್ ನೋಟಿಸ್‌ (Blue Corner Notice) ಜಾರಿ ಮಾಡಲು ಎಸ್ಐಟಿ (SIT) ಅಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿರುವ ಸಿಬಿಐ (CBI), ಈ ಕುರಿತು ಇಂಟರ್‌ಪೋಲ್‌ (Interpol) ಮೂಲಕ 196 ದೇಶಗಳಿಗೆ ಮೆಸೇಜ್‌ ರವಾನೆ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್‌ ಎಲ್ಲಿಯೇ ಕಂಡರೂ, ಯಾವ ದೇಶದಿಂದ ಯಾವ ದೇಶಕ್ಕೆ ಹೋದರೂ ಎಸ್‌ಐಟಿಗೆ ಮಾಹಿತಿ ಸಿಗಲಿದೆ.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳಿಗೆ ಇಂಟರ್‌ಪೋಲ್‌ನಿಂದ ಮಾಹಿತಿ ಬಂದಿದೆ. ಹೀಗಾಗಿ ಇನ್ನು ಮುಂದೆ ಎಸ್‌ಐಟಿ ಸಹ ಪ್ರಜ್ವಲ್‌ ವಿರುದ್ಧ ಕಾನೂನು ಸಮರ ಸಾರಲು ಹೆಚ್ಚಿನ ಅನುಕೂಲವಾದಂತೆ ಆಗಲಿದೆ. ಅಲ್ಲದೆ, ಅವರ ಪ್ರತಿ ಚಲನವಲನಗಳು, ಸಂಚಾರದ ಮಾಹಿತಿಗಳು ಲಭ್ಯವಾಗಲಿವೆ.

ಪ್ರಜ್ವಲ್‌ ರೇವಣ್ಣ ಪತ್ತೆಗೆ ಬ್ಲೂ ಕಾರ್ನರ್‌ ನೋಟೀಸ್!‌ ಏನಿದರ ಅಗತ್ಯ?

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟಿಸ್‌ ಅನ್ನು ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೋಟಿಸ್ ಪಡೆಯಲಿದೆ.

ಸದ್ಯ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿಯ ಪತ್ತೆಗೆ ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಯಾವ ದೇಶದಲ್ಲಿ ಇದ್ದಾರೆ ಎನ್ನುವುದು ಪತ್ತೆಯಾಗಬೇಕಿದೆ. ಈ ಬಗ್ಗೆ ಸಿಬಿಐಗೆ ಈಗಾಗಲೇ ಮನವಿ ಮಾಡಲಾಗಿದೆ. ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡುವಂತೆ ಸಿಬಿಐಗೆ ಮನವಿ ಮಾಡಲಾಗಿದೆ. ನಿನ್ನೆಯವರೆಗೂ ಪ್ರಜ್ವಲ್‌ ಜರ್ಮನಿಯಲ್ಲಿ ಇದ್ದರು ಎಂಬ ಮಾಹಿತಿ ಇತ್ತು. ನಿನ್ನೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಪ್ರಜ್ವಲ್‌ ತಮ್ಮಲ್ಲಿರುವ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಬಳಸಿ ವಿದೇಶಯಾನ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಬ್ಲೂ ಕಾರ್ನರ್ ನೊಟೀಸ್ ಜಾರಿಯಾದ ಬಳಿಕ ಇಂಟರ್‌ಪೋಲ್ ಇತರ ಕಡೆಗಳಿಗೂ ಆರೋಪಿಯ ಮಾಹಿತಿಯನ್ನು ಕಳಿಸಿ, ಆರೋಪಿಯ ನೆಲೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತದೆ. ಯಾವ ದೇಶದಲ್ಲಿ ಇದ್ದಾರೆ, ಎಲ್ಲಿ ಲೊಕೇಟ್ ಆಗಿದ್ದಾರೆ ಅನ್ನುವ ಚಲನವಲನ ಪತ್ತೆ ಮಾಡುತ್ತಾರೆ. ಬಳಿಕ ಸಿಬಿಐಗೆ ಆರೋಪಿಯ ಚಲನವಲನ ಬಗ್ಗೆ ಮಾಹಿತಿ ನೀಡುತ್ತಾರೆ. ಸಿಬಿಐ ಮೂಲಕ ಎಸ್ಐಟಿಗೆ ಪ್ರಜ್ವಲ್ ಎಲ್ಲಿದ್ದಾರೆ ಅನ್ನುವ ಮಾಹಿತಿ ಸಿಗುತ್ತದೆ. ಹೀಗಾಗಿ ಸುಳಿವು ಪಡೆಯಲು ಈ ನೋಟಿಸ್‌ ಮುಖ್ಯವಾಗಿದೆ.

ಇನ್ನಷ್ಟು ಸಿಬ್ಬಂದಿ

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಇನ್ನಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತ್ತೆ ಎಂಟು ಮಂದಿ ಅಧಿಕಾರಿ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಮೂವರು ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಸಿಬ್ಬಂದಿ ಸೇರಿದಂತೆ ಐವರು ಸಿಬ್ಬಂದಿ ನಿಯೋಜಿಸಲಾಗಿದ್ದು, ಕೂಡಲೇ ಸಿಐಡಿ ಕಚೇರಿಯ ಎಸ್ಐಟಿಯಲ್ಲಿ ವರದಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಓರ್ವ ಎಸ್ಪಿ, ಇಬ್ಬರು ಇನ್ಸ್ಪೆಕ್ಟರ್ ಗಳು, ಒರ್ವ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ವರು ಸಿಬ್ಬಂದಿ ಸೇರಿ ಎಂಟು ಜನರ ನೇಮಕ ಮಾಡಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟಿಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ರಾಜಕೀಯ

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Prajwal Revanna Case: ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿದೆ.

VISTARANEWS.COM


on

Prajwal Revanna Case HD Revanna has severe chest pain Admission in Victoria
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಹಾಗೂ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಕೇಸ್‌ ಅಡಿ ಎಸ್‌ಐಟಿ ವಶದಲ್ಲಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೆ ಹೊಟ್ಟೆನೋವು ಹಾಗೂ ಎದೆ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಳ್ಳಲಾಗಿತ್ತು. ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತಾದರೂ ಡಿಹೈಡ್ರೇಶನ್‌ ಆಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸಲೈನ್‌ ಹಾಕಿ ಕಳಿಸಲಾಗಿದೆ.

ಸಂಜೆ ವೇಳೆಗೆ ಎಚ್.ಡಿ. ರೇವಣ್ಣ ಅವರು ಹೊಟ್ಟೆ ನೋವು ಹಾಗೂ ಎದೆ ಉರಿ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮೊದಲು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಲಾಗಿತ್ತು. ಅಲ್ಲಿ ಮೊದಲು ಬಿಪಿ, ಶುಗರ್ ಹಾಗೂ ಇಸಿಜಿ ತಪಾಸಣೆಯನ್ನು ನಡೆಸಲಾಗಿದೆ. ಇವು ನಾರ್ಮಲ್‌ ಇದ್ದ ಕಾರಣದಿಂದ ಅಲ್ಲಿಂದ ಹೆಚ್ಚಿನ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ.

ಗ್ಯಾಸ್ಟ್ರಿಕ್‌ ಹಿನ್ನೆಲೆ‌ಯಲ್ಲಿ ಹೊಟ್ಟೆ ನೋವು ಬಂದಿರಬಹುದು ಎಂದು ವೈದ್ಯರು ಅಂದಾಜಿಸಿದ್ದಾರೆ. ಈ ಸಂಬಂಧ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿಸ್ಟ್ ಅವರ ಬಳಿ ತಪಾಸಣೆಗೊಳಪಡಿಸಲಾಗುತ್ತದೆ. ಹೀಗಾಗಿ ರೇವಣ್ಣ ಅವರಿಗೆ ತಪಾಸಣೆ ಮಾಡಿ, ಆರೋಗ್ಯ ಸುಧಾರಿಸಿದೆ ಎಂದು ಆರಂಭದಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದರು. ಆದರೆ, ರೇವಣ್ಣ ತೀವ್ರ ಬಳಲಿದಂತೆ ಕಂಡ ಹಿನ್ನೆಲೆಯಲ್ಲಿ ಅವರಿಗೆ ಡ್ರಿಪ್‌ (ಸಲೈನ್) ಹಾಕಲಾಗಿತ್ತು.

ಆದರೆ, ಎಚ್.ಡಿ. ರೇವಣ್ಣ ಅವರಿಗೆ ಎದೆ ನೋವು ಹಾಗೂ ಹೊಟ್ಟೆ ಉರಿ ಹೆಚ್ಚಾದ ಹಿನ್ನೆಲೆಯಲ್ಲಿ ಅವರನ್ನು ಅಡ್ಮಿಟ್ ಮಾಡುವುದು ಸೂಕ್ತ ಎಂದು ವೈದ್ಯರು ಸೂಚನೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸೂಚನೆ ಬೆನ್ನಲ್ಲೇ ಅಡ್ಮಿಟ್ ಮಾಡಲು ಎಸ್‌ಐಟಿ ಅಧಿಕಾರಿಗಳು ತೀರ್ಮಾನ ಮಾಡಿದ್ದರು. ಇದಕ್ಕೂ ಮೊದಲು ಡ್ರಿಪ್‌ ಮುಗಿದ ಬಳಿಕ ಅವರನ್ನು ಕರೆದುಕೊಂಡು ಹೋಗುವಂತೆ ವೈದ್ಯರು ಸೂಚಿಸಿದ್ದರು. ಪುನಃ ಇದೇ ತೀರ್ಮಾನಕ್ಕೆ ವೈದ್ಯರು ಬಂದಿದ್ದಾರೆನ್ನಲಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟಿಸ್‌

ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ಕ್ರೈಂ

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Prajwal Revanna Case: ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ರೇವಣ್ಣ ಅವರಿಗೆ ಜೈಲಾಗುತ್ತದೆಯೋ? ಅಥವಾ ಜಾಮೀನು ಸಿಗುತ್ತದೆಯೋ ಎಂಬ ಪ್ರಶ್ನೆ ಎದುರಾಗಿದೆ.

VISTARANEWS.COM


on

Prajwal Revanna Case HD Revanna bail plea to be heard tomorrow Jail or Bela
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರ ಜಾಮೀನು ಅರ್ಜಿ ನಾಳೆ (ಬುಧವಾರ – ಮೇ 8) ವಿಚಾರಣೆಗೆ ಬರಲಿದೆ.

ಬುಧವಾರ ಎಚ್‌.ಡಿ. ರೇವಣ್ಣ ಅವರ ಕಸ್ಟಡಿ ಅಂತ್ಯ ಆಗುವ ಹಿನ್ನೆಲೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಆದರೆ, ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ಇನ್ನಷ್ಟು ದಿನ ಕಸ್ಟಡಿಗೆ ಕೊಡುವಂತೆ ಕೋರ್ಟ್‌ನಲ್ಲಿ ಮನವಿ ಮಾಡಲಿದ್ದಾರೆ. ಈಗಷ್ಟೇ ವಿಚಾರಣೆಯನ್ನು ಪ್ರಾರಂಭ ಮಾಡಲಾಗಿದೆ. ಅಲ್ಲದೆ, ರೇವಣ್ಣ ಸಹ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ವಾದಿಸುವ ಸಾಧ್ಯತೆ ಹೆಚ್ಚಿದೆ.

ಇನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ನ್ಯಾಯಾಲಯ ಸಹ ಒಂದು ಪ್ರಶ್ನೆ ಎತ್ತಿದೆ. ಆರೋಪಿ ಕಸ್ಟಡಿಯಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ನಡೆಸಲು ಯೋಗ್ಯವೇ ಎಂಬ ಬಗ್ಗೆ ಮಂಗಳವಾರ ನಡೆದ ವಿಚಾರಣೆ ವೇಳೆ ಪ್ರಶ್ನೆ ಮಾಡಿದೆ. ಆಗ ಈ ಬಗ್ಗೆ ರೇವಣ್ಣ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.‌ ನಾಗೇಶ್ ಅವರು ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ಸೂಚಿಸಿದ್ದು, ಬುಧವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಈ ವೇಳೆ ರೇವಣ್ಣ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಜಾಮೀನು ಸಿಕ್ಕಿಲ್ಲವಾದರೆ, ಪುನಃ ಕಸ್ಟಡಿಗೆ ನೀಡಲಾಗುತ್ತದೆಯೋ? ಅಥವಾ ನ್ಯಾಯಾಂಗ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಸೇರಲಿದ್ದಾರೋ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ರೇವಣ್ಣ ಮೇಲೂ ಲುಕೌಟ್‌ ನೋಟೀಸ್‌

ಎಚ್‌.ಡಿ. ರೇವಣ್ಣ ವಿರುದ್ಧವೂ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

Continue Reading

ಕರ್ನಾಟಕ

Lok Sabha Election 2024: ಜಿ.ಎಂ.ಸಿದ್ದೇಶ್ವರ್‌ ಮಹಾ ಎಡವಟ್ಟು, ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ

Lok Sabha Election 2024: ದಾವಣಗೆರೆಯ ಮತಗಟ್ಟೆಯಲ್ಲಿ ಮತದಾನ ಮಾಡುವಾಗ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಗೊಂದಲಕ್ಕೀಡಾಗಿದ್ದಾರೆ. ಈ ವೇಳೆ ಪತ್ನಿಗೆ ಸಹಾಯ ಮಾಡಲು ಹೋದ ಸಂಸದ ಸಿದ್ದೇಶ್ವರ್‌ ಅವರು ತಾವೇ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ.

VISTARANEWS.COM


on

Lok Sabha Election 2024
Koo

ದಾವಣಗೆರೆ: ಮತದಾನದ ವೇಳೆ ದಾವಣಗೆರೆ ಸಂಸದ ಜಿ.ಎಂ. ಸಿದ್ದೇಶ್ವರ್ (G M Siddeshwar) ಅವರು ಎಡವಟ್ಟು ಮಾಡಿದ್ದಾರೆ. ಮತದಾನದ ಮಾರ್ಗಸೂಚಿ ಉಲ್ಲಂಘಿಸಿ ಪತ್ನಿಯ ಮತವನ್ನೂ (Lok Sabha Election 2024) ತಾವೇ ಹಾಕುವ ವಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಲ್ಲದೇ ಮತದಾನ ಗೌಪ್ಯತೆ ಕಾಪಾಡದ ಹಿನ್ನೆಲೆ ಸಂಸದರ ವಿರುದ್ಧ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಪತ್ನಿ ಗಾಯತ್ರಿ ಸಿದ್ದೇಶ್ವರ್ ಅವರ ಬದಲಿಗೆ ಸಿದ್ದೇಶ್ವರ್‌ ಅವರೇ ಮತ ಹಾಕುವ ಮೂಲಕ ಚುನಾವಣೆ ಮಾರ್ಗಸೂಚಿಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ತಮ್ಮ ಮತವನ್ನು ಹಾಕಲೂ ಆಗದವರು ಕ್ಷೇತ್ರದಲ್ಲಿ ಆಡಳಿತ ಹೇಗೆ ನಡೆಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

ದಾವಣಗೆರೆಯ ಮತಗಟ್ಟೆಯಲ್ಲಿ ಮತದಾನ ಮಾಡುವಾಗ ಗಾಯತ್ರಿ ಸಿದ್ದೇಶ್ವರ್ ಗೊಂದಲಕ್ಕೀಡಾಗಿದ್ದಾರೆ. ಈ ವೇಳೆ ಪತ್ನಿಗೆ ಸಹಾಯ ಮಾಡಲು ಹೋದ ಸಿದ್ದೇಶ್ವರ್‌ ಅವರು ತಾವೇ ಬಟನ್‌ ಒತ್ತಿ ಬಂದಿದ್ದಾರೆ.

ಚುನಾವಣಾಧಿಕಾರಿಯಿಂದ ದೂರು ದಾಖಲು

ಪತ್ನಿ ಮತದಾನ ಮಾಡಿದ್ದನ್ನು ಇಣುಕಿ ನೋಡಿದ ಹಿನ್ನೆಲೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ವಿರುದ್ಧ ಲಿಖಿತ ದೂರು ದಾಖಲಾಗಿದೆ. ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರ ಚುನಾವಣಾ ಅಧಿಕಾರಿ ರಾಜೇಶ್ ಕುಮಾರ್ ಅವರು ಮತದಾನ ಗೌಪ್ಯತೆ ಕಾಪಾಡದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆಗೆ ಸಂಸದರ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

ಔರಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಮತದಾನ

ಬೀದರ್‌: ಬೀದರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರು ಮಂಗಳವಾರ ಔರಾದ್‌ನಲ್ಲಿ ಮತದಾನ (Lok Sabha Election 2024) ಮಾಡಿದರು.

ಬೀದರ್ ಜಿಲ್ಲೆಯ ಔರಾದ್‌ನ ನಾಲಂದ ಹೈಸ್ಕೂಲ್ ಬೂತ್ ನಂ.84ರ ಮತಗಟ್ಟೆಯಲ್ಲಿ ಕುಟುಂಬ ಸದಸ್ಯರ ಜತೆ ಆಗಮಿಸಿ, ತಮ್ಮ ಹಕ್ಕು ಚಲಾಯಿಸಿದರು.

ಇದನ್ನೂ ಓದಿ | Lok Sabha Election 2024: ಕೈಗಳಿಲ್ಲದಿದ್ದರೂ ಮತದಾನ ಮಾಡಿ ಮಾದರಿಯಾದ ಅಂಕಿತ್ ಸೋನಿ

ಮತದಾನದ ಬಳಿಕ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ, ಕ್ಷೇತ್ರದಾದ್ಯಂತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು, ಯೋಜನೆಗಳನ್ನು ಜನರಿಗೆ ತಲುಪಿಸಿ ಯಶಸ್ವಿಯಾಗಿ ನನ್ನ ಕಾರ್ಯ ನಿರ್ವಹಿಸಿದ್ದೇನೆ ಎಂದು ತಿಳಿಸಿದರು.

Continue Reading
Advertisement
Prajwal Revanna case Interpol issues messages against Prajwal to 196 countries
ಕ್ರೈಂ12 mins ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

PM Modi
ಪ್ರಮುಖ ಸುದ್ದಿ17 mins ago

PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Prajwal Revanna Case HD Revanna has severe chest pain Admission in Victoria
ರಾಜಕೀಯ32 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Air Purifier
ಆಟೋಮೊಬೈಲ್44 mins ago

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

Prajwal Revanna Case HD Revanna bail plea to be heard tomorrow Jail or Bela
ಕ್ರೈಂ47 mins ago

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Ujjivan Small Finance Bank
ವಾಣಿಜ್ಯ56 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Lok Sabha Election 2024
ಕರ್ನಾಟಕ57 mins ago

Lok Sabha Election 2024: ಜಿ.ಎಂ.ಸಿದ್ದೇಶ್ವರ್‌ ಮಹಾ ಎಡವಟ್ಟು, ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ

Nirav modi
ದೇಶ1 hour ago

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Yallapura MLA Shivaram Hebbar voting in Arabail village
ರಾಜಕೀಯ1 hour ago

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Haryana Government
ಪ್ರಮುಖ ಸುದ್ದಿ2 hours ago

Haryana Government : ಹರಿಯಾಣದ ಬಿಜೆಪಿ ಸರ್ಕಾರ ಪತನ ಸಾಧ್ಯತೆ; 3 ಪಕ್ಷೇತರರು ಕಾಂಗ್ರೆಸ್ ಕಡೆಗೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ32 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ4 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ5 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌