Sarvodaya Samavesha | ಸಣ್ಣಪುಟ್ಟ ಭಿನ್ನಮತ ಇದ್ದರೂ ಕಾಂಗ್ರೆಸ್‌ ಅಧಿಕಾರಕ್ಕೆ ತರುತ್ತೇವೆ: ಖರ್ಗೆಗೆ ಸಿದ್ದು ಮಾತು - Vistara News

ಕರ್ನಾಟಕ

Sarvodaya Samavesha | ಸಣ್ಣಪುಟ್ಟ ಭಿನ್ನಮತ ಇದ್ದರೂ ಕಾಂಗ್ರೆಸ್‌ ಅಧಿಕಾರಕ್ಕೆ ತರುತ್ತೇವೆ: ಖರ್ಗೆಗೆ ಸಿದ್ದು ಮಾತು

Sarvodaya Samavesha | ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾಂಗ್ರೆಸ್‌ ಏರ್ಪಡಿಸಿದ್ದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

VISTARANEWS.COM


on

congress sarvodaya ೧೨
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಮ್ಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರಬಹುದು. ಆದರೆ, ಕರ್ನಾಟಕದಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದು ನಮಗಿರುವ ಸವಾಲಾಗಿದೆ. ಬಡವರ, ರೈತರ, ಯುವಕರ, ಅಲ್ಪಸಂಖ್ಯಾತರ ವಿರೋಧಿ, ಭ್ರಷ್ಟ ಸರ್ಕಾರವನ್ನು ಕಿತ್ತುಹಾಕಿ, ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ವೋದಯ ಸಮಾವೇಶದಲ್ಲಿ (Sarvodaya Samavesha) ಪ್ರತಿಜ್ಞೆ ಮಾಡಿದರು.

Sarvodaya Samavesha

ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸರ್ವೋದಯ ಸಮಾವೇಶದಲ್ಲಿ (Sarvodaya Samavesha) ಮಾತನಾಡಿದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡುವಾಗ ಪ್ರಸ್ತಾಪ ಮಾಡಿದಂತೆ ಕರ್ನಾಟಕದಲ್ಲಿ ೨೦೨೩ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರಬೇಕು. ಎಲ್ಲ ಕಾರ್ಯಕರ್ತರು, ನಾಯಕರು ಒಟ್ಟಾಗಿ ಈಗಿನ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆಕೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ನಮ್ಮ ಕೆಲಸ ಸಾಗಲಿದೆ. ಅಲ್ಲದೆ, ರಾಜ್ಯದ ಜನರೂ ಸಹ ಈ ನಿಟ್ಟಿನಲ್ಲಿ ಸಂಕಲ್ಪ ಮಾಡಿದ್ದು, ಈ ಭ್ರಷ್ಟ, ನಿಷ್ಕ್ರಿಯ ಸರ್ಕಾರವನ್ನು ಕಿತ್ತೊಗೆಯಲು ತೀರ್ಮಾನಿಸಿದ್ದಾರೆ ಎಂದು ಹೇಳಿದರು.

ಖರ್ಗೆಗೆ ಅಧ್ಯಕ್ಷ ಪಟ್ಟ ಕರ್ನಾಟಕ ಹೆಮ್ಮೆ- ಸಿದ್ದರಾಮಯ್ಯ
ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಮೊದಲನೆಯ ಬಾರಿಗೆ ರಾಜ್ಯಕ್ಕೆ ಆಗಮಿಸಿದ್ದಾರೆ. ಕೆಪಿಸಿಸಿ ಕಡೆಯಿಂದ ಅದ್ಧೂರಿ ಹಾಗೂ ಆತ್ಮೀಯವಾಗಿ ಸ್ವಾಗತ ಕೋರಿದ್ದೇವೆ. ಇಡೀ ಕಾಂಗ್ರೆಸ್‌ ವಲಯದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನಿಜಲಿಂಗಪ್ಪ ಅವರ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಇದು ಕರ್ನಾಟಕದ ಏಳು ಕೋಟಿ ಜನರ ಹೆಮ್ಮೆಯ ವಿಚಾರ ಎಂದು ಸಿದ್ದರಾಮಯ್ಯ ಬಣ್ಣಿಸಿದರು.

ಇದನ್ನೂ ಓದಿ | Sarvodaya Samavesha | ಪಕ್ಷಕ್ಕೆ ಬಂದ ಕೂಡಲೇ ಸಿಎಂ ಮಾಡಿ ಅನ್ನಬೇಡಿ: ಮಲ್ಲಿಕಾರ್ಜುನ ಖರ್ಗೆ

Sarvodaya Samavesha

ಭ್ರಷ್ಟತೆ ಬಗ್ಗೆ ಮೋದಿ ಮಾತನಾಡುತ್ತಿಲ್ಲ
ರಾಜ್ಯದಲ್ಲಿ 40% ಕಮಿಷನ್ ಸರ್ಕಾರ ಇದೆ. ಇದನ್ನು ನಾವು ಹೇಳುತ್ತಿಲ್ಲ. ಗುತ್ತಿಗೆದಾರ ಸಂಘದವರು ಹೇಳಿದ್ದಾರೆ. ಗುತ್ತಿಗೆದಾರರಿಗೆ ಇನ್ನೂ ಸುಮಾರು 25 ಸಾವಿರ ಕೋಟಿ ರೂಪಾಯಿ ಬಾಕಿ ಹಣವನ್ನು ಗುತ್ತಿಗೆದಾರರಿಗೆ ಕೊಡಬೇಕಿದೆ. ಅದನ್ನು ಕೊಡಲು ಕಮಿಷನ್‌ ಕೇಳುತ್ತಿದ್ದಾರೆ. ಈ ಬಗ್ಗೆ ಗುತ್ತಿಗೆದಾರರು ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾರೆ. ಆದರೆ, ಯಾರೂ ಕ್ಯಾರೆ ಎನ್ನಲಿಲ್ಲ. ಸಂತೋಷ್‌ ಪಾಟೀಲ್‌ ಎಂಬ ಗುತ್ತಿಗೆದಾರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಶೇ. ೪೦ರಷ್ಟು ಕಮಿಷನ್‌ ಕೊಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೆ ಆಗಿನ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಅಲ್ಲದೆ, ಈಚೆಗೆ ಇನ್ಸ್‌ಪೆಕ್ಟರ್‌ ನಂದೀಶ್‌ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು 70-80 ಲಕ್ಷ ರೂಪಾಯಿ ಕೊಟ್ಟು ಕೆ.ಆರ್.ಪುರಂ ಪೊಲೀಸ್‌ ಸ್ಟೇಷನ್‌ಗೆ ನಿಯೋಜನೆಗೊಂಡಿದ್ದರು ಎಂದು ಈ ಸರ್ಕಾರದ ಸಚಿವ ಎಂಟಿಬಿ ನಾಗರಾಜ್‌ ಹೇಳುತ್ತಾರೆ. ಕೊನೆಗೆ ನಾನು ಹೇಳೇ ಇಲ್ಲ ಎಂದು ಹೇಳುತ್ತಾರೆ. ಆದರೆ, ಈ ನಂದೀಶ್‌ ಸಾವಿಗೆ ನೇರವಾಗಿ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ಕಾರಣ. ಈ ಇಬ್ಬರಿಗೂ ಘನತೆ, ಗೌರವ ಇದ್ದರೆ ಎಂಟಿಬಿ ನಾಗರಾಜ್‌ ರಾಜೀನಾಮೆ ಕೊಡಬೇಕಿತ್ತು. ಆದರೆ, ಇದು ಭಂಡ ಸರ್ಕಾರ ಎಂದು ಸಿದ್ದರಾಮಯ್ಯ ದೂರಿದರು.

ಶಕ್ತಿ ತುಂಬಲಿದೆ ಜೋಡೋ ಯಾತ್ರೆ
ಬಡವರ, ರೈತರ ಕೆಲಸಗಳು ನಡೆಯುತ್ತಿಲ್ಲ. ದ್ವೇಷದ ರಾಜಕಾರಣ ನಡೆಯುತ್ತಿದೆ. ನಿರುದ್ಯೋಗ, ಭ್ರಷ್ಟಾಚಾರ ಯಾವುದಕ್ಕೂ ಪರಿಹಾರ ಸಿಗುತ್ತಿಲ್ಲ. ಅದಕ್ಕಾಗಿ ನಮ್ಮ‌ ನಾಯಕರಾಗಿರುವ ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಾರೆ. ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ ಸೇರಿದಂತೆ ಎಲ್ಲ ಭಾಗದಲ್ಲೂ ಜನಸ್ಪಂದನೆ ದೊರೆಯುತ್ತಿದೆ. ಇದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಸಾಕಷ್ಟು ಶಕ್ತಿ ದೊರೆತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಖರ್ಗೆ ಎಚ್ಚರಿಕೆ ಮಾತನ್ನು ಪಾಲಿಸುತ್ತೇವೆ
ಖರ್ಗೆ ಅವರೇ ನೀವು ಕರ್ನಾಟಕದವರು. ಬಹಳ ಸುದೀರ್ಘ ರಾಜಕಾರಣ ಮಾಡಿದ್ದೀರಿ. ಅಭಿವೃದ್ಧಿಪರ ರಾಜಕಾರಣದ ಬಗ್ಗೆ ನಂಬಿಕೆ ಇಟ್ಟವರು. ನೀವು ಕೆಲಸ ಮಾಡಿದ ಇಲಾಖೆಯಲ್ಲಿ ಹೆಜ್ಜೆ ಗುರುತು ಬಿಟ್ಟಿದ್ದೀರಿ. ನಿಮಗೆ ದ್ವೇಷ ರಾಜಕಾರಣ ಗೊತ್ತಿಲ್ಲ. ಬಡವರ ಪರ, ಶೋಷಿತರ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೀರಿ. ಬುದ್ಧ, ಬಸವ, ಅಂಬೇಡ್ಕರ್‌ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಬೆಳೆದುಬಂದಿದ್ದೀರಿ. ನೀವೊಬ್ಬರು ಸಮಚಿತ್ತ, ಸ್ವಾಭಿಮಾನಿ ನಾಯಕರಾಗಿದ್ದೀರಿ. ನಿಮ್ಮ ಎಚ್ಚರಿಕೆಯ ಮಾತುಗಳಂತೆ ನಾವು ನಡೆದುಕೊಂಡು ಹೋಗುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ | Ramulu Vs Siddu | ಕ್ಷೇತ್ರವಿಲ್ಲದೆ ಪರದೇಶಿಯಂತೆ ಓಡಾಡುತ್ತಿರುವ ಗಿರಾಕಿ ಸಿದ್ದರಾಮಯ್ಯ ಎಂದ ರಾಮುಲು

ಖರ್ಗೆಗೆ ಬಲ ತುಂಬಲು ಈ ಸಮಾವೇಶ- ಡಿಕೆಶಿ
ರಾಜ್ಯದ ಇತಿಹಾಸದಲ್ಲಿ ಇದು ಐತಿಹಾಸಿಕ ದಿನ. ಮಹಾತ್ಮಾ ಗಾಂಧೀಜಿ ಅವರು ಪ್ರಾರಂಭಿಸಿದ ಈ ಸರ್ವೋದಯ ಹೋರಾಟದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ವಿಶ್ವಾಸವನ್ನು ಇಟ್ಟಿದ್ದಾರೆ. ಇಂದು ಖರ್ಗೆ ಜತೆಗೆ ನಾವು-ನೀವೆಲ್ಲರೂ ಇದ್ದೇವೆ ಎಂಬ ಸಂದೇಶ ಕೊಡುವ ನಿಟ್ಟಿನಲ್ಲಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಕೆಶಿ ತಿಳಿಸಿದರು.

ಬಡವರಿಗೆ ಶಕ್ತಿ ತುಂಬಲು ಇರುವ ಬಂಡೆ
ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ನಡೆದಾಗ ಎಐಸಿಸಿ ಚುನಾವಣೆ ನಡೆಯಿತು. ಅವರ ಹೆಸರನ್ನು ಚುನಾವಣೆಗೆ ಸೂಚಿಸುವ ಭಾಗ್ಯ ನಮಗೆ ಸಿಕ್ಕಿತು. ಶೇಕಡಾ 90ರಷ್ಟು ಮತದಾರರು ಮಲ್ಲಿಕಾರ್ಜುನ ಖರ್ಗೆ ಅವರ ಪರವಾಗಿ ನಿಂತಿದ್ದರು. ಭಾರತ್ ಜೋಡೋ ಯಾತ್ರೆ ಮುಗಿಯುವುದರೊಳಗೆ ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಆಯ್ಕೆಯಾದರು. ಇಡೀ ರಾಷ್ಟಕ್ಕೆ ಶಕ್ತಿ ತುಂಬಲು ಅವರು ಬಂದಿದ್ದಾರೆ. ನಾನು ಕನಕಪುರದ ಬಂಡೆ ಅಲ್ಲ. ಇಡೀ ದೇಶದ ಜನರಿಗೆ, ಬಡವರಿಗೆ ಶಕ್ತಿ ತುಂಬಲು ನಿಂತಿರುವ ಖರ್ಗೆ ಅವರು ಬಂಡೆ ಎಂದು ಇದೇ ವೇಳೆ ಡಿ.ಕೆ. ಶಿವಕುಮಾರ್‌ ಹೇಳಿದರು.

ಪಕ್ಷಕ್ಕೆ ನಿಷ್ಠೆ, ತ್ಯಾಗ, ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಮಲ್ಲಿಕಾರ್ಜುನ ಖರ್ಗೆ. ಅವರ ತ್ಯಾಗದಿಂದಲೇ ಈ ಸ್ಥಾನ ಅವರಿಗೆ ದೊರೆತಿದೆ. ಅವರು ಹುಡುಕಿಕೊಂಡು ಹೋಗಿ ಅಧಿಕಾರ ಕೇಳಿದವರಲ್ಲ. ಅವರೊಂದಿಗೆ ನಾನು ಸಂಪುಟದಲ್ಲಿ ಕೆಲಸ ಮಾಡಿದ್ದೇನೆ. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಅವರೊಂದಿಗೆ ಕೆಲಸ ಮಾಡಿದ್ದೇನೆ. ಈಗ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾರೆ. ಈಗಲೂ ಅವರ ಜತೆಗೆ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ. ಇದು ನನ್ನ ಪುಣ್ಯ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ | Election 2023 | ಬಿಜೆಪಿಯವರು ಕರೆದರೆ ಹೋಗಬೇಡಿ, ನಳಿನ್‌ ಕುಮಾರ್‌ ಕಟೀಲ್‌ ಒಬ್ಬ ಜೋಕರ್‌: ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Acid attack: ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ಘಟನೆ ನಡೆದಿದೆ. ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ್ದಾನೆ.

VISTARANEWS.COM


on

Acid attack
Koo

ಬಾಗಲಕೋಟೆ: ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ವಿವಾಹಿತ ಪ್ರಿಯತಮೆಗೆ ಪ್ರಿಯಕರ ಆ್ಯಸಿಡ್ ಎರಚಿದ ಘಟನೆ ತಾಲೂಕಿನ ಗದ್ದನಕೇರಿ ಕ್ರಾಸ್ ಬಳಿ ನಡೆದಿದೆ. ಆ್ಯಸಿಡ್ ದಾಳಿಯಿಂದ (Acid attack) ಮಹಿಳೆಗೆ ಎಡಗಣ್ಣು, ಮುಖದ ಭಾಗ ಹಾಗೂ ದೇಹದ ವಿವಿಧ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ.

ಲಕ್ಷ್ಮಿ ಬಡಿಗೇರ (33) ಆ್ಯಸಿಡ್ ದಾಳಿಗೊಳಗಾದ ಮಹಿಳೆ. ಮೌನೇಶ್ ಪತ್ತಾರ ಆ್ಯಸಿಡ್ ಎರಚಿದ ಆರೋಪಿ. ಮೂರ್ತಿ ತಯಾರಿಕೆ ಕೆಲಸ‌ ಮಾಡುವ ಮೌನೇಶ್ ಹಾಗೂ ಲಕ್ಷ್ಮಿ ವಿಜಯಪುರ ನಗರದ ಮೂರನಕೇರಿ ಮೂಲದವರು. ಇಬ್ಬರೂ ಬೇರೆ ಬೇರೆಯವರನ್ನು ಮದುವೆಯಾಗಿದ್ದರು. ಆದರೆ, ಯಾವುದೇ ಡಿವೋರ್ಸ್ ಪಡೆಯದೇ ಸಹಜೀವನ ನಡೆಸುತ್ತಿದ್ದರು. ಹೀಗಿದ್ದರೂ ಲಕ್ಷ್ಮಿ ಬಡಿಗೇರ‌‌ ಮೇಲೆ ಪದೇಪದೆ ಮೌನೇಶ್ ಸಂಶಯಪಡುತ್ತಿದ್ದ. ಇದರಿಂದ‌‌ ಮೇಲಿಂದ ಮೇಲೆ‌ ಜಗಳವಾಗುತ್ತಿತ್ತು.

ಒಂದು ವಾರದ ಹಿಂದೆ ಮನೆ ಬಿಟ್ಟು ಹೋಗಿದ್ದ ಮೌನೇಶ್ ಸೋಮವಾರ ರಾತ್ರಿ‌ ಮನೆಗೆ ವಾಪಸ್ ಬಂದಿದ್ದ. ಈ ವೇಳೆ ಲಕ್ಷ್ಮಿ ಬಾಗಿಲು ತೆರೆದಿರಲಿಲ್ಲ. ಇದರಿಂದ‌ ಸಿಟ್ಟಿಗೆದ್ದ ಮೌನೇಶ್ ಕಿಟಕಿ ತೆಗೆದು ಆ್ಯಸಿಡ್ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಬಡಿಗೇರ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಯ ಎಂಟು ವರ್ಷದ ಮಗಳ ಮುಖಕ್ಕೂ ಅಲ್ಪ ಪ್ರಮಾಣದಲ್ಲಿ ಆ್ಯಸಿಡ್ ಸಿಡಿದಿದೆ. ಈ ಬಗ್ಗೆ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಅಪಾಯದಿಂದ ಮಹಿಳೆ ಪಾರಾಗಿದ್ದಾರೆ.

ಯುವತಿಯರ ಫೋಟೊ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನ ಬಂಧನ

ಬೆಂಗಳೂರು: ಯುವತಿಯರ ಫೋಟೋ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನನ್ನು ನಗರದ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯರ ಫೋಟೊಗಳನ್ನು ಆರೋಪಿ ಮಾರ್ಫ್‌ ಮಾಡುತ್ತಿದ್ದ. ಎಡಿಟ್‌ ಮಾಡಿದ ಫೋಟೊಗಳನ್ನು ಇನ್ಸ್ ಸ್ಟಾಗ್ರಾಮ್ ಮೂಲಕ ಶೇರ್ ಮಾಡುತ್ತಿದ್ದ.

ಇದನ್ನೂ ಓದಿ | Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೊವನ್ನು ಆರೋಪಿ ಮಾರ್ಫ್ ಮಾಡಿದ್ದ. ಈ ಬಗ್ಗೆ ಪೋಷಕರಿಂದ ಈಶಾನ್ಯ ವಿಭಾಗದ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಲಾಗಿತ್ತು. ತನಿಖೆ ನಡೆಸಿರುವ ಪೊಲೀಸರಿಂದ ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ‌ ಒಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಯಿಂದ ಮೂರು ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

Continue Reading

ಪ್ರಮುಖ ಸುದ್ದಿ

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Cab Service: ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು.

VISTARANEWS.COM


on

Cab service
Koo

ಬೆಂಗಳೂರು: ಆ್ಯಪ್ ಮೂಲಕ ಕಾರ್ಯಾಚರಿಸುವ ಕ್ಯಾಬ್ ಅಗ್ರಿಗೇಟರ್​ಗಳು (Cab Service) ಗ್ರಾಹಕರಿಂದ ಸಂಗ್ರಹಿಸುವ ಸೇವಾ ಶುಲ್ಕ ನಿಗದಿಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಆ್ಯಂಡ್​ ಬೆಂಚ್ ವರದಿ ಮಾಡಿದೆ. ಕ್ಯಾಬ್​ ಕಂಪನಿಗಳು ಗರಿಷ್ಠ ಶೇಕಡಾ 5ರಷ್ಟು ಸೇವಾ ಶುಲ್ಕ ಮಾತ್ರ ಸಂಗ್ರಹಿಬಹುದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಕ್ಯಾಬ್​​ಗಳನ್ನು ಬಳಸುವ ಗ್ರಾಹಕರಿಗೆ ಅನುಕೂಲವಾಗಲಿದೆ. ಮಿತಿ ಮೀರಿ ಶುಲ್ಕ ವಿಧಿಸುವ ಕಂಪನಿಗಳ ಯೋಜನೆಗೆ ಕಡಿವಾಣ ಬೀಳಲಿದೆ.

ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು. ಆದರೆ ಉಬರ್, ಓಲಾ ಮತ್ತು ರ್ಯಾಪಿಡೊದಂತಹ ರೈಡ್-ಹೆಯ್ಲಿಂಗ್ ಅಪ್ಲಿಕೇಶನ್ ಗಳು ಈ ಕ್ರಮವನ್ನು ಪ್ರಶ್ನಿಸಿದ್ದವು. ಶೇಕಡಾ 20 ರಷ್ಟು ಸಾಮಾನ್ಯ ದರ ವಿಧಿಸಲು ಅನುಮತಿ ನೀಡಬೇಕು ಮತ್ತು ಮೂಲ ದರದ ಜತೆಗೆ ಶೇಕಡಾ 20ರಷ್ಟು ಸರ್ಜ್​ ಪ್ರೈಸ್ ಅಥವಾ ದುಪ್ಪಟ್ಟು ಶುಲ್ಕ ವಿಧಿಸಲು ಅವಕಾಶ ನೀಡಬೇಕು ಎಂದು ಕೋರಿತ್ತು. ಈ ಎಲ್ಲ ಕಂಪನಿಗಳು ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕಾನೂನುಬಾಹಿರ, ನಿರಂಕುಶ ಮತ್ತು ತರ್ಕರಹಿತ ಎಂದು ವಾದಿಸಿದ್ದವು.

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

ನೋಟಿಸ್ ಅನ್ನು ನ್ಯಾಯಾಲಯವು ಜನವರಿ 2023 ರಲ್ಲಿ ತಡೆಹಿಡಿದಿತ್ತು. ಶೇಕಡಾ 10 ರ ಅನುಕೂಲಕರ ಶುಲ್ಕದೊಂದಿಗೆ ಅಗ್ರಿಗೇಟರ್​ಗಳು ಅಲ್ಪಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಸೋಮವಾರ, ನ್ಯಾಯಾಲಯವು ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು. ಈ ತೀರ್ಪಿನಿಂದ ಬೆಂಗಳೂರಿನ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Continue Reading

ಕರ್ನಾಟಕ

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Veer Savarkar flyover: ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Veer Savarkar flyover
Koo

ಬೆಂಗಳೂರು: ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ (Veer Savarkar flyover) ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ. ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್‌ ಸರ್ಕಾರದ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ. ಸಾರ್ವಕರ್ ಅವರನ್ನು ಅಪಮಾನಿಸುವ ಸಂದರ್ಭದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರದರ್ಶಿಸಿರುವ ಕಿಡಿಗೇಡಿಗಳು ಇಬ್ಬರೂ ರಾಷ್ಟ್ರಭಕ್ತರನ್ನು ಏಕಕಾಲದಲ್ಲಿ ಅಪಮಾನಿಸಿದ್ದಾರೆ. ಈ ಕೂಡಲೇ ವೀರ ಸಾವರ್ಕರ್ ಅವರನ್ನು ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬೆಂಗಳೂರಿನ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಂಗಳವಾರ ಮಧ್ಯಾಹ್ನ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿದ್ದರು. ಸಂಚಾರ ತಡೆ ನಡೆಸಿ ನಾಮಫಲಕಕ್ಕೆ ಮಸಿ ಬಳಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ | Love Case : ಪ್ರೀತಿಸಿದವಳೇ ಬೇಕೆಂದ ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ರಾ ಯುವತಿ ಕುಟುಂಬಸ್ಥರು!

ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ ಬಳಿದಿದ್ದ ಎನ್‌ಎಸ್‌ಯುಐ ಕಾರ್ಯಕರ್ತರು, ಬಳಿಕ ಸೇತುವೆಗೆ ʼಭಗತ್ ಸಿಂಗ್ ಮೇಲ್ಸೇತುವೆʼ ಹೆಸರಿನ ಬ್ಯಾನರ್ ಹಾಕಿದ್ದರು. ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ನಡುವೆ ಕಿತ್ತಾಟ ನಡೆದಿತ್ತು. ನಂತರ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಯಲಹಂಕದಲ್ಲಿ ಪ್ರತಿಭಟನೆ ನಡೆಸಿದ್ದರು.

Continue Reading

ಕರ್ನಾಟಕ

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Robbery Case: ಯಲ್ಲಾಪುರ ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Robbery Case Two accused arrested by yallapur police
Koo

ಯಲ್ಲಾಪುರ: ತಾಲೂಕಿನ ಅರಬೈಲ್‌ ಘಟ್ಟದಲ್ಲಿ ಕಾರನ್ನು ಅಡಗಟ್ಟಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆ ನಡೆಸಿ, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ದರೋಡೆ (Robbery Case) ಮಾಡಿದ್ದ ಆರೋಪಿಗಳನ್ನು ಯಲ್ಲಾಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಮೇ 23ರಂದು ರಾಜಸ್ಥಾನದ ಪಾಲಿ ಜಿಲ್ಲೆಯ ಸುರೇಶ ರಾವ್ ಹಿಮ್ಮತ್‌ ರಾಮಜೀರಾವ್ ಎಂಬುವವರು ತಮ್ಮ ಸ್ನೇಹಿತ ಸ್ನೇಹಿತ ಸಂಪತ್ ಸೊಲಂಕಿರವರೊಂದಿಗೆ ಮುಂಬೈದಿಂದ ಮಂಗಳೂರಿಗೆ ತೆರಳುತ್ತಿರುವಾಗ ಅಂಕೋಲಾ ಮಾರ್ಗದ ಅರಬೈಲ್ ಘಟ್ಟದಲ್ಲಿ ಬೇರೊಂದು ಕಾರಿನಲ್ಲಿ ಬಂದ 4 ಜನ ಅಪರಿಚಿತರು ಕಾರನ್ನು ಅಡ್ಡಗಟ್ಟಿ, ಕಾರಿನ ಎರಡು ಗ್ಲಾಸ್ ಒಡೆದು, 3 ಮೊಬೈಲ್‌ ಫೋನ್‌, ಕಾರಿನ ಕೀ ಕಸಿದುಕೊಂಡು, ನೀವು ಶಿಂಧೆ ಸಾಹೇಬರ ಕಾರಿಗೆ ಓವರಟೇಕ್ ಮಾಡಿಕೊಂಡು ಬಂದಿದ್ದೀರಿ ಎಂದು ಹೇಳಿ ಅವರಿಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿಕೊಂಡು ಹೋಗಿ, ಮರಳಿ ಹುಬ್ಬಳ್ಳಿ ರಸ್ತೆಗೆ ಕರೆತಂದು ರಸ್ತೆ ಬದಿಯಲ್ಲಿ ಇಳಿಸಿ, ಶಿಂಧೆ ಸಾಹೇಬರು ಹಿಂದೆ ಇದ್ದಾರೆ ನೀವು ಬಸ್ಸಿನಲ್ಲಿ ಹೋಗಿ ಎಂದು ಹೇಳಿ ಸುಲಿಗೆ ಮಾಡಿಕೊಂಡು ಹೋಗಿರುವ ಕುರಿತು ಯಲ್ಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೊಲೀಸರು, ದೊರೆತ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಸುರಜ ಸುಧಾಕರ ಚೌಹಾಣ (30) ಹಾಗೂ ರವೀಂದ್ರ ಭಜರಂಗ ಮದನಿ (31) ಎಂಬುವ ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಜಯಕುಮಾರ, ಡಿವೈಎಸ್ಪಿ ಎಂ.ಎಸ್ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಮೇಶ ಎಚ್. ಹನಾಪುರ ನೇತೃತ್ವದಲ್ಲಿ ಪಿಎಸ್‌ಐಗಳಾದ ಸಿದ್ದಪ್ಪ ಗುಡಿ, ವಿಜಯರಾಜ, ಎಎಸ್‌ಐ ಆನಂದ ಡಿ ಪಾವಸ್ಕರ ಹಾಗೂ ಸಿಬ್ಬಂದಿಗಳಾದ ಬಸವರಾಜ ಹಗರಿ, ರಾಮಾ ಪಾವಸ್ಕರ, ರಾಘವೇಂದ್ರ ಮೂಳೆ, ಸಂತೋಷ ಬಾಳೇರ, ಶೋಭಾ ನಾಯ್ಕ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Continue Reading
Advertisement
Bomb Threat
ಪ್ರಮುಖ ಸುದ್ದಿ9 mins ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ22 mins ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ25 mins ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ57 mins ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ58 mins ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ1 hour ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

MLA Belur Gopalakrishna latest statement in Hosnagara
ಶಿವಮೊಗ್ಗ1 hour ago

MLC Election: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ಖಚಿತ: ಬೇಳೂರು

Toyota Technical Training Institute students Excellent performance in India Skills Competition 2024
ಕರ್ನಾಟಕ1 hour ago

Toyota: ಇಂಡಿಯಾ ಸ್ಕಿಲ್ಸ್ ಕಾಂಪಿಟೇಷನ್ 2024; ಟಿಟಿಟಿಐ ವಿದ್ಯಾರ್ಥಿಗಳ ಉತ್ತಮ ಸಾಧನೆ

World Menstrual Hygiene Day in Hosapete
ಆರೋಗ್ಯ1 hour ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಋತುಚಕ್ರ ನೈರ್ಮಲ್ಯ ದಿನಾಚರಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು11 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌