ರಾಷ್ಟ್ರೀಯ ಮಟ್ಟದ ಕಾಂಪಿಟೇಟಿವ್ ಎಕ್ಸಾಮಿನೇಶನ್ ಕಮ್ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ Vistara News
Connect with us

ಉತ್ತರ ಕನ್ನಡ

ರಾಷ್ಟ್ರೀಯ ಮಟ್ಟದ ಕಾಂಪಿಟೇಟಿವ್ ಎಕ್ಸಾಮಿನೇಶನ್ ಕಮ್ ಸ್ಕಾಲರ್‌ಶಿಪ್ ಪರೀಕ್ಷೆಯಲ್ಲಿ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

Scholarship Exam: ನ್ಯಾಷನಲ್ ಲೆವೆಲ್ ಕಾಂಪಿಟೇಟಿವ್ ಎಕ್ಸಾಮಿನೇಶನ್ ಕಮ್ ಸ್ಕಾಲರ್‌ಶಿಪ್ ವತಿಯಿಂದ ರಾಷ್ಟ್ರಮಟ್ಟದ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಒಟ್ಟು 96 ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಇವರಲ್ಲಿ ಸೆಂಟ್ರಲ್‌ ಸ್ಕೂಲ್‌ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

VISTARANEWS.COM


on

Scholarship Exam honnavar central school
ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು.
Koo

ಹೊನ್ನಾವರ: ನ್ಯಾಷನಲ್ ಲೆವೆಲ್ ಕಾಂಪಿಟೇಟಿವ್ ಎಕ್ಸಾಮಿನೇಶನ್ ಕಮ್ ಸ್ಕಾಲರ್‌ಶಿಪ್ (Scholarship Exam) ವತಿಯಿಂದ ನಡೆಸಲಾಗಿದ್ದ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಪಟ್ಟಣದ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ತಾಲೂಕಿನ ಮಲ್ನಾಡ್ ಪ್ರೋಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಸೆಂಟ್ರಲ್ ಶಾಲೆಯ ಏಳನೆಯ ತರಗತಿ ವಿದ್ಯಾರ್ಥಿ ಜಾನ್ವಿ ವಿಜಯ ನಾಯ್ಕ ಎರಡನೇ ರ‍್ಯಾಂಕ್, ಹತ್ತನೇ ತರಗತಿ ವಿದ್ಯಾರ್ಥಿ ಪಿ.ವಿವೇಕ್ ಮೂರನೇ ರ‍್ಯಾಂಕ್,
ಮೂರನೇ ತರಗತಿ ವಿದ್ಯಾರ್ಥಿ ಆರುಷ್ ಗಣೇಶ ಭಟ್ ಮೂರನೇ ರ‍್ಯಾಂಕ್ ಮತ್ತು ಚಿನ್ಮಯಿ ಹೆಗಡೆ ಚಿನ್ನದ ಪದಕವನ್ನು ಪಡೆದಿದ್ದಾರೆ.

ಇದನ್ನೂ ಓದಿ: Cyber Fraud: ನಿವೃತ್ತ ನ್ಯಾಯಾಧೀಶರಿಗೇ ಆನ್‌ಲೈನ್‌ ಮೂಲಕ 1.67 ಲಕ್ಷ ರೂ. ವಂಚಿಸಿದ ಕಳ್ಳರು

ಒಟ್ಟು 96 ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದು, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಚಿನ್ನದ ಪದಕ ಮತ್ತು ಪ್ರಮಾಣ ಪತ್ರವನ್ನು ಪಡೆದಿದ್ದಾರೆ. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣ ಪತ್ರವನ್ನು ನೀಡಲಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಎಂ.ಪಿ.ಇ. ಸೊಸೈಟಿಯ ಆಡಳಿತ ಮಂಡಳಿ, ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಉತ್ತರ ಕನ್ನಡ

Karwar News: ಕಾರವಾರದ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗಪ್ಪ ಭೋವಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ

Karwar News: 2022ನೇ ಸಾಲಿನಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಿಶೇಷ ಕ್ರಮ ಕೈಗೊಂಡು ಜನ ಮೆಚ್ಚುಗೆ ಗಳಿಸಿದ ಪಿಎಸ್‌ಐ ನಾಗಪ್ಪ ಭೋವಿ ಅವರು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದಾರೆ.

VISTARANEWS.COM


on

Edited by

PSI Nagappa Bhovi karwar Chief Ministers Medal
ಪಿಎಸ್‌ಐ ನಾಗಪ್ಪ ಭೋವಿ.
Koo

ಕಾರವಾರ: ರಾಜ್ಯದ 42 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ 2022ನೇ ಸಾಲಿನ ಮುಖ್ಯಮಂತ್ರಿ ಪದಕ (Chief Minister’s Medal) ಘೋಷಿಸಲಾಗಿದ್ದು, ನಗರದ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗಪ್ಪ ಭೋವಿ ಅವರನ್ನೂ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ಎಂ.ಎ ಕನ್ನಡ ವ್ಯಾಸಂಗ ಮಾಡಿರುವ ನಾಗಪ್ಪ, ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿ ಜಿಲ್ಲೆಯ ಪಾಮನಕಲ್ಲೂರಿನವರು. 2015ರಲ್ಲಿ ಕರ್ತವ್ಯಕ್ಕೆ ಸೇರ್ಪಡೆಯಾದ ಅವರು, ಕಲಬುರಗಿಯ ಕುಂಚಾವರ, ಯಡ್ರಾಮಿ, ದಾಂಡೇಲಿ ನಗರ, ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಕಾರವಾರ ನಗರ ಸಂಚಾರ ಠಾಣೆಯ ಪಿಎಸ್‌ಐ ಆಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

2022ನೇ ಸಾಲಿನಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟಲು ವಿಶೇಷ ಕ್ರಮ ಕೈಗೊಂಡು ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 10,000ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿ, ಅಂದಾಜು 52 ಲಕ್ಷಕ್ಕೂ ಹೆಚ್ಚು ದಂಡ ವಸೂಲಿ, ಹಿಟ್ ಅಂಡ್ ರನ್ ಪ್ರಕರಣಗಳ ಪತ್ತೆ, ನಗರದಲ್ಲಿ ವಾಹನಗಳ ನೂತನ ಪಾರ್ಕಿಂಗ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅವರು ಪ್ರಯತ್ನ ನಡೆಸಿ ಮೆಚ್ಚುಗೆಗೆ ಪಾತ್ರರಾಗಿದ್ದರು.

ಸಿಬ್ಬಂದಿಗಳಿಗಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ 13 ಸಂಚಾರ ಪೊಲೀಸ್ ಚೌಕಿಗಳು ಮತ್ತು 55 ಬ್ಯಾರಿಕೇಡ್‌ಗಳ ನಿರ್ಮಾಣ ಮತ್ತು ಠಾಣಾ ಮರು ನವೀಕರಣ ಕಾರ್ಯ, ರಸ್ತೆ ಅಪಘಾತಗಳನ್ನು ತಡೆಯಲು ವಿನೂತನ ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳ ಆಯೋಜನೆ, ಏಕ ಗವಾಕ್ಷಿ ಯೋಜನೆಯಡಿಯಲ್ಲಿ ಸಾರ್ವಜನಿಕ ವಾಹನ ದಾಖಲೆಗಳ ತಿದ್ದುಪಡಿ ಅಭಿಯಾನ ನಡೆಸಿದ್ದರು.

ಇದನ್ನೂ ಓದಿ: ವೃತ್ತಿಪರ ಭಿಕ್ಷುಕನಾಗಿದ್ದರೂ ಹೆಂಡತಿಗೆ ಜೀವನಾಂಶ ನೀಡಲೇಬೇಕು: ಹೈಕೋರ್ಟ್

‘ಹೆಲ್ಮೆಟ್ ಧರಿಸಿ – ಜೀವ ಉಳಿಸಿ’ ಜಾಗೃತಿ ಜಾಥಾ ಅಭಿಯಾನ, ಶಾಲಾ- ಕಾಲೇಜುಗಳಲ್ಲಿ ರಸ್ತೆ ಅಪಘಾತ ತಡೆ ಕುರಿತು ವಿಶೇಷ ಜಾಗೃತಿ ಉಪನ್ಯಾಸ, ಸ್ಟೂಡೆಂಟ್ ಪೊಲೀಸ್ ಕೆಡೆಟ್‌ಗಳಿಗೆ ರಸ್ತೆ ಸುರಕ್ಷತಾ ಜಾಗೃತಿ ಉಪನ್ಯಾಸ, ‘ನನ್ನನ್ನು ಕ್ಷಮಿಸಿ’ ಹೆಲ್ಮೆಟ್ ಜಾಗೃತಿ ಅಭಿಯಾನ, ‘ರಸ್ತೆ ಅಪಘಾತ ಮುಕ್ತ ಭಾರತಕ್ಕಾಗಿ ನಮ್ಮೊಂದಿಗೆ ಕೈ ಜೋಡಿಸಿ’ ಸಹಿ ಸಂಗ್ರಹ ಅಭಿಯಾನ ಮತ್ತು ಜಾಗೃತಿ ಜಾಥಾ, ಆಟೋ/ಲಘು/ಭಾರಿ/ಆಂಬುಲೆನ್ಸ್/ ಟೂರ್ಸ್ ಮತ್ತು ಟ್ರಾವೆಲ್ಸ್/ಸಾರಿಗೆ ಇಲಾಖೆ/ ವಾಹನ ಚಾಲಕರಿಗೆ ರಸ್ತೆ ಅಪಘಾತಗಳ ಜಾಗೃತಿ ಕಾರ್ಯಕ್ರಮ, ಆಟೋ ಚಾಲಕರಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ, ‘ರನ್ ಫಾರ್ ರೋಡ್ ಸೇಫ್ಟಿ’ ಜಾಗೃತಿ ಅಭಿಯಾನ ಹೀಗೆ ರಸ್ತೆ ಅಪಘಾತ ತಡೆ ಮತ್ತು ಸಾರ್ವಜನಿಕ ಸಂಚಾರ ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷ ಮತ್ತು ಪ್ರಾಮಾಣಿಕ ಪ್ರಯತ್ನ ನಡೆಸಿರುವ ಅವರು ಈ ಸಾಲಿನ ಸಿಎಂ ಮೆಡಲ್‌ಗೆ ಆಯ್ಕೆಯಾಗಿದ್ದಾರೆ.

ಕೇವಲ ಪೊಲೀಸ್ ಆಗಿರದೆ, ಸಾಹಿತ್ಯ ಸೇವೆಯಲ್ಲೂ ತೊಡಗಿಸಿಕೊಂಡಿರುವ ನಾಗಪ್ಪ, ಪುಸ್ತಕಗಳನ್ನೂ ಬರೆದಿದ್ದಾರೆ. ಇವರ ಸಾಹಿತ್ಯ ಸೇವೆಗೂ ಅನೇಕ ಪ್ರಶಸ್ತಿಗಳು ದೊರೆತಿವೆ. ಏಪ್ರಿಲ್ 2ರ ಪೊಲೀಸ್ ಧ್ವಜ ದಿನಾಚರಣೆಯ ದಿನದಂದು ಸಿಎಂ ಮೆಡಲ್ ಪ್ರದಾನ ಮಾಡಲಾಗುತ್ತದೆ.

ಇದನ್ನೂ ಓದಿ: Karnataka Elections 2023 : ಕಲಘಟಗಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ 13 ಆಕಾಂಕ್ಷಿಗಳು, ಹಾಲಿ ಶಾಸಕ ನಿಂಬಣ್ಣವರ್‌ ಔಟ್‌?

Continue Reading

ಉತ್ತರ ಕನ್ನಡ

Karnataka Election 2023: ಜಿಲ್ಲಾದ್ಯಂತ 25 ಚೆಕ್‌ಪೋಸ್ಟ್‌ ನಿರ್ಮಾಣ; ಅಕ್ರಮ ಸಾಗಾಟಗಳ ಮೇಲೆ ಹೆಚ್ಚಿನ ನಿಗಾ: ಪ್ರಭುಲಿಂಗ ಕವಳಿಕಟ್ಟಿ

Karnataka Election 2023: ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾಮಗಾರಿಗಳ ಕೆಲಸದ ಮೇಲೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭುಲಿಂಗ ಕವಳಿಕಟ್ಟಿ ಹೇಳಿದ್ದಾರೆ.

VISTARANEWS.COM


on

Edited by

DC Prabhulinga Kavalikatti karwar
ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ .
Koo

ಕಾರವಾರ: “ಚುನಾವಣಾ ನೀತಿ ಸಂಹಿತೆ (Karnataka Election 2023) ಜಾರಿಗೆ ಎರಡು ವಾರಗಳ ಮೊದಲೇ ಪ್ರಾಥಮಿಕ ಹಂತದ ಚುನಾವಣಾ ಕಾರ್ಯಗಳನ್ನು ಜಿಲ್ಲಾಡಳಿತ ಆರಂಭಿಸಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ಸುಮಾರು 69 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ” ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈಗಾಗಲೇ ಜಿಲ್ಲಾದ್ಯಂತ ಇದ್ದ ರಾಜಕೀಯ ವ್ಯಕ್ತಿಗಳ ಬ್ಯಾನರ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಗಿದೆ. ಇಂದಿನಿಂದ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ರಾಜಕೀಯ ವ್ಯಕ್ತಿಗಳ ಫೋಟೊಗಳಿರುವ ಬ್ಯಾನರ್‌ಗಳು ಹಾಗೂ ಸರ್ಕಾರದ ವೆಬ್‌ಸೈಟ್‌ಗಳಿಂದ ಅದನ್ನು ಕೂಡಲೇ ತೆರವುಗೊಳಿಸಲಾಗುವುದು” ಎಂದರು.

ಇದನ್ನೂ ಓದಿ: Rajkummar Rao: ಶಾರುಖ್ ಖಾನ್ ವ್ಯಕ್ತಿತ್ವ ಕೊಂಡಾಡಿದ ನಟ ರಾಜಕುಮಾರ್ ರಾವ್, ತಮ್ಮ ತಾಯಿಯ ಬಗ್ಗೆ ಹೇಳಿದ್ದೇನು?

ಈಗಾಗಲೇ ಜಿಲ್ಲಾದ್ಯಂತ 25 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದು ಚುನಾವಣೆಯಲ್ಲಿ ಆಮಿಷ ಒಡ್ಡುವ ನಿಟ್ಟಿನಲ್ಲಿ ಹಣ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತದೆ. ಹೀಗಾಗಿ ವಾಹನಗಳ ಮೇಲೆ ನಿಗಾವಹಿಸಲಾಗಿದೆ. ಈಗಾಗಲೇ ವಿವಿಧ ಪ್ರಕರಣಗಳಲ್ಲಿ ಗೋವಾದಿಂದ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 40 ಲಕ್ಷ ರೂ. ಮೌಲ್ಯದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಪ್ರಕರಣಗಳಲ್ಲಿ ಒಟ್ಟು 10 ಲಕ್ಷ ರೂ. ದಾಖಲೆರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸಲಾಗುತ್ತಿದ್ದ 7.5 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ಜಪ್ತಿಪಡಿಸಿಕೊಳ್ಳಲಾಗಿದೆ. ಉಳಿದಂತೆ ಗಾಂಜಾ, ಚರಸ್‌ನಂತಹ ಮಾದಕ ವಸ್ತುಗಳನ್ನೂ ಭಾರೀ ಪ್ರಮಾಣದಲ್ಲಿ ಪತ್ತೆ ಹಚ್ಚಿದ್ದು ಒಟ್ಟು 69 ಲಕ್ಷ ರೂ. ಮೌಲ್ಯದ ಅಕ್ರಮವಾಗಿ ಸಾಗಿಸುತ್ತಿದ್ದ ವಸ್ತುಗಳನ್ನು ಈಗಾಗಲೇ ಜಪ್ತಿಪಡಿಸಿಕೊಳ್ಳಲಾಗಿದೆ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಇದನ್ನೂ ಓದಿ: Anjanadri Hill: 101 ಕೆಜಿ ಜೋಳದ ಚೀಲ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ ಹನುಮನ ಭಕ್ತ

“ಸರ್ಕಾರದಿಂದ ಜಾರಿಯಾದ ಕಾಮಗಾರಿಗಳಲ್ಲಿ ಆರಂಭವಾಗಿರುವ, ಅನುಮೋದನೆಯಾಗಿ ಪ್ರಾರಂಭವಾಗದ ಹಾಗೂ ಅನುಮೋದನೆಯಾಗದ ಕಾಮಗಾರಿಗಳ ಪಟ್ಟಿಯನ್ನು ಮಾಡಲಾಗುತ್ತಿದೆ. ಇದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ಕಾಮಗಾರಿಗಳ ಕೆಲಸದ ಮೇಲೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಮಾದ್ಯಮಗಳ ಮೇಲೂ ನಿಗಾ ಇರಿಸಲಾಗುತ್ತಿದ್ದು ಪ್ರಕಟವಾಗುವ ಜಾಹೀರಾತುಗಳು ಹಾಗೂ ಸುದ್ದಿಗಳಿಂದ ನೀತಿ ಸಂಹಿತೆ ಉಲ್ಲಂಘನೆಯಾಗುವಂತೆ ಇದ್ದಲ್ಲಿ ಅಂಥವುಗಳ ಮೇಲೂ ಕ್ರಮ ಕೈಗೊಳ್ಳಲಾಗುವುದು” ಎಂದರು.

Continue Reading

ಉತ್ತರ ಕನ್ನಡ

Karwar News: ಗೋವಾ ಮದ್ಯ ಅಕ್ರಮ ಸಾಗಾಟ; ಆರೋಪಿ ಸಹಿತ 15.52 ಲಕ್ಷ ಮೌಲ್ಯದ ಸ್ವತ್ತು ವಶ

Karwar News: ಅಬಕಾರಿ ಹಾಗೂ ವಿಚಕ್ಷಣ ದಳದ ಸಿಬ್ಬಂದಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಆಂಧ್ರ ಪ್ರದೇಶ ಮೂಲದ ಕ್ರೂಜರ್ ವಾಹನದಲ್ಲಿ ಅಕ್ರಮ ಗೋವಾ ಮದ್ಯ ಪತ್ತೆಯಾಗಿದೆ.

VISTARANEWS.COM


on

Edited by

Goa liquor karwar Majali Check Post
ಅಬಕಾರಿ ಹಾಗೂ ವಿಚಕ್ಷಣ ದಳದ ಸಿಬ್ಬಂದಿ ವಶಪಡಿಸಿಕೊಂಡ ಗೋವಾ ಮದ್ಯ ಹಾಗೂ ಆರೋಪಿ.
Koo

ಕಾರವಾರ: ತಾಲೂಕಿನ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ (Majali Check Post) ಕ್ರೂಸರ್ ವಾಹನದಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ಹಾಗೂ ರಾಜ್ಯ ವಿಚಕ್ಷಣ ದಳ ದಾಳಿ ನಡೆಸಿ ಸುಮಾರು 15.52 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಜಪ್ತಿಪಡಿಸಿಕೊಂಡಿದ್ದು, ಒಬ್ಬ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆಂಧ್ರ ಪ್ರದೇಶದ ಮೇದಕ್ ಜಿಲ್ಲೆಯ ಬಗೀಲಿ ಅಜಯ ಗೌಡ ಬಂಧಿತ ಆರೋಪಿ. ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಅದರಂತೆ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಹಾಗೂ ವಿಚಕ್ಷಣ ದಳದ ಸಿಬ್ಬಂದಿ ವಾಹನಗಳನ್ನು ಪರಿಶೀಲನೆ ನಡೆಸುತ್ತಿದ್ದ ವೇಳೆ ಆಂಧ್ರಪ್ರದೇಶ ಮೂಲದ ಕ್ರೂಸರ್ ವಾಹನದಲ್ಲಿ ಅಕ್ರಮ ಗೋವಾ ಮದ್ಯ ಪತ್ತೆಯಾಗಿದೆ.

ಸುಮಾರು 17.5 ಲೀಟರ್ ಗೋವಾ ಮದ್ಯ, 3.75 ಲೀಟರ್ ಗೋವಾ ಫೆನ್ನಿ ಹಾಗೂ 3.75 ಲೀಟರ್ ಗೋವಾ ವೈನ್ ಪತ್ತೆಯಾಗಿದ್ದು ಇವುಗಳ ಅಂದಾಜು ಮೌಲ್ಯ 52 ಸಾವಿರ ರೂ. ಆಗಿದೆ. ಈ ವೇಳೆ ಅಕ್ರಮ ಮದ್ಯ ಸಾಗಾಟಕ್ಕೆ ಬಳಕೆ ಮಾಡಲಾದ 15 ಲಕ್ಷ ರೂ. ಮೌಲ್ಯದ ಕ್ರೂಸರ್ ವಾಹನ ಸೇರಿ ಒಟ್ಟು 15.52 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: High Court order: ತುಮಕೂರು ಗ್ರಾಮಾಂತರ ಜೆಡಿಸ್‌ ಶಾಸಕ ಗೌರಿಶಂಕರ್‌ ಶಾಸಕತ್ವದಿಂದ ಅನರ್ಹ: ಕೋರ್ಟ್‌ ಆದೇಶ

ಅಬಕಾರಿ ಉಪ ನಿರೀಕ್ಷಕ ಪಿ.ಕೆ. ಹಳದನಕರ ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಅಕ್ರಮ ಸಾಗಾಟದಾರರಿಗೆ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸಿರುವ ಸಂದೇಶ ರವಾನಿಸಿದ್ದಾರೆ.

Continue Reading

ಉತ್ತರ ಕನ್ನಡ

Banavasi News: ಏ.1 ರಂದು ಬನವಾಸಿಯ ಮಹಾಸ್ಯಂದನ ರಥೋತ್ಸವ; ಭರದಿಂದ ಸಾಗಿದೆ ರಥ ಕಟ್ಟುವ ಕಾರ್ಯ

Banavasi News: ಶ್ರೀ ಮಧುಕೇಶ್ವರ ದೇವಸ್ಥಾನದ ಜಾತ್ರೆ ಸಮೀಪಿಸಿದ್ದು, ಮಹಾರಥ ಕಟ್ಟುವ ಕಾರ್ಯವು ಆರಂಭವಾಗಿದೆ. ಗೌಡ್ರ ಕುಟುಂಬವು 100 ವರ್ಷಗಳಿಂದ ಈ ಕಾಯಕವನ್ನು ಮಾಡಿಕೊಂಡು ಬಂದಿದ್ದು, ಸಿದ್ಧತೆಯಲ್ಲಿ ತೊಡಗಿಕೊಂಡಿದೆ.

VISTARANEWS.COM


on

Edited by

Mahasyandana Rathotsava Banavasi Madhukeshwara Temple
ಜಾತ್ರೆಗೆ ಸಿದ್ಧವಾಗುತ್ತಿರುವ ರಥ.
Koo

ಸುಧೀರ್ ನಾಯರ್, ಬನವಾಸಿ
ಐತಿಹಾಸಿಕ ಬನವಾಸಿಯ ಮಹಾಸ್ಯಂದನ ರಥೋತ್ಸವ (Mahasyandana Rathotsava) ಏ.1 ಹಾಗೂ ಏ.2 ರಂದು ಸಡಗರದಿಂದ ಜರುಗಲಿದೆ. ಈ ಹಿನ್ನೆಲೆಯಲ್ಲಿ ತೇರು ಕಟ್ಟುವ ಕಾರ್ಯ ಆರಂಭವಾಗಿದೆ.

ಏ.1 ರಂದು ಸಂಜೆ ಗಜ ಯಂತ್ರೋತ್ಸವ (ಹೂವಿನ ತೇರು) ನಡೆಯಲಿದೆ. ಏ.2ರಂದು ಮುಂಜಾನೆ ಶ್ರೀ ಉಮಾ ಮಧುಕೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಿ ಭಕ್ತರಿಗೆ ದರ್ಶನಕ್ಕಾಗಿ ಅವಕಾಶ ನೀಡಲಾಗುತ್ತದೆ. ರಾತ್ರಿ 12 ಗಂಟೆ ರಥೋತ್ಸವ ನಡೆಯಲಿದೆ. 416 ವರ್ಷಗಳ ಇತಿಹಾಸ ಹೊಂದಿರುವ ಈ ಮಹಾ ರಥೋತ್ಸವಕ್ಕೆ ರಾಜ್ಯದ ಭಕ್ತರು ಮಾತ್ರವಲ್ಲದೇ ಹೊರ ರಾಜ್ಯದಿಂದಲೂ ಆಗಮಿಸಿ ಸಂಭ್ರಮಿಸುತ್ತಾರೆ.

ಇದನ್ನೂ ಓದಿ: Jal Jeera Benefits: ಬೇಸಿಗೆಯಲ್ಲಿ ಕುಡಿದು ನೋಡಿ ಜಲ್‌ಜೀರಾ ನೀರು

ಇಂತಹ ಜಾತ್ರೆಯ ಸಮಯ ರಥೋತ್ಸವಕ್ಕೆ ಕಳೆ ನೀಡುವುದು ಸಿಂಗಾರಗೊಂಡ ತೇರು. ವಿವಿಧ ಬಣ್ಣದ ಪತಾಕೆಗಳಿಂದ ಕಂಗೊಳಿಸುವ ತೇರು ಕಟ್ಟುವುದು ಮತ್ತು ಬಿಚ್ಚುವುದು ಒಂದು ಕಲೆ. ತೇರು ಸಿಂಗಾರ ನೋಡಲೆಂದೇ ಭಕ್ತರು ಜಾತ್ರೆಗೆ ಆಗಮಿಸುತ್ತಾರೆ. ಭಕ್ತಿ-ಭಾವಗಳ ಐತಿಹಾಸಿಕ ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಎಳೆಯುವ ಮಹಾರಥ ಕಟ್ಟುವುದು ಗಮನ ಸೆಳೆಯುತ್ತದೆ. ಇಲ್ಲಿಯ ರಥ ಕಟ್ಟುವ ಗೌಡರ ಕುಟುಂಬ ವಿಶಿಷ್ಟವಾಗಿ ಕಂಡು ಬರುತ್ತದೆ.

ಸಾಂಘಿಕವಾಗಿ ಅನಾದಿ ಕಾಲದಿಂದ ನಡೆದುಕೊಂಡು ಬಂದಿರುವ ಸಂಪ್ರದಾಯಕ್ಕೆ ಒಂದಿನಿತೂ ಚ್ಯುತಿ ಬಾರದಂತೆ ಈ ಕುಟುಂಬವೂ ಮಧುಕೇಶ್ವರ ದೇವರ ರಥ ಕಟ್ಟುವ ಕಾರ್ಯ ನಡೆಸುತ್ತಾ ಬಂದಿದೆ. ಹದಿನೈದು ದಿನಗಳ ಕಾಲ ತಮ್ಮ ನಿತ್ಯ ಕಾಯಕಕ್ಕೆ ರಜೆ ಹಾಕಿ ರಥ ಕಟ್ಟುವ ಕಾಯಕವೂ ನೂರಾರು ವರ್ಷಗಳಿಂದ ನಡೆಯುತ್ತಾ ಬಂದಿದೆ.

ದೊಡ್ಡ ವ್ಯಾಸದ ಸುತ್ತಳತೆಯ ಈ ಮಹಾಸ್ಯಂದನ ರಥವನ್ನು ಹೋಳಿ ಹುಣ್ಣಿಮೆ ಆಚರಿಸಿ ರಂಗ ಪಂಚಮಿಯ ದಿವಸ ಗೂಟ ಪೂಜೆ ನೆರವೇರಿಸಿ ರಥ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ. ಅಂದಿನಿಂದ ಈ ಕುಟುಂಬದ ನಾಲ್ಕೈದು ಮಂದಿ ರಥ ನಿರ್ಮಾಣ ಕೆಲಸಕ್ಕೆ ಹಾಜರಾಗುತ್ತಾರೆ. ಮರದಿಂದ ನಿರ್ಮಿತವಾದ ಮಹಾರಥ ತಳ ಭಾಗದಿಂದ ಚಕ್ರ ಸಹಿತ ಸುಭದ್ರವಾಗಿದ್ದು, 25 ಅಡಿ ಎತ್ತರ ಹೊಂದಿದೆ. ಪ್ರತಿ ವರ್ಷ ರಥೋತ್ಸವದ ಸಮಯದಲ್ಲಿ ಮೇಲ್ಭಾಗ ರೀಪುಗಳ ಸಹಿತ ಕತ್ತದ ಹುರಿಯಿಂದ ರಥವನ್ನು ಎತ್ತರಿಸುತ್ತಾ ಹೋಗುತ್ತಾರೆ. 7 ನೆಲೆಗಳನ್ನು ನಿರ್ಮಾಣ ಮಾಡಿ 10 ಅಡಿ ಎತ್ತರದ ಗೋಪುರ, 6 ಅಡಿ ಎತ್ತರದ ಕಳಶ ಇಟ್ಟು ಸುಮಾರು 75 ಅಡಿಗಳಷ್ಟು ಎತ್ತರದ ಮಹಾರಥವನ್ನು ಕಟ್ಟಲಾಗುತ್ತದೆ. ಈ ಮನೆತನದ ಮಹಿಳೆಯರು ಸಹ ರಥದಲ್ಲಿ ಅಳವಡಿಸುವ ಪತಾಕೆ ಸಜ್ಜುಗೊಳಿಸಿ ತಮ್ಮ ಸೇವೆಯನ್ನು ನೀಡುತ್ತಿರುವುದು ವಿಶೇಷವಾಗಿದೆ.

ಇದನ್ನೂ ಓದಿ: Google: ಗೂಗಲ್ 1337 ಕೋಟಿ ರೂ. ದಂಡ, 30 ದಿನದಲ್ಲಿ ಪಾವತಿಸಲು ನ್ಯಾಯಮಂಡಳಿ ಆದೇಶ!

ಪಾರಂಪರಿಕವಾಗಿ ರಥ ಕಟ್ಟುವ ಕಾರ್ಯಕ್ಕೆ ಗೌರವ ಸಂಭಾವನೆ, ತೆಂಗಿನ ಕಾಯಿ, ಅಕ್ಕಿ, ಬೆಲ್ಲ ನೀಡಲಾಗುತ್ತದೆ. ರಥೋತ್ಸವದ ಸಂದರ್ಭದಲ್ಲಿ ರಥವನ್ನು ಎಳೆಯುವಾಗ ಮಟ್ಟು ಹಾಕುವ ಜವಾಬ್ದಾರಿಯನ್ನು ಇವರೇ ನಿರ್ವಹಿಸುತ್ತಾರೆ. ಆಧುನಿಕ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಪಾರಂಪರಿಕ ವೈಶಿಷ್ಟ್ಯಗಳ ಸಂಪ್ರದಾಯ ಮುಂದುವರಿಯುತ್ತದೆ ಎಂಬುದಕ್ಕೆ ಇವೆಲ್ಲ ಸಾಕ್ಷಿಯಾಗಿದೆ.

“ನಮ್ಮ ಹಿರಿಯರು ಆರಂಭಿಸಿದ ಈ ರಥ ಕಟ್ಟುವ ಕಾಯಕವನ್ನು ನಾವು ಅವರಿಂದ ಕಲಿತು, ರಥ ಕಟ್ಟುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇವೆ. ನಾನು ನಮ್ಮ ಮನೆತನದ ಸದಸ್ಯರ ಸಹಕಾರದಿಂದ ಸುಮಾರು 50 ವರ್ಷಗಳಿಂದ ರಥ ಕಟ್ಟುವ ಕೆಲಸ ಮಾಡುತ್ತಾ ಬಂದಿದ್ದೇನೆ. ರಥ ಕಟ್ಟುವ ಕಾರ್ಯ ನಮ್ಮ ಪಾಲಿನ ಭಾಗ್ಯವಾಗಿದೆ” ಎನ್ನುತ್ತಾರೆ ರಥ ಕಟ್ಟುವ ಗೌಡ್ರು ಮನೆತನದ ಹಿರಿಯ ಸಹೋದರ ಮಧುಕೇಶ್ವರ.

ಇದನ್ನೂ ಓದಿ: IPL 2023: ಪಂತ್​ ಬದಲು ಡೆಲ್ಲಿ ಪಾಳಯ ಸೇರಿದ 20 ವರ್ಷದ ಬಂಗಾಳ ಕ್ರಿಕೆಟಿಗ; ಯಾರಿದು?

“ನಾನು ನಮ್ಮ ಸಹೋದರ ಸುಮಾರು 50 ವರ್ಷಗಳಿಂದ ರಥ ಕಟ್ಟುವ ಕಾರ್ಯ ಮಾಡುತ್ತಾ ಬಂದಿದ್ದೇವೆ. ಮುಂದೆ ನಮ್ಮ ಮಕ್ಕಳಿಗೂ ಈ ಕಲೆಯನ್ನು ಕಲಿಸಿ ಮುಂದಿನ ಪೀಳಿಗೆಗೂ ಪರಿಚಯಿಸುತ್ತೇವೆ” ಎಂದು ರಥ ಕಟ್ಟುವ ಗೌಡ್ರ ಮನೆತನದ ಕಿರಿಯ ಸಹೋದರ ನರಸಿಂಹ.

Continue Reading
Advertisement
Man commits suicide after wife commits suicide in Srirangapatna
ಕರ್ನಾಟಕ2 hours ago

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Amid wedding rumours, AAP MP Raghav Chadha picks up Parineeti Chopra from Delhi airport
ದೇಶ3 hours ago

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Do you know how much marks Virat Kohli got in iron pea maths?
ಕ್ರಿಕೆಟ್3 hours ago

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

Manmohan Lalwani says Solar powered system best tool to cross digital gap
ಕರ್ನಾಟಕ3 hours ago

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

Four farmers seriously injured in lathi charge by forest department personnel
ಕರ್ನಾಟಕ3 hours ago

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Bengaluru company to gift ChatGPT Plus subscription to employees after seeing rise in productivity
ಕರ್ನಾಟಕ3 hours ago

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

No prejudice about Hindi, such imposition is not worth it
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

Google Layoffs: Some employees may get up to Rs 2.60 crore in severance pay
ದೇಶ4 hours ago

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Former bowler of Rajasthan Royals who joined Chennai Super Kings
ಕ್ರಿಕೆಟ್4 hours ago

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಕರ್ನಾಟಕ5 hours ago

Prof. Madhav Kulkarni: ಖ್ಯಾತ ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ8 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ14 hours ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 weeks ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

ಟ್ರೆಂಡಿಂಗ್‌

error: Content is protected !!