Seabird Naval Base : ಸೀಬರ್ಡ್‌ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತಾರತಮ್ಯ ನಿವಾರಿಸಲು ಸಿಎಂ ಸೂಚನೆ - Vistara News

ಉತ್ತರ ಕನ್ನಡ

Seabird Naval Base : ಸೀಬರ್ಡ್‌ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತಾರತಮ್ಯ ನಿವಾರಿಸಲು ಸಿಎಂ ಸೂಚನೆ

Seabird Naval Base : ಸಮಪ್ರಮಾಣದ ಪರಿಹಾರ, ಮನೆಗೊಂದು ಉದ್ಯೋಗ, ಸೈಟ್‌ಗಾಗಿನ ನಿರಾಶ್ರಿತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಈ ಕುರಿತಂತೆ ಸಭೆ ನಡೆಸಿ ಚರ್ಚಿಸುವಂತೆ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲರಿಗೆ ಸೂಚಿಸಿದ್ದಾರೆ.

VISTARANEWS.COM


on

Seabird Naval Base meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾರವಾರದಲ್ಲಿ ಸೀಬರ್ಡ್‌ ನೌಕಾನೆಲೆಯು (Seabird Naval Base) ನಿರ್ಮಿಸುತ್ತಿರುವ ವಾಯುನೆಲೆಯನ್ನು ವಿಸ್ತರಿಸಿ, ಸಿವಿಲ್‌ ಎನ್‌ಕ್ಲೇವ್‌ ನಿರ್ಮಿಸುವ ಯೋಜನೆಗೆ ನಡೆಸುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯ (Land Acquisition Process_ ಪರಿಹಾರ ನಿಗದಿಯಲ್ಲಿ ತಾರತಮ್ಯ ಆಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು 2013ರ ಭೂಸ್ವಾಧೀನ ಕಾಯ್ದೆಯನ್ವಯ ಇದನ್ನು ನಿವಾರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ನಡೆದಿರುವ ತಾರತಮ್ಯ ಕುರಿತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿಯಾಗಿ ಚರ್ಚೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.

ಬಿಜೆಪಿ ಸರ್ಕಾರ ನಮಗೆ ಅನ್ಯಾಯ ಮತ್ತು ಮೋಸ ಮಾಡಿದ್ದು, ಇದನ್ನು ಸರಿಪಡಿಸಿ ಎಂದು ಸಭೆಯಲ್ಲಿ ಮೂರು ಗ್ರಾಮಗಳ ನಿರಾಶ್ರಿತ ಕುಟುಂಬಗಳು ಮಾಡಿಕೊಂಡ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವೈಜ್ಞಾನಿಕವಾಗಿ, ನಿಯಮಬದ್ಧವಾಗಿ ಪರಿಹಾರ ಕೊಡುವ ದಿಕ್ಕಿನಲ್ಲಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆ ನಡೆಸಿ ಚರ್ಚಿಸಲು ಎಂ.ಬಿ. ಪಾಟೀಲ್‌ಗೆ ಸೂಚನೆ

ಮುಖ್ಯ ಕಾರ್ಯದರ್ಶಿಗಳು ಮತ್ತು ಸಂಬಂಧಿಸಿದ ಇತರ ಹಿರಿಯ ಅಧಿಕಾರಿಗಳೊಂದಿಗೆ, ಭೂಸ್ವಾಧೀನ ಪರಿಹಾರ ನಿಗದಿ, ಭೂಮಿ ಕಳೆದುಕೊಂಡವರಿಗೆ ಉದ್ಯೋಗ ನೀಡುವ ಕುರಿತು ಹಾಗೂ ಸೂಕ್ತ ನಿವೇಶನ ನೀಡುವ ಕುರಿತಂತೆ ಸಭೆ ನಡೆಸಿ ಚರ್ಚಿಸುವಂತೆ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲರಿಗೆ (MB Patil) ಸೂಚಿಸಿದರು.

Seabird Naval Base meeting

ಸೀಬರ್ಡ್‌ ಮೊದಲ ಹಂತದ ಯೋಜನೆಯಡಿ ಭೂಮಿ ಕಳೆದುಕೊಂಡವರ ಕುಟುಂಬದವರಿಗೂ ಉದ್ಯೋಗ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಅವರು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ, ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ, ಕಾರವಾರ ಶಾಸಕ ಸತೀಶ್‌ ಸೈಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಮೂಲಸೌಕರ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಏನಿದು ಸಮಸ್ಯೆ?

2020ರಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಭಾರತೀಯ ನೌಕಾಪಡೆ ಸಹಯೋಗದಲ್ಲಿ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಗಿನ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಅದರಂತೆ ಅಂಕೋಲಾ ತಾಲೂಕಿನ ಅಲಗೇರಿ ಹಾಗೂ ಬೇಲೆಕೇರಿ ಗ್ರಾಮದಲ್ಲಿ ಯೋಜನೆಗೆ ಅಗತ್ಯ ಭೂಮಿಯನ್ನು ಗುರುತಿಸಿದ್ದು ನೌಕಾನೆಲೆ ವ್ಯಾಪ್ತಿಯಲ್ಲಿ ನಿರ್ಮಾಣವಾಗುವ ವಿಮಾನ ನಿಲ್ದಾಣಕ್ಕೆ ಅಗತ್ಯ ರನ್‌ವೇಗಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ, ಅಲಗೇರಿಯಲ್ಲಿ ಈ ಹಿಂದೆ ನೌಕಾನೆಲೆ ನಿರ್ಮಾಣಕ್ಕಾಗಿ ಜಾಗ ನೀಡಿ ನಿರಾಶ್ರಿತರಾದ ಕುಟುಂಬಸ್ಥರೇ ಇದ್ದು, ಇದೀಗ ಮತ್ತೊಮ್ಮೆ ನಿರಾಶ್ರಿತರಾಗುವುದರಿಂದ ಹೆಚ್ಚಿನ ಪರಿಹಾರಕ್ಕೆ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: DK Shivakumar : ಬಿಎಸ್‌ವೈ ರಾಜಕೀಯ ಕಾರಣಕ್ಕೆ ಸಿಬಿಐ ತನಿಖೆಗೆ ಆದೇಶ ಕೊಟ್ಟಿದ್ದರು; ಡಿ.ಕೆ.ಶಿವಕುಮಾರ್

ಕಳೆದ ಮೂರು ವರ್ಷಗಳಿಂದಲೂ ಪರಿಹಾರದ ವಿಚಾರವಾಗಿ ಸಾಕಷ್ಟು ಸಭೆಗಳನ್ನು ನಡೆಸಲಾಗಿತ್ತಾದರೂ ಇದುವರೆಗೂ ಸಹ ಯಾವುದೂ ಹೊಂದಾಣಿಕೆಯಾಗದೇ ಭೂಸ್ವಾಧೀನ ಪ್ರಕ್ರಿಯೆಗೆ ಹಿನ್ನಡೆಯಾಗಿತ್ತು. ಹೀಗಾಗಿ ನೌಕಾನೆಲೆ ಸಹಯೋಗದಲ್ಲಿ ಅಂಕೋಲಾದಲ್ಲಿ ನಾಗರಿಕ ವಿಮಾನನಿಲ್ದಾಣ ನಿರ್ಮಾಣ ವಿಚಾರ ಇನ್ನೂ ಆರಂಭಿಕ ಹಂತದಲ್ಲೇ ಉಳಿದಿದೆ. ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕಾರವಾರ ಶಾಸಕ ಸತೀಶ್‌ ಸೈಲ್‌ ನೇತೃತ್ವದಲ್ಲಿ ಗ್ರಾಮಸ್ಥರೊಂದಿಗೆ ಸಭೆಯನ್ನೂ ನಡೆಸಲಾಗಿತ್ತು. ಈಗ ಜನಪ್ರತಿನಿಧಿಗಳ ನಿಯೋಗವು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

Banavasi News: ಬನವಾಸಿ ಅರಣ್ಯ ವಲಯದ ದಾಸನಕೊಪ್ಪ ಶಾಖೆಯ ಹೆಬ್ಬತ್ತಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ ಬೇಟೆ ಯಾಡಿ, ಮಾಂಸ ತಯಾರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

VISTARANEWS.COM


on

Wild boar hunting in Hebbatti village Arrest of two accused
Koo

ಬನವಾಸಿ: ಬನವಾಸಿ ಅರಣ್ಯ ವಲಯದ ದಾಸನಕೊಪ್ಪ ಶಾಖೆಯ ಹೆಬ್ಬತ್ತಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ (Wild boar) ಬೇಟೆ ಯಾಡಿ, ಮಾಂಸ ತಯಾರಿಸಿ (Banavasi News) ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಕಳೆದ ಜೂ.16ರಂದು ಕಾಡುಹಂದಿ ಬೇಟೆ ಯಾಡಿ ಮಾಂಸ ತಯಾರಿಸಿ ಪರಾರಿಯಾಗಿದ್ದರು. ಅರಣ್ಯ ಇಲಾಖೆ ಆರೋಪಿಗಳ ಪತ್ತೆಗೆ ಒಂದು ತಂಡವನ್ನು ರಚಿಸಿ, ಕಾರ್ಯಾಚರಣೆ ಕೈಗೊಂಡಾಗ ಸಂತೊಳ್ಳಿ ಗ್ರಾಮದ ಬಸವರಾಜ ಯಲ್ಲಪ್ಪ ಚನ್ನಯ್ಯ ಹಾಗೂ ಉಮೇಶ ಚನ್ನಪ್ಪ ಚನ್ನಯ್ಯ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Ballari News: ಕಂಪ್ಲಿಯ ದೇವಸಮುದ್ರ ಗ್ರಾಮದಲ್ಲಿ ಎರಡು ಕರಡಿ ಪ್ರತ್ಯಕ್ಷ!

ವಲಯ ಅರಣ್ಯಾಧಿಕಾರಿ ವರದಾ ರಂಗನಾಥ ಜಿ.ಎಚ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ ನಾರ್ವೆಕರ್, ಗಸ್ತು ಅರಣ್ಯ ಪಾಲಕರಾದ ದಯಾನಂದ ಬೊರ್ಕರ್, ಸಿದ್ದಪ್ಪ ನಾವಿ, ಅರಣ್ಯ ವೀಕ್ಷಕರಾದ ಚಂದ್ರು ಗೌಡ, ಗಿರೀಶ ಕುರುಬರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada News: ಬೆಳೆ ವಿಮೆ ಮೊತ್ತ ಸಮರ್ಪಕವಾಗಿ ರೈತರ ಖಾತೆಗೆ ಜಮಾ ಮಾಡಿ; ಹೆಬ್ಬಾರ್

Uttara Kannada News: ಕೃಷಿ ಇಲಾಖೆಯಿಂದ ಪೂರೈಸುವ ಬೀಜ, ಗೊಬ್ಬರದ ಕೊರತೆ ಆಗದಂತೆ ಕ್ರಮಹಿಸಬೇಕು. ರೈತರಿಗೆ ಸರ್ಕಾರದಿಂದ ಸಿಗುತ್ತಿರುವ ಬೆಳೆ ವಿಮೆ ಹಣದಲ್ಲಿ ಇಡೀ ಜಿಲ್ಲೆಗೆ ಸಿಕ್ಕಂತ ಅರ್ಧದಷ್ಟು ವಿಮೆ ಹಣ ತಾಲೂಕಿಗೆ ದೊರೆತಿದ್ದು, ಈ ಹಣ ಸಮರ್ಪಕವಾಗಿ ರೈತರ ಖಾತೆಗೆ ತಲುಪುವಂತೆ ಎಚ್ಚರವಹಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

VISTARANEWS.COM


on

Adequately deposit the crop insurance amount in the farmers account says MLA Shivaram Hebbar
Koo

ಕಾರವಾರ: ಉತ್ತಮ ಮಳೆಯಿಂದಾಗಿ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಕೃಷಿ ಇಲಾಖೆಯಿಂದ ಪೂರೈಸುವ ಬೀಜ, ಗೊಬ್ಬರದ ಕೊರತೆ ಆಗದಂತೆ ಕ್ರಮಹಿಸಬೇಕು. ರೈತರಿಗೆ ಸರ್ಕಾರದಿಂದ ಸಿಗುತ್ತಿರುವ ಬೆಳೆ ವಿಮೆ ಹಣದಲ್ಲಿ ಇಡೀ ಜಿಲ್ಲೆಗೆ ಸಿಕ್ಕಂತ ಅರ್ಧದಷ್ಟು ವಿಮೆ ಹಣ ತಾಲೂಕಿಗೆ ದೊರೆತಿದ್ದು, ಈ ಹಣ ಸಮರ್ಪಕವಾಗಿ ರೈತರ ಖಾತೆಗೆ ತಲುಪುವಂತೆ ಎಚ್ಚರವಹಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್, ಅಧಿಕಾರಿಗಳಿಗೆ (Uttara Kannada News) ಸೂಚಿಸಿದರು.

ಮುಂಡಗೋಡ ಟೌನ್‌ಹಾಲ್‌ನಲ್ಲಿ ಮಂಗಳವಾರ ಜರುಗಿದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತೀ ತುರ್ತು ಆದಾಯ ಗಳಿಕೆಗಾಗಿ ರೈತರು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕಯುಕ್ತ ಬೀಜ, ಗೊಬ್ಬರ ಬಿತ್ತನೆಗೆ ಮುಂದಾಗುತ್ತಿದ್ದು, ಭವಿಷ್ಯದಲ್ಲಿ ಭೂಮಿಯ ಸಂಪೂರ್ಣ ಫಲವತ್ತತೆ ಕ್ಷೀಣಿಸಿ ರಾಸಾಯನಿಕಯುಕ್ತ ಆಹಾರ ಪದಾರ್ಥಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಜತೆಗೆ ಮುಂಬರುವ ದಿನಗಳಲ್ಲಿ ಭೂಮಿಯ ಫಲವತ್ತತೆಯು ಹಾಳಾಗಲಿದೆ. ಹೀಗಾಗಿ ಭವಿಷ್ಯದ ಹಿತದೃಷ್ಟಿಯಿಂದ ತಾಲೂಕಿನ ಪ್ರತಿಯೊಬ್ಬ ರೈತರು ಸಾವಯುವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದರು.

ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಪ್ರತಿಯೊಬ್ಬ ಜನಸಾಮಾನ್ಯನಿಗೂ ಸರ್ಕಾರಿ ಸೌಲಭ್ಯಗಳು ದೊರಕುವಂತೆ ಜಾಗೃತಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಇದನ್ನೂ ಓದಿ: Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತೋಟಗಾರಿಕೆ ಕ್ಷೇತ್ರ ವಿಸ್ತರಿಸಲು ಶಾಸಕರು ಸೂಚಿಸಿದರು.

ಇದಕ್ಕೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉತ್ತರಿಸಿ, ತಾಲೂಕಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಕ್ಷೇತ್ರ 400 ರಿಂದ 500 ಹೆಕ್ಟರ್ ಪ್ರದೇಶ ಹೆಚ್ಚಾಗಿದೆ. 2022-23ರಲ್ಲಿ ನರೇಗಾದಡಿ ಅಂದಾಜು 70 ಸಾವಿರ ಮಾನವ ದಿನ ಸೃಜನೆ ಗುರಿ ನಿಗದಿಪಡಿಸಲಾಗಿತ್ತು. ಇದಕ್ಕೆ ವಿರುದ್ಧವಾಗಿ 90 ಸಾವಿರ ಮಾನವ ದಿನ ಸೃಜಿಸುವ ಮೂಲಕ ನಿಗದಿತ ಗುರಿಗಿಂತ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 1 ಲಕ್ಷಕ್ಕೂ ಅಧಿಕ ಮಾನವ ದಿನಗಳ ಗುರಿ ನೀಡಿದ್ದು, ಈಗಾಗಲೇ 15 ಸಾವಿರದಷ್ಟು ಮಾನವ ದಿನ ಸೃಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನೇಕ ಅನುದಾನದ ಜತೆಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಲಭ್ಯವಿರುವ ಕಾಮಗಾರಿಗಳನ್ನು ಕೈಗೊಂಡು ನರೇಗಾದ ಸಂಪೂರ್ಣ ಲಾಭ ಪಡೆಯುವುದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಇದನ್ನೂ ಓದಿ: Migraine Problem: ಮೈಗ್ರೇನ್‌ ಉಪಶಮನಕ್ಕೆ ರೋಸ್‌ಮೆರಿ ಸುಗಂಧ ತೈಲ ಮದ್ದು!

ಪ್ರಸಕ್ತ ವರ್ಷದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆಯ ಪ್ರಕರಣಗಳು ಕಂಡು ಬರದಂತೆ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ವೈದ್ಯರು ಸಣ್ಣಪುಟ್ಟ ವಿಷಯಗಳಿಗೂ ತಾಲೂಕಿನ ಬಡ ರೋಗಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸುತ್ತಿರುವುದು ಬೇಸರದ ಸಂಗತಿ. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು.

ಸಭೆಗೂ ಪೂರ್ವದಲ್ಲಿ ಶಾಸಕರು ಅಭಿವೃದ್ಧಿ ಆಕಾಂಕ್ಷಿ ತಾಲೂಕಾ ಕಾರ್ಯಕ್ರಮದ ಫೋಸ್ಟರ್ ಬಿಡುಗಡೆ ಮಾಡಿದರು. ಎನ್‌ಆರ್‌ಎಲ್‌ಎಂ ಯೋಜನೆಯಡಿ ಸ್ವಸಹಾಯ ಸಂಘಗಳ ಸದಸ್ಯರು ಅತಿಥಿ ಗಣ್ಯರಿಗೆ ಗೌರವಪೂರ್ವಕವಾಗಿ ನೀಡಲು ತಯಾರಿಸಿದ ವಿವಿಧ ಆದಾಯೋತ್ಪನ್ನಗಳನ್ನು ಒಳಗೊಂಡ ಉಡುಗೊರೆ ಬುಟ್ಟಿ ಸ್ವೀಕರಿಸಿ ಪ್ರಶಂಸೆ ವ್ಯಕ್ತಪಡಿಸಿದರು.

2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90 ರಷ್ಟು ಅಂಕ ಗಳಿಸಿದ ಮೂರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.

ಇದನ್ನೂ ಓದಿ: Gemini Mobile App: ಕನ್ನಡ ಸೇರಿದಂತೆ 9 ಭಾರತೀಯ ಭಾಷೆಗಳಲ್ಲಿ ಗೂಗಲ್ ಜೆಮಿನಿ ಆ್ಯಪ್; ಏನಿದರ ಉಪಯೋಗ?

ಸಭೆಯಲ್ಲಿ ತಹಸೀಲ್ದಾರ್ ಶಂಕರಗೌಡ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ವೈ. ದಾಸನಕೊಪ್ಪ, ಸಿಪಿಐ ರಂಗನಾಥ ನೀಲಮ್ಮನವರ, ಎಸಿಎಫ್ ರವಿ ಹುಲಕೋಟಿ, ಪ.ಪಂ ಮುಖ್ಯಾಧಿಕಾರಿ ಬಿ. ಚಂದ್ರಶೇಖರ, ನರೇಗಾ ಸಹಾಯ ನಿರ್ದೇಶಕ ಸೋಮಲಿಂಗಪ್ಪ ಛಬ್ಬಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಐಇಸಿ, ಎಂಐಎಸ್ ಸಂಯೋಜಕರು, ಎನ್‌ಆರ್‌ಎಲ್‌ಎಂ ಸಿಬ್ಬಂದಿ, ಇತರರಿದ್ದರು.

Continue Reading

ಮಳೆ

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ಗುಡುಗು, ಸಿಡಿಲು ಸಹಿತ ಸುರಿದ ಮಳೆಗೆ (Rain News) ಮನೆಯ ಗೋಡೆ ಕುಸಿದಿದ್ದು, ಕುಟುಂಬಸ್ಥರು ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ರಾಜ್ಯದ ಹಲವೆಡೆ ಮಳೆಯಾಗಿರುವ ವರದಿ ಆಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ದೊಡ್ಡಬಳ್ಳಾಪುರ: ಸಿಡಿಲು ಬಡಿದು ಮನೆಯ ಗೋಡೆ ಕುಸಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ (Karnataka Weather Forecast) ನಡೆದಿದೆ. ಸೋಮವಾರ ರಾತ್ರಿ ಗುಡುಗು, ಸಿಡಿಲು ಸಹಿತ ಜಡಿ (Rain News) ಮಳೆಯಾಗಿದೆ.

ಈ ವೇಳೆ ಸಿಡಿಲು ಬಡಿದ ಪರಿಣಾಮ ಗೋಡೆ ಕುಸಿತವಾಗಿದೆ. ಗಂಗರಾಜ್ ಎಂಬುವವರಿಗೆ ಸೇರಿದ ಮನೆ ಹಾನಿಯಾಗಿದೆ. ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದ ಕಾರಣ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಲ್ಲಿ ಅಬ್ಬರ ಮಳೆ

ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಭಾರಿ ಮಳೆಯಾಗಿದ್ದು, 8 ಸೆಂ.ಮೀ ದಾಖಲಾಗಿದೆ. ಧರ್ಮಸ್ಥಳದಲ್ಲಿ 6 ಸೆಂ.ಮೀ, ಕಾರ್ಕಳ , ಕಕ್ಕೇರಿ, ಯಗಟಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಎಂಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಇನ್ನೂ ಮಣಿ, ಶಿರಾಲಿ, ಬೆಳ್ತಂಗಡಿ, ಕೊಣನೂರಿನಲ್ಲಿ ತಲಾ 3 ಸೆಂ.ಮೀ ಹಾಗೂ ಹೊನ್ನಾವರ, ಪುತ್ತೂರು, ಮಂಗಳೂರು, ತುಮಕೂರು, ಭಾಗಮಂಡಲ, ವಿರಾಜಪೇಟೆ, ಕುಶಾಲನಗರದಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಮಂಕಿ, ಪಣಂಬೂರು , ಮೂಲ್ಕಿ, ಉಪ್ಪಿನಂಗಡಿ, ಕುಮಟಾ, ಮಧುಗಿರಿ, ಪರಶುರಾಂಪುರ, ತೊಂಡೇಭಾವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕರಾವಳಿ ಭಾಗಕ್ಕೆ ಮಳೆ ಅಲರ್ಟ್‌

ಜೂನ್‌ 19ರಂದು ಕರಾವಳಿ ಭಾಗಕ್ಕೆ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ 30 ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

NIA Raid: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

NIA Raid: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ ನಡೆಸಿ ಯುವಕನನ್ನು ಬಂಧಿಸಿದೆ.ಬಂಧಿತ ಯುವಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಎನ್ನಲಾಗಿದ್ದು, ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದ.

VISTARANEWS.COM


on

NIA Raid
Koo

ಕಾರವಾರ: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಎನ್‌ಐ‌ಎ ತಂಡ ಬಂಧಿಸಿದೆ. ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ (NIA Raid) ನಡೆಸಿ ಯುವಕನನ್ನು ಬಂಧಿಸಿದೆ.

ಅಬ್ದುಲ್ ಶಕೂರ್(32) ಬಂಧಿತ ಯುವಕ. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲ ದಿನಗಳ ಹಿಂದಷ್ಟೇ ಬಕ್ರೀದ್ ಆಚರಣೆಗಾಗಿ ದಾಸನಕೊಪ್ಪಕ್ಕೆ ಬಂದಿದ್ದ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸರ ಸಹಕಾರದಿಂದ ಯುವಕನನ್ನು ಎನ್‌ಎಐ ಬಂಧಿಸಿದೆ.

ಬಂಧಿತ ಯುವಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಆಗಿದ್ದು, ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದ. ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಈತನ ಮೇಲಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ;‌ ʼಎಸ್‌ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲʼ ಎಂದು ದೂರು

ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್‌ಪೋರ್ಟ್‌ ನಕಲಿ ದಾಖಲೆ ನೀಡಿದ ಆರೋಪದಡಿ ಆರೋಪಿಯನ್ನು ಬಂಧಿಸಿದ್ದು, ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ NIA ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

Udupi Gang War

ಉಡುಪಿ: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ (Udupi Gang War) ನಡೆದಿದ್ದು, ಯುವಕನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಉಡುಪಿಯ ಪುತ್ತೂರಿನಲ್ಲಿ ಜೂನ್ 15ರ ರಾತ್ರಿ ಘಟನೆ ನಡೆದಿದೆ.

ಚರಣ್‌ ಎಂಬಾತ ಸೆಲೂನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಶಬರಿ ಎಂಬಾತನಿಗೆ ಚರಣ್‌ ಬೈದಿದ್ದ. ಈ ವಿಚಾರಕ್ಕೆ ಮಾತುಕತೆಗೆಂದು ಪ್ರವೀಣ್‌ ಎಂಬಾತ ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಚರಣ್‌ನನ್ನು ಕರೆದಿದ್ದ. ಇತ್ತ ಚರಣ್‌ ತನ್ನ ಮೂವರು ಸ್ನೇಹಿತರ ಜತೆಗೂಡಿ ಆಗಮಿಸಿದ್ದ.

ಚರಣ್‌ ಬರುತ್ತಿದ್ದಂತೆ ಪ್ರವೀಣ್‌ ಗ್ಯಾಂಗ್‌ ಏಕಾಏಕಿ ತಲವಾರ್‌ ಬೀಸಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್ ಬಿಟ್ಟು ಓಡಿದ್ದಾರೆ. ಇತ್ತ ಚರಣ್ ಸಿಗದಿದ್ದಕ್ಕೆ ಆತನ ಬೈಕ್‌ ಅನ್ನು ಜಖಂಗೊಳಿಸಿದ್ದಾರೆ. ತಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡು ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಉಡುಪಿಯಲ್ಲಿ ಹೆಚ್ಚುತ್ತಿರುವ ಗ್ಯಾಂಗ್ ವಾರ್ ಪ್ರಕರಣಕ್ಕೆ ಉಡುಪಿ ಜನತೆ ಭಯಭೀತರಾಗಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ದಾಖಲಾಗಿದೆ.

ಕೃತ್ಯದ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಅರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading
Advertisement
Union Budget 2024
ದೇಶ11 mins ago

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Wild boar hunting in Hebbatti village Arrest of two accused
ಉತ್ತರ ಕನ್ನಡ17 mins ago

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

a successful kidney transplanted for 32 year old woman at Fortis Hospital
ಕರ್ನಾಟಕ19 mins ago

Fortis Hospital: 32 ವರ್ಷದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ

Saved Goats
ದೇಶ22 mins ago

Bakrid: ಬಕ್ರೀದ್ ವೇಳೆ ಜೈನರು ಮುಸ್ಲಿಮರ ವೇಷ ಧರಿಸಿ 124 ಮೇಕೆ ಖರೀದಿಸಿದರು! ಉದ್ದೇಶ ಹೃದಯಸ್ಪರ್ಶಿ

Self Harming
ಕರ್ನಾಟಕ31 mins ago

Self Harming: ತಿಪಟೂರಿನಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Adequately deposit the crop insurance amount in the farmers account says MLA Shivaram Hebbar
ಉತ್ತರ ಕನ್ನಡ31 mins ago

Uttara Kannada News: ಬೆಳೆ ವಿಮೆ ಮೊತ್ತ ಸಮರ್ಪಕವಾಗಿ ರೈತರ ಖಾತೆಗೆ ಜಮಾ ಮಾಡಿ; ಹೆಬ್ಬಾರ್

Youth Empowerment and Sports Department Progress Review Meeting by CM Siddaramaiah
ಕರ್ನಾಟಕ38 mins ago

Bengaluru News: ಎಲ್ಲ ಕಾಮಗಾರಿಗಳಿಗೂ ಟೆಂಡರ್‌; ಸಿದ್ದರಾಮಯ್ಯ ಸೂಚನೆ

JDS protest against petrol diesel price hike in bengaluru
ಕರ್ನಾಟಕ41 mins ago

Petrol Deisel Price Hike: ಟಾಂಗಾ, ಸೈಕಲ್ ಸವಾರಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ ನಾಯಕರು!

Protest demanding adequate bus facility in Shira
ತುಮಕೂರು43 mins ago

Shira News: ಶಿರಾದಲ್ಲಿ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

Two bears were spotted in Devasamudra village of Kampli
ಕರ್ನಾಟಕ46 mins ago

Ballari News: ಕಂಪ್ಲಿಯ ದೇವಸಮುದ್ರ ಗ್ರಾಮದಲ್ಲಿ ಎರಡು ಕರಡಿ ಪ್ರತ್ಯಕ್ಷ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌