Site icon Vistara News

Sedition case: ನಾಸಿರ್ ಹುಸೇನ್‌ ಕ್ಷಮೆ ಕೇಳೋವರೆಗೆ ಪ್ರಮಾಣವಚನ ಬೇಡ: ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi

ಹುಬ್ಬಳ್ಳಿ: ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ (Sedition case) ಕೂಗಿದ ಬೆಂಬಲಿಗರು ಭಾರತದಲ್ಲಿರುವ ಋಣಕ್ಕಾದರೂ ಬೇಷರತ್ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆ‌ ಹಾಗೂ ಪತ್ರಕರ್ತರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದರು.

ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ, ಕಾಂಗ್ರೆಸ್ ಪಾರ್ಟಿಗೆ ಅತ್ಯಂತ ಹತ್ತಿರದವನು. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ್ತು ನಾಸಿರ್ ಹುಸೇನ್ ಅಕ್ಕ-ಪಕ್ಕದಲ್ಲೇ ಇರುತ್ತಿದ್ದವನು ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಜೋಶಿ ಹೇಳಿದರು.

ಹೊರಗಿನವನೆಂಬ ಸುಳ್ಳು ಸಬೂಬು ಬೇಡ

ಪಾಕಿಸ್ತಾನ ಜಿಂದಾಬಾದ್ ಘೋಷಣೆಕಾರ ಹೊರಗಿನವನು ಎಂಬ ಸುಳ್ಳು ಸಾಬೂಬು ಹೇಳಿ ಜಾರಿಕೊಳ್ಳುವುದು ಬೇಡ. ಕನಿಷ್ಠ ಪಕ್ಷ ಭಾರತದಲ್ಲಿರುವ ಋಣ ಮತ್ತು ಸೌಜನ್ಯಕ್ಕಾದರೂ ಸಾರ್ವಜನಿಕ ಕ್ಷಮೆ ಕೇಳಲೇಬೇಕು. ಕಾಂಗ್ರೆಸ್ ಪಕ್ಷ ಕೂಡ ಕ್ಷಮೆ ಕೇಳಬೇಕು ಎಂದು ಸಚಿವ ಜೋಶಿ ಹೇಳಿದರು.

ಕ್ಷಮೆ ಕೇಳದೆ ಪ್ರಮಾಣ ವಚನ ಬೇಡ

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪಿಗೆ ನಾಸಿರ್ ಹುಸೇನ್ ಆಶೀರ್ವಾದ ಇದೆ. ಒಳಗೊಳಗೇ ಆತನನ್ನು ಅಪ್ಪಿ ಮುದ್ದಾಡಿದ್ದಾರೆ. ದೇಶದ ಘನತೆ, ಗೌರವ ಮತ್ತು ಅಖಂಡತೆ ವಿಚಾರದಲ್ಲಿ ನಾಸಿರ್‌ ಹುಸೇನ್ ಬೇಷರತ್ ಕ್ಷಮೆ ಕೇಳಬೇಕು,‌ ಅಲ್ಲಿವರೆಗೆ ಪ್ರಮಾಣ ವಚನ ಸ್ವೀಕರಿಸಬಾರದು ಎಂದು ಪ್ರಲ್ಹಾದ್‌ ಜೋಶಿ ಅಗ್ರಹಿಸಿದರು.

ಇದನ್ನೂ ಓದಿ | DK Shivakumar : ಯಾರ‍್ಯಾರೋ ಏನೇನೋ ಆಸೆಪಡ್ತಾರೆ, ಮಹದೇವಪ್ಪ ಸಿಎಂ ಆಸೆಪಟ್ಟರೆ ತಪ್ಪಿಲ್ಲ ಎಂದ ಡಿಕೆಶಿ

ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿ ಇದೆ. ಸರಿಯಾದ ತನಿಖೆ ಮಾಡುತ್ತಿಲ್ಲ ಎಂದು ಸಚಿವ ಜೋಶಿ ಆರೋಪಿಸಿದರು.

Exit mobile version