Site icon Vistara News

Self Harming: ಫೋನ್‌ನಲ್ಲಿ‌ ಯುವಕನ ಕಿರುಕುಳ‌ ತಾಳಲಾರದೆ ಬಾಲಕಿ ಆತ್ಮಹತ್ಯೆ

Self harming

ಕೊಪ್ಪಳ: ಫೋನ್‌ನಲ್ಲಿ‌ ಯುವಕ ನೀಡುತ್ತಿದ್ದ ಕಿರುಕುಳ‌ ತಾಳಲಾರದೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಚ್ಚಲಕುಂಟ ಗ್ರಾಮದಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಶವವಿಟ್ಟು ಬಾಲಕಿತ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಪೂಜಾ ಯಡ್ಡೋಣಿ(16) ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿ. ಪುರಷೋತ್ತಮ ಎನ್ನುವ ಯುವಕ ಪೂಜಾಳ‌ ಮನೆಯ ಮೊಬೈಲ್‌ಗೆ ಕರೆ ಮಾಡುತ್ತಿದ್ದ. ಬೇರೊಂದು ನಂಬರ್ ಮೂಲಕ‌‌ ಕಾನ್ಫರೆನ್ಸ್ ಕಾಲ್ ಮಾಡಿ ಕಿರುಕುಳ‌ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಯುವಕನ ಕಿರುಕುಳ‌ ತಾಳಲಾರದೆ ಏ.7 ರಂದು ವಿಷ ಸೇವಿಸಿದ್ದ ಪೂಜಾ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾಳೆ.

ಈ ಹಿನ್ನೆಲೆಯಲ್ಲಿ ಉಚ್ಚಲಕುಂಟ ಗ್ರಾಮಸ್ಥರು, ಆರೋಪಿ ಪುರಷೋತ್ತಮ ಬಂಧನಕ್ಕೆ‌ ಆಗ್ರಹಿಸಿ ಬೇವೂರು ಪೊಲೀಸ್ ಠಾಣೆ ಎದುರು ಪೂಜಾ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ಬಂಧನ ಮಾಡುವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ | Road Accident : ಓವರ್‌ ಟೇಕ್‌ ಮಾಡುವಾಗ ಪಲ್ಟಿ ಹೊಡೆದ ಪೊಲೀಸ್‌ ಜೀಪ್‌; ಇಬ್ಬರಿಗೆ ಗಾಯ

ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು

ವಿಜಯಪುರ: ಆಟವಾಡುವ ವೇಳೆ ಬಾಲಕ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ (Crime News) ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಕೊನೆಯುಸಿರೆಳೆದಿದ್ದಾನೆ. ಖುಷಾಲ್ ಹಾಲ್ಯಾಳ (6) ಮೃತ ಬಾಲಕ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾಲೂರಿನಲ್ಲಿ ರೈಲಿಗೆ ಸಿಲುಕಿ ದಂಪತಿ ಸಾವು

ಕೋಲಾರ: ಜಿಲ್ಲೆಯ ಮಾಲೂರು ರೈಲ್ವೆ ನಿಲ್ದಾಣ ಬಳಿ ರೈಲಿಗೆ ಸಿಲುಕಿ ದಂಪತಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಎಡಗಿನ ಬೆಲೆ ಗ್ರಾಮದ ನಿವಾಸಿಗಾದ ವಿದ್ಯಾಶ್ರೀ (38) ಮತ್ತು ಸಿದ್ದಲಿಂಗರಾಜು (46) ಮೃತ ದಂಪತಿ. ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version