Site icon Vistara News

Self Harming: ನೇಣು ಬಿಗಿದುಕೊಂಡು ಪತ್ರಕರ್ತ ಆತ್ಮಹತ್ಯೆ

Journalist P Athri committed suicide by hanging himself

ಸಾಗರ: ಇಲ್ಲಿನ ಸಾಗರ ಮುದ್ರಣಾಲಯದ ಮಾಲೀಕ ಹಾಗೂ ಪತ್ರಕರ್ತ (Journalist) ಪಿ. ಅತ್ರಿ (55) ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

ಮೃತರು ಪತ್ನಿ, ಒಬ್ಬ ಪುತ್ರನನ್ನು ಅಗಲಿದ್ದಾರೆ. ಪಿ. ಅತ್ರಿ ಅವರು ʼಮಲೆನಾಡು ಮಲ್ಲಿಗೆʼ ವಾರಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಜತೆಗೆ ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಂಡಿದ್ದರು. ಕ್ರೀಡಾ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ವಹಿಸಿದ್ದ ಅವರು ಲೆದರ್ ಕ್ರಿಕೆಟ್ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿದ್ದರು.

ಗುರುವಾರ ರಾತ್ರಿ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಪವಿಭಾಗೀಯ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಂತರ ಮೃತರ ಅಂತ್ಯಕ್ರಿಯೆಯು ಮಾರಿಕಾಂಬಾ ರುದ್ರಭೂಮಿಯಲ್ಲಿ ಶುಕ್ರವಾರ ನೆರವೇರಿತು.

ಇದನ್ನೂ ಓದಿ: Drowned in Canal : ಕಾಲುವೆಯಲ್ಲಿ ಈಜಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಪಿ. ಅತ್ರಿ ಅವರ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

Exit mobile version