Karnataka Weather: ರಾಜ್ಯದ ಅಲ್ಲಲ್ಲಿ ಭಯಂಕರ ಚಳಿ; ಕನಿಷ್ಠ ತಾಪಮಾನ ಇನ್ನೂ 4 ಡಿಗ್ರಿ ಸೆಲ್ಸಿಯಸ್‌ ಕುಸಿತ? - Vistara News

ಕರ್ನಾಟಕ

Karnataka Weather: ರಾಜ್ಯದ ಅಲ್ಲಲ್ಲಿ ಭಯಂಕರ ಚಳಿ; ಕನಿಷ್ಠ ತಾಪಮಾನ ಇನ್ನೂ 4 ಡಿಗ್ರಿ ಸೆಲ್ಸಿಯಸ್‌ ಕುಸಿತ?

Karnataka Weather: ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಕೆಲವು ಕಡೆ ಮುಂಜಾನೆ ದಟ್ಟ ಮಂಜು ಆವರಿಸಿರಲಿದೆ. ಅಲ್ಲದೆ, ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

VISTARANEWS.COM


on

Karnataka Weather in Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 48 ಗಂಟೆ (ಗುರುವಾರ ಮತ್ತು ಶುಕ್ರವಾರ) ರಾಜ್ಯದ ಹಲವು ಕಡೆ ಭಾರಿ ಪ್ರಮಾಣದಲ್ಲಿ ಚಳಿ ಬೀಳಲಿದೆ. ಈಗಿರುವ ಕನಿಷ್ಠ ತಾಪಮಾನಕ್ಕಿಂತ ಕನಿಷ್ಠ 4 ಡಿಗ್ರಿ ಸೆಲ್ಸಿಯಸ್‌ಗಿಂತ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ ಕಾಣುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ. ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು, ಉತ್ತರ ಒಳನಾಡಿನಲ್ಲಿ ಎಲ್ಲ ಕಡೆ ಒಣ ಹವೆಯ ಜತೆಗೆ ಚಳಿಯೂ ಭರ್ಜರಿ ಇರಲಿದೆ.

ಇನ್ನು ಜನವರಿ 26ಕ್ಕೆ ಗಣರಾಜ್ಯೋತ್ಸವ ರಜೆ ಇದೆ. ಹೀಗಾಗಿ ಮಲೆನಾಡಿನ ಪ್ರದೇಶಗಳು ಸೇರಿದಂತೆ ಕೆಲವು ಕಡೆ ಟ್ರಿಪ್‌ ಹೋಗುತ್ತೇವೆ ಎಂದು ಪ್ಲಾನ್‌ ಹಾಕಿಕೊಂಡಿದ್ದರೆ ಸೂಕ್ತ ತಯಾರಿ ಮಾಡಿಕೊಳ್ಳುವುದು ಒಳಿತು. ಏಕೆಂದರೆ ಆ ಪ್ರದೇಶಗಳಲಿ ತುಂಬಾ ಚಳಿ ಇದೆ!

ಬಿಸಿಲಿನ ಹೊಡೆತವೂ ಇರಲಿದೆ!

ಚಳಿಯಂದ ಮಾತ್ರ ಬಿಸಿಲು ಇಲ್ಲವೇ ಎಂದು ಅಂದುಕೊಳ್ಳುವುದೇ ಬೇಡ. ಬಿಸಿಲು ಸಹ ಇರಲಿದೆ. ದಕ್ಷಿಣ, ಉತ್ತರ ಒಳನಾಡುಗಳು ಸೇರಿದಂತೆ ಕರಾವಳಿ ಪ್ರದೇಶಗಳ ಕೆಲವು ಕಡೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳ ಕಾಣಲಿದೆ. ಹೀಗಾಗಿ ಒಂದೇ ದಿನಗಳಲ್ಲಿ ಎರಡೆರಡು ರೀತಿಯ ಹವಾಮಾನವನ್ನು ನಾಗರಿಕರು ನೋಡಬೇಕಾಗಿದೆ.

ಇದನ್ನೂ ಓದಿ: Star Fashion: ಬೆಂಗಳೂರಿನ ಚುಮು ಚುಮು ಚಳಿಗೆ ಬದಲಾಯಿತು ನಟ ಶೈನ್‌ ಶೆಟ್ಟಿ ವಿಂಟರ್‌ ಫ್ಯಾಷನ್‌!

ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ಭಯಂಕರ ಚಳಿ

ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಕೆಲವು ಕಡೆ ಮುಂಜಾನೆ ದಟ್ಟ ಮಂಜು ಆವರಿಸಿರಲಿದೆ. ಅಲ್ಲದೆ, ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅದೇ ಶನಿವಾರ ಮತ್ತು ಭಾನುವಾರ 15 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ. ಹೀಗಾಗಿ ಈ ಭಾಗದಲ್ಲಿ ಚಳಿ ಭಯಂಕರವಾಗಿ ಕಾಡಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಚಳಿ ಪ್ರಮಾಣ ಕಡಿಮೆ ಇದ್ದು, ಬೆಳಗ್ಗೆ ಬಿಸಿಲಿನ ತೀವ್ರತೆ ಇರಲಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಬೆಂಗಳೂರಲ್ಲಿ ಚಳಿ ಚಳಿ

ಬೆಂಗಳೂರಲ್ಲಿ ಗುರುವಾರ ಹಾಗೂ ಶುಕ್ರವಾರ ಚಳಿಯ ವಾತಾವರಣ ತುಸು ಹೆಚ್ಚೇ ಇರಲಿದೆ. ರಾತ್ರಿಯಾಗುತ್ತಿದ್ದಂತೆ ಶುರುವಾಗುವ ಚಳಿ ಗಾಳಿಯು ಮುಂಜಾನೆವರೆಗೂ ಬೀಸುತ್ತದೆ. ಅಲ್ಲದೆ, ಕೆಲವು ಕಡೆ ಬೆಳಗಿನ ಜಾವದವರೆಗೆ ಮಂಜಿನಿಂದ ಕೂಡಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Ear Pain During Winter: ಚಳಿಗೆ ಕಿವಿನೋವೇ? ಇಲ್ಲಿ ಕೇಳಿ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -17 ಡಿ.ಸೆ
ಮಂಗಳೂರು: 32 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 15 ಡಿ.ಸೆ
ಹೊನ್ನಾವರ: 31 ಡಿ.ಸೆ- 18 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 10 ಡಿ.ಸೆ
ಕಾರವಾರ: 33 ಡಿ.ಸೆ – 18 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Actor Darshan: ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

VISTARANEWS.COM


on

Actor Darshan Will Attend The Court Hearing From Online
Koo

ಬೆಂಗಳೂರು: ನಟ ದರ್ಶನ್‌ (Actor Darshan) ಭಾಗಿ ಆಗಿರುವ ರೇಣುಕಾ ಸ್ವಾಮಿ ಕೊಲೆ (Ranuka Swamy Murder) ಪ್ರಕರಣದಲ್ಲಿ, ಸಾಕ್ಷಿಗಳು (Witness) ಮೂವರು ಆರೋಪಿಗಳನ್ನು ಐಡೆಂಟಿಫಿಕೇಶನ್‌ ಸಂದರ್ಭದಲ್ಲಿ ನಿಖರವಾಗಿ ಪತ್ತೆ ಹಚ್ಚಿದ್ದಾರೆ. ಜೈಲಿನಲ್ಲಿ ನಡೆದ ಈ ಐಡೆಂಟಿಫಿಕೇಶನ್‌ ಪರೇಡ್‌ನಲ್ಲಿ (Identification parade) ಹತ್ತಾರು ಇತರ ಕೈದಿಗಳ ನಡುವೆ ಆರೋಪಿಗಳನ್ನು ಸಾಕ್ಷಿಗಳು ಖಚಿತವಾಗಿ ಕಂಡು ಹಿಡಿದರು.

ತುಮಕೂರು ಜೈಲಿನಲ್ಲಿ ಇಬ್ಬರು, ಬೆಂಗಳೂರು ಜೈಲಲ್ಲಿ ಒಬ್ಬನನ್ನು ಗುರುತು ಹಿಡಿಯಲಾಗಿದೆ. ಸಾಕ್ಷಿಗಳ ಮುಂದೆ ಪೊಲೀಸರು ಆರೋಪಿಗಳ ಐಡೆಂಟಿಫಿಕೇಶನ್ ಪರೇಡ್ ನಡೆಸಿದರು. ಕೃತ್ಯದ ದಿನ ಆರೋಪಿಗಳನ್ನು ನೋಡಿದ ಸಾಕ್ಷಿಗಳಿಂದ, ತಾಲೂಕು ದಂಡಾಧಿಕಾರಿಗಳ ಸಮ್ಮುಖದಲ್ಲಿಯೇ ಐಡೆಂಟಿಫಿಕೇಶನ್ ಪೆರೇಡ್ ನಡೆಯಿತು.

ಈ ಪರೇಡ್‌ನಲ್ಲಿ ಆರೋಪಿಗಳನ್ನು ಜೈಲಿನಲ್ಲಿರುವ ಇತರ ಕೈದಿಗಳ ನಡುವೆ ನಿಲ್ಲಿಸಿ, ತಾನು ನೋಡಿದ ಆರೋಪಿಯ ಗುರುತು ಹಿಡಿಯಲು ಸಾಕ್ಷಿಗೆ ಸೂಚಿಸಲಾಗುತ್ತದೆ. ಈ ವೇಳೆ ತಾಲೂಕು ದಂಡಾಧಿಕಾರಿಗಳು ಹಾಜರಿರುತ್ತಾರೆ. ಈ ರೀತಿಯಾಗಿ ಕಾರ್ತಿಕ್, ನಿಖಿಲ್ ನಾಯಕ್ ಹಾಗೂ ರಘುಗೆ ಐಡೆಂಟಿಫಿಕೇಶನ್ ಪೆರೇಡ್ ನಡೆಸಲಾಯಿತು. ತುಮಕೂರು ಜೈಲಲ್ಲಿ ಕಾರ್ತಿಕ್ ಹಾಗೂ ನಿಖಿಲ್‌ಗೆ, ಪರಪ್ಪನ ಆಗ್ರಹಾರ ಜೈಲಿನಲ್ಲಿ ರಘುಗೆ ಐಡೆಂಟಿಫಿಕೇಶನ್ ಪರೇಡ್ ನಡೆಯಿತು. ಈ ಐಡೆಂಟಿಫಿಕೇಶನ್ ಪರೇಡ್‌ನಲ್ಲಿ ಪತ್ತೆ ಹಚ್ಚಿದ್ದು ಐ ವಿಟ್ನೆಸ್ ಆಗಿ ಪರಿಗಣನೆ ಆಗಲಿದೆ.

ದರ್ಶನ್ ಕೇಸಲ್ಲೂ ಎರಡು ಪೆನ್ ಡ್ರೈವ್

ಈ ಪ್ರಕರಣದಲ್ಲೂ ದರ್ಶನ್‌ (Actor Darshan) ವಿರುದ್ಧ ಎರಡು ಪೆನ್ ಡ್ರೈವ್‌ಗಳು ಪ್ರಮುಖ ಸಾಕ್ಷಿಗಳಾಗಿವೆ. ಆದರೆ ಇವು ಆರೋಪಿ ಮಾಡಿದ್ದಲ್ಲ, ಬದಲಾಗಿ ಆರೋಪಿಗಳ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿದ್ಧಪಡಿಸಿರುವ ಪೆನ್ ಡ್ರೈವ್.

8 ಜಿಬಿಯ ಎರಡು ಪೆನ್ ಡ್ರೈವ್ ಸಿದ್ಧಪಡಿಸಿರುವ ಪೊಲೀಸರು, ಆರೋಪಿಗಳಾದ ದೀಪಕ್ ಹಾಗೂ ನಂದೀಶ್ ಇವರ ಗೂಗಲ್ ಟೈಮ್ ಲೈನ್ ಡಾಟಾವನ್ನು ಅದರಲ್ಲಿ ಸಂಗ್ರಹಿಸಿದ್ದಾರೆ. ದೀಪಕ್ ಶಾಸಕರ ಸಂಬಂಧಿ, ನಂದೀಶ್ ದರ್ಶನ್ ಮನೆಯ ಕೆಲಸದವನು. ಇಬ್ಬರ ಮೊಬೈಲ್‌ನಲ್ಲೂ ಗೂಗಲ್ ಟೈಮ್ ಲೈನ್ ಇತ್ತು. ಅಪರಾಧ ನಡೆದ ಪ್ರತಿ ಜಾಗಕ್ಕೂ ಇವರಿಬ್ಬರು ಓಡಾಡಿದ್ದಾರೆ. ಹೀಗಾಗಿ ಇದನ್ನು ಎರಡು ಪೆನ್ ಡ್ರೈವ್‌ಗಳಲ್ಲಿ ಪೊಲೀಸರು ಶೇಖರಿಸಿಟ್ಟಿದ್ದಾರೆ. ಆರೋಪಿಗಳು ಘಟನಾ ಸ್ಥಳದಲ್ಲಿ ಇದ್ದರು ಎನ್ನುವುದಕ್ಕೆ ಈ ಎರಡು ಪೆನ್ ಡ್ರೈವ್ ನಲ್ಲಿರುವ ಡಾಟಾ ಮಹತ್ವದ ಸಾಕ್ಷಿಯಾಗಿದೆ.

ಪವಿತ್ರ ಗೌಡ ಆಪ್ತೆ, ಶಾಸಕರ ಕಾರು ಚಾಲಕನಿಗೆ ಸಂಕಷ್ಟ; 2ನೇ ಬಾರಿ ವಿಚಾರಣೆ, ಬಂಧನ?

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ (Renuka swamy Murder) ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆಗಾಗಿ ಕರೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರಲ್ಲಿ ಒಬ್ಬಾಕೆ ನಟ ದರ್ಶನ್‌ (Actor Darshan) ಹಾಗೂ ಪವಿತ್ರ ಗೌಡ (Pavithra Gowda) ಅನ್ನು ಭೇಟಿಯಾಗಲು ಜೈಲಿಗೆ ಬಂದಿದ್ದವಳು.

ಇವರಲ್ಲಿ ಒಬ್ಬಾತ ಕಾರ್ತಿಕ್‌ ಪುರೋಹಿತ್.‌ ಈತನಿಗೆ ಇಂದು ಇಂದು ವಿಚಾರಣೆಗೆ ಹಾಜರಾಗಲು ನೊಟೀಸ್ ಹೋಗಿದೆ. ಶನಿವಾರ ಸುಮಾರು ನಾಲ್ಕೈದು ಗಂಟೆಗಳ ಕಾಲ ಪೊಲೀಸರು ವಿಚಾರಣೆ ಮಾಡಿದ್ದರು. ಶಾಸಕರೊಬ್ಬರ ಕಾರು ಚಾಲಕನಾಗಿರುವ ಕಾರ್ತಿಕ್ ಪುರೋಹಿತ್, ರೇಣುಕಾ ಸ್ವಾಮಿ ಮೃತದೇಹ ಬಿಸಾಡಿದ ಬಳಿಕ ಆರೋಪಿ ಪ್ರದೋಶ್ ಅನ್ನು ಪಿಕ್‌ಅಪ್ ಮಾಡಿದ್ದ. ತನ್ನದೇ ಕಾರಿನಲ್ಲಿ ಪ್ರದೋಶ್‌ನನ್ನು ಗಿರಿನಗರಕ್ಕೆ ಕರೆದುಕೊಂಡು ಬಂದಿದ್ದ.

ಹೀಗಾಗಿ ಆವತ್ತು ಏನೆಲ್ಲಾ ಆಯ್ತು, ಕೊಲೆಯ ಮಾಹಿತಿ ಕಾರ್ತಿಕ್‌ಗೆ ಇತ್ತೇ ಎಂದು ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಕೊಲೆ ಮಾಹಿತಿ ಇದ್ದೂ ಪೊಲೀಸರಿಗೆ ತಿಳಿಸಲಿಲ್ಲವಾದರೆ ಸಂಕಷ್ಟ ಗ್ಯಾರಂಟಿ ಆಗಿದೆ. ಜೊತೆಗೆ ಎರಡು ದಿನಗಳ ಕಾಲ ಆರೋಪಿಗೆ ಆಶ್ರಯ ಕೊಟ್ಟಿರುವ ಶಂಕೆ ಇದೆ. ಆಶ್ರಯದ ಜೊತೆಗೆ ಹಣಕಾಸು ಸಹಾಯವೂ ಮಾಡಿರುವ ಅನುಮಾನ ಇದೆ. ಹೀಗಾಗಿ ಇಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ.

ಜೊತೆಗೆ ಇಂದು ಪವಿತ್ರ ಗೌಡ ಆಪ್ತೆ ಸಮತಾ ವಿಚಾರಣೆ ಕೂಡ ನಡೆಯಲಿದೆ. ಈಗಾಗಲೇ ಸಮತಾ ಒಂದು ಬಾರಿ ವಿಚಾರಣೆಗೆ ಹಾಜರಾದ್ದಾಳೆ. ಈಕೆ ಆರೋಪಿ ಧನರಾಜ್‌ಗೆ 3 ಸಾವಿರ ರೂಪಾಯಿ ಹಣ ಕಳುಹಿಸಿದ್ದಳು. ಇದೇ ಹಣದಲ್ಲಿ ಧನರಾಜ್ ಎಲೆಕ್ಟ್ರಿಕ್ ಶಾಕ್ ಡಿವೈಸ್ ಖರೀದಿ ಮಾಡಿರುವ ಶಂಕೆ ಇದೆ. ಹೀಗಾಗಿ ಸಮತಾಳನ್ನು ಮತ್ತೆ ವಿಚಾರಣೆಗೆ ಪೊಲೀಸರು ಕರೆದಿದ್ದು, ಇಂದು ಹಾಜರಾಗಲು ಸೂಚಿಸಿದ್ದಾರೆ. ಬಸವೇಶ್ವರನಗರ ಪೊಲೀಸ್ ಠಾಣೆಯ ಎಸಿಪಿ ಕಚೇರಿಯಲ್ಲಿ ತನಿಖಾಧಿಕಾರಿ ಎಸಿಪಿ ಚಂದನ್ ಮುಂದೆ ಸಮತಾ ಹಾಜರಾಗಲಿದ್ದಾಳೆ.

ಇದನ್ನೂ ಓದಿ: Actor Darshan: ದರ್ಶನ್‌ಗಾಗಿ ವಿಶೇಷ ಪೂಜೆ ಮಾಡಿಸಿದ್ರಾ ವಿಜಯಲಕ್ಷ್ಮಿ? ಅಸಲಿ ಕಥೆ ಬೇರೆಯೇ ಇದೆ!

Continue Reading

ಬೆಂಗಳೂರು

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Murder case : ಬೆಂಗಳೂರಲ್ಲಿ ಯುವಕನೊಬ್ಬ ಕುಡಿದ ನಶೆಯಲ್ಲಿ ತನ್ನ ಸ್ನೇಹಿತರಿಂದಲೇ ಕೊಲೆಯಾಗಿ ಹೋಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

VISTARANEWS.COM


on

By

Murder case
Koo

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ‌ ನಡೆಸಿ ಯುವಕನೊಬ್ಬನ ಕೊಲೆ (Murder case) ಮಾಡಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನೇಪಾಳಿ ಮೂಲದ ಬಾಲಾಜಿ ಮೃತ ದುರ್ದೈವಿ.

ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಬಾಲಾಜಿ ಸ್ನೇಹಿತರೊಂದಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದ. ಬಳಿಕ ಕುಡಿದ ಅಮಲಿನಲ್ಲಿ ಕ್ಯಾತೆ ತೆಗೆದು ಸ್ನೇಹಿತರೊಟ್ಟಿಗೆ ಜಗಳ ಶುರು ಮಾಡಿದ್ದ. ಜಗಳವು ವಿಕೋಪಕ್ಕೆ ತಿರುಗಿದ್ದು, ಬಾಲಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಮಾಡಲಾಗಿದೆ.

ಕೋಣನಕುಂಟೆ ಸಮುದಾಯ ಭವನ ಬಳಿ ಘಟನೆ ನಡೆದಿದ್ದು, ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಹಾಗೂ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ್ಯೆಕೋರರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

ಹೊಸಕೋಟೆ: ಹಳೆ ವೈಷಮ್ಯದ (Old vengeance) ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು (Gram Panchayat Member) ಬರ್ಬರವಾಗಿ (Hacked to death) ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಹೊಸಕೋಟೆ (Hosakote News) ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಅಪಾಕ್ ಅಮೀರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ. ಕಳೆದ ರಾತ್ರಿ ಅಟ್ಯಾಕ್ ಮಾಡಿ ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಅಪಾಕ್‌ ಅಮೀರ್‌ ಖಾನ್‌ ಗ್ರಾಮ ಪಂಚಾಯತಿ ಮುಂದೆ ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಗ್ರಾಮದ ಮೆಹಬೂಬ್ ಎಂಬಾತ ನುಗ್ಗಿ ಬಂದು ಕೊಚ್ಚಿ ಕೊಂದು ಹಾಕಿದ್ದಾನೆ.

ಕೊಲೆ ನಂತರ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಟೆರೇಸ್ ಮೇಲೆ ನಿಂತು ಜಗಳ ನೋಡುತ್ತಿದ್ದ ಮಹಿಳೆಗೇ ಬಿತ್ತು ಗುಂಡೇಟು!

ನವದೆಹಲಿ: ಟೆರೇಸ್‌ನಲ್ಲಿ ನಿಂತು ಹೊಡೆದಾಟವನ್ನು ನೋಡುತ್ತಿದ್ದ ಮಹಿಳೆಗೆ ಆಕಸ್ಮಿಕವಾಗಿ (Accident) ಗುಂಡು (shot) ತಾಗಿರುವ ಘಟನೆ ಉತ್ತರ ದೆಹಲಿಯ (north delhi) ದಯಾಲ್‌ಪುರದಲ್ಲಿ ನಡೆದಿದೆ. ಒಬ್ಬ ವ್ಯಕ್ತಿ ಮತ್ತೊಬ್ಬ ವ್ಯಕ್ತಿಗೆ ಗುಂಡು ಹಾರಿಸಿದಾಗ ಅದು ತಪ್ಪಿ ಟೆರೇಸ್ ಮೇಲೆ ನಿಂತು ಇವರ ಜಗಳ ನೋಡುತ್ತಿದ್ದ ಮಹಿಳೆಗೆ ತಗುಲಿದೆ ಎನ್ನಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈಶಾನ್ಯ ದೆಹಲಿಯ ದಯಾಲ್‌ಪುರ್‌ನಲ್ಲಿ ಜುಲೈ 2ರಂದು ಶನಿವಾರ ಇಬ್ಬರ ನಡುವೆ ಜಗಳವಾಗಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, 17 ಲಕ್ಷ ರೂಪಾಯಿಗಾಗಿ ಇವರ ನಡುವೆ ನಡೆದ ವಾದವು ಜಗಳಕ್ಕೆ ತಿರುಗಿತ್ತು. ಈ ನಡುವೆ ಒಬ್ಬ ವ್ಯಕ್ತಿ ಪಿಸ್ತೂಲ್ ಎಳೆದು ಮತ್ತೊಬ್ಬ ವ್ಯಕ್ತಿಯತ್ತ ಗುಂಡು ಹಾರಿಸಿದ್ದಾನೆ. ಆದರೆ, ಬುಲೆಟ್ ತಪ್ಪಿ ಟೆರೇಸ್‌ನಿಂದ ಜಗಳವನ್ನು ಗಮನಿಸುತ್ತಿದ್ದ 48 ವರ್ಷದ ಮಹಿಳೆಗೆ ಹೊಡೆದಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ ಗುಂಡೇಟಿನಿಂದ ಗಾಯಗೊಂಡಿದ್ದ ಮಹಿಳೆಯನ್ನು ಆಕೆಯ ಕುಟುಂಬದವರು ಜಿಟಿಬಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆರೋಪಿಗಳ ಪೈಕಿ ಬಬ್ಲು ಎಂಬಾತನಿಗೆ 17 ಲಕ್ಷ ರೂ.ಗಳನ್ನು ಸಾಲವಾಗಿ ನೀಡಿದ್ದಾಗಿ ದೂರುದಾರ ಹಾಶಿಮ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆತ ಬಬ್ಲುವನ್ನು ವಿಚಾರಿಸಲು ಹೋದಾಗ ವಾದವು ವಿಕೋಪಕ್ಕೆ ತಿರುಗಿದೆ. ಬಬ್ಲು ತನ್ನ ಸಹಚರರಾದ ಕಮರುಲ್, ಸುಹಾಲೆ ಮತ್ತು ಸಮ್ರುನ್‌ನೊಂದಿಗೆ ಬಂದಿದ್ದು, ಹಾಶಿಮ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಈ ನಡುವೆ ಕಮರುಲ್ ಎಂಬಾತ ಹಾಶಿಮ್‌ ಮೇಲೆ ಗುಂಡು ಹಾರಿಸಿದ ಎನ್ನಲಾಗಿದೆ. ಆದರೆ ಇದು ಗುರಿ ತಪ್ಪಿ ಮಹಿಳೆಗೆ ಹೊಡೆದಿದೆ. ಗುಂಡಿನ ದಾಳಿಯ ಅನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರು ದೆಹಲಿಯ ಬ್ರಿಜ್‌ಪುರಿ ನಿವಾಸಿಗಳಾದ ಬಬ್ಲು (38) ಮತ್ತು ಕಮರುಲ್ (26) ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಪಿಸ್ತೂಲ್, ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Student Death : ಕೌಟುಂಬಿಕ ಕಾರಣಕ್ಕೆ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಶರಣಾಗಿದ್ದಾಳೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ.

VISTARANEWS.COM


on

By

Student death Nursing college student commits suicide in Bengaluru
Koo

ಬೆಂಗಳೂರು: ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ (Student Death) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿಯಾ ಮಂಡೋಲ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ.

ಪಶ್ಚಿಮ ಬಂಗಾಳ‌ ಮೂಲದ ದಿಯಾ ಮಂಡೋಲ್‌ ಮದರ್ ಥೆರೆಸಾ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದಳು. ಕೌಟುಂಬಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸಹಪಾಠಿಗಳು ರೂಮಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

ವಿಜಯನಗರ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ (Self Harming ) ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ವಿಜಯನಗರದ ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ.

ಲೊಟ್ಟನಕೆರೆ ಗ್ರಾಮದ ಆಟೋ ಚಾಲಕ ಪ್ರಕಾಶ್ (43) ಆತ್ಮಹತ್ಯೆ ಮಾಡಿಕೊಂಡವರು. ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿಕೊಂಡಿದ್ದಾರೆ. ಪ್ರಕಾಶ್‌ ಕಳೆದ ಎರಡು ವರ್ಷದಿಂದ ಹಗಲು-ರಾತ್ರಿ ನಿದ್ದೆ ಬಾರದೇ ಖಿನ್ನತೆಗೆ ಒಳಗಾಗಿದ್ದರು.

Self harming

ಮಾನಸಿಕ ಕಾಯಿಲೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಖಿನ್ನತೆಯಿಂದ ಹೊರಬಾರಲು ಆಗದೆ ಪ್ರಕಾಶ್‌ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿರುವ ಡೆತ್‌ನೋಟ್‌ ಸಿಕ್ಕಿದೆ.

ಸದ್ಯ ಮೃತನ ತಮ್ಮನ ದೂರಿನ ಅನ್ವಯ ಕೊಟ್ಟೂರು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಕೂಡ್ಲಿಗಿ ಶವಾಗಾರಕ್ಕೆ ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ‌ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

Murde rCase: ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು.

VISTARANEWS.COM


on

murder case hosakote
Koo

ಹೊಸಕೋಟೆ: ಹಳೆ ವೈಷಮ್ಯದ (Old vengeance) ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರನ್ನು (Gram Panchayat Member) ಬರ್ಬರವಾಗಿ (Hacked to death) ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಹೊಸಕೋಟೆ (Hosakote News) ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗ್ರಾಮದ ಅಪಾಕ್ ಅಮೀರ್ ಖಾನ್ (45) ಮೃತ ಗ್ರಾಮ ಪಂಚಾಯತಿ ಸದಸ್ಯ. ಕಳೆದ ರಾತ್ರಿ ಅಟ್ಯಾಕ್ ಮಾಡಿ ಲಾಂಗು ಮಚ್ಚುಗಳಿಂದ ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಅಪಾಕ್‌ ಅಮೀರ್‌ ಖಾನ್‌ ಗ್ರಾಮ ಪಂಚಾಯತಿ ಮುಂದೆ ಫೋನ್‌ನಲ್ಲಿ ಮಾತನಾಡುತ್ತಾ ನಿಂತಿದ್ದಾಗ ಗ್ರಾಮದ ಮೆಹಬೂಬ್ ಎಂಬಾತ ನುಗ್ಗಿ ಬಂದು ಕೊಚ್ಚಿ ಕೊಂದು ಹಾಕಿದ್ದಾನೆ.

ಕೊಲೆ ನಂತರ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

Child Abandon: ಮೂರು ತಿಂಗಳ ಮಗು ಬಿಟ್ಟು ತಾಯಿ ಪರಾರಿ

ತುಮಕೂರು: ತಾಯಿಯೊಬ್ಬಳು ರಸ್ತೆ ಬದಿಯಲ್ಲಿ ಮೂರು ತಿಂಗಳ ಮಗುವನ್ನು ಅನಾಥವಾಗಿ ಬಿಟ್ಟು ಹೋಗಿರುವ ಪ್ರಕರಣ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೆಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಗುವಿನ ಅಳುವಿನ ಶಬ್ದ ಕೇಳಿ ಆಶಾ ಕಾರ್ಯಕರ್ತೆಯೊಬ್ಬರು ಮಗುವನ್ನ ರಕ್ಷಿಸಿದ್ದಾರೆ. ರಾತ್ರಿ ಊಟ ಮಾಡಿ ವಾಕಿಂಗ್ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಕಲಾವತಿ ಅವರಿಗೆ ರಸ್ತೆ ಬದಿಯಲ್ಲಿ ಅಳುತ್ತಿದ್ದ ಮಗುವಿನ ಶಬ್ದ ಕೇಳಿಸಿತ್ತು. ಸ್ಥಳಕ್ಕೆ ಹೋದಾಗ, ಮೂರು ತಿಂಗಳ ಮಗುವನ್ನು ಬಿಟ್ಟು ಹೋಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ನೊಣವಿನಕೆರೆ ಪೊಲೀಸರಿಗೆ ಆಶಾ ಕಾರ್ಯಕರ್ತೆ ಕಲಾವತಿ ಮಾಹಿತಿ ನೀಡಿದ್ದಾರೆ. ಆಂಬ್ಯುಲೆನ್ಸ್ ಮೂಲಕ ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ಮಗು ಕರೆದೊಯ್ಯಲಾಗಿದೆ. ವೈದ್ಯರು ಮಗುವಿನ ಆರೋಗ್ಯ ತಪಾಸಣೆ ನಡೆಸಿದ್ದು, ಆರೋಗ್ಯವಾಗಿರುವ ಮಗು 4.5 ಕೆಜಿಯಷ್ಟು ತೂಕವಿದೆ. ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಎಟಿಎಂಗಳ ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ (ATM theft) ಗ್ಯಾಂಗ್ ಬಗ್ಗೆ ಪೊಲೀಸರು ಇದೀಗ ತಲೆಕೆಡಿಸಿಕೊಂಡಿದ್ದಾರೆ. ಹರ್ಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ (Robbery Case) ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ನಿನ್ನೆ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇವರ ಖತರ್‌ನಾಕ್‌ ಬುದ್ಧಿ ಒಂದೆರಡಲ್ಲ. ಕಳ್ಳತನ ವೇಳೆ ಎಟಿಎಂನಲ್ಲಿರುವ ಸಿಸಿಟಿವಿ ಕ್ಯಾಮೆರಾ ಲೆನ್ಸ್‌ಗೆ ಕಪ್ಪು ಪೇಂಟ್‌ ಬಳಿಯುತ್ತಾರೆ. ಅಲ್ಲಿಗೆ ಅದೂ ಮಟಾಶ್.‌ ಬಳಿಕ ಗ್ಯಾಸ್ ಕಟರ್ ಬಳಸಿ ಎಟಿಎಂ ಓಪನ್ ಮಾಡಿ ಲಕ್ಷಾಂತರ ರೂಪಾಯಿ ಹಣ ದರೋಡೆ ಮಾಡುತ್ತಾರೆ. ಬೆಳ್ಳಂದೂರಿನಲ್ಲಿ ಜೂ. 6ರಂದು ಬೆಳಗಿನ ಜಾವ 3.30ಕ್ಕೆ ಕೃತ್ಯ ನಡೆಸಲಾಗಿದೆ. ಸದ್ಯ ಸಿಸಿಟಿವಿಯಲ್ಲಿ ಆರೋಪಿಗಳ ಕೃತ್ಯ ಸೆರೆಯಾಗಿದೆ.

ಈ ಸಂಬಂಧ ಏಜೆನ್ಸಿ ಸಿಬ್ಬಂದಿ ಕಿರಣ್ ಎಂಬುವವರಿಂದ ದೂರು ದಾಖಲಾಗಿದೆ. ಬೆಳ್ಳಂದೂರು ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಪ್ರತಿನಿತ್ಯ ರಾತ್ರಿ ವೇಳೆ ನಗರದ ಎಟಿಎಂಗಳ ಸುತ್ತಮುತ್ತಲೂ ಹೆಚ್ಚಾಗಿ ಗಸ್ತಿಗೆ ಹಿರಿಯ ಅಧಿಕಾರಿಗಳು ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Leopard attack : ರಾಯಚೂರಿನಲ್ಲಿ ಮೂವರ ಮೇಲೆ ದಾಳಿ ಮಾಡಿ ಕಾಲ್ಕಿತ್ತ ಚಿರತೆ!

Continue Reading
Advertisement
Mumbai hit and run
ದೇಶ9 mins ago

Mumbai Hit And Run: ಮುಂಬೈ ಹಿಟ್‌ ಆ್ಯಂಡ್‌ ರನ್‌ ಕೇಸ್‌; ಘಟನೆಗೂ ಮುನ್ನ ಬಾರ್‌ಗೆ ಹೋಗಿದ್ದ ಆರೋಪಿ, 18 ಸಾವಿರ ಬಿಲ್‌!

Actor Darshan Will Attend The Court Hearing From Online
ಕ್ರೈಂ16 mins ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Vicky Pedia I love you sanjana song trend
ವೈರಲ್ ನ್ಯೂಸ್18 mins ago

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Murder case
ಬೆಂಗಳೂರು27 mins ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Poonam Pandey bold photo with shadow and light
ಬಾಲಿವುಡ್51 mins ago

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Bus Accident
ಪ್ರಮುಖ ಸುದ್ದಿ55 mins ago

Bus Accident : ಶಾಲಾ ಬಸ್​ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ

Student death Nursing college student commits suicide in Bengaluru
ಬೆಂಗಳೂರು59 mins ago

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Pakistan
ವಿದೇಶ1 hour ago

Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

Kalki 2898 AD box office collection weekend 2
ಟಾಲಿವುಡ್1 hour ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

Viral Video
Latest1 hour ago

Viral Video: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ19 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ19 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌