Site icon Vistara News

DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

KPCC President dk shivakumar

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಫಲಿತಾಂಶಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕರ್ನಾಟಕ ಸೇರಿ ದೇಶಾದ್ಯಂತ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇದರ ಬೆನ್ನಲ್ಲೇ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. “ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ” ಎಂಬುದಾಗಿ ಹೇಳಿರುವುದು ಈಗ ಸಂಚಲನ ಮೂಡಿಸಿದೆ.

“ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ಕೇರಳದಲ್ಲಿ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ ಪೂಜೆ ನಡೆಯುತ್ತಿದೆ ಎಂಬುದು ಕೂಡ ಗೊತ್ತಿದೆ” ಎಂದು ಹೇಳಿದ ಅವರು ಯಾರೋ ಬರೆದು ಕೊಟ್ಟಿದ್ದಾರೆ ಎಂಬುದಾಗಿ ಜೇಬಿನಲ್ಲಿರುವ ಚೀಟಿಯನ್ನು ತೆಗೆದು ನೋಡಿದ್ದಾರೆ.

ಪಂಚಬಲಿ ಕೊಡುತ್ತಿದ್ದಾರೆ ಎಂದ ಡಿಸಿಎಂ

ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ ನಡೆಸಲಾಗುತ್ತಿದೆ. ಇದಕ್ಕಾಗಿ ಪಂಚ ಬಲಿ ಕೊಡುತ್ತಿದ್ದಾರೆ. 21 ಕಪ್ಪು ಮೇಕೆ, 3 ಎಮ್ಮೆ, 21 ಕುರಿ, 5 ಹಂದಿ ಹಾಗೂ ಕೋಣವನ್ನು ಬಲಿ ಕೊಡುತಿದ್ದಾರೆ. ಈಗ ಯಾಗ ನಡೆಯುತ್ತಿದ್ದು, ಅವರ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಆದರೆ, ನಾವು ನಂಬಿದ ದೇವರು ನಮ್ಮನ್ನು ಕಾಪಾಡುತ್ತಾನೆ. ಎಲ್ಲ ಡೀಟೇಲ್ಸ್‌ ಅನ್ನು ಚೀಟಿ ಬರೆದುಕೊಟ್ಟಿದ್ದಾರೆ. ಯಾರು ಭಾಗಿಯಾಗಿದ್ದರೋ ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಇದೆಲ್ಲವನ್ನು ರಾಜಕೀಯದವರಲ್ಲದೆ ಬೇರೆ ಯಾರು ಮಾಡಲು ಸಾಧ್ಯ. ಆದರೆ, ಇದೆಲ್ಲವನ್ನು ನಾವು ನಂಬುವುದಿಲ್ಲ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯ ಸರ್ಕಾರದ ವಿರುದ್ಧ ಕೇರಳದಲ್ಲಿ ರಾಜಕಂಟಕ ಯಾಗ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಸಿಎಂ, ಡಿಸಿಎಂ ಮಾರಣ ಮೋಹನ ಸ್ತಂಭನ ಪ್ರಯೋಗ ಯಾಗ ನಡೆಯುತ್ತಿದೆ. ಕೇರಳದ ನಿರ್ಜನ ಪ್ರದೇಶದಲ್ಲಿ ನಡೆದಿದೆ ಎಂಬ ಮಾಹಿತಿ ಇದೆ. ಇದೇ ಮಾಹಿತಿ ಆಧರಿಸಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜ”ಸ್ಥಾನ”ದಲ್ಲಿ ಕೂತವರ ವಿರುದ್ಧ ಪ್ರಯೋಗ ನಡೆದಿದೆ ಎಂದು ಪರೋಕ್ಷವಾಗಿ ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Exit mobile version