Site icon Vistara News

Swameeji death : ಬಾಗಲಕೋಟೆ ಜಿಲ್ಲೆಯ ಬಿದರಿ ಕಲ್ಮಠದ ಶಿವಲಿಂಗ ಸ್ವಾಮೀಜಿಗಳು ಲಿಂಗೈಕ್ಯ

Bidari kalmata swameeji

#image_title

ಬಾಗಲಕೋಟೆ: ಜಿಲ್ಲೆಯ ಪ್ರತಿಷ್ಠಿತ ಬಿದರಿ ಕಲ್ಮಠದ ಶಿವಲಿಂಗ ಸ್ವಾಮೀಜಿಗಳು (63) ಲಿಂಗೈಕ್ಯರಾಗಿದ್ದಾರೆ (Swameeji death). ಅವರು ಗುರುವಾರ ರಾತ್ರಿ 12 ಗಂಟೆy ವೇಳೆಗೆ ಹೃದಯಾಘಾತದಿಂದ ನಿಧನರಾದರು ಎಂದು ಮಠದ ಮೂಲಗಳು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ಮಠಕ್ಕೆ ಸ್ವಾಮೀಜಿಗಳಾಗಿರುವ ಇವರು ಸಾಮಾಜಿಕ, ಆಧ್ಯಾತ್ಮಿಕವಾಗಿ ಜನರಿಗೆ ಪ್ರೇರಕ ಶಕ್ತಿಯಾಗಿದ್ದರು.

ಗುರುವಾರ ರಾತ್ರಿ ಮಲಗಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಮಠದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ. ಶುಕ್ರವಾರ ಸಂಜೆ ನಾಲ್ಕು ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.

ಬಿದರಿ ಗ್ರಾಮದ ಕಲ್ಮಠದ ಆವರಣದೊಳಗೆ ವೀರಶೈವ ಲಿಂಗಾಯತ ಸಂಪ್ರದಾಯ ಪ್ರಕಾರ ಅಂತ್ಯಸಂಸ್ಕಾರ ನಡೆಯಲಿದೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮರೆಗುದ್ದಿ ಗ್ರಾಮ ಸ್ವಾಮೀಜಿಗಳ ಹುಟ್ಟೂರಾಗಿದ್ದು, ಕಳೆದ ಹಲವು ವರ್ಷಗಳ ಹಿಂದೆ ಮಠಕ್ಕೆ ಸ್ವಾಮೀಜಿಯಾಗಿ ಬಂದಿದ್ದರು.

ಮಂಗಳೂರಿನ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಲಾಡ್ಜ್‌ ಒಂದರಲ್ಲಿ ಒಂದೇ ಕುಟುಂಬದ ನಾಲ್ಕು ಜನ ಆತ್ಮಹತ್ಯೆ (Family suicide) ಮಾಡಿಕೊಂಡಿದ್ದಾರೆ. ಮಂಗಳೂರಿನ ಕೆಎಸ್ ರಾವ್ ರೋಡ್ ನಲ್ಲಿರುವ ಕರುಣಾ ಲಾಡ್ಜ್ ನಲ್ಲಿ ಈ ಘಟನೆ ನಡೆದಿದೆ.

ಮೈಸೂರು ಮೂಲದ ದೇವೇಂದ್ರ(48) ಎಂಬವರು ತಮ್ಮ ಕುಟುಂಬ ಸಮೇತ ಸಾವಿಗೆ ಶರಣಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳ ಸಹಿತ ಲಾಡ್ಜ್‌ಗೆ ಬಂದಿದ್ದ ಅವರು ಅಲ್ಲೇ ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ.

ದೇವೇಂದ್ರ ಅವರು ಮೈಸೂರಿನ ವಾಣಿವಿಲಾಸ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ :Crime News: ಮ್ಯಾಟ್ರಿಮೋನಿಯಲ್‌ ಸೈಟಿನಲ್ಲಿ ಸಿಕ್ಕಿದ ಸಲಿಂಗಪ್ರೇಮಿ ಗಂಡನಿಂದ ಹೆಂಡತಿಗೆ ಕಿರುಕುಳ, ದೂರು

Exit mobile version