Site icon Vistara News

Bharath jodo yatra : ಕಾಲೇಜು ಕ್ಯಾಂಪಸ್‌ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್ ತೊಲಗಿಸಬೇಕು ಎಂದ ಸುಧೀರ್ ಮುರೊಳ್ಳಿ

Godse virus college shivamogga Sudheer Murali

#image_title

ಶಿವಮೊಗ್ಗ: ಶಿವಮೊಗ್ಗದ ನೆಲದಲ್ಲಿ ಸ್ವಾತಂತ್ರ್ಯ ವೀರರು ಹುಟ್ಟಿದ್ದಾರೆ. ಇದು ಜಾತ್ಯತೀತ ನಿಲುವುಗಳ ನೆಲ. ಸಮಾಜವಾದಿಗಳ ತವರು. ಇಂತಹ ನೆಲದ ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂದು ಗೋಡ್ಸೆ ವೈರಸ್ ಹರಡಲಾಗುತ್ತಿದೆ. ಇದನ್ನು ತಡೆಯಬೇಕು ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಸುಧೀರ್ ಮುರೊಳ್ಳಿ ಹೇಳಿದರು. ಶಿವಮೊಗ್ಗ ನಗರ ಎನ್.ಎಸ್.ಯು.ಐ. ವತಿಯಿಂದ ನಗರದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ (ಜ.೩೦) ಸಂಜೆ ಆಯೋಜಿಸಿದ್ದ ಭಾರತ್ ಜೋಡೋ ಯಾತ್ರೆಯ (Bharath jodo yatra) ಸಮಾರೋಪ ಸಮಾರಂಭ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ʻʻಕಾಲೇಜು ಕ್ಯಾಂಪಸ್‌ಗಳಲ್ಲಿ ಹರಡುತ್ತಿರುವ ಗೋಡ್ಸೆ ವೈರಸ್ ಅನ್ನು ತಡೆಯಬೇಕು. ಗಾಂಧೀಜಿ ಚಿಂತನೆಗಳು ಮೊಳಗಬೇಕು. ಆ ನಿಟ್ಟಿನಲ್ಲೇ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮೂಲಕ ಸಂದೇಶ ನೀಡಿದ್ದಾರೆ. ಯುವಕರು ಅದನ್ನು ಅನುಸರಿಸಬೇಕುʼʼ ಎಂದರು.

ಇದನ್ನೂ ಓದಿ | Air India: ಒಂದು ವ್ಹೀಲ್​ ಚೇರ್​ ಕೂಡ ಇಲ್ಲ; ಏರ್​ ಇಂಡಿಯಾದ್ದು ಅತ್ಯಂತ ಕಳಪೆ ಸೇವೆ ಎಂದು ಕಿಡಿ ಕಾರಿದ ಬಿಜೆಪಿ ನಾಯಕಿ ಖುಷ್ಬು

ʻʻಗಾಂಧೀಜಿ ಅವರನ್ನು ಕೊಂದಿದ್ದು ಗೋಡ್ಸೆ ಎಂಬ ಒಬ್ಬ ವ್ಯಕ್ತಿಯಲ್ಲ. ಅಂದು ದೇಶ ವಿಭಜನಗೆ ಕಾರಣವಾಗಿದ್ದ ಹಿಂದೂ ಮಹಾಸಭಾ 1937ರ ಸಭೆಯಲ್ಲಿ ದೇಶ ವಿಭಜನೆಯ ನಿರ್ಧಾರ ಕೈಗೊಂಡಿತ್ತು. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಸಭೆಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿತ್ತು. ಅವರನ್ನು ಸಂವಿಧಾನ ರಚನಾ ಸಮಿತಿಯ ಸಭೆಯ ಅಧ್ಯಕ್ಷರನ್ನಾಗಿ ಮಾಡಿದ್ದರಿಂದ ಗೋಡ್ಸೆಯ ರೂಪದಲ್ಲಿ ಒಂದು ಸಿದ್ಧಾಂತವೇ ಗಾಂಧೀಜಿ ಅವರನ್ನು ಕೊಂದಿತ್ತುʼʼ ಎಂದು ವಿವರಿಸಿದರು.

ʻʻಬಿಜೆಪಿ 8 ರ್ಷಗಳ ಹಿಂದೆ ‘ಬಿಜೆಪಿಯೇ ಭರವಸೆ’ ಎಂಬ ಘೋಷ ವಾಕ್ಯದಡಿ ಅಧಿಕಾರಕ್ಕೆ ಬಂತು. ಅಲ್ಲಿಂದ ಇಲ್ಲಿಯವರೆಗೂ ಎಲ್ಲವನ್ನೂ ಭರವಸೆಗಳಲ್ಲೇ ಉಳಿಸಿದೆ. 2014 ರಲ್ಲಿ 5 ರೂ.ಗೆ ಒಂದು ಕೆಜಿ ಉಪ್ಪು ಸಿಗುತ್ತಿತ್ತು. ಇಂದು 15 ರೂ.ಗೆ ಏರಿಕೆಯಾಗಿದೆ. 60 ರೂ.ಗೆ ಸಿಗುತ್ತಿದ್ದ ಪೆಟ್ರೋಲ್ 100 ರೂ.ನ ಗಡಿ ದಾಟಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡಲಾಗುತ್ತಿದೆʼʼ ಎಂದರು.

#image_title

ಬಿಜೆಪಿ ಸರ್ಕಾರ ಅದಾನಿ – ಅಂಬಾನಿಯವರ ರಕ್ಷಣೆಗಿರುವ ಸರ್ಕಾರ. ಅವರ ಅನುಕೂಲಕ್ಕಾಗಿ ಸರ್ಕಾರ ನಡೆಯುತ್ತಿದೆ. ಅವರ ಕಂಪನಿಗಳಿಗಾಗಿರುವ 18 ಸಾವಿರ ಕೋಟಿ ರೂ. ನಷ್ಟವನ್ನು ಭರಿಸಲು ಸಾರ್ವಜನಿಕ ಉದ್ದಿಮೆಗಳಿಗೆ ಬೀಗ ಹಾಕಲಾಗುತ್ತಿದೆ.

ಇದನ್ನೂ ಓದಿ | IND VS NZ: ಭಾರತ-ಕಿವೀಸ್​ 2ನೇ ಟಿ20 ಪಂದ್ಯದ ಕಳಪೆ ಪಿಚ್: ಲಕ್ನೋ ಪಿಚ್ ಕ್ಯುರೇಟರ್ ವಜಾ

ಕಾಂಗ್ರೆಸ್ ಈ ಹಿಂದೆ ಎರಡು ಬಾರಿ ಶಿಕ್ಷಣ ನೀತಿಗಳನ್ನು ರೂಪಿಸಿದೆ. ಮೊದಲು ರೂಪಿಸಿದ ಶಿಕ್ಷಣ ನೀತಿಯಲ್ಲಿ ಸರ್ವರಿಗೂ ಶಿಕ್ಷಣದ ಗುರಿ ಹೊಂದಲಾಗಿತ್ತು. 1983ರಲ್ಲಿ ರೂಪಿಸಿದ ಎರಡನೇ ಶಿಕ್ಷಣ ನೀತಿ ಜಾಗತಿಕ ಮಾರುಕಟ್ಟೆಗೆ ಅನುಕೂಲವಾಗುವಂತಹ ಶಿಕ್ಷಣ ಒದಗಿಸಿದರೆ, ಕೊರೊನಾ ಸಂದರ್ಭದಲ್ಲಿ ಯಾವುದೇ ಚರ್ಚೆ ಇಲ್ಲದೇ ಜಾರಿಗೆ ತಂದ ಎನ್‌ಇಪಿ, ಬಡವರ, ದಲಿತರ, ಅಲ್ಪಸಂಖ್ಯಾತರನ್ನು ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ | ಮಕ್ಕಳ ಕಥೆ: ಬೀರಬಲ್ಲನ ಕಥೆ: ನಿಜವಾದ ರಾಜ ಯಾರು?

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಮಾತನಾಡಿ, ರಾಹುಲ್ ಗಾಂಧಿ ಅವರು 138 ದಿನಗಳ ಕಾಲ ದೇಶದ ಉದ್ದಗಲಕ್ಕೂ 4084 ಕಿ.ಮೀ. ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ. ಇದು ಪಕ್ಷದ ಕಾರ್ಯಕ್ರಮವಲ್ಲ, ದೇಶದ ಮನಸ್ಸುಗಳನ್ನು ಒಂದುಗೂಡಿಸುವ ಯಾತ್ರೆ. ಅದನ್ನು ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಬಣ್ಣಿಸಿದರು.
ರಾಜ್ಯ ಕಾಂಗ್ರೆಸ್ ವಕ್ತಾರ ಬಿ.ಎ. ರಮೇಶ್ ಹೆಗ್ಡೆ ಮಾತನಾಡಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಪ್ರಮುಖರಾದ ಎಸ್.ಪಿ. ದಿನೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ ಹಾಗೂ ದೀಪಕ್ ಸಿಂಗ್, ಅಲ್ಪಸಂಖ್ಯಾತರ ನಾಯಕರಾದ ಮೊಹಮ್ಮದ್ ನಿಹಾಲ್ , ಆರಿಫ್ , ಜಿಲ್ಲಾ ಕಾಂಗ್ರೆಸ್ ಮುಖಂಡರಾದ ರವಿಕುಮಾರ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯಕುಮಾರ್, ಪ್ರವೀಣ, ರವಿ ಕಾಟಿಕೆರೆ, ಚರಣ್, ಹರ್ಷಿತ್, ಕೆ. ಚೇತನ್, ಸಿ.ಜಿ. ಮಧುಸೂದನ್, ಶಿವು ಮಲಗುಪ್ಪ, ಗಿರೀಶ್ , ವಿಕ್ರಂ, ರವಿ, ಸೇರಿದಂತೆ ಹಲವರಿದ್ದರು.

ಇದನ್ನೂ ಓದಿ | Ramesh Jarkiholi : ಸಿಡಿ ಪ್ರಕರಣವನ್ನು ಸಿಬಿಐಗೆ ನೀಡುತ್ತಾರ ಸಿಎಂ?: ರಮೇಶ್‌ ಜಾರಕಿಹೊಳಿ ಭೇಟಿ ಕುತೂಹಲ

Exit mobile version