Site icon Vistara News

Shivamogga News: ದೇಶ ಮುಂದುವರಿಯಲು ಹೂಡಿಕೆ ಹೆಚ್ಚಾಗಬೇಕು: ಪ್ರೊ.ಬಿ.ಪಿ. ವೀರಭದ್ರಪ್ಪ

Job Fair Kuvempu University shivamogga

#image_title

ಶಿವಮೊಗ್ಗ: ಉದ್ಯೋಗ ಪ್ರಪಂಚದ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡುತ್ತದೆ. ಯಾವ ದೇಶ ಹಾಗೂ ಅಲ್ಲಿನ ಸಮಾಜ ಅಭಿವೃದ್ಧಿ ಹೊಂದಬೇಕೆಂದರೆ ಆ ದೇಶದಲ್ಲಿ ಹೂಡಿಕೆ ಹೆಚ್ಚಾಗಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯ ಹಾಗೂ ಕನೆಕ್ಟಿಂಗ್ ಎಜುಕೇಷನ್ ಆ್ಯಂಡ್ ಎಂಟರ್‌ಪ್ರೈಸಸ್ ಸಹಯೋಗದೊಂದಿಗೆ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಶನಿವಾರ (ಫೆ.೪) ಏರ್ಪಡಿಸಿದ್ದ ಜಾಬ್ ಫೇರ್ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಹಸಿವು, ನಿರ್ಗತಿಕ ಹಾಗೂ ದಾರಿದ್ರ್ಯ ತೊಲಗಿ ಇವರೆಲ್ಲರ ಬೆಳವಣಿಗೆಯನ್ನು ನಾನು ನೋಡಬೇಕು. ಆ ಯಶಸ್ವಿಯಲ್ಲಿ ಭಾಗವಹಿಸಿಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ. ಅದರಂತೆಯೇ ಈಗ ಪ್ರಧಾನಿ ಮೋದಿ ಅವರು ದೇಶದ ಪ್ರತಿಯೊಬ್ಬರ ಮನೆಯಲ್ಲಿ ಒಬ್ಬರಿಗೆ ಕೆಲಸ ನೀಡಬೇಕೆಂದು ಹೇಳುವ ಮೂಲಕ ದೇಶದಲ್ಲಿ ನಿರುದ್ಯೋಗ ತೊಡೆದು ಹಾಕುವಲ್ಲಿ ಮುಂದಾಗಿದ್ದಾರೆ ಎಂದರು.

ಗಾಂಧಿ ಕಂಡ ಕನಸನ್ನು ಸಾಕಾರಗೊಳಿಸುವಲ್ಲಿ ಪ್ರಧಾನಿ ಮೋದಿ ಅವರು ಸಾಕಷ್ಟು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉದ್ಯೋಗ ‌ಆಕಾಂಕ್ಷಿಗಳು ಸಾರ್ವಜನಿಕರು ಸೇವೆಯನ್ನು ಅರಸಿ ಈಗಾಗಲೇ ಸಾಕಷ್ಟು ಸಮಯ ಹಾಳು‌ ಮಾಡಿಕೊಂಡಿದ್ದಾರೆ. ಅವರ ಬದುಕನ್ನು ಮತ್ತೆ ಉತ್ತೇಜಿಸಲು ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಉದ್ಯೋಗ ಆಕಾಂಕ್ಷಿಗಳಿಗೆ ಕುವೆಂಪು ವಿವಿ ಆಶಾಕಿರಣವಾಗಿದೆ ಎಂದರು.

ಇದನ್ನೂ ಓದಿ: ವಿಕಿಪೀಡಿಯಾವನ್ನೇ ನಿರ್ಬಂಧಿಸಿದ ಪಾಕಿಸ್ತಾನ; 48ಗಂಟೆ ಕಳೆದರೂ ಹೇಳಿದ ಮಾತು ಕೇಳಲಿಲ್ಲ ಎಂದು ಅಸಮಾಧಾನ !

ಇತ್ತೀಚೆಗೆ ಯುವ ಜನತೆಯು ಗೋಡೆಗಳ ಮಧ್ಯೆಯೇ ಬೆಳೆದು ವಿಶ್ವವನ್ನು ಅರ್ಥ ಮಾಡಿಕೊಳ್ಳಲು ಮುಂದಾಗಿದ್ದು, ಇದರಿಂದ ಆಚೆ ಬಂದಾಗ ಮಾತ್ರ ಈ ಜಗತ್ತು ಏನೆಂದು ಅರ್ಥ ಆಗುತ್ತದೆ. ವಿದ್ಯಾರ್ಥಿಗಳು ಜಗದಗಲ ಮುಗಿದಗಲ ಬೆಳೆಯಬೇಕು. ಇದಕ್ಕೆ ನಮ್ಮ ವಿವಿ ಸದಾ ಸಹಕಾರ ನೀಡುತ್ತಿದೆ‌. ಕೋವಿಡ್‌ನಿಂದ ಕಳೆದುಕೊಂಡ ಅವಕಾಶವು ಈಗ ಉದ್ಯೋಗ ಮೇಳ‌ ಮುಖಾಂತರ ನಿಮ್ಮ‌ ಮುಂದೆ ಇದೆ. ಈ ಅವಕಾಶವನ್ನು ಬೆಳೆಸಿಕೊಳ್ಳಬೇಕು ಎಂದರು.

ಇಲ್ಲಿ ಎಲ್ಲರೂ ಉದ್ಯೋಗಾಕಾಂಕ್ಷಿಗಳೇ ಆಗಿದ್ದಾರೆ. ಆದರೆ ಅದನ್ನು ಪಡೆಯುವ ಶ್ರಮ ವಹಿಸಬೇಕು. ಜಗತ್ತಿನಾದ್ಯಂತ ಸಾಕಷ್ಟು ಕಂಪನಿಗಳಿವೆ. ಅದನ್ನು ಪಡೆಯುವಲ್ಲಿ ಕೌಶಲ್ಯವನ್ನೂ ಕರಗತ ಮಾಡಿಕೊಳ್ಳಬೇಕು. ಈಗಾಗಲೇ ಉದ್ಯೋಗ ಮೇಳದಲ್ಲಿ ೩೦ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ೪೦೦೦ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಉದ್ಯೋಗ ಮೇಳ ಇಷ್ಟಕ್ಕೆ ‌ಮಾತ್ರ ಸಿಮೀತವಾಗದೆ ಮುಂದಿನ ದಿನಗಳು 100 ಕಂಪನಿಗಳು ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಯಾವುದಕ್ಕೂ ಸಿಮೀತವಾಗದೆ ಕೃಷಿ, ಕೈಗಾರಿಕೆ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಬಲಾಢ್ಯ ದೇಶವನ್ನು ಕಟ್ಟಲು ವಿದ್ಯಾರ್ಥಿಗಳು ಸಹಕಾರ ನೀಡಬೇಕು ಎಂದರು.

ಇದನ್ನೂ ಓದಿ: Kantara Movie : ಸಮಸ್ಯೆ ಹೇಳಿಕೊಂಡು ಬಂದ ವಿವಾಹಿತೆಯನ್ನು ತಾನೇ ವರಿಸುವುದಾಗಿ ಹೇಳಿದ ದೈವ ಪಾತ್ರಿ!

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಪ್ರಾಂಶುಪಾಲ ಪ್ರೊ.ಕೆ.ಬಿ ಧನಂಜಯ, ಕುವೆಂಪು ವಿವಿ ಪ್ಲೇಸ್‌ಮೆಂಟ್ ಅಧಿಕಾರಿಗಳು ಡಾ.ಕೆ.ಆರ್.ಮಂಜುನಾಥ್, ವಾಣಿಜ್ಯ ಹಾಗೂ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಎಂಕೆ. ವೀಣಾ, ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೊ.ಎನ್. ರಾಜೇಶ್ವರಿ ಇನ್ನಿತರರಿದ್ದರು.

Exit mobile version