Shivamogga News Let former MLA Halappa Harathalu change his behavior Congress leader Somasekhara Lavigere s statement Shivamogga News: ಮಾಜಿ ಶಾಸಕ ಹರತಾಳು ಹಾಲಪ್ಪ ದರ್ಪದ ನಡವಳಿಕೆ ತಿದ್ದಿಕೊಳ್ಳಲಿ: ಸೋಮಶೇಖರ ಲ್ಯಾವಿಗೆರೆ - Vistara News

ಕರ್ನಾಟಕ

Shivamogga News: ಮಾಜಿ ಶಾಸಕ ಹರತಾಳು ಹಾಲಪ್ಪ ದರ್ಪದ ನಡವಳಿಕೆ ತಿದ್ದಿಕೊಳ್ಳಲಿ: ಸೋಮಶೇಖರ ಲ್ಯಾವಿಗೆರೆ

Shivamogga News: ಮಾಜಿ ಶಾಸಕ ಹಾಲಪ್ಪ ಹರತಾಳು ನನ್ನ ಜೀವ ಇರುವ ತನಕ ಗೋಪಾಲಕೃಷ್ಣ ಬೇಳೂರು ಅವರನ್ನು ವಿಧಾನಸೌಧದ ಮೆಟ್ಟಿಲು ಹತ್ತಲು ಬಿಡುವುದಿಲ್ಲ ಎಂದಿದ್ದರು, ಆದರೆ ಶಾಸಕರ ದುರಂಹಕಾರಿ ವರ್ತನೆಗೆ ಕ್ಷೇತ್ರದ ಜನರು ತಕ್ಕಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಸೋಮಶೇಖರ ಲ್ಯಾವಿಗೆರೆ ದೂರಿದ್ದಾರೆ.

VISTARANEWS.COM


on

Sagara Congress leader Somasekhara Lavigere pressmeet
ಸಾಗರ:ಕಾಂಗ್ರೆಸ್‌ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಸೋಮಶೇಖರ ಲ್ಯಾವಿಗೆರೆ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಗರ: ಮಾಜಿ ಶಾಸಕ ಹರತಾಳು ಹಾಲಪ್ಪ (Halappa Harathalu) ನನ್ನ ಜೀವ ಇರುವ ತನಕ ಗೋಪಾಲಕೃಷ್ಣ ಬೇಳೂರು ಅವರನ್ನು ವಿಧಾನಸೌಧದ ಮೆಟ್ಟಿಲು ಹತ್ತಲು ಬಿಡುವುದಿಲ್ಲ ಎಂದಿದ್ದರು. ಆದರೆ, ಶಾಸಕರ ದುರಂಹಕಾರಿ ವರ್ತನೆ, ದುಡ್ಡಿನ ದರ್ಪಕ್ಕೆ ಕ್ಷೇತ್ರದ ಜನರು ತಕ್ಕಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ತಾ.ಪಂ. ಮಾಜಿ ಸದಸ್ಯ ಸೋಮಶೇಖರ ಲ್ಯಾವಿಗೆರೆ ದೂರಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಮಾಜಿ ಶಾಸಕರು ನಮ್ಮ ನಾಯಕರನ್ನು ಏಕವಚನದಿಂದ ಕೇವಲವಾಗಿ ಮಾತನಾಡುವ ಮೂಲಕ ತಮ್ಮ ಕೆಳಮಟ್ಟದ ವ್ಯಕ್ತಿತ್ವ ಪ್ರದರ್ಶನ ಮಾಡಿದ್ದರು. ಐದು ವರ್ಷಕ್ಕೊಮ್ಮೆ ಚುನಾವಣೆ ಬರುತ್ತದೆ, ಹೋಗುತ್ತದೆ. ಆದರೆ ಮಾಜಿ ಶಾಸಕರು ತಮ್ಮ ದರ್ಪದ ನಡವಳಿಕೆಯನ್ನು ತಿದ್ದಿಕೊಳ್ಳಲಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: UPSC Result 2022: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದ 25ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆ

ಆನಂದಪುರಂ ಹೋಬಳಿಯ ಕೆಲವು ಸ್ವಯಂಘೋಷಿತ ಕಾಂಗ್ರೆಸ್ ನಾಯಕರು ತಮ್ಮಿಂದಲೆ ಕಾಂಗ್ರೆಸ್‌ ಪಕ್ಷ ಎಂಬ ಭ್ರಮೆಯಲ್ಲಿದ್ದರು. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಗೊಳ್ಳುವ ಮೂಲಕ ಕಾಂಗ್ರೆಸ್‌ಗೆ ಹಿನ್ನಡೆ ಉಂಟು ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಆನಂದಪುರಂ ಹೋಬಳಿಯಲ್ಲಿ ಈ ಬಾರಿ 5 ಸಾವಿರಕ್ಕೂ ಹೆಚ್ಚು ಲೀಡ್ ಪಕ್ಷಕ್ಕೆ ಬಂದಿದೆ. ಇದರ ಹಿಂದೆ ಎಲ್ಲರ ಶ್ರಮವಿದೆ. ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಿದ್ದವರಿಗೆ ಹೋಬಳಿ ಜನ ತಕ್ಕಪಾಠ ಕಲಿಸಿದ್ದಾರೆ. ಪಕ್ಷ ಬಿಟ್ಟು ಹೋದ ನಾಯಕರ ಜೊತೆ ಯಾರೂ ಹೋಗದೆ, ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಗೋಪಾಲಕೃಷ್ಣ ಬೇಳೂರು ನೇತೃತ್ವದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿ ಸೌಹಾರ್ದತೆಯಿಂದ ಕೂಡಿದ ಆಡಳಿತ ನೀಡಲಾಗುತ್ತದೆ. ಸಾರ್ವಜನಿಕರು ತಮ್ಮ ಕೆಲಸಗಳಿಗೆ ಮಧ್ಯವರ್ತಿಗಳಿಲ್ಲದೆ ನೇರವಾಗಿ ಶಾಸಕರನ್ನು ಭೇಟಿಯಾಗಿ ಚರ್ಚೆ ಮಾಡಬಹುದು ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ಮುಖಂಡ ಎಸ್.ಲಿಂಗರಾಜ್ ಮಾತನಾಡಿ, ಸಾಗರ ಕ್ಷೇತ್ರದಲ್ಲಿ ಕಾಗೋಡು ತಿಮ್ಮಪ್ಪ ನಂತರ ಯಾರಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. ಇದರಿಂದ ಅಭಿವೃದ್ಧಿ ಕೆಲಸ ತೀರ ಹಿಂದೆ ಬಿದ್ದಿದೆ. ಗೋಪಾಲಕೃಷ್ಣ ಬೇಳೂರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜಿಲ್ಲೆಯಲ್ಲಿ ಹಿಂದುಳಿದ ವರ್ಗಕ್ಕೆ ಸಮರ್ಥ ನಾಯಕತ್ವ ನೀಡುವ ಶಕ್ತಿ ಹೊಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪಕ್ಷವನ್ನು ಸಂಘಟಿಸಲು, ಕಾಂಗ್ರೆಸ್‍ಗೆ ಹೆಚ್ಚಿನ ಮತ ತರುವಲ್ಲಿ ಬೇಳೂರು ಪ್ರಮುಖ ಪಾತ್ರ ವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.

ಇದನ್ನೂ ಓದಿ: 2000 Notes Withdrawan : 10,000 ರೂ. ನೋಟು ಮುದ್ರಣಕ್ಕೆ ರಘುರಾಮ್‌ ರಾಜನ್‌ ನೀಡಿದ್ದ ಸಲಹೆ ಏನಾಯಿತು?

ಸುದ್ದಿಗೋಷ್ಠಿಯಲ್ಲಿ ಶೇಖರಪ್ಪ, ಮಂಜುನಾಥ್ ದಾಸನ್, ಆನಂದ್ ಹರಟೆ, ರವಿಕುಮಾರ್ ಯಡೇಹಳ್ಳಿ, ವಿಜಯಕುಮಾರ್, ಬಸವರಾಜ್, ಗಜೇಂದ್ರ, ವಿಠ್ಠಲ್ ಕೆ., ಹಾಲಪ್ಪ, ಕಿರಣ್ ದೊಡ್ಮನೆ, ರಾಕೇಶ್, ಶೇಖ್ ಅಮೀರ್, ಪ್ರಮೋದ್ ಶೇಟ್, ಸುಭಾಷ್ ಇತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case: ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

VISTARANEWS.COM


on

Hassan Pen Drive Case Where is Prajwal in Germany SIT is on lookout
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Hassan Pen Drive Case: ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬಗ್ಗೆ ನೆನ್ನೆ ರಾತ್ರಿಯೇ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Hassan Pen Drive Case
Koo

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದರಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಉಚ್ಚಾಟನೆ ಬಗ್ಗೆ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನೆನ್ನೆ ರಾತ್ರಿಯೇ ಈ ಬಗ್ಗೆ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಿ? ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ನಡೆದಿದ್ದರೆ ಈ ನೆಲ್ಲದಲ್ಲಿ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ನನ್ನ ನಿಲುವು ಮುಂದುವರಿದಿದೆ ಎಂದು ಹೇಳಿದರು.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾನೂನು ಉಲ್ಲಂಘನೆ ಆಗಿದ್ದರೆ ಕ್ರಮ ಆಗಲಿ, ಚುನಾವಣೆ ಸಮಯದಲ್ಲಿ ಪೆನ್ ಡ್ರೈ ಹಂಚಿರುವುದು ಕೂಡ ತನಿಖೆ ಯಾಗಬೇಕು. ಯಾರಿಂದ ಹೊರಬಂದಿದೆ, ಯಾರು ಲಕ್ಷಾಂತರ ಪೆನ್ ಡ್ರೈ ಹಂಚಿದವರು ಯಾರು ಅಂತ ತಿಳಿಯಬೇಕು. ಪೆನ್ ಡ್ರೈ ಹಂಚಿದ್ದು ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Hassan Pen drive case

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ್ದಾರೆ (Hassan Pen Drive Case) ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅವರ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ. ಇದರಿಂದ ತಂದೆ-ಮಗನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹೇಳಿರುವುದು ಕಂಡುಬಂದಿದೆ.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ದೂರುದಾರೆಯ ಅತ್ತೆ ಗೌರಮ್ಮ ಸುದ್ದಿಗೋಷ್ಠಿ ನಡೆಸಿದ್ದು, ದೂರುದಾರೆಗೆ ಭವಾನಿ ರೇವಣ್ಣನವರೇ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ರೇವಣ್ಣನವರ ಕುಟುಂಬ ನಮ್ಮ ಮೇಲೆ ಯಾವುದೇ ದೌರ್ಜನ್ಯ ಮಾಡಿಲ್ಲ. ದೂರುದಾರೆಯನ್ನು ಕರೆದುಕೊಂಡು ಹೋಗಿ ಇರಿಸಿಕೊಳ್ಳಿ ಎಂದು ನಾವೇ ಭವಾನಿ ಅಮ್ಮನವರಿಗೆ ಹೇಳಿದ್ದೆವು. ಅವರು ಯಾವ ದೌರ್ಜನ್ಯವೂ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರೇವಣ್ಣ ಅವರ ಮನೆಯಲ್ಲಿ ಮಹಿಳೆಯನ್ನು ನಾಲ್ಕು ವರ್ಷ ಕೆಲಸಕ್ಕೆ ಇರಿಸಿಕೊಂಡಿದ್ದರು ಮತ್ತೆ ನಾನು ಅಲ್ಲಿ ಇರೋದಿಲ್ಲ ಅಂತ ಆಕೆ ಹೇಳಿದ್ದಳು. ಐದು ವರ್ಷದಿಂದ ಸಮಸ್ಯೆ ಇಲ್ಲದೇ, ಈಗ ಯಾಕೆ ದೂರು ಕೊಟ್ಟಳು. ಅವರು ಯಾವುದೇ ದೌರ್ಜನ್ಯವೂ ಮಾಡಿಲ್ಲ. ಯಾರದೋ ಒತ್ತಡದಿಂದ ಮಹಿಳೆ ದೂರು ಕೊಟ್ಟಿದ್ದಾಳೆ. ಭವಾನಿ ರೇವಣ್ಣ ನಮಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದೂರುದಾರೆ ಸಾಲ ಮಾಡಿಕೊಂಡಿದ್ದಾಗ, ಭವಾನಿ ರೇವಣ್ಣನವರೇ ಅವರಿಗೆ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ರೇವಣ್ಣನವರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಈ‌ ರೀತಿ ಮಾಡಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿರುವುದರಲ್ಲಿ ಸತ್ಯವಿಲ್ಲ. ರೇವಣ್ಣನವರ ಮನೆಯಲ್ಲಿ ಯಾರೂ ಕೂಡ ಹಿಂಸೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಯಾವುದೋ ಒತ್ತಡಕ್ಕೆ ಸಿಲುಕಿ ದೂರುದಾರೆ ಈ ರೀತಿ ಮಾತನಾಡುತ್ತಿದ್ದಾಳೆ. ಸರಿಯಾದ ಹೆಂಗಸಾಗಿದ್ದರೆ ಐದು ವರ್ಷದ ಹಿಂದೆಯೇ ಪ್ರಶ್ನೆ ಮಾಡಬೇಕಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ವಿಚಾರ ಪ್ರಸ್ತಾಪ ಮಾಡಿಲ್ಲ. ಈಗ ಯಾವುದೋ ದುರುದ್ದೇಶ ಮತ್ತು ಒತ್ತಡದಿಂದ ಈ ರೀತಿ‌ ಮಾಡಿದ್ದಾರೆ. ಅವರ ದೂರಿನಲ್ಲಿ ಯಾವುದೇ ಸತ್ಯವಿಲ್ಲ, ಸರಿಯಾದ ರೀತಿ ತನಿಖೆ ಆಗಬೇಕು. ಪ್ರಕರಣದಿಂದ ನಮ್ಮ ಹಾಗೂ ರೇವಣ್ಣನವರ ಸಂಬಂಧ ಹಾಳಾಗುವ ಹಾಗೆ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Continue Reading

ಕರ್ನಾಟಕ

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

ಹಾಸನ ಜಿಲ್ಲೆಯ ಬಿಜೆಪಿ ಮುಖಂಡ, 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ. ದೇವರಾಜೇಗೌಡ ಅವರು 2023ರ ಡಿಸೆಂಬರ್‌ 8ರಂದೇ ಬಿಜೆಪಿ ನಾಯಕರಿಗೆ ಪತ್ರ ಬರೆದು, ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಪ್ರಸ್ತಾಪಿಸಿದ್ದರು. ಇದು ಪಕ್ಷಕ್ಕೆ ಮುಜುಗರ ತರುತ್ತದೆ ಎಂದು ಕೂಡ ಎಚ್ಚರಿಸಿದ್ದರು. ಅದರಂತೆ ಈಗ, ಜೆಡಿಎಸ್‌ ಹಾಗೂ ಬಿಜೆಪಿಯು ಪ್ರಕರಣದಲ್ಲಿ ಮುಜುಗರಕ್ಕೀಡಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಲೈಂಗಿಕ ದೌರ್ಜನ್ಯ ಎಸಗಿರುವ, ಅಶ್ಲೀಲ ವಿಡಿಯೊಗಳ ವೈರಲ್‌ ಆಗಿರುವ ಪ್ರಕರಣವು ಕರ್ನಾಟಕ ಮಾತ್ರವಲ್ಲ ದೇಶಾದ್ಯಂತ ಸುದ್ದಿಯಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (Hassan Pen Drive Case) ದಾಖಲಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಪಕ್ಷವಾದ ಬಿಜೆಪಿಗೂ ಇದು ಮುಜುಗರ ಉಂಟು ಮಾಡಿದೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಬಿಜೆಪಿ ನಾಯಕರೊಬ್ಬರು ಕೆಲ ತಿಂಗಳ ಹಿಂದೆಯೇ ಎಚ್ಚರಿಸಿದ್ದರು. ಆದರೂ, ಪ್ರಜ್ವಲ್‌ ರೇವಣ್ಣಗೇ ಟಿಕೆಟ್‌ ಸಿಕ್ಕಿತು ಎಂಬ ವಿಷಯವೀಗ ಬಹಿರಂಗವಾಗಿದೆ.

ಹೌದು, ಹಾಸನ ಜಿಲ್ಲೆಯ ಬಿಜೆಪಿ ಮುಖಂಡ, 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ. ದೇವರಾಜೇಗೌಡ ಅವರು 2023ರ ಡಿಸೆಂಬರ್‌ 8ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದರು. ಪ್ರಜ್ವಲ್‌ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೊಗಳು ಇವೆ. ಅವರಿಗೆ ಟಿಕೆಟ್‌ ನೀಡುವುದು ಒಳ್ಳೆಯದಲ್ಲ ಎಂಬುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರಿಗೂ ದೇವರಾಜೇಗೌಡ ಅವರು ಪತ್ರ ಬರೆದಿದ್ದರು. ಇಷ್ಟಾದರೂ, ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಕಣಕ್ಕಿಳಿದರು. ಈಗ ಇದು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಉಂಟುಮಾಡಿದೆ.

Prajwal Revanna Hassan Pen Drive Case What will SIT probe look like

ಪತ್ರದಲ್ಲಿ ಏನಿತ್ತು?

“ಪ್ರಜ್ವಲ್‌ ರೇವಣ್ಣ ಸೇರಿ ಎಚ್‌.ಡಿ.ದೇವೇಗೌಡ ಕುಟುಂಬದ ಹಲವರ ವಿರುದ್ಧ ಹತ್ತಾರು ಆರೋಪಗಳಿವೆ. ಪ್ರಜ್ವಲ್‌ ರೇವಣ್ಣ ಅವರ 2,976 ಅಶ್ಲೀಲ ವಿಡಿಯೊಗಳು ಇರುವ ಪೆನ್‌ಡ್ರೈವ್‌ ನನಗೆ ಸಿಕ್ಕಿದೆ. ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು, ಅದಕ್ಕೆ ಸಾಕ್ಷ್ಯಗಳು ಇವೆ. ಹಾಗಾಗಿ, ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಬಿಜೆಪಿಗೆ ಮುಜುಗರ ಉಂಟಾಗುತ್ತದೆ. ಅವರ ವಿಡಿಯೊಗಳೇ ಮುಂದೆ ನಮ್ಮ ವಿರುದ್ಧ ಬ್ರಹ್ಮಾಸ್ತ್ರವನ್ನಾಗಿ ಬಳಸಲಾಗುತ್ತದೆ. ಹಾಗಾಗಿ, ಟಿಕೆಟ್‌ ಘೋಷಣೆ ಮಾಡುವ ಮುನ್ನ ಯೋಚನೆ ಮಾಡುವುದು ಒಳಿತು” ಎಂಬುದಾಗಿ ಡಿ. ದೇವರಾಜೇಗೌಡ ಪತ್ರದ ಮೂಲಕ ಎಚ್ಚರಿಸಿದ್ದರು ಎಂದು ತಿಳಿದುಬಂದಿದೆ.

ಆರೋಪ ಸಾಬೀತಾದರೆ ಏನು ಶಿಕ್ಷೆ?

ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏನೆಲ್ಲಾ ಶಿಕ್ಷೆ ಆಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಮಹಿಳೆಯ ಜತೆ ಲೈಂಗಿಕ ಸಂಪರ್ಕ ಬೆಳೆಸುವುದು, ಲೈಂಗಿಕ‌ ಅನುಕೂಲಕ್ಕಾಗಿ ಬೇಡಿಕೆ ಇಡುವುದು. ಮಹಿಳೆಗೆ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲತೆ ತೋರಿಕೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿ ಸೆಕ್ಷನ್ ದಾಖಲು ಮಾಡಲಾಗುತ್ತದೆ. ಈ ಸೆಕ್ಷನ್ ಅಡಿ ಆರೋಪಿತ ವ್ಯಕ್ತಿಗೆ ಒಂದು ವರ್ಷ ಜೈಲು ಅಥವಾ ದಂಡ ವಿಧಿಸಲಾಗುತ್ತದೆ.

ಐಪಿಸಿ ಸೆಕ್ಷನ್ 354D– ಪದೇ ಪದೇ ಮಹಿಳೆಯರ ಸಂಪರ್ಕ ಬೆಳೆಸಲು ಪ್ರಯತ್ನ, ಇಂಟರ್ನೆಟ್ ಅಥವಾ ಇಮೇಲ್ ಅಥವಾ ವಿಡಿಯೊ ಕಾಲ್ ಸಂವಹನ ಮಾಡಿದರೆ ಈ ಸೆಕ್ಷನ್ ಅಡಿ ಪ್ರಕರಣ ದಾಖಲಾಗುತ್ತದೆ. ಇದಕ್ಕೆ ದಂಡ ಅಥವಾ ಮೂರು ವರ್ಷ ಜೈಲು ವಿಧಿಸುವ ಸಾಧ್ಯತೆ.

ಐಪಿಸಿ ಸೆಕ್ಷನ್ 509: ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕ್ರಿಯೆ.ಈ ಸೆಕ್ಷನ್ ಅಡಿ 3ವರ್ಷ ಸರಳ ಜೈಲು ಅಥವಾ ದಂಡ ವಿಧಿಸುವ ಸಾಧ್ಯತೆ ಇದೆ. ಸದ್ಯ ಈ ಎಲ್ಲಾ ಸೆಕ್ಷನ್‌ಗಳ ಅಡಿ ಸಂಸದ ಪ್ರಜ್ವಲ್‌ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಪ್ರಕರಣದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್‌ ಪ್ರಕರಣಕ್ಕೆ ಅಚ್ಚರಿಯ ತಿರುವು; ಅವರು ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Hassan Pen Drive Case: ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹಾಸನದಲ್ಲಿ ಹೇಳಿದ್ದಾರೆ.

VISTARANEWS.COM


on

Hassan Pen drive case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ್ದಾರೆ (Hassan Pen Drive Case) ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅವರ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ. ಇದರಿಂದ ತಂದೆ-ಮಗನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹೇಳಿರುವುದು ಕಂಡುಬಂದಿದೆ.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ದೂರುದಾರೆಯ ಅತ್ತೆ ಗೌರಮ್ಮ ಸುದ್ದಿಗೋಷ್ಠಿ ನಡೆಸಿದ್ದು, ದೂರುದಾರೆಗೆ ಭವಾನಿ ರೇವಣ್ಣನವರೇ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ರೇವಣ್ಣನವರ ಕುಟುಂಬ ನಮ್ಮ ಮೇಲೆ ಯಾವುದೇ ದೌರ್ಜನ್ಯ ಮಾಡಿಲ್ಲ. ದೂರುದಾರೆಯನ್ನು ಕರೆದುಕೊಂಡು ಹೋಗಿ ಇರಿಸಿಕೊಳ್ಳಿ ಎಂದು ನಾವೇ ಭವಾನಿ ಅಮ್ಮನವರಿಗೆ ಹೇಳಿದ್ದೆವು. ಅವರು ಯಾವ ದೌರ್ಜನ್ಯವೂ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರೇವಣ್ಣ ಅವರ ಮನೆಯಲ್ಲಿ ಮಹಿಳೆಯನ್ನು ನಾಲ್ಕು ವರ್ಷ ಕೆಲಸಕ್ಕೆ ಇರಿಸಿಕೊಂಡಿದ್ದರು ಮತ್ತೆ ನಾನು ಅಲ್ಲಿ ಇರೋದಿಲ್ಲ ಅಂತ ಆಕೆ ಹೇಳಿದ್ದಳು. ಐದು ವರ್ಷದಿಂದ ಸಮಸ್ಯೆ ಇಲ್ಲದೇ, ಈಗ ಯಾಕೆ ದೂರು ಕೊಟ್ಟಳು. ಅವರು ಯಾವುದೇ ದೌರ್ಜನ್ಯವೂ ಮಾಡಿಲ್ಲ. ಯಾರದೋ ಒತ್ತಡದಿಂದ ಮಹಿಳೆ ದೂರು ಕೊಟ್ಟಿದ್ದಾಳೆ. ಭವಾನಿ ರೇವಣ್ಣ ನಮಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದೂರುದಾರೆ ಸಾಲ ಮಾಡಿಕೊಂಡಿದ್ದಾಗ, ಭವಾನಿ ರೇವಣ್ಣನವರೇ ಅವರಿಗೆ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ರೇವಣ್ಣನವರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಈ‌ ರೀತಿ ಮಾಡಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿರುವುದರಲ್ಲಿ ಸತ್ಯವಿಲ್ಲ. ರೇವಣ್ಣನವರ ಮನೆಯಲ್ಲಿ ಯಾರೂ ಕೂಡ ಹಿಂಸೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಯಾವುದೋ ಒತ್ತಡಕ್ಕೆ ಸಿಲುಕಿ ದೂರುದಾರೆ ಈ ರೀತಿ ಮಾತನಾಡುತ್ತಿದ್ದಾಳೆ. ಸರಿಯಾದ ಹೆಂಗಸಾಗಿದ್ದರೆ ಐದು ವರ್ಷದ ಹಿಂದೆಯೇ ಪ್ರಶ್ನೆ ಮಾಡಬೇಕಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ವಿಚಾರ ಪ್ರಸ್ತಾಪ ಮಾಡಿಲ್ಲ. ಈಗ ಯಾವುದೋ ದುರುದ್ದೇಶ ಮತ್ತು ಒತ್ತಡದಿಂದ ಈ ರೀತಿ‌ ಮಾಡಿದ್ದಾರೆ. ಅವರ ದೂರಿನಲ್ಲಿ ಯಾವುದೇ ಸತ್ಯವಿಲ್ಲ, ಸರಿಯಾದ ರೀತಿ ತನಿಖೆ ಆಗಬೇಕು. ಪ್ರಕರಣದಿಂದ ನಮ್ಮ ಹಾಗೂ ರೇವಣ್ಣನವರ ಸಂಬಂಧ ಹಾಳಾಗುವ ಹಾಗೆ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Prajwal Revanna Hassan Pen Drive Case What will SIT probe look like

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ರಚನೆಯಾಗಿರುವ ಎಸ್‌ಐಟಿಯಿಂದ ಹೇಗೆ ಸಾಗಲಿದೆ? ಪ್ರಜ್ವಲ್‌ ಮುಂದಿರುವ ಕಾನೂನು ಅವಕಾಶಗಳೇನು ಎಂಬ ಬಗ್ಗೆ ಈಗ ಬಹುವಾಗಿ ಚರ್ಚೆಯಾಗುತ್ತಿದೆ.

ಇದು ಹೈಪ್ರೊಫೈಲ್‌ ಕೇಸ್‌ ಆಗಿದ್ದಲ್ಲದೆ, ಮಹಿಳೆಯರ ಮಾನ, ಮರ್ಯಾದೆಯ ವಿಚಾರವಾಗಿದೆ. ಜತೆಗೆ ದೂರುದಾರರ ರಕ್ಷಣೆಗೂ ಸಂಬಂಧಪಟ್ಟಿದೆ. ಈ ಕಾರಣದಿಂದಾಗಿ ಗೌಪ್ಯತೆಯಿಂದ ಸಂತ್ರಸ್ತೆಯಿಂದ ಸಿಆರ್‌ಪಿಸಿ 164 ಹೇಳಿಕೆಯನ್ನು ದಾಖಲು ಮಾಡಲಾಗುತ್ತದೆ. ಮಹಿಳಾ ಅಧಿಕಾರಿಗಳ ಸಮ್ಮುಖದಲ್ಲಿ ವಿಡಿಯೊ ರೆಕಾರ್ಡ್ ಮಾಡಿಕೊಳ್ಳುವ ಮೂಲಕ ಸಂತ್ರಸ್ತೆಯ ದೂರನ್ನು ದಾಖಲು ಮಾಡಿಕೊಳ್ಳಲಾಗುತ್ತದೆ. ಇನ್ನು ದೂರುದಾರೆ ತನ್ನ ಮೇಲೆ ನಡೆದ ಲೈಂಗಿ ದೌರ್ಜನ್ಯದ ಸ್ಥಳವನ್ನೂ ಮಹಜರು ಮಾಡಲಾಗುತ್ತದೆ. ಹೀಗಾಗಿ ಘಟನೆ ನಡೆದ ಸ್ಥಳಕ್ಕೆ ವಿಶೇಷ ತನಿಖಾ ದಳದ ಅಧಿಕಾರಿಗಳು ಬಂದು ಸಂತ್ರಸ್ತೆ ಹೇಳಿದ ರೀತಿ ಸ್ಥಳ ಇದೆಯೇ ಎಂಬುದನ್ನು ಪರಿಶೀಲನೆ ನಡೆಸುತ್ತಾರೆ.

ಇನ್ನು ಆರೋಪಿತ ಸ್ಥಾನದಲ್ಲಿರುವ ವ್ಯಕ್ತಿಯ ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗುತ್ತದೆ. ಅದರಲ್ಲಿ ಇರುವಂಥ ಡಾಟ ರೀಟ್ರೈವ್‌ ಮಾಡಲಾಗುತ್ತದೆ. ಜತೆಗೆ ಕಾಲ್ ಡಿಟೇಲ್ಸ್‌, ವಿಡಿಯೊ ಕಾಲ್ ಮಾಹಿತಿ ಸೇರಿದಂತೆ ಎಲ್ಲವನ್ನೂ ಕಲೆ ಹಾಕಲಾಗುತ್ತದೆ. ನಂತರ ಕಲೆ ಹಾಕಿದ ಟೆಕ್ನಿಕಲ್ ಎವಿಡೆನ್ಸ್‌ಗಳ ಸಹಿತ ಇನ್ನಿತರ ಸಾಕ್ಷ್ಯಗಳನ್ನು ಎಫ್‌ಎಸ್ಎಲ್‌ಗೆ ರವಾನೆ ಮಾಡಲಾಗುತ್ತದೆ. ಎಫ್.ಎಸ್.ಎಲ್ ವರದಿ ಆಧಾರದ ಮೇಲೆ ತನಿಖೆ ಹಾಗೂ ವಿಚಾರಣೆ ಆರಂಭವಾಗುತ್ತದೆ.

ಆದರೆ, ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ವಿದೇಶದಿಂದ ಕರೆ ತರುವ ಪ್ರಕ್ರಿಯೆಗೆ ಚಾಲನೆ ನೀಡಬೇಕಾಗುತ್ತದೆ. ಮೊದಲು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್‌ ನೀಡಿ ಕಾಲಾವಕಾಶವನ್ನು ನಿಗದಿ ಮಾಡಬಹುದು. ಅದಾದ ಬಳಿಕವೂ ಹಾಜರಾಗದೇ ಇದ್ದರೆ ಪ್ರಕರಣದ ತನಿಖೆಯ ಗತಿ ಕುಂಠಿತವಾಗುತ್ತದೆ. ಆದರೆ, ಎಸ್‌ಐಟಿ ಅಧಿಕಾರಿಗಳು ವಿದೇಶಕ್ಕೆ ಹೋಗಿ ಕರೆತರುವ ಸಾಧ್ಯತೆಯೂ ಇದೆ. ಈ ವಿಚಾರವಾಗಿ ಎಸ್‌ಐಟಿ ಯಾವ ತೀರ್ಮಾನವನ್ನು ತೆಗೆದುಕೊಳ್ಳುತ್ತದೆ ಎಂಬುದರ ಮೇಲೆ ಎಲ್ಲವೂ ನಿರ್ಣಯವಾಗುತ್ತದೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಪ್ರಜ್ವಲ್ ರೇವಣ್ಣಗೆ ಇರುವ ಕಾನೂನು ಅವಕಾಶಗಳು?

ಹಾಗಾದರೆ ಈ ಪ್ರಕರಣದಿಂದ ಪಾರಾಗಲು ಪ್ರಜ್ವಲ್‌ ರೇವಣ್ಣ ಅವರಿಗೆ ಕಾನೂನಿನಲ್ಲಿ ಯಾವ ಅವಕಾಶ ಇದೆ ಎಂಬುದನ್ನು ನೋಡುವುದಾದರೆ, ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಬಹುದು. ಅಥವಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಬೇಕು. ಏಳು ವರ್ಷದ ಒಳಗೆ ಶಿಕ್ಷೆ ಇರುವಂತಹ ಪ್ರಕರಣಗಳಿಗೆ ನೋಟಿಸ್‌ ನೀಡಬಹುದು. ಬಂಧನ ಮಾಡಿದರೂ ಜಾಮೀನು ಸಿಗುವಂತಹ ಪ್ರಕರಣ ಇದಾಗಿದ್ದರಿಂದ ಸದ್ಯ ನಿರೀಕ್ಷಣಾ ಜಾಮೀನು ಹಾಗೂ ಎಫ್‌ಐಆರ್ ಅನ್ನೇ ರದ್ದು ಮಾಡುವಂತೆ ಕೋರಿ ಅರ್ಜಿ ಸಲ್ಲಿಸಬಹುದಾಗಿದೆ.

Continue Reading
Advertisement
IPL 2024
ಕ್ರೀಡೆ4 mins ago

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

Hassan Pen Drive Case Where is Prajwal in Germany SIT is on lookout
ಕ್ರೈಂ8 mins ago

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case
ಕರ್ನಾಟಕ23 mins ago

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Star Saree Fashion
ಫ್ಯಾಷನ್28 mins ago

Star Saree Fashion: ಪಾಸ್ಟೆಲ್‌ ಅರ್ಗಾನ್ಜಾ ಸೀರೆಯಲ್ಲಿ ಮಿಂಚಬೇಕೆ? ನಟಿ ಮೋಕ್ಷಿತಾ ಪೈ ನೀಡಿದ್ದಾರೆ 5 ಸಿಂಪಲ್‌ ಐಡಿಯಾ

Vinay Gowda Got three Film Offer
ಸ್ಯಾಂಡಲ್ ವುಡ್50 mins ago

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Hassan Pen Drive Case
ಕರ್ನಾಟಕ53 mins ago

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

Politicians Scandals
Latest1 hour ago

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

MS Dhoni
ಕ್ರೀಡೆ1 hour ago

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

Hassan Pen drive case
ಕರ್ನಾಟಕ1 hour ago

Hassan Pen Drive Case: ಪ್ರಜ್ವಲ್‌ ಪ್ರಕರಣಕ್ಕೆ ಅಚ್ಚರಿಯ ತಿರುವು; ಅವರು ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ1 hour ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20245 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌