Site icon Vistara News

Shivamogga News: ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಯುವಕ; ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Shivamogga News

ಶಿವಮೊಗ್ಗ: ಹೆದ್ದಾರಿಯಲ್ಲೇ ಯುವಕನೊಬ್ಬ ಲಾಂಗ್‌ ಹಿಡಿದು ಹುಚ್ಚಾಟ ಮೆರೆದ ಘಟನೆ ಶಿವಮೊಗ್ಗ (Shivamogga News) ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಲಾಂಗ್‌ ಕಸಿದುಕೊಂಡು ಮನಸೋ ಇಚ್ಛೆ ಥಳಿಸಿರುವ ಸ್ಥಳೀಯರು, ನಂತರ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಲಾಂಗ್ ಹಿಡಿದು ಹುಚ್ಚಾಟ ಮೆರೆದ ಸಮೀರ್ ಎಂಬ ಯುವಕನನ್ನು ಆನಂದಪುರ ಪೊಲೀಸ್‌ ಠಾಣೆಗೆ ಸ್ಥಳೀಯರು ಒಪ್ಪಿಸಿದ್ದಾರೆ. ಯುವಕನ ಪುಂಡಾಟದ ದೃಶ್ಯ ಮೊಬೈಲ್‌ನಲ್ಲಿ ಕಾರು ಚಾಲಕರೊಬ್ಬರು ಸೆರೆಹಿಡಿದಿದ್ದಾರೆ.

ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ಇದನ್ನೂ ಓದಿ: Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version