Shivamogga violence : ಕೋಲಾರ, ಶಿವಮೊಗ್ಗ ಟೆಸ್ಟಿಂಗ್‌ ಡೋಸ್‌; ಪಿಕ್ಚರ್‌ ಅಭೀ ಬಾಕಿ ಹೈ ಎಂದ ಸಿ.ಟಿ ರವಿ - Vistara News

ಕರ್ನಾಟಕ

Shivamogga violence : ಕೋಲಾರ, ಶಿವಮೊಗ್ಗ ಟೆಸ್ಟಿಂಗ್‌ ಡೋಸ್‌; ಪಿಕ್ಚರ್‌ ಅಭೀ ಬಾಕಿ ಹೈ ಎಂದ ಸಿ.ಟಿ ರವಿ

Shivamogga Violence: ಟಿಪ್ಪುವಿನ ಖಡ್ಗದಲ್ಲಿ ಕಾಫಿರರ ರಕ್ತ ಬಯಸುತ್ತಿದೆ ಎಂದು ಬರೆಯಲಾಗಿದೆ. ಇದರರ್ಥ ಅವರು ಸಿದ್ದರಾಮಯ್ಯ ಅವರ ರಕ್ತವನ್ನೂ ಕುಡಿಯುತ್ತಾರೆ ಎಂದು ಸಿ.ಟಿ. ರವಿ ವ್ಯಾಖ್ಯಾನಿಸಿದರು.

VISTARANEWS.COM


on

CT Ravi press meet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕಕ್ಕೆ ಮುಂದೆ ಬಹಳ ದೊಡ್ಡ ಅಪಾಯ (Karnataka to face Danger) ಕಾದಿದೆ. ಶಿವಮೊಗ್ಗ, ಕೋಲಾರ ಘಟನೆಗಳ ಮೂಲಕ ಟೆಸ್ಟಿಂಗ್ ಡೋಸ್ (Shivamogga, Kolara Test dose) ಕೊಟ್ಟಿದ್ದಾರೆ. ಈಗ ಪಿಕ್ಚರ್ ಅಭಿ ಬಾಕಿ ಹೈ (Picture Abhi Baki hai) ಎಂಬಂತೆ ಟ್ರೈಲರ್ ತೋರಿಸುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ. ರವಿ (CT Ravi) ಎಚ್ಚರಿಕೆ ನೀಡಿದರು. ಶಿವಮೊಗ್ಗ ಘಟನೆ (Shivamogga violence) ಹಿಂದೆ ದುರುದ್ದೇಶ ಇದ್ದಂತಿದೆ. ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಆದ್ದರಿಂದ ಈ ಘಟನೆಯ ನ್ಯಾಯಾಂಗ ತನಿಖೆಗೆ (Judicial Enquiry) ಆಗ್ರಹಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವು ಅಬ್ದುಲ್ ಕಲಾಂ‌ ಜೊತೆ ಗುರ್ತಿಸಿಕೊಂಡರೆ ನೀವು ನಮ್ಮವರು. ಔರಂಗಜೇಬ್ ಜೊತೆ ಗುರ್ತಿಸಿಕೊಂಡ್ರೆ ಅಲ್ಲ. ಇಷ್ಟೆಲ್ಲಾ ಹತ್ಯೆ ಮಾಡಿದವರನ್ನು ಹೇಗೆ ಒಪ್ಪಲು ಸಾಧ್ಯ? ನೀವು ನಮ್ಮವರಾಗಲು ಇನ್ನೂ ಅವಕಾಶ ಇದೆ. ಯೋಚನೆ ಮಾಡಿ ನಿರ್ಧಾರ ಮಾಡಿ. ಇಲ್ಲದಿದ್ರೆ ಮನೆ ಮನೆಯಲ್ಲೂ ಶಿವಾಜಿ ಹುಟ್ಟಬೇಕಾಗುತ್ತದೆ ಎಂದು ಸರ್ಕಾರ ಹಾಗೂ ಗಲಭೆಯಲ್ಲಿ ಭಾಗಿಯಾದ ಮುಸ್ಲಿಂ ಸಮುದಾಯಕ್ಕೆ ಸಂದೇಶ ನೀಡಿದರು.

ಹಿಂದೂ ಕಾರ್ಯಕರ್ತರ ಮೇಲಿನ ಸುಳ್ಳು ಮೊಕದ್ದಮೆ ತೆಗೆಯಿರಿ

ಹಿಂದೂ ಸಂಘಟನೆಗಳು ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಎಂದು ಸಿ.ಟಿ. ರವಿ ಆಗ್ರಹಿಸಿದರು

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ಹಾಕುತ್ತಿದ್ದೀರಿ. ಸಹಜ ಸಾವಿನ ಮಾಹಿತಿ ಇದ್ದರೂ ಪುನೀತ್ ಕೆರೆಹಳ್ಳಿ ಮೇಲೆ ಕೊಲೆ ಮೊಕದ್ದಮೆ ಹಾಕಿದ್ದೀರಿ. ವೇಶ್ಯಾವಾಟಿಕೆ ಮಾಡುತ್ತಿದ್ದ ಎಂದು ಸುಳ್ಳುವರದಿ ಕೊಟ್ಟಿದ್ದೀರಿ. ಪುನೀತ್ ಜೀವಕ್ಕೇನಾದರೂ ಆದರೆ ಈ ಪಾಪಿಷ್ಟ ಸರಕಾರವೇ ಹೊಣೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 140 ದಿನಗಳು ಕಳೆದಿವೆ. ಕೋಮುವಾದಿ ಶಕ್ತಿಗಳು ಸಾರ್ವಜನಿಕವಾಗಿ ವಿಜೃಂಭಿಸಲು ಅವಕಾಶ ಮಾಡಿಕೊಟ್ಟಿದ್ದೇ ಈ ಸರಕಾರದ ಸಾಧನೆ ಎಂದು ವ್ಯಂಗ್ಯವಾಡಿದರು.

ಬಹುಶಃ ಋಣ ತೀರಿಸುವ ದೃಷ್ಟಿಯಿಂದ ತಾಲಿಬಾನಿಗಳನ್ನು ಬೆಂಬಲಿಸುವ ಕೆಟ್ಟ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಈ ಸರಕಾರದ ನಡೆ ಅನುಮಾನಾಸ್ಪದ ಮತ್ತು ದುರುದ್ದೇಶದ ಹಿನ್ನೆಲೆಯಿಂದ ಕೂಡಿದೆ ಎಂದು ಟೀಕಿಸಿದರು.

ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ಎಂದ ಸಿ.ಟಿ. ರವಿ

ವಿಧಾನಸಭಾ ಚುನಾವಣಾ ಫಲಿತಾಂಶ ಬರುವ ಸಂದರ್ಭದಲ್ಲಿ ಬೆಳವಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುತ್ತಾರೆ. ಭಟ್ಕಳದಲ್ಲಿ ಹಿಂದೂಗಳ ಹೆಣ ಎತ್ತಲು ಕೂಡ ಜನ ಇರಬಾರದು ಎಂದು ಮುಸ್ಲಿಮರೊಬ್ಬರು ಬರಹ ಬರೆದಿದ್ದರು. ಬೆಳಗಾವಿಯಲ್ಲಿ ಜೈನಮುನಿಯ ಭೀಕರ ಹತ್ಯೆ ಆಗಿದೆ. ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆದಿದೆ. ಫಲಿತಾಂಶ ಬಂದ ಮರುದಿನವೇ ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿದೆ ಎಂದು ಸಿ.ಟಿ. ರವಿ ವಿವರಿಸಿದರು.

ಧಾರವಾಡದಲ್ಲಿ ಚುನಾವಣಾ ವಿಜಯೋತ್ಸವದ ಸಂದರ್ಭದಲ್ಲಿ ಚೂರಿ ಇರಿತ, ಯಾದಗಿರಿಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಹಿಂದೂಗಳ ಬೈಕಿಗೆ ಬೆಂಕಿ ಹಾಕಿದ್ದಾರೆ. ಹಾಸನದಲ್ಲಿ ಪಿಸ್ತೂಲ್ ಹಿಡಿದು ಓಡಾಡಿ ಭಯ ಹುಟ್ಟಿಸುವ ಕೆಲಸ ನಡೆದಿದೆ. ಸಕಲೇಶಪುರದಲ್ಲಿ ಪರವಾನಗಿ ಇಲ್ಲದ ಬಂದೂಕು ಇಟ್ಟುಕೊಂಡು ಹಸುವಿನ ತಲೆ ಸೀಳಿ ಹತ್ಯೆ ಮಾಡಿದ್ದಾರೆ. ಕಡೂರಿನಲ್ಲಿ ವಿಘ್ನೇಶ್ ಎಂಬ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ನಂಜನಗೂಡಿನಲ್ಲಿ ಚಾಕುವಿನಿಂದ ಇರಿದು ಪರಾರಿ, ಬಾಗಲಕೋಟೆ ನವನಗರದಲ್ಲಿ ಬೀದಿ ದೀಪ ಬಂದ್ ಮಾಡಿ ಬಿಜೆಪಿ ಬೆಂಬಲಿಗರ ಮೇಲೆ ಹಲ್ಲೆ ನಡೆದಿದೆ. ಕುವೆಂಪು ಅವರು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದರು. ಆದರೆ, ಅವರ ತವರು ಜಿಲ್ಲೆಯಲ್ಲಿ ಮತಾಂಧರ ಅಟ್ಟಹಾಸ ಮೆರೆಯಲು ಅವಕಾಶ ಕೊಟ್ಟಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಟಿಪ್ಪು ಸಾಲದು ಅಂತ ಔರಂಗಜೇಬನನ್ನು ತಂದಿದ್ದಾರೆ!

ಸಿದ್ದರಾಮಯ್ಯನವರು ಮೊದಲ ಅವಧಿಯ ಸಿಎಂ ಆಗಿದ್ದಾಗ ಟಿಪ್ಪುವಿನ ಓಲೈಕೆ, ಸರಕಾರದಿಂದ ಟಿಪ್ಪು ಜಯಂತಿ ಆರಂಭಿಸಲಾಗಿತ್ತು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರರ ಸ್ಪರ್ಧೆಯಲ್ಲಿ ಈಗ ಸರ್ವ ಜನಾಂಗದ ಶಾಂತಿಯ ತೋಟದ ಶಾಂತಿ ಹಾಳು ಮಾಡಲು ಒಬ್ಬ ಟಿಪ್ಪು ಸಾಕಾಗುವುದಿಲ್ಲ ಎಂದು ಟಿಪ್ಪು ಜೊತೆ ಔರಂಗಜೇಬನ ವಿಜೃಂಭಣೆಗೆ ಅವಕಾಶ ಕೊಡುತ್ತಿದ್ದಾರೆ. ಮತಾಂಧರ ಮೆರೆಸುವ ಕೆಲಸಕ್ಕೆ ಈ ಸರಕಾರ ಬೆನ್ನೆಲುಬಾಗಿ ನಿಂತಿದೆ. ಪೊಲೀಸರ ಮೇಲೆ ಕಲ್ಲೆಸೆತ ಆದಾಗ ಎಸ್ಪಿಯೇ ಓಡಿಬರಬೇಕಾದ ಸ್ಥಿತಿ ಬರುತ್ತದೆ. ಗೃಹ ಸಚಿವ ಪರಮೇಶ್ವರರವರು ಇದೆಲ್ಲ ಸಾಮಾನ್ಯ ಎಂದು ಲಘುವಾಗಿ ತಳ್ಳಿ ಹಾಕುತ್ತಾರೆ ಎಂದು ಸಿ.ಟಿ. ರವಿ ಟೀಕಿಸಿದರು.

ಸಿದ್ದರಾಮಯ್ಯನವರೇ ಅವರು ನಿಮ್ಮ ರಕ್ತ ಕುಡೀತಾರೆ

ʻʻಟಿಪ್ಪು ಸುಲ್ತಾನ್ ಖಡ್ಗದಲ್ಲಿ ಏನು ಬರೆದಿದೆ? ಕಾಫೀರರ ರಕ್ತ ಬಯಸುತ್ತಿದೆ ಅಂತ ಬರೆದಿದೆ. ಕಾಫೀರರು ಅಂದ್ರೆ ಯಾರು ಸಿದ್ದರಾಮಯ್ಯ ಅವರೇ? ಮುಸ್ಲಿಂ ಹೊರತುಪಡಿಸಿ ಎಲ್ಲರೂ ಕಾಫೀರರೇ.. ನಾನು ಹಿಂದೂ ಅಂತ ನೀವು ಹೇಳಿಕೊಂಡಿದ್ದೀರಿ ಸಿದ್ದರಾಮಯ್ಯ ಅವರೇ. ಅವರು ನಿಮ್ಮ ರಕ್ತವನ್ನೂ ಕುಡಿಯಲು ಬಯಸುತ್ತಿದ್ದಾರೆʼʼ ಎಂದು ಹೇಳಿದ ಸಿ.ಟಿ. ರವಿ ಅವರು, ʻʻಭಗವಾಧ್ವಜ ಹಾಕಿದ್ರೆ ಅದಕ್ಕೆ ನೂರೆಂಟು ಪ್ರಶ್ನೆ ಹಾಕ್ತೀರಿ. ಇಲ್ಲಿ ಔರಂಗಜೇಬ್, ಟಿಪ್ಪು, ಖಡ್ಗ ಇಡೋಕೆ‌ ಯಾಕೆ ಅವಕಾಶ ಕೊಟ್ರಿʼ ಎಂದು ಪ್ರಶ್ನಿಸಿದರು.

ನೀವು ಶಿವಮೊಗ್ಗ, ಕೋಲಾರದಲ್ಲಿ ಖಡ್ಗ ಹಾಕಲು ಯಾಕೆ ಮತ್ತು ಹೇಗೆ ಅವಕಾಶ ಕೊಟ್ಟಿದ್ದೀರಿ? ಎಂದು ಪ್ರಶ್ನಿಸಿದ ಸಿ.ಟಿ ರವಿ, ಉಡುಪಿಯಲ್ಲಿ ಭಗವಾಧ್ವಜ ಹಾಕಲು ಮತ್ತು ಬಂಟಿಂಗ್ಸ್ ಕಟ್ಟಿದಾಗ ತೆಗೆಸುತ್ತೀರಿ ಎಂದು ಆಕ್ಷೇಪಿಸಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ಅರವಿಂದ ಬೆಲ್ಲದ್, ಮಾಜಿ ಶಾಸಕ ಪಿ.ರಾಜೀವ್, ವಿಧಾನಪರಿಷತ್ ಸದಸ್ಯ ಅ. ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Shivamogga Violence : ನಾವೇನು ಚಾಕು ಚೂರೀನಾ ಉಳ್ಳಾಗಡ್ಡಿ ಹಚ್ಚಲು ಇಟ್ಕೊಂಡಿದ್ದಾ? ; ಯತ್ನಾಳ್‌ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳು

  1. ಇತಿಹಾಸದಲ್ಲಿ ಔರಂಗಜೇಬ್ ಒಬ್ಬ ಮತಾಂಧನಲ್ಲವೇ?
  2. ಗುರು ತೇಜ್ ಬಹದ್ದೂರರನ್ನು ಹತ್ಯೆ ಮಾಡಿದ ಕ್ರೂರಿ ಯಾರು? ಕಾಶಿ ವಿಶ್ವನಾಥ ಮಂದಿರವನ್ನು ಧ್ವಂಸ ಮಾಡಿದ ವಿಧ್ವಂಸಕ ಯಾರು? ಮಥುರಾದ ಕೃಷ್ಣ ಮಂದಿರವನ್ನು ಮತ್ತೆ 3ನೇ ಬಾರಿ ಧ್ವಂಸ ಮಾಡಿದ ಕಿರಾತಕ ಯಾರು? ನಿಮ್ಮ ಔರಂಗಜೇಬ್ ಅಲ್ಲವೇ? ಅವನನ್ನು ಮೆರೆಸುವ ಉದ್ದೇಶ ಏನು? ಪೈಗಂಬರರ ಶಾಂತಿಯ ಸಂದೇಶ ಇದೇನಾ?
  3. ಮುಸ್ಲಿಮೇತರರ ಮೇಲೆ ಜಜಿಯ ತಲೆಗಂದಾಯ ಹೇರಿದ ಒಬ್ಬ ಪಾಪಿಯನ್ನು ಪ್ರಜಾಪ್ರಭುತ್ವದಲ್ಲಿ ಡಾ.ಅಂಬೇಡ್ಕರರು ಕೊಟ್ಟ ಸಂವಿಧಾನಕ್ಕೆ ಅಪಮಾನ ಮಾಡುವಂತೆ ಪ್ರತಿಷ್ಠಾಪಿಸಲು ಅವಕಾಶ ಕೊಟ್ಟಿದ್ದೀರಾ? ಇದಕ್ಕೆಲ್ಲ ಹೊಣೆ ಯಾರು? ನೀವೇ ಹೊಣೆ ಹೊರಬೇಕಲ್ಲವೇ?
  4. ಭವಿಷ್ಯದಲ್ಲಿ ಅಫಜಲ್ ಗುರು, ಬಿನ್ ಲಾಡೆನ್, ಸದ್ದಾಂ ಹುಸೇನ್, ಮಹಮ್ಮದ್ ಆಲಿ ಜಿನ್ನಾನ ವೈಭವೀಕರಣ ನಡೆದರೂ ಅಚ್ಚರಿಯಿಲ್ಲ.
  5. ಔರಂಗಜೇಬ್, ಟಿಪ್ಪು ವೈಭವೀಕರಣದ ಉದ್ದೇಶ ಭಾರತದಲ್ಲಿ ಮತ್ತೊಂದು ವಿಭಜನೆಯ ಸಂಚಿಗೆ ಪ್ರೋತ್ಸಾಹವಲ್ಲವೇ?
  6. ಬಾಲ ಬಿಚ್ಚಿದರೆ ಬಾಲ ಕಟ್ ಮಾಡುವುದಾಗಿ ಮರಿ ಖರ್ಗೆಯವರು ಹೇಳುತ್ತಿದ್ದರು. ಬಾಲ ಕಟ್ ಮಾಡುವ ಪೌರುಷ ಎಲ್ಲಿ ಹೋಯಿತು? ಹಿಂದೂ ಕಾರ್ಯಕರ್ತರ ಮೇಲೆ ಮಾತ್ರ ನಿಮ್ಮ ಪೌರುಷವೇ? ನೀವೆಲ್ಲಿ ಅಡಗಿದ್ದೀರಿ?
  7. ಹಿಂದೂಗಳ ಮನೆಗೆ ನುಗ್ಗಿ ಹಲ್ಲೆ ಮಾಡಿದರೆ ಅದೊಂದು ಸಣ್ಣ ಘಟನೆಯಾಗಿ ಗೃಹ ಸಚಿವರಿಗೆ ಕಾಣುತ್ತದೆ. ಬಹಳ ವರ್ಷಗಳ ರಾಜಕೀಯ ಅನುಭವ ಇರುವ ಡಾ. ಪರಮೇಶ್ವರರನ್ನು ಯಾವ ದುರ್ಬಲತೆ ಕಾಡುತ್ತಿದೆ?
  8. 35 ಡಿಎಸ್ಪಿಗಳು, 138 ಇನ್‍ಸ್ಪೆಕ್ಟರ್‍ಗಳನ್ನು ವರ್ಗಾವಣೆ ಮಾಡುವ ಮೂಲಕ ನಾನೂ ಸಕ್ರಿಯ ಎಂದು ತೋರಿಸುವ ಕೆಲಸ ಮಾಡಿದ್ದಾರೆ ಗೃಹ ಸಚಿವ ಪರಮೇಶ್ವರ್.
  9. ಐಸಿಸ್‍ನವರು ಇದನ್ನೊಂದು ಲಾಂಚಿಂಗ್ ಪ್ಯಾಡ್ ಮಾಡಲು ಕರ್ನಾಟಕ- ಕೇರಳವನ್ನು ಉಪಯೋಗಿಸುತ್ತಿದ್ದಾರೆ ಎಂದು ಎನ್‍ಐಎ ಬಂಧಿತ ಉಗ್ರರಿಂದ ಸಿಕ್ಕಿದ ಮಾಹಿತಿ ನಿಮಗೆ ತಿಳಿದಿಲ್ಲವೇ?
  10. ಮಂಗಳೂರಲ್ಲಿ ಬ್ಲಾಸ್ಟ್ ಆದ ಕುಕ್ಕರನ್ನು ತೀರ್ಥಹಳ್ಳಿಯಲ್ಲೇ ತಯಾರಿಸಿದ್ದು ನಿಮಗೆ ತಿಳಿದಿಲ್ಲವೇ? ಘನತೆವೆತ್ತ ಡಿಸಿಎಂ ಅವತ್ತು ‘ದೆ ಆರ್ ಅವರ್ ಬ್ರದರ್ಸ್’ ಎಂದಿದ್ದರಲ್ಲವೇ? ಬಾಂಬ್ ಇಡುವವರು, ಔರಂಗಜೇಬನನ್ನು ಓಲೈಸುವವರು, ಮತಾಂಧರು, ಡಿಜೆ ಹಳ್ಳಿ, ಕೆಜಿ ಹಳ್ಳಿ ಬೆಂಕಿ ಹಾಕಿದವರು ನಿಮ್ಮ ಬ್ರದರ್ಸಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Honnavar News: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ರಾಮಕ್ಷತ್ರಿಯ ಸಂಘದಿಂದ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಸ್ವರ್ಣವಲ್ಲೀ ಮಠದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.

VISTARANEWS.COM


on

Honnavar News
Koo

ಹೊನ್ನಾವರ: ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ದೊರೆತಾಗ, ಆ ಮಗು ಸಮಾಜದಲ್ಲಿ ಸತ್ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯ. ಹಾಗೆಯೇ ಉಪನಯನವನ್ನು ಕೂಡ ಚಿಕ್ಕ ವಯಸ್ಸಿನಲ್ಲಿ ಮಾಡುವುದರಿಂದ ಹೆಚ್ಚಿನ ಫಲ ಪ್ರಾಪ್ತಿಯಾಗುತ್ತದೆ. ಅದೇ ರೀತಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ, ಸಂಸ್ಕಾರಯುತ ಸಮಾಜ ನಿರ್ಮಾಣದ ಜವಾಬ್ದಾರಿ ಕೂಡ ಪಾಲಕರ ಮೇಲಿದೆ ಎನ್ನುವುದನ್ನು ಅರಿಯಬೇಕಾಗಿದೆ ಎಂದು ಸ್ವರ್ಣವಲ್ಲೀ ಮಠದ ಮಠಾಧೀಶರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ತಿಳಿಸಿದರು.

ಪಟ್ಟಣದಲ್ಲಿ ಹೊನ್ನಾವರದ ಶ್ರೀ ಸ್ವರ್ಣವಲ್ಲಿ ರಾಮ ಕ್ಷತ್ರಿಯ ಪರಿಷದ್ ಹಾಗೂ ಅಡಕಾರದ ರಾಮಕ್ಷತ್ರಿಯ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಗವದ್ಗೀತೆ, ರಾಮರಕ್ಷಾ ಸ್ತೋತ್ರ ಮತ್ತು ರಾಮ ತಾರಕ ಮಂತ್ರಗಳ ಪಠಣ ಮಾಡುವುದನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ರೂಢಿಸಿದಾಗ ಮಕ್ಕಳಲ್ಲಿ ಆಧ್ಯಾತ್ಮಿಕ ಒಲವು ಮೂಡಲು ಸಾಧ್ಯ. ಈ ಆಧ್ಯಾತ್ಮಿಕ ಒಲವು ಸಂಸ್ಕಾರಯುತ ಮನುಷ್ಯನನ್ನು ನಿರ್ಮಾಣ ಮಾಡುತ್ತದೆ ಎಂದರು. ಇದೇ ವೇಳೆ ಪ್ರತಿವರ್ಷ ದಂಪತಿಗಳ ಶಿಬಿರ, ಯೋಗ ಶಿಬಿರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಲಹೆ ನೀಡಿದರು.

ರಾಮಕ್ಷತ್ರಿಯ ಪರಿಷದ್‌ನ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮಾತನಾಡಿ, ಸ್ವರ್ಣವಲ್ಲೀ ಮಠಾಧೀಶರ ಮಾರ್ಗದರ್ಶನದಲ್ಲಿ ರಾಮಕ್ಷತ್ರಿಯ ಪರಿಷದ್ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಕೆಲಸಗಳ ಮೂಲಕ ಸಂಘಟಿತರಾಗೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರಾಮಕ್ಷತ್ರಿಯ ಸಮಾಜದ 33 ವಟುಗಳಿಗೆ ಸಾಮೂಹಿಕ ಉಪನಯನ ನಡೆಯಿತು. ಪ್ರಾರಂಭದಲ್ಲಿ ಸೀತಾರಾಮ ನಾಯ್ಕ ಹಳದಿಪೂರ ಪ್ರಾರ್ಥಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಮೋದ ನಾಯ್ಕ ಸ್ವಾಗತಿಸಿದರು. ಅಡಕಾರ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾದ ರಾಮದಾಸ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಷದ್‌ನ ಪ್ರಧಾನ ಕಾರ್ಯದರ್ಶಿ ರಾಜೇಶ ಸಾಳೇಹಿತ್ತಲ್ ಐದು ವರ್ಷಗಳ ವರದಿ ವಾಚಿಸಿದರು. ರವಿ ನಾಯ್ಕ ನಿರೂಪಿಸಿದರು. ಮಹೇಶ ನಾಯ್ಕ ವಂದಿಸಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ವೇದಿಕೆಯಲ್ಲಿ ಪರಿಷದ್‌ ಅಧ್ಯಕ್ಷರಾದ ಎಸ್.ಕೆ.ನಾಯ್ಕ ಮತ್ತು ಶ್ರೀನಿವಾಸ ನಾಯ್ಕ ಮುಂಬಯಿ ಇವರಿಗೆ ಅಡಕಾರ ಸಂಘದಿಂದ ಸನ್ಮಾನಿಸಲಾಯಿತು. ಮಲ್ಲಿಕಾರ್ಜುನ ಸಿಲ್ಕ್ಸ್ ಇದರ ಮಾಲಿಕರಾದ ರತ್ನಾಕರ ನಾಯ್ಕರವರು 33 ವಟುಗಳಿಗೆ ವಿಶೇಷ ಉಡುಗೊರೆಯೊಂದಿಗೆ ಗೌರವಿಸಿದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಕರ್ನಾಟಕ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರು
ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ನಿಧನರಾಗಿದ್ದಾರೆ.

VISTARANEWS.COM


on

M P Rudramba
Koo

ವಿಜಯನಗರ: ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಧರ್ಮ ಪತ್ನಿ ಎಂ.ಪಿ.ರುದ್ರಾಂಬಾ (M P Rudramba) (83) ಅವರು ವಯೋಸಹಜ ಕಾಯಿಲೆಯಿಂದ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾದರು. ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಪುತ್ರಿಯರಲ್ಲಿ ಲತಾ ಮಲ್ಲಿಕಾರ್ಜುನ ಅವರು ಹರಪನಹಳ್ಳಿ ಕ್ಷೇತ್ರದ ಪಕ್ಷೇತರ ಶಾಸಕಿಯಾಗಿದ್ದಾರೆ. ಸುಮಾ ಹಾಗೂ ವೀಣಾ ಇನ್ನಿಬ್ಬರು ಪುತ್ರಿಯರು. ಅವರ ಪುತ್ರ, ಹರಪನಹಳ್ಳ ಕ್ಷೇತ್ರದ ಶಾಸಕರಾಗಿದ್ದ ಎಂ.ಪಿ.ರವೀಂದ್ರ ಕೆಲ ವರ್ಷದ ಹಿಂದೆಯೇ ತೀರಿಕೊಂಡಿದ್ದರು. ಎಂ.ಪಿ. ಪ್ರಕಾಶ್‌ ಅವರೂ ದಶಕಗಳ ಹಿಂದೆಯೇ ವಿಧಿವಶರಾಗಿದ್ದರು.

ಸಾಂಸ್ಕೃತಿಕ ಹಾಗೂ ಚಿಂತನ ಶೀಲ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಎಂ.ಪಿ. ಪ್ರಕಾಶ್‌ ಅವರನ್ನು ಮದುವೆಯಾಗಿದ್ದ ರುದ್ರಾಂಬಾ ಅವರು ಕೂಡ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಇತ್ತೀಚಿಗೆ ಆರೋಗ್ಯದ ಕಾರಣದಿಂದ ಸಾರ್ವಜನಿಕ ಜೀವನದ ಒಡನಾಟ ಕಡಿಮೆಯಾಗಿತ್ತು.

ಇದನ್ನೂ ಓದಿ | Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

ಹೂವಿನ ಹಡಗಲಿಯಲ್ಲಿ ಮಂಗಳವಾರ ಸಂಜೆ 4.30 ಕ್ಕೆ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಯುತ್ತಿದೆ. ದಿ.‌ ಎಂ.ಪಿ. ಪ್ರಕಾಶ್‌ ಅವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತದೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ರುದ್ರಾಂಬಾ ಅವರು ತಮ್ಮ ಪತಿಯ ಆದರ್ಶಗಳನ್ನು ಪಾಲಿಸುತ್ತಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ನೊಂದ ಜನರ ಬದುಕಿಗೆ ಬೆಳಕಾಗಿದ್ದವರು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading
Advertisement
dina bhavishya read your daily horoscope predictions for April 30 2024
ಭವಿಷ್ಯ35 mins ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Pakistan Inflation
ವಿದೇಶ5 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ6 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sadhguru Jaggi Vasudev
ಬೆಂಗಳೂರು6 hours ago

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Justin Trudeau
ದೇಶ6 hours ago

Justin Trudeau: ಕೆನಡಾ ಪ್ರಧಾನಿ ಕಾರ್ಯಕ್ರಮದಲ್ಲಿ ಖಲಿಸ್ತಾನ ಪರ ಘೋಷಣೆ; ಭಾರತ ಸಮನ್ಸ್!

M P Rudramba
ಕರ್ನಾಟಕ6 hours ago

M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

KKR vs DC
ಕ್ರೀಡೆ7 hours ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ7 hours ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ7 hours ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ7 hours ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ35 mins ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202416 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202418 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌