Admission Counselling | ಕುವೆಂಪು ವಿವಿ: ಡಿ. 19, 20ರಂದು ಸ್ನಾತಕೋತ್ತರ ಪದವಿ ಪ್ರವೇಶಾತಿ ಕೌನ್ಸೆಲಿಂಗ್ - Vistara News

ಶಿಕ್ಷಣ

Admission Counselling | ಕುವೆಂಪು ವಿವಿ: ಡಿ. 19, 20ರಂದು ಸ್ನಾತಕೋತ್ತರ ಪದವಿ ಪ್ರವೇಶಾತಿ ಕೌನ್ಸೆಲಿಂಗ್

ಕುವೆಂಪು ವಿವಿಯ ಈ ಸಾಲಿನ ಪ್ರವೇಶಾತಿಯನ್ನು (Admission Counselling) ಡಿ.19 ಮತ್ತು 20ರಂದು ನಡೆಸುವುದಾಗಿ ವಿವಿ ತಿಳಿಸಿದೆ. ಡಿ. 20 ರಂದು ಮೆರಿಟ್ ಕಮ್ ಪೇಮೆಂಟ್ ಸೀಟುಗಳ ಪ್ರವೇಶಾತಿಯು ನಡೆಯಲಿದೆ

VISTARANEWS.COM


on

Kuvempu University Master's Degree Admissions
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಂಕರಘಟ್ಟ: ಕುವೆಂಪು ವಿವಿಯ 2022-23ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಯನ್ನು (Admission Counselling) ಡಿ.19 ಮತ್ತು 20ರಂದು ನಡೆಸುವುದಾಗಿ ವಿವಿ ತಿಳಿಸಿದೆ.

ವಿವಿಯ 2022-23 ನೇ ಶೈಕ್ಷಣಿಕ ಸಾಲಿನ ಎಲ್ಲ ಸ್ನಾತಕೋತ್ತರ ಕೇಂದ್ರಗಳು ಮತ್ತು ವಿಭಾಗಗಳ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಕೋರ್ಸುಗಳ ಪ್ರವೇಶಾತಿಗಾಗಿ ಡಿ. 16ರಂದು ಮೆರಿಟ್ ಆಧರಿತ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಡಿ.19 ರಂದು ಮೆರಿಟ್ ಹಾಗೂ ಸ್ಪೆಷಲ್ ಕೆಟಗರಿ ಸೀಟುಗಳ ಪ್ರವೇಶಾತಿ ನಡೆಯಲಿದ್ದು, ಡಿ. 20ರಂದು ಮೆರಿಟ್ ಕಮ್ ಪೇಮೆಂಟ್ ಸೀಟುಗಳ ಪ್ರವೇಶಾತಿಯು ನಡೆಯಲಿದೆ.

ಈ ಸಾಲಿನ ಪ್ರವೇಶಾತಿಯನ್ನು ಡಿ. 17ರಂದು ನಡೆಸುವುದಾಗಿ ಈ ಮೊದಲು ತಿಳಿಸಲಾಗಿತ್ತು. 17ರಂದು ರಾಜ್ಯಾದ್ಯಂತ ಎನ್.ಎಸ್.ಯು.ಐ. ವತಿಯಿಂದ ವಿದ್ಯಾರ್ಥಿಗಳ ಮುಷ್ಕರ ಇರುವುದರಿಂದ ಕೌನ್ಸೆಲಿಂಗ್ ದಿನಾಂಕಗಳನ್ನು ಮುಂದೂಡಲಾಗಿದೆ ಎಂದು ವಿವಿಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ | Datta jayanti | ದತ್ತ ಪೀಠಕ್ಕೆ ಹೋಗುವ ರಸ್ತೆಯಲ್ಲಿ ಮೊಳೆ ಚೆಲ್ಲಿ ಕುಕೃತ್ಯ ನಡೆಸಿದ್ದ ಇಬ್ಬರು ದುಷ್ಕರ್ಮಿಗಳು ಅರೆಸ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

SSLC Exam Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಶೀಘ್ರ; ಇಲ್ಲಿದೆ ಮಹತ್ವದ ಮಾಹಿತಿ

SSLC Exam Result 2024: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ ಪರೀಕ್ಷೆ- 1ರ ಫಲಿತಾಂಶದ ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ.

VISTARANEWS.COM


on

SSLC exam results to be announced soon
Koo

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam Result 2024) ಬರೆದಿದ್ದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾದುನೋಡುತ್ತಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆ ತಡವಾಗಿತ್ತು, ಆದರೆ, ರಾಜ್ಯದಲ್ಲಿ ಮಂಗಳವಾರ ಎರಡನೇ ಹಂತದ ಮತದಾನವೂ ಮುಗಿಲಿರುವ ಹಿನ್ನೆಲೆಯಲ್ಲಿ ಇನ್ನೊಂದು ವಾರದೊಳಗೆ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.

ಮೇ 7 ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಸಂಪೂರ್ಣಗೊಂಡಿರುವುದರಿಂದ ಮೇ 9 ಮತ್ತು 10ರಂದು ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಸಜ್ಜಾಗಿದೆ ಎನ್ನಲಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿರುವ ಎಸ್ಸೆಸ್ಸೆಲ್ಸಿ 2024ರ (SSLC Result 2024) ಪರೀಕ್ಷೆ- 1ರ ಫಲಿತಾಂಶದ (SSLC exam Result 2024) ಸಮಯ ಸನ್ನಿಹಿತವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು (Students) ಕಾತರದಿಂದ ಕಾಯುತ್ತಿರುವ ಫಲಿತಾಂಶ ಪ್ರಕಟಣೆಗೆ ಮಂಡಳಿ ಮುಹೂರ್ತ ಫಿಕ್ಸ್‌ ಮಾಡಿದೆ.

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.25ರಿಂದ ಏ.6ರ ವರೆಗೆ ನಡೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ರೀ ಎಕ್ಸಾಮ್ ಬರೆದಿದ್ದ ವಿದ್ಯಾರ್ಥಿಗಳು ಕೂಡ ಇದ್ದಾರೆ.

ಫಲಿತಾಂಶ ಎಲ್ಲಿ ನೋಡಬಹುದು?

ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶವನ್ನು ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವೆಬ್‌ಸೈಟ್‌ನಲ್ಲಿ ನೋಡಬಹುದು. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

ಶೈಕ್ಷಣಿಕ ಗುಣಮಟ್ಟದ ವಿಚಾರದಲ್ಲಿ ಕರ್ನಾಟಕ ದೇಶದಲ್ಲಿ ದೊಡ್ಡ ಹೆಸರು ಪಡೆದಿದೆ. ಹೀಗಾಗಿ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವು, ಇಡೀ ದೇಶದ ಗಮನವನ್ನ ಸೆಳೆಯುತ್ತಿದೆ. ಕರ್ನಾಟಕದಲ್ಲಿ ಮುಖ್ಯವಾಗಿ ಬೆಂಗಳೂರಿನಲ್ಲಿ ಬೇರೆ ಬೇರೆ ರಾಜ್ಯದ ವಿದ್ಯಾರ್ಥಿಗಳು ಕೂಡ ಓದುತ್ತಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಮುಖ ಹಂತವಾಗಿರುವುದರಿಂದ ಕಾತರ ಹೆಚ್ಚಿದೆ.

ಇದನ್ನೂ ಓದಿ | Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

ಇನ್ನು ಕಳೆದ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಫಲಿಶಾಂಶವನ್ನು ಮೇ 08 ರಂದು ಬಿಡುಗಡೆ ಮಾಡಲಾಗಿತ್ತು. ಘೋಷಿಸಿತ್ತು. ಒಟ್ಟಾರ ಉತ್ತೀರ್ಣ ಪ್ರಮಾಣ ಶೇ 83.89 ದಾಖಲಾಗಿತ್ತು. ಪರೀಕ್ಷೆಗೆ ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರದಲ್ಲಿ 4,41,910 ಬಾಲಕರಾದರೆ, 4,28,058 ಬಾಲಕಿಯರು. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಸರ್ಕಾರಿ ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

ಶಿಕ್ಷಣ ಎಂದರೆ ಮಕ್ಕಳು ನಲಿಯುತ್ತ ಕಲಿಯುವುದು. ಆಡುತ್ತ, ನಲಿಯುತ್ತ, ಎಲ್ಲರೊಂದಿಗೆ ಬೆರೆಯುತ್ತ ಜ್ಞಾನವನ್ನು ವೃದ್ಧಿಸಿಕೊಳ್ಳುವುದು. ಆದರೆ, ಬದಲಾದ ಕಾಲಘಟ್ಟದಲ್ಲಿ ಮಕ್ಕಳು ಅಂಕಗಳ ಹಿಂದೆ ಓಡಬೇಕಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆ ಸಾಧಿಸುವ, ಮೊದಲ ರ‍್ಯಾಂಕ್‌ ಪಡೆಯುವ, ಆಟ ಬಿಟ್ಟು ಪಾಠದತ್ತ ಹೆಚ್ಚು ಗಮನ ಹರಿಸುವ, ಎಫರ್ಟ್‌ ಹೆಸರಲ್ಲಿ, ಅಂಕ ಸಾಧನೆ ಹೆಸರಲ್ಲಿ ಇನ್ನಿಲ್ಲದ ಒತ್ತಡ ಅವರ ಮೇಲಿದೆ. ಇಂತಹ ಸಮಸ್ಯೆಗಳ ಮಧ್ಯೆಯೇ, ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿರುವುದು ಮಕ್ಕಳ ಶೈಕ್ಷಣಿಕ ಏಳಿಗೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ, ಇ-ಮೇಲ್‌ ಮೂಲಕ ಬೆದರಿಕೆ ಹಾಕುವ, ಭಯವನ್ನು ಹುಟ್ಟಿಸುವ ‘ಭಯೋತ್ಪಾದಕರಿಗೆ’ ತಕ್ಕ ಶಾಸ್ತಿ ಆಗಬೇಕಿದೆ.

VISTARANEWS.COM


on

School Children
Koo

ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ (E-Mail) ಮೂಲಕ ಬೆದರಿಕೆ ಒಡ್ಡುವುದು, ಆ ಮೂಲಕ ಮಕ್ಕಳು, ಪೋಷಕರು, ಶಿಕ್ಷಕರು ಆತಂಕಕ್ಕೀಡಾಗುವುದು, ಇದರಿಂದ ಎಲ್ಲೆಡೆ ಇದು ಸುದ್ದಿಯಾಗುವಂತೆ ಮಾಡುವ ಹೀನಾತಿಹೀನ ಪ್ರಕರಣಗಳು ಇತ್ತೀಚೆಗೆ ಹೆಚ್ಚು ಸುದ್ದಿಯಾಗುತ್ತಿವೆ. ಸೋಮವಾರ (ಮೇ 6) ಅಹಮದಾಬಾದ್‌ನಲ್ಲಿ ಹಲವು ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ. ಇನ್ನು, ಮೇ 1ರಂದು ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ (NRC) ಸುಮಾರು 200ಕ್ಕೂ ಅಧಿಕ ಶಾಲೆಗಳಿಗೆ ಈ ರೀತಿಯ ಹುಸಿ ಬಾಂಬ್‌ ಬೆದರಿಕೆಯ ಮೇಲ್‌ಗಳನ್ನು (Hoax Bomb Threat) ಕಳುಹಿಸಲಾಗಿತ್ತು. ಸಹಜವಾಗಿಯೇ ಇದು ದೇಶಾದ್ಯಂತ ಸುದ್ದಿಯಾಯಿತು. ಶಾಲೆಗಳಿಂದ ಮಕ್ಕಳನ್ನು ಕೂಡಲೇ ಮನೆಗೆ ಕಳುಹಿಸಲಾಯಿತು. ಪೋಷಕರೂ ಶಾಲೆಗಳಿಗೆ ಓಡೋಡಿ ಬಂದು ಮಕ್ಕಳನ್ನು ಕರೆದುಕೊಂಡು ಹೋದರು. ಈಗಲೂ ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಆಗುತ್ತಿಲ್ಲ. ಕರೆಸಿಕೊಳ್ಳಲು ಶಿಕ್ಷಕರಿಗೂ ಧೈರ್ಯ ಸಾಲುತ್ತಿಲ್ಲ. ಒಟ್ಟಿನಲ್ಲಿ ಕಿಡಿಗೇಡಿಗಳು ಮಾಡುವ ಉಪದ್ವ್ಯಾಪದಿಂದ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಆತಂಕದಲ್ಲಿಯೇ ಮುಳುಗಿದ್ದಾರೆ. ಹಾಗಾಗಿ, ಇ-ಮೇಲ್‌ ಮೂಲಕ ಹುಸಿ ಬಾಂಬ್ ಬೆದರಿಕೆಯೊಡ್ಡುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಅನಾಮಧೇಯ ವ್ಯಕ್ತಿಗಳು ಮೇಲ್‌ ಮಾಡುವುದು, ತನಿಖೆ ಬಳಿಕ ಅದು ಹುಸಿ ಬಾಂಬ್‌ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸುವುದು, ಇಂತಹ ಪ್ರಕರಣಗಳು ದೇಶಾದ್ಯಂತ ನಡೆಯುತ್ತಿರುವುದರಿಂದ ಇದೊಂದು ದೊಡ್ಡ ವಿಷಯ ಅಲ್ಲ, ನಿರ್ಲಕ್ಷಿಸುವುದು ಒಳಿತು ಎಂದು ಎನಿಸಿದರು, ಹುಸಿ ಬೆದರಿಕೆಗಳು ಅತಿ ಹೆಚ್ಚು ಆತಂಕ ಸೃಷ್ಟಿಸುತ್ತಿವೆ, ಮಕ್ಕಳ ಜತೆಗೆ ಪೋಷಕರ ಮೇಲೂ ಪರಿಣಾಮ ಬೀರುತ್ತಿವೆ. ಆಧುನಿಕ ಕಾಲದಲ್ಲಿ ತಂತ್ರಜ್ಞಾನ ತುಂಬ ಮುಂದುವರಿದಿದೆ. ಸೈಬರ್‌ ಅಪರಾಧ ವಿಭಾಗವನ್ನೂ ತೆರೆಯಲಾಗಿದೆ. ಹಾಗಾಗಿ, ಸೈಬರ್‌ ಕ್ರೈಂ ಪೊಲೀಸರು ಇಂತಹ ಇ-ಮೇಲ್‌ ಕಡಿಗೇಡಿಗಳನ್ನು ಮಟ್ಟಹಾಕಬೇಕು. ಬೆಂಗಳೂರು, ಅಹಮದಾಬಾದ್‌, ದೆಹಲಿ ಎನ್ನದೆ, ದೇಶಾದ್ಯಂತ ಇಂತಹ ಪ್ರಕರಣಗಳನ್ನು ತಡೆಯಲು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೇಲ್ನೋಟಕ್ಕೆ ಬೇರೆ ದೇಶದ ವಿಪಿಎನ್‌ (VPN) ಬಳಸಿ ಇ-ಮೇಲ್‌ ಬೆದರಿಕೆ ಒಡ್ಡಲಾಗುತ್ತಿದೆ ಎಂಬುದು ಗೊತ್ತಾದರೂ, ಸುಧಾರಿತ ತಂತ್ರಜ್ಞಾನವನ್ನು ಬಳಸಿ ಉಪದ್ವ್ಯಾಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಹುಸಿ ಬಾಂಬ್‌ ಬೆದರಿಕೆ ಕರೆಗಳು ಹತ್ತಾರು ಪರಿಣಾಮಗಳನ್ನು ಬೀರುತ್ತಿವೆ. ನಗರಗಳಲ್ಲಿ ಮಕ್ಕಳು ಪ್ರಾಣ ಭಯದಲ್ಲಿಯೇ ಶಾಲೆಗಳಿಗೆ ತೆರಳುವಂತಾಗಿದೆ. ಪೋಷಕರಂತೂ ಜೀವ ಹಿಡಿದುಕೊಂಡು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಂತಾಗಿದೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಸುಮಾರು 48 ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಇದು ನೂರಾರು ಶಾಲೆಗಳಲ್ಲಿ ಆತಂಕ ಸೃಷ್ಟಿಸಿತ್ತು. ಎಷ್ಟೋ ದಿನಗಳವರೆಗೆ ಪೋಷಕರು ಮಕ್ಕಳನ್ನು ಶಾಲೆಗಳಿಗೇ ಕಳುಹಿಸರಲಿಲ್ಲ. ಶಾಲೆಗಳ ಆಡಳಿತ ಮಂಡಳಿಗಳೂ ಅಷ್ಟೇ, ಸುಮ್ಮನೆ ಅಪಾಯವನ್ನು ಮೇಲೆ ಎಳೆದುಕೊಳ್ಳುವುದು ಬೇಡ ಎಂದು ಮಕ್ಕಳನ್ನು ಹಲವು ದಿನಗಳವರೆಗೆ ಶಾಲೆಗೆ ಕರೆಸಿರಲಿಲ್ಲ. ಈಗ, ದೆಹಲಿ ಹಾಗೂ ಅಹಮದಾಬಾದ್‌ ಶಾಲೆಗಳು, ಮಕ್ಕಳು ಮತ್ತು ಪೋಷಕರ ಪರಿಸ್ಥಿತಿಯೂ ಇದರಿಂದ ಹೊರತಾಗಿಲ್ಲ.

ಮಕ್ಕಳಿಗೆ ಜೀವ ಭಯ, ಪೋಷಕರು ಹಾಗೂ ಶಿಕ್ಷಕರಿಗೆ ಆತಂಕ ಮಾತ್ರವಲ್ಲ, ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಮಕ್ಕಳ ಶೈಕ್ಷಣಿಕ ಏಳಿಗೆಯ ಮೇಲೆಯೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಪದೇಪದೆ ಬೆದರಿಕೆ ಒಡ್ಡಿದರೆ ಮಕ್ಕಳು ಶಾಲೆಗಳಿಗೆ ಹೋಗುವುದಿಲ್ಲ. ಇದರಿಂದ ಅವರು ಪಠ್ಯವನ್ನು ಸರಿಯಾಗಿ ಅಭ್ಯಾಸ ಮಾಡಲು ಆಗುವುದಿಲ್ಲ. ಇನ್ನು, ಎಳೆಯ ವಯಸ್ಸಿನಲ್ಲೇ ಅವರು ಆತಂಕದಲ್ಲಿ ಶಾಲೆಗೆ ಹೋದರೆ, ಅದು ಅವರ ಮನಸ್ಸಿನ ಮೇಲೆ ಅಗಾಧವಾದ ಪರಿಣಾಮ ಬೀರುತ್ತದೆ. ಈಗಾಗಲೇ ಅತಿಯಾದ ಹೋಮ್‌ ವರ್ಕ್‌, ಆಟ-ಪಾಠಗಳಿಗೆ ಕಡಿಮೆ ಸಮಯ ಸಿಗುತ್ತಿದೆ. ಅತಿಯಾದ ಸ್ಪರ್ಧೆಯಿಂದ ಮಕ್ಕಳು ಅಂಕಗಳ ಹಿಂದೆ ಓಡಬೇಕಾದ, ರ‍್ಯಾಂಕ್‌ ಪಡೆಯಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದಾರೆ. ಇದರಿಂದ ಮಕ್ಕಳು ನಾಲ್ಕೈದು ವರ್ಷದಿಂದಲೇ ಒತ್ತಡಕ್ಕೆ ಸಿಲುಕುತ್ತಿದ್ದಾರೆ.

ಅಷ್ಟಕ್ಕೂ ಶಿಕ್ಷಣ ಎಂದರೆ, ನಲಿಯುತ್ತ ಕಲಿಯುವುದಾಗಿದೆ. ಒತ್ತಡವಿಲ್ಲದೆ, ಆಡುತ್ತ, ನಲಿಯುತ್ತ, ಬೆರೆಯುತ್ತ ಜ್ಞಾನ ಸಂಪಾದಿಸುವುದಾಗಿದೆ. ಆದರೆ, ಈಗ ಬಾಂಬ್‌ ಬೆದರಿಕೆಯ ಆತಂಕವೂ ಮಕ್ಕಳಲ್ಲಿ ಮೂಡಿದರೆ, ಅದು ಸುದೀರ್ಘ ಅವಧಿಗೆ ಅವರನ್ನು ಕಾಡಲಿದೆ. ಶೈಕ್ಷಣಿಕ ಏಳಿಗೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಮಾನಸಿಕವಾಗಿಯೂ ಅವರು ಕುಗ್ಗಿಹೋಗಲಿದ್ದಾರೆ. ಇದರ ಮಧ್ಯೆಯೇ, ಹುಸಿ ಬಾಂಬ್‌ ಬೆದರಿಕೆ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರವು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ. ಆದರೆ, ಈ ಸಮಸ್ಯೆಗೊಂದು ಕ್ಷಿಪ್ರವಾಗಿ ಕಾಯಂ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಅದರಲ್ಲೂ, ಶೈಕ್ಷಣಿಕ ವಾತಾವರಣವನ್ನೇ ಹಾಳುತ್ತಿರುವ ‘ಇ-ಮೇಲ್‌ ಭಯೋತ್ಪಾದಕರಿಗೆ’ ಕಠಿಣ ಶಿಕ್ಷೆಯಾಗಬೇಕಿದೆ.

ಇದನ್ನೂ ಓದಿ: ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Continue Reading

ಶಿಕ್ಷಣ

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

CISCE Results 2024: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10ನೇ ತರಗತಿಯ ಐಸಿಎಸ್ಇ ಮತ್ತು 12ನೇ ತರಗತಿ ಐಎಸ್‌ಸಿ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

VISTARANEWS.COM


on

ICSE Results 202
Koo

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) 10ನೇ ತರಗತಿಯ ಐಸಿಎಸ್ಇ (ICSE) ಮತ್ತು 12ನೇ ತರಗತಿ ಐಎಸ್‌ಸಿ (ISC) ಫಲಿತಾಂಶವನ್ನು ಇಂದು (ಮೇ 6) ಬೆಳಿಗ್ಗೆ ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

ಈ ವರ್ಷ ಸುಮಾರು 2.5 ವಿದ್ಯಾರ್ಥಿಗಳು ಸಿಐಎಸ್‌ಸಿಇಯ 10 ಮತ್ತು 12ನೇ ತರಗತಿಯ ಪರೀಕ್ಷೆ ಬರೆದಿದ್ದರು. 10ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 21ರಂದು ಆರಂಭವಾಗಿ ಮಾರ್ಚ್‌ 28ರಂದು ಮುಕ್ತಾಯವಾಗಿತ್ತು. ಇನ್ನು 12ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 12ರಂದು ಆರಂಭವಾಗಿ ಏಪ್ರಿಲ್‌ 4ರಂದು ಮುಗಿದಿತ್ತು. ಪ್ರಶ್ನೆ ಪತ್ರಿಕೆಯನ್ನು ಓದಲು ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ ನೀಡಲಾಗಿತ್ತು.

ಫಲಿತಾಂಶ ವೀಕ್ಷಿಸುವ ವಿಧಾನ

  • ಸಿಐಎಸ್‌ಸಿಇಯ ಅದಿಕೃತ ವೆಬ್‌ಸೈಟ್‌ results.cisce.org.ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದ ಮೇಲ್ಭಾಗದಲ್ಲಿ ಕಾಣಿಸುವ Course ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ICSE ಅಥವಾ ISC ಪೈಕಿ ಒಂದನ್ನು ಆರಿಸಿ.
  • ಕೋರ್ಸ್‌ ಕೋಡ್‌, ಅಭ್ಯರ್ಥಿಯ ಯುಐಡಿ (UID), ಇಂಡಕ್ಸ್‌ ನಂಬರ್‌ ಮತ್ತು ಕ್ಯಾಪ್ಚಾವನ್ನು ನಮೂದಿಸಿ.
  • Show Results ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿ ಮತ್ತು ಪ್ರಿಂಟ್‌ ಔಟ್‌ ತೆಗೆದಿಡಿ.

ಸಿಐಎಸ್‌ಸಿಇ ಈ ಬಾರಿ ಹೊಸ ಸೌಲಭ್ಯವನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ತಮ್ಮ ಐಸಿಎಸ್ಇ ಮತ್ತು ಐಎಸ್‌ಸಿ ಫಲಿತಾಂಶಗಳ ಮರು ಪರಿಶೀಲನೆ ಮತ್ತು ಮರು ಮೌಲ್ಯಮಾಪನವನ್ನು ಕೋರಲು ಅನುವು ಮಾಡಿಕೊಟ್ಟಿದೆ. ಮರುಪರಿಶೀಲನೆಗೆ ಪ್ರತಿ ಪತ್ರಿಕೆಗೆ 1,000 ರೂ. ಮರು ಮೌಲ್ಯಮಾಪನಕ್ಕೆ 1,500 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಫಲಿತಾಂಶ ಘೋಷಣೆಯ ನಂತರ ಈ ಆಯ್ಕೆಯು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ಇದಲ್ಲದೆ ಐಸಿಎಸ್ಇ ಮತ್ತು ಐಎಸ್‌ಸಿ ಕಂಪಾರ್ಟ್‌ಮೆಂಟ್‌ ಪರೀಕ್ಷೆಗಳನ್ನು ನಿಲ್ಲಿಸಲು ಸಿಐಎಸ್‌ಇ ನಿರ್ಧರಿಸಿದೆ. ಬದಲಾಗಿ ವಿದ್ಯಾರ್ಥಿಗಳಿಗೆ ಎರಡು ವಿಷಯಗಳಲ್ಲಿ ಸುಧಾರಣಾ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಿದೆ.

ಫಲಿತಾಂಶದ ವಿವರ

10ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 2,43,617
  • ತೇರ್ಗಡೆಯಾದವರು: 2,42,328
  • ಪಾಸ್‌ ಆದ ಶೇಕಡಾವಾರು: 99.47%

12ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 99,901
  • ತೇರ್ಗಡೆಯಾದವರು: 98,088
  • ಪಾಸ್‌ ಆದ ಶೇಕಡಾವಾರು: 98.19%

ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಕೆಸೆಟ್‌ ಪರೀಕ್ಷೆ- 2023ರ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ – ಕೆಸೆಟ್‌ʼ (KSET – Karnataka State Eligibility Test) ಇದರ 2023ನೇ ಸಾಲಿನ ಪರೀಕ್ಷೆಯನ್ನು ಕಳೆದ ಜನವರಿ ತಿಂಗಳಲ್ಲಿ ನಡೆಸಲಾಗಿತ್ತು. ಪರೀಕ್ಷೆಗೆ ಬರೆದವರು ಈಗ ತಮ್ಮ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

ಪ್ರಸ್ತುತ ಕೆಇಎ ಬಿಡುಗಡೆ ಮಾಡಿರುವ ಕೆಸೆಟ್‌ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ವಿವರವಾದ ಮಾಹಿತಿಗಳೊಂದಿಗೆ ಸಲ್ಲಿಸಲು ಮೇ 10, 2024 ರವರೆಗೆ ಅವಕಾಶ ನೀಡಿದೆ. ಆಕ್ಷೇಪಣೆಯನ್ನು ಇಮೇಲ್‌ ವಿಳಾಸ -keakset2023@gmail.com ಗೆ ಕಳುಹಿಸಬಹುದು.

ಇದನ್ನೂ ಓದಿ: Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಎಸ್ ಎಸ್ ಎಲ್ ಸಿ ನಂತರ ಮುಂದೇನು?

Continue Reading

ಬೆಂಗಳೂರು

English Alphabet: ಇಂಗ್ಲಿಷ್‌ನಲ್ಲಿ ಹೊಸ ಅಕ್ಷರ ವಿನ್ಯಾಸಕ್ಕಾಗಿ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ ವಿದ್ಯಾರ್ಥಿಗಳ ಪ್ರಯತ್ನ

English Alphabet: ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ನಲ್ಲಿ ಗುರುವಾರ ಮುದ್ರಣಕಲೆ ಮತ್ತು ಉತ್ಪನ್ನ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಗಾರ ಏರ್ಪಡಿಸಲಾಗಿತ್ತು. ಈ ವೇಳೆ ಬೆಂಗಳೂರು ಹಾಗೂ ಪ್ರಾನ್ಸ್‌ ವಿದ್ಯಾರ್ಥಿಗಳು, ಇಂಗ್ಲಿಷ್‌ ವರ್ಣಮಾಲೆಯ 27ನೇ ಅಕ್ಷರ ವಿನ್ಯಾಸಗೊಳಿಸುವ ಪ್ರಯತ್ನ ಮಾಡಿದ್ದಾರೆ.

VISTARANEWS.COM


on

English Alphabet
Koo

ಬೆಂಗಳೂರು: ಇಂಗ್ಲಿಷ್‌ ವರ್ಣಮಾಲೆಯಲ್ಲಿ (English Alphabet) 26 ಅಕ್ಷರಗಳಿರುವುದು ಗೊತ್ತಿರುವ ಸಂಗತಿ. ಆದರೆ, ನಗರದ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ (LISAA School of Design) ವಿದ್ಯಾರ್ಥಿಗಳು, 27ನೇ ಅಕ್ಷರ ವಿನ್ಯಾಸಗೊಳಿಸುವ ಸವಾಲು ಕೈಗೆತ್ತಿಕೊಂಡಿದ್ದು, ಆ ಮೂಲಕ ಇಂಗ್ಲಿಷ್‌ ಮತ್ತು ಫ್ರೆಂಚ್‌ ಭಾಷೆಯ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ನಗರದ ಲಿಸಾ ಸ್ಕೂಲ್‌ ಆಫ್‌ ಡಿಸೈನಿಂಗ್‌ನಲ್ಲಿ ಗುರುವಾರ ಮುದ್ರಣಕಲೆ ಮತ್ತು ಉತ್ಪನ್ನ ವಿನ್ಯಾಸದ ಕುರಿತು ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಇದರಲ್ಲಿ ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ಮತ್ತು ಫ್ರಾನ್ಸ್‌ನ ಸ್ಟ್ರಾಸ್‌ಬರ್ಗ್‌ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಾಗಾರದ ಮುಖ್ಯ ಉದ್ದೇಶ ಹೊಸ ಅಕ್ಷರವನ್ನು ವಿನ್ಯಾಸಗೊಳಿಸುವುದಾಗಿತ್ತು.

ಈ ಕುರಿತು ಬೆಂಗಳೂರಿನ ಲಿಸಾ ಸ್ಕೂಲ್‌ ಆಫ್‌ ಡಿಸೈನ್‌ ಸಂಸ್ಥಾಪಕರು ಮತ್ತು ನಿರ್ದೇಶಕಿ ಅವಿ ಕೆಸ್ವಾನಿ ಅವರು ಮಾತನಾಡಿ, “ಭಾಷೆಯೊಂದು ಸಂವಹನ ಕ್ರಿಯೆಗೆ ನೆರವಾಗುವ ಮಾಧ್ಯಮ. ಅದರಂತೆ ಎಲ್ಲಾ ಅಕ್ಷರಗಳಿಗೂ ಅದರದ್ದೇ ಆದ ಸಾಂಸ್ಕೃತಿಕ ಹಿನ್ನೆಲೆ ಇರುತ್ತದೆ. ನಾವು ವಿನ್ಯಾಸಕಾರರು ಈ ಮೂಲಕ ಹೊಸ ಯೋಚನೆಗಳನ್ನು ಹೊರತರಲು ವೇದಿಕೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತೇವೆ. ನಮ್ಮ ಉದ್ದೇಶ ಈ ಕಾರ್ಯಾಗಾರದ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಸವಾಲೊಂದನ್ನು ನೀಡುವುದಾಗಿದೆ. ಮೂಲತಃ ಫ್ರೆಂಚ್‌ ಸ್ಕೂಲ್‌ ಆಫ್‌ ಡಿಸೈನ್‌ ಆಗಿರುವುದರಿಂದ ಇಂಗ್ಲಿಷ್‌ ಮಾತನಾಡುವವರು ಕೆಲ ಫ್ರೆಂಚ್‌ ಉಚ್ಚಾರಣೆ ಮಾಡಲು ಕಷ್ಟಪಡುವುದನ್ನು ಗಮನಿಸಿದ್ದೇವೆ. ಈ ಹಿನ್ನೆಲೆಯಲ್ಲಿ 27ನೇ ಅಕ್ಷರವನ್ನು ವಿನ್ಯಾಸಗೊಳಿಸುವ ಮೂಲಕ ಫ್ರೆಂಚ್‌ ಮತ್ತು ಇಂಗ್ಲಿಷ್‌ ಭಾಷೆಗೆ ಸೇತುವೆ ಕಲ್ಪಿಸುವುದಾಗಿದೆ” ಎಂದು ಹೇಳಿದರು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ಫ್ರಾನ್ಸ್‌ನ ವಿದ್ಯಾರ್ಥಿಗಳಿಗೆ ಕಾರ್ಯಾಗಾರದ ಜೊತೆಗೆ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಿದ್ದು, ಈ ಮೂಲಕ ನಾಡಿನ ಶ್ರೀಮಂತ ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ವೈಭವವನ್ನು ಪರಿಚಯಿಸುವ ನಿಟ್ಟಿನಲ್ಲಿ ಚನ್ನಪಟ್ಟಣದ ಕರಕುಶಲ ಕೇಂದ್ರ ಮತ್ತು ಮೈಸೂರಿನ ಅರಮನೆಯ ಪರಿಚಯ ಮಾಡಿಸಿಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Continue Reading
Advertisement
IPL 2024
ಕ್ರೀಡೆ5 mins ago

IPL 2024 : ಅಭಿಮಾನಿಯ 80 ಸಾವಿರ ರೂಪಾಯಿ ಮೊಬೈಲ್​ ಒಡೆದು ಹಾಕಿದ ಚೆನ್ನೈ ಸ್ಟಾರ್​; ಇಲ್ಲಿದೆ ವಿಡಿಯೊ

Murder Case
ಕರ್ನಾಟಕ7 mins ago

Murder Case: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ; ನಡು ರಸ್ತೆಯಲ್ಲೇ ಅಟ್ಟಾಡಿಸಿ ಕೊಲೆ

Prajwal Revanna case Interpol issues messages against Prajwal to 196 countries
ಕ್ರೈಂ25 mins ago

Prajwal Revanna case: ಪ್ರಜ್ವಲ್‌ ರೇವಣ್ಣ ವಿರುದ್ಧ 196 ದೇಶಗಳಿಗೆ ಇಂಟರ್‌ಪೋಲ್‌ ಮೆಸೇಜ್‌; ಎಲ್ಲೇ ಕಂಡರೂ ಸಿಗುತ್ತೆ ಮಾಹಿತಿ!

PM Modi
ಪ್ರಮುಖ ಸುದ್ದಿ30 mins ago

PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Prajwal Revanna Case HD Revanna has severe chest pain Admission in Victoria
ರಾಜಕೀಯ45 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Air Purifier
ಆಟೋಮೊಬೈಲ್56 mins ago

Air Purifier: ಕಾರುಗಳಲ್ಲಿ ಏರ್ ಪ್ಯೂರಿಫೈಯರ್‌ ಏಕೆ ಅಗತ್ಯ ಗೊತ್ತೆ?

Prajwal Revanna Case HD Revanna bail plea to be heard tomorrow Jail or Bela
ಕ್ರೈಂ59 mins ago

Prajwal Revanna Case: ನಾಳೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

Ujjivan Small Finance Bank
ವಾಣಿಜ್ಯ1 hour ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Lok Sabha Election 2024
ಕರ್ನಾಟಕ1 hour ago

Lok Sabha Election 2024: ಜಿ.ಎಂ.ಸಿದ್ದೇಶ್ವರ್‌ ಮಹಾ ಎಡವಟ್ಟು, ಪತ್ನಿ ಮತವನ್ನೂ ತಾವೇ ಹಾಕಿದ ಸಂಸದ

Nirav modi
ದೇಶ1 hour ago

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna has severe chest pain Admission in Victoria
ರಾಜಕೀಯ45 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ4 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ6 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌