Assault on woman | ರಸ್ತೆ ಮೇಲೆ ಹಾಕಿದ್ದ ಅಡಕೆ ಸಿಪ್ಪೆ ತೆಗೆದಿಲ್ಲ ಎಂದು ಜಗಳ ತೆಗೆದು ಮಹಿಳೆಯ ಮೇಲೆ ಹಲ್ಲೆ - Vistara News

ಕ್ರೈಂ

Assault on woman | ರಸ್ತೆ ಮೇಲೆ ಹಾಕಿದ್ದ ಅಡಕೆ ಸಿಪ್ಪೆ ತೆಗೆದಿಲ್ಲ ಎಂದು ಜಗಳ ತೆಗೆದು ಮಹಿಳೆಯ ಮೇಲೆ ಹಲ್ಲೆ

ಹೊಸನಗರ ತಾಲೂಕಿನ ಇಟ್ಟಕ್ಕಿ ಗ್ರಾಮದಲ್ಲಿ ರಸ್ತೆ ಮೇಲೆ ಹಾಕಿದ್ದ ಅಡಕೆ ಸಿಪ್ಪೆ ತೆಗೆದಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ (Assault on woman) ಮಾಡಿದ್ದಾನೆ. ಜತೆಗೆ ಖಾರ ಪದಾರ್ಥವನ್ನು ಮುಖಕ್ಕೆ ಎಸೆದಿದ್ದಾನೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Ittakki Village Assault on woman
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಲ್ಲೆಗೆ ಒಳಗಾದ ಮಹಿಳೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ರಸ್ತೆ ಮೇಲೆ ಹಾಕಿದ್ದ ಅಡಕೆ ಸಿಪ್ಪೆ ತೆಗೆದಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ದೊಣ್ಣೆಯಿಂದ ತಲೆಗೆ ಹಲ್ಲೆ (Assault on woman) ಮಾಡಿರುವ ಘಟನೆ ತಾಲೂಕಿನ ಇಟ್ಟಕ್ಕಿ ಗ್ರಾಮದಲ್ಲಿ ಬುಧವಾರ (ಡಿ.೨೧) ನಡೆದಿದೆ.

ಭಾಗೀರಥಿ (45) ಎಂಬುವವರು ಬೇರೆ ಕಡೆಗಳಿಂದ ಹಸಿ ಅಡಕೆ ತರಿಸಿಕೊಂಡು ಮಿಷನ್ ಮೂಲಕ ಅಡಕೆ ಸುಲಿಯುವುದು ಹಾಗೂ ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದಾರೆ. ಸುಲಿದ ಅಡಕೆ ಸಿಪ್ಪೆಯನ್ನು ಮನೆಯ ಮುಂದಿನ ರಸ್ತೆಯಲ್ಲಿ ಹರಡಿರುತ್ತಾರೆ. ಬುಧವಾರ ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ಅದೇ ಗ್ರಾಮದ ವಾಸಿ ಧರ್ಮರಾವ್ ಎಂಬಾತ ತನ್ನ ಜಾನುವಾರು ಸಹಿತ ಭಾಗೀರಥಿ ಮನೆ ಮುಂದೆ ಸಾಗುವಾಗ, ಏಕಾಏಕಿ ಮಹಿಳೆಗೆ ಅವಾಚ್ಯ ಶಬ್ದಗಳಿಂದ ಬೈದು, ರಸ್ತೆಯಿಂದ ಇನ್ನೂ ಅಡಕೆ ಸಿಪ್ಪೆ ಏಕೆ ತೆಗೆದಿಲ್ಲ ? ಎಂದು ಪ್ರಶ್ನಿಸಿ, ಭಾಗೀರಥಿ ತಲೆಗೆ ದೊಣ್ಣೆಯಿಂದ ಗಂಭೀರ ಹಲ್ಲೆ ಮಾಡಿದನು.

ಇದನ್ನೂ ಓದಿ | Communal harmony | ಧರ್ಮದಂಗಲ್‌ ನಡುವೆ ಸಾಮರಸ್ಯದ ಸಂಭ್ರಮ: ಗಂಗಾವತಿ ದುರ್ಗಮ್ಮನ ಜಾತ್ರೆಯಲ್ಲಿ ಮುಸ್ಲಿಂ ಭಕ್ತರು

ಇದೇ ವೇಳೆಗೆ ಅಡುಗೆ ತಯಾರಿಕೆಗಾಗಿ ರುಬ್ಬಿದ್ದ ಖಾರವನ್ನು ಭಾಗೀರಥಿಯು ಆರೋಪಿ ಮುಖಕ್ಕೆ ಎಸೆದರು. ಅಷ್ಟರಲ್ಲಿ ಗಲಾಟೆ ಸದ್ದು ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರ ಸಹಾಯದಿಂದ ಗಾಯಾಳು ಮಹಿಳೆಯನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರು.

ಗಾಯಾಳು ಭಾಗೀರಥಿ ನೀಡಿದ ದೂರನ ಮೇರೆಗೆ ಹೊಸನಗರ ಠಾಣೆಯಲ್ಲಿ ಐಪಿಸಿ ಕಾಯ್ದೆ 504, 324 ಕಲಂ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಕೊಂಡು, ಪರಾರಿಯಾಗಿರುವ ಆರೋಪಿ ಧರ್ಮರಾವ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ | Kirti Azad | ಮೋದಿ ಧರಿಸಿದ್ದ ಉಡುಗೆ ಮಹಿಳೆಯದ್ದಾ, ಪುರುಷರದ್ದಾ: ಕೀರ್ತಿ ಆಜಾದ್, ಭುಗಿಲೆದ್ದ ವಿವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Road Accident: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮತ್ತು ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯು ಶಿರಾ ತಾಲೂಕಿನ ಸೀಬಿ ಅರಣ್ಯ ಪ್ರದೇಶ ಸಮೀಪದ ಶಿರಾ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಗುರುವಾರ ಸಂಜೆ ಜರುಗಿದೆ.

VISTARANEWS.COM


on

A lorry collided with a bike Two persons died on the spot
Koo

ಶಿರಾ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ಮತ್ತು ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆಯು ಶಿರಾ ತಾಲೂಕಿನ ಸೀಬಿ ಅರಣ್ಯ ಪ್ರದೇಶ ಸಮೀಪದ ಶಿರಾ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಗುರುವಾರ ಸಂಜೆ (Road Accident) ನಡೆದಿದೆ.

ತಾಲೂಕಿನ ಚಿಕ್ಕ ಸೀಬಿ ಗ್ರಾಮದ ಲಿಂಗರಾಜ್ (20) ಮೃತ ಬೈಕ್ ಸವಾರ ಮತ್ತು ಹಿಂಬದಿಯಲ್ಲಿ ಇದ್ದ‌ ಸಿದ್ದಲಿಂಗಪ್ಪ (50) ಅಪಘಾತದಲ್ಲಿ ಮೃತಪಟ್ಟವರು. ಗುರುವಾರ ಮಧ್ಯಾಹ್ನ ತಮ್ಮ ಸ್ವಗ್ರಾಮ ಚಿಕ್ಕ ಸೀಬಿಯಿಂದ ದೊಡ್ಡ ಅಲದ ಮರದ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘ‌ಟನೆ ಸಂಭವಿಸಿದೆ.

ಇದನ್ನೂ ಓದಿ: Robot Suicide: ದ. ಕೊರಿಯಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಬೋಟ್! ಕೆಲಸದ ಹೊರೆ ಕಾರಣ?

ತುಮಕೂರು ಕಡೆಯಿಂದ ಶಿರಾ ಕಡೆಗೆ ತೆರಳುತ್ತಿದ್ದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿಯ ಚಕ್ರ ಹರಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಹಾಗೂ ಶಿರಾ ಉಪ ವಿಭಾಗದ ಡಿವೈಎಸ್‌ಪಿ ಬಿ.ಕೆ. ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕ್ರೈಂ

Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

Reels Obsession: ಮೊನ್ನೆಯಷ್ಟೇ ರೀಲ್ಸ್‌ಗಾಗಿ ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಕಾರಣಕ್ಕೆ ರೀಲ್ಸ್‌ ಸ್ಟಾರ್‌ ಅರೆಸ್ಟ್‌ ಆಗಿದ್ದ. ಆದರೆ ಈತನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌ ದಾಖಲಾಗಿದ್ದು, ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

By

Reels Obsession who gave dummy gun To Reels Obsession Sandalwood technician now trouble
ಸಿನಿಮಾ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರಿಂದ ನೋಟಿಸ್‌.. ಡಮ್ಮಿ ಗನ್‌ ಹಿಡಿದು ಶೋಕಿ ಮಾಡಿದ ಅರುಣ್‌ ಕಟಾರೆ
Koo

ಚಿತ್ರದುರ್ಗ/ಬೆಂಗಳೂರು: ರೀಲ್ಸ್‌ಗಾಗಿ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು ಶೋಕಿ (Reels Obsession) ಮಾಡಿದ ಅರುಣ್‌ ಕಟಾರೆ ಎಂಬಾತನನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದರು. ಆದರೆ ಕಳೆದ ವರ್ಷವೇ ಚಿತ್ರದುರ್ಗದಲ್ಲಿ ಅರುಣ್‌ ವಿರುದ್ಧ ಪ್ರತ್ಯೇಕ ಎರಡು ಎಫ್‌ಐಆರ್‌ಗಳು ದಾಖಲಾಗಿವೆ.

ಶೋಕಿಲಾಲ ಅರುಣ್‌ ಕಟಾರೆ ವಿರುದ್ಧ ಕಳೆದ 2023ರ ಏಪ್ರಿಲ್ ಹಾಗೂ ಜುಲೈನಲ್ಲಿ ಬ್ಲ್ಯಾಕ್‌ಮೇಲ್‌ ಹಾಗೂ ಚೀಟಿಂಗ್‌ ಮಾಡಿರುವ ಆರೋಪದಡಿ ಎಫ್‌ಐಆರ್‌ ದಾಖಲಾಗಿದೆ. ಬಾಲಕನಿಗೆ ಮದ್ಯ ಕುಡಿಸಿ, ಸಿಗರೇಟ್ ಸೇದಿಸಿ ಮೊಬೈಲ್‌ನಲ್ಲಿ ವಿಡಿಯೊ ಮಾಡಿ ಬೆದರಿಸುತ್ತಿದ್ದ. ಮನೆಯಿಂದ ಒಡವೆ ತರುವಂತೆ ಬಾಲಕನಿಗೆ ಅರುಣ್ ಕಟಾರೆ ಬೆದರಿಸುತ್ತಿದ್ದ. ಈ ವಿಚಾರ ತಿಳಿಯುತ್ತಿದ್ದಂತೆ ಬಾಲಕನ ತಂದೆ ಬಾಲಾಜಿ ಎಂ.ಕೆ ಎಂಬುವವರಿಂದ ದೂರು ದಾಖಲಿಸಿದ್ದರು.

ಹಣ ಡಬಲ್‌ ಮಾಡುವುದಾಗಿ ವಂಚನೆ

ಮತ್ತೊಬ್ಬರಿಗೆ ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ಸುಮಾರು 3,68,000 ಹಣ ಪಡೆದು ಅರುಣ್ ಕಟಾರೆ ವಂಚಿಸಿದ್ದಾನೆ. ಡ್ಯೂಯೆಟ್ ಪಬ್‌ನಲ್ಲಿ ಬಂಡವಾಳ ಹಾಕಿ ಡಬಲ್ ಮಾಡುವುದಾಗಿ ಹೇಳಿದ್ದ. ವಂಚನೆಗೆ ಒಳಗಾದ ರವಿತೇಜ ಎಲ್.ಯು ಎಂಬುವುವರಿಂದ ದೂರು ದಾಖಲಾಗಿದೆ. ರವಿತೇಜನಿಂದ ಹಣ ಪಡೆದ ಬಳಿಕ ಫೋನ್ ಸ್ವಿಚ್ ಮಾಡಿಕೊಂಡು ಅರುಣ್‌ ಕಟಾರೆ ಪರಾರಿ ಆಗಿದ್ದ.

ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

ಅರುಣ್‌ ಕಟಾರೆ ರೀಲ್ಸ್ ಶೋಕಿಯಿಂದಾಗಿ ಸ್ಯಾಂಡಲವುಡ್‌ನ ಟೆಕ್ನಿಷಿಯನ್‌ಗೆ ಸಂಕಷ್ಟ ಎದುರಾಗಿದೆ. ಕನ್ನಡದ ಸೂಪರ್ ಹಿಟ್ ಸಿನಿಮಾಗಳಿಗೆ ಡಮ್ಮಿ ಗನ್ ಒದಗಿಸುವ ಟೆಕ್ನಿಷಿಯನ್ ಸಾಹಿಲ್‌ಗೆ ಪೊಲೀಸರು ನೋಟಿಸ್‌ ಕೊಟ್ಟಿದ್ದಾರೆ. ಹೊಂಬಾಳೆ ಫಿಲ್ಸ್, ಗೀತಾ ಪಿಕ್ಚರ್ಸ್ ನಂತಹ ಬ್ಯಾನರ್‌ಗಳ ಸಿನಿಮಾಗಳಿಗೆ ಸಾಹಿಲ್ ಟೆಕ್ನಿಷಿಯನ್ ಆಗಿದ್ದರು. ಕನ್ನಡದ ಸೂಪರ್ ಹಿಟ್ ಚಿತ್ರಗಳಾದ ಕಬ್ಜ, ಭೈರತಿ ರಣಗಲ್, ಮಪ್ತಿ ಸಿನಿಮಾಗಳಿಗೆ ಟೆಕ್ನಿಷಿಯನ್ ಸಾಹಿಲ್ ಡಮ್ಮಿ ಗನ್ ಒದಗಿಸಿದ್ದರು. ಇದೇ ಸಾಹಿಲ್ ಬಳಿ ಅರುಣ್ ಕಟಾರೆ ಡಮ್ಮಿ ಗನ್ ಬಾಡಿಗೆ ಪಡೆದಿದ್ದರು. ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಮಾಡಲು ಡಮ್ಮಿ ಗನ್‌ ಅನ್ನು ಅರುಣ್ ಕಟಾರೆ ಬಳಸಿದ್ದ. ಸದ್ಯ ಕೊತ್ತನೂರು ಠಾಣೆ ಪೊಲೀಸರಿಂದ ಬಂಧಿತನಾಗಿದ್ದ ಅರುಣ್ ಕಾಟೇರ, ಸಾಹಿಲ್ ಬಳಿ ಶಾರ್ಟ್ ಮೂವಿಗೆ ಎಂದು ಡಮ್ಮಿ ಗನ್ ಬಾಡಿಗೆ ತೆಗೆದುಕೊಂಡಿದ್ದ. ಈಗ ಕೊತ್ತನೂರು ಪೊಲೀಸರು ಸಾಹಿಲ್‌ಗೆ ನೊಟೀಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಏನಿದು ಪ್ರಕರಣ?

ಬೆಂಗಳೂರು: ರೀಲ್ಸ್‌ಗಾಗಿ ಶೋಕಿ (Reels Obsession) ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದರು. ಈತ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಬೀದಿಬೀದಿಯಲ್ಲಿ ಈತನ ಗನ್‌ ಕಂಡು ಜನ ಆತಂಕಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದರು. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದರು.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಮಾಹಿತಿ ನೀಡಿದ್ದರು. ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿತ್ತು. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Dhruva Sarja: ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಹಲ್ಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!

Dhruva Sarja: ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಆ ಬಳಿಕ ಪ್ರಶಾಂತ್ ಪೂಜಾರಿಗೆ ಹಲ್ಲೆ ಮಾಡಿದ್ದರು. ಸದ್ಯ ಬಂಧನ ಭೀತಿಯಿಂದ ಆರೋಪಿಗಳು ಜಾಮೀನು ಪಡೆದಿದ್ದಾರೆ. ಈಗ ಹಲ್ಲೆಗೊಳಗಾದ ಪ್ರಶಾಂತ್ ಪೂಜಾರಿಯಿಂದಲೂ ಪೊಲೀಸರಿಗೆ ಸಹಕಾರ ಸಿಗುತ್ತಿಲ್ಲ . ಹಲ್ಲೆಯಾದಾಗಲು ಪ್ರಶಾಂತ್ ಪೂಜಾರಿ ದೂರು ನೀಡಲು ಹಿಂದೇಟಾಕಿದ್ದರು. ಈಗ ಧ್ರುವ ಸರ್ಜಾರಿಂದಲೂ ಪೊಲೀಸರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಇನ್ನು ತಮ್ಮವರೇ ಎಂದು ನಟ ಧ್ರುವ ಸರ್ಜಾ ಸುಮ್ಮನಾಗಿದ್ದಾರೆ.

VISTARANEWS.COM


on

Dhruva Sarja Gym Trainer Prashanth poojari twist
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ (Dhruva Sarja) ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದಂತಾಗಿದೆ. ಧ್ರುವ ಸರ್ಜಾ ಜತೆ ಹತ್ತಿರವಾಗಬೇಕು ಎಂದು ಅಟ್ಯಾಕ್‌ ನಡೆದಿತ್ತು ಎಂದು ತಿಳಿದು ಬಂದಿದೆ. ಈ ವಿಚಾರ ಗೊತ್ತಿಲ್ಲದೇ ದಕ್ಷಿಣ ವಿಭಾಗ ಡಿಸಿಪಿಗೆ ಧ್ರುವ ಸರ್ಜಾ ಕರೆ ಮಾಡಿದ್ದರು.

ಈ ಬಗ್ಗೆ ತನಿಖೆಗೆ ಇಳಿದ ಬನಶಂಕರಿ ಪೊಲೀಸರಿಂದ ಅಸಲಿ ಸತ್ಯ ಬಯಲಾಗಿದೆ. ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ಮಾಡಿದ್ದು ಹರ್ಷ ಮತ್ತು ಸುಭಾಷ್. ಆದರೆ ಹಲ್ಲೆ ಮಾಡಿಸಿದ್ದು ಮಾತ್ರ ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಮಾತ್ರವಲ್ಲ ನಾಗೇಂದ್ರ ಧ್ರುವ ಸರ್ಜಾಗೆ ಚಾಲಕನಾಗಿಯು ಕೆಲಸ ಮಾಡುತ್ತಿದ್ದ. ಪ್ರಶಾಂತ್ ಪೂಜಾರಿ ಇತ್ತೀಚೆಗೆ ಧ್ರುವ ಸರ್ಜಾಗೆ ಆಪ್ತನಾಗ್ತಿದ್ದ. ಇದು ನಾಗೇಂದ್ರನಿಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ. ಹೀಗಾಗಿ ತಾನು ಹಲ್ಲೆ ಮಾಡಿದರೆ ಎಲ್ಲಿ ಹೊರಗೆ ಬರತ್ತೋ ಎಂದು ಹರ್ಷ ಮತ್ತು ಸುಭಾಷ್‌ಗೆ ಹಲ್ಲೆ ಮಾಡಲು ಹೇಳಿದ್ದ.

ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಆ ಬಳಿಕ ಪ್ರಶಾಂತ್ ಪೂಜಾರಿಗೆ ಹಲ್ಲೆ ಮಾಡಿದ್ದರು. ಸದ್ಯ ಬಂಧನ ಭೀತಿಯಿಂದ ಆರೋಪಿಗಳು ಜಾಮೀನು ಪಡೆದಿದ್ದಾರೆ. ಈಗ ಹಲ್ಲೆಗೊಳಗಾದ ಪ್ರಶಾಂತ್ ಪೂಜಾರಿಯಿಂದಲೂ ಪೊಲೀಸರಿಗೆ ಸಹಕಾರ ಸಿಗುತ್ತಿಲ್ಲ . ಹಲ್ಲೆಯಾದಾಗಲು ಪ್ರಶಾಂತ್ ಪೂಜಾರಿ ದೂರು ನೀಡಲು ಹಿಂದೇಟಾಕಿದ್ದರು. ಈಗ ಧ್ರುವ ಸರ್ಜಾರಿಂದಲೂ ಪೊಲೀಸರಿಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ. ಇನ್ನು ತಮ್ಮವರೇ ಎಂದು ನಟ ಧ್ರುವ ಸರ್ಜಾ ಸುಮ್ಮನಾಗಿದ್ದಾರೆ.

ಇದನ್ನೂ ಓದಿ: OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

ಕಳೆದ ಮೇ 26 ರಂದು ರಾತ್ರಿ ಧ್ರುವ ಸರ್ಜಾ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆಯಾಗಿತ್ತು. ಧ್ರುವಾ ಸರ್ಜಾ ಮನೆಯಿಂದ ತೆರಳುತ್ತಿದ್ದ ವೇಳೆ ಪ್ರಶಾಂತ್ ಪೂಜಾರಿಗೆ ಹಲ್ಲೆಯಾಗಿತ್ತು. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.

ಸಿನಿಮಾ ವಿಚಾರಕ್ಕೆ ಬಂದರೆ ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ (KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್‌ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.

Continue Reading

Latest

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Robbery Video: ಬೆಂಗಳೂರಿನ ಸಿಲ್ಕ್ ಬೋರ್ಡ್‌ನಲ್ಲಿ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಚೀಲವನ್ನು ಹಿಡಿದು ನಿಂತಿದ್ದು, ಹಿಂದಿನಿಂದ ಬಂದ ಕಳ್ಳ ಅದನ್ನು ಕಸಿದುಕೊಂಡು ಓಡಿದ್ದಾನೆ. ಹಾಡಹಗಲಿನಲ್ಲಿ ಜನಸಂದಣಿ ಇರುವ ಕಡೆಯಲ್ಲೇ ಈತ ಕಳ್ಳತನ ಮಾಡಿದ್ದನ್ನು ಕಂಡು ಜನರು ಭಯಗೊಂಡಿದ್ದಾರೆ. ಈ ವಿಡಿಯೊ ಈಗ ವಿಡಿಯೊ ವೈರಲ್ ಆಗಿದೆ. ಬೆಂಗಳೂರು ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ಜನ ಪ್ರಶ್ನೆ ಮಾಡಲಾರಂಭಿಸಿದ್ದಾರೆ.

VISTARANEWS.COM


on

Robbery Video
Koo

ಬೆಂಗಳೂರು: ಕಳ್ಳತನದ ಪ್ರಕರಣ ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಡೆ ಕೇಳಿ ಬರುತ್ತಿದೆ. ಜನರಿಗೆ ದುಡಿಮೆ ಬಗ್ಗೆ ಆಸಕ್ತಿ ಕಡಿಮೆಯಾಗಿ ಸುಲಭವಾಗಿ ಹಣ ಸಂಪಾದಿಸಲು ಕಳ್ಳತನದ ಮಾರ್ಗವನ್ನು ಕಂಡುಕೊಳ್ಲುತ್ತಿದ್ದಾರೆ. ಇದರಿಂದ ಎಷ್ಟೋ ಜನರ ಜೀವವೂ ಹೋಗಿದೆ. ಹಾಗಾಗಿ (Robbery Video) ಇಂತಹ ಕಳ್ಳತನ(Robbery Case )ವನ್ನು ಮಟ್ಟ ಹಾಕಲೇಬೇಕು. ಇದೀಗ ಬೆಂಗಳೂರಿನಲ್ಲಿ ಹಾಡಹಗಲಿನಲ್ಲೇ ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಧ್ಯವಯಸ್ಕರೊಬ್ಬರ ಬ್ಯಾಗನ್ನು ಕಿತ್ತುಕೊಂಡು ಓಡಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಡೀ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬೆಂಗಳೂರಿನ ಸಿಲ್ಕ್ ಬೋರ್ಡ್‍ನಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಚೀಲವನ್ನು ಹಿಡಿದು ನಿಂತಿದ್ದು, ಹಿಂದಿನಿಂದ ಬಂದ ಕಳ್ಳ ಅದನ್ನು ಕಸಿದುಕೊಂಡು ಓಡಿದ್ದಾನೆ. ಹಾಡಹಗಲಿನಲ್ಲಿ ಜನಸಂದಣಿ ಇರುವ ಕಡೆಯಲ್ಲಿ ಈತ ಕಳ್ಳತನ ಮಾಡಿದ್ದನ್ನು ಕಂಡು ಜನರು ಭಯಗೊಂಡಿದ್ದಾರೆ. ವೀಡಿಯೊದಲ್ಲಿ, ಯುವಕನೊಬ್ಬ ಜನಸಂದಣಿ ಇರುವ ಬಸ್ ನಿಲ್ದಾಣದಲ್ಲಿ ಮಧ್ಯವಯಸ್ಕ ವ್ಯಕ್ತಿಯನ್ನು ಗಮನಿಸುತ್ತಾ ಅವರ ಹಿಂದಿನಿಂದ ಬಂದು ಚೀಲವನ್ನು ಹಿಡಿದು ಕಸಿದುಕೊಂಡು ಪೇರಿ ಕಿತ್ತಿದ್ದಾನೆ. ಕಳ್ಳನು ಕೈಯಲ್ಲಿ ಚೀಲದೊಂದಿಗೆ ಓಡಿಹೋಗುತ್ತಿರುವುದು ಕಂಡು ಮಧ್ಯವಯಸ್ಕ ವ್ಯಕ್ತಿ ಸಹಾಯಕ್ಕಾಗಿ ಕೂಗಿದ್ದಾರೆ.

ಸಿಟಿಜನ್ಸ್ ಮೂವ್ಮೆಂಟ್ ಈಸ್ಟ್ ಬೆಂಗಳೂರು ಎಂಬ ಕಮ್ಯುನಿಟಿ ಎಕ್ಸ್ ಹ್ಯಾಂಡಲ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, “ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್‍ನಲ್ಲಿ ಹಾಡಹಗಲೇ ಬ್ಯಾಗ್ ಸ್ನ್ಯಾಚಿಂಗ್ ಮಾಡಲಾಗುತ್ತಿದೆ. ಈ ಜನರಿಗೆ ಧೈರ್ಯ ಎಲ್ಲಿಂದ ಬರುತ್ತಿದೆ. ದಯವಿಟ್ಟು ನಿಮ್ಮ ಜಾಗರೂಕತೆಯನ್ನು ಕಳೆದುಕೊಳ್ಳಬೇಡಿ!” ಎಂದು ಬರೆದಿದ್ದಾರೆ.

ಈ ವಿಡಿಯೊ ನೋಡಿ ಹಲವರು ಕಾಮೆಂಟ್ ಮಾಡಿದ್ದಾರೆ. ಈ ಘಟನೆ ಮತ್ತೊಮ್ಮೆ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿದೆ. ಹೊಸೂರು ರಸ್ತೆಯಲ್ಲಿ ಹಾಡಹಗಲೇ ಸರಗಳ್ಳತನ ಸಾಮಾನ್ಯವಾಗಿದೆ. ಬೆಂಗಳೂರು ಸಿಟಿ ಪೊಲೀಸರು ದಯವಿಟ್ಟು ಪ್ರಕರಣದ ಪರಿಸ್ಥಿತಿಯನ್ನು ಪರಿಶೀಲಿಸಿ. ಪ್ರತಿದಿನ ಕಾರುಗಳ ಮೂಲಕ ಬ್ಯಾಗ ಕಳ್ಳತನ ಮಾಡಲಾಗುತ್ತಿದೆ. ಇದರ ಹಿಂದೆ ಮಾಫಿಯಾ ಇದೆ. ನಾಗರಿಕರೇ, ಬೆಲೆಬಾಳುವ ವಸ್ತುಗಳನ್ನು ಎಂದಿಗೂ ಎಲ್ಲರಿಗೂ ಕಾಣುವಂತೆ ತೋರಿಸಬೇಡಿ” ಎಂದು ಬಳಕೆದಾರರೊಬ್ಬರು ಬರೆದಿದ್ದಾರೆ.

ಇದನ್ನೂ ಓದಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

ಇನ್ನೊಬ್ಬ ಬಳಕೆದಾರರು “ಈ ಕೃತ್ಯದಲ್ಲಿ ಕೆಲವು ಪೊಲೀಸರು, ಬಿಎಂಟಿಸಿ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ. ಹಾಗಾಗಿ ದರೋಡೆಕೋರರು ಸರಳವಾಗಿ ಈ ಕೆಲಸ ಮಾಡುತ್ತಿದ್ದಾರೆ. ಇಲ್ಲವಾದರೆ ಇಂತಹ ಘಟನೆ ಪ್ರತಿದಿನ ನಡೆಯುವುದಿಲ್ಲ” ಎಂಬುದಾಗಿ ತಿಳಿಸಿದ್ದಾರೆ. ಇಂತಹ ಪ್ರಕರಣದಿಂದ ಬೆಂಗಳೂರು ಜನರ ಜೀವನ ನರಕವಾಗಿದೆ ಎಂದು ನೆಟ್ಟಿಜನ್ ಬೇಸರ ವ್ಯಕ್ತಪಡಿಸಿದ್ದಾರೆ.

Continue Reading
Advertisement
Team India
ಪ್ರಮುಖ ಸುದ್ದಿ3 hours ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ3 hours ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ3 hours ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ3 hours ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ3 hours ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ4 hours ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ4 hours ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್4 hours ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ5 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ5 hours ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ10 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ12 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ13 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ15 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ16 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌