ಹುದ್ದೆ ಕಡಿತಗೊಳಿಸಿದ ಸರ್ಕಾರದ ನಿರ್ಧಾರದ ವಿರುದ್ಧ ರೈಲ್ವೆ ನೌಕರರ ಪ್ರತಿಭಟನೆ - Vistara News

ಶಿವಮೊಗ್ಗ

ಹುದ್ದೆ ಕಡಿತಗೊಳಿಸಿದ ಸರ್ಕಾರದ ನಿರ್ಧಾರದ ವಿರುದ್ಧ ರೈಲ್ವೆ ನೌಕರರ ಪ್ರತಿಭಟನೆ

ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಉಗ್ರ ಹೋರಾಟವನ್ನು ಮಾಡುವುದಾಗಿ ಶಿವಮೊಗ್ಗ ರೈಲ್ವೆ ನೌಕರರು ಪ್ರತಿಭಟನೆ ಮಾಡಿದ್ದಾರೆ.

VISTARANEWS.COM


on

ರೈಲ್ವೆ ನೌಕರರ ಪ್ರತಿಭಟನೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ರೈಲ್ವೆ ಹುದ್ದೆಗಳನ್ನು ಏಕಾಏಕಿ ಕಡಿತಗೊಳಿಸಲು ತೀರ್ಮಾನಿಸಿರುವ ಕೇಂದ್ರ ಸರ್ಕಾರದ ವಿರುದ್ಧ ನೈಋತ್ಯ ರೈಲ್ವೆ ಮಜ್ದೂರ ಯೂನಿಯನ್‌ ಸಾಂಕೇತಿಕ ಪ್ರತಿಭಟನೆಗೆ ಕರೆಕೊಟ್ಟಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನೌಕರರು ಮುಷ್ಕರ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಮಜ್ದೂರ್ ಸಂಘ ಉಗ್ರ ಹೋರಾಟಕ್ಕೆ ಇಳಿಯಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಈಗಾಗಲೇ ಇಲಾಖೆಯ ಸಿ ಮತ್ತು ಡಿ ಐಓಡಬ್ಲೂ, ವಿಭಾಗವನ್ನ ಮುಚ್ಚಲು ಮುಂದಾಗಿರುವುದರಿಂದ ಯೂನಿಯನ್ ಪ್ರತಿಭಟನೆಗೆ ಮುಂದಾಗಿದೆ.

ಇದನ್ನೂ ಓದಿ | ಜೂ.6ರಂದು ಸರ್‌ ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್‌ ಉದ್ಘಾಟನೆ

ಸರ್ಕಾರದ ಈ ನಿರ್ಧಾರದಿಂದ ದೇಶದಲ್ಲಿ ಸುಮಾರು 72 ಸಾವಿರ ನೌಕರರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಹುದ್ದೆಗಳನ್ನು ಕಡಿತಗೊಳಿಸಿ ರೈಲ್ವೆ ಇಲಾಖೆಯನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪ್ರತಿಭಟನೆಯಲ್ಲಿ ಯೂನಿಯನ್‌ ಶಿವಮೊಗ್ಗ ಘಟಕದ ಕಾರ್ಯದರ್ಶಿ ಚನ್ನಕೇಶವ, ಉಪಾಧ್ಯಕ್ಷ ಪ್ರಭಾಕರ್ ರಾವ್, ಖಜಾಂಚಿ ಯಾಸಿನ್, ಸಹಕಾರ್ಯದರ್ಶಿ ರಾಘವೇಂದ್ರ ಮುಂತಾದವರು ಇದ್ದರು.
ಇದನ್ನೂ ಓದಿ | ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ತೊಯ್ದು ತೊಪ್ಪೆಯಾದ ಪುತ್ತೂರು; ನಾಳೆ ಮಳೆ ಅಬ್ಬರ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ಹಲವೆಡೆ ಮಳೆಯು ಅಬ್ಬರಿಸುತ್ತಿದೆ. ಸೋಮವಾರ ಪುತ್ತೂರಿನಲ್ಲಿ ಸುರಿದ ಅರ್ಧ ಗಂಟೆ ಮಳೆಗೆ (Karnataka Weather Forecast) ನದಿಯಂತಾಗಿತ್ತು. ಬೆಳಗಾವಿಯಲ್ಲೂ ನಿರಂತರ ಮಳೆಯಾಗಿದ್ದು, ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Heavy Rain ) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast Putur rain
ಪುತ್ತೂರಿನಲ್ಲಿ ಮಳೆ ಅಬ್ಬರಕ್ಕೆ ನದಿಯಂತಾದ ರಸ್ತೆಗಳು
Koo

ಮಂಗಳೂರು/ಬೆಂಗಳೂರು: ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ (Heavy Rain) ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಜೂ.4ರಂದು ಗುಡುಗು ಸಹಿತ ಭಾರೀ ಮಳೆಯೊಂದಿಗೆ (Karnataka Weather forecast) ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ನದಿಯಂತಾದ ಪುತ್ತೂರಿನ ರಸ್ತೆಗಳು

ಸೋಮವಾರ ಸಂಜೆ ಪುತ್ತೂರಿನಲ್ಲಿ ಗುಡುಗು ಸಿಡಿಲಿನ ಭಾರೀ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿತ್ತು. ಪುತ್ತೂರಿನ ದರ್ಬೆಯ ಅಂಗಡಿ ಹಾಗೂ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಗಳು ಜಲಾವೃತಗೊಂಡಿತ್ತು. ಭಾರೀ ಮಳೆಗೆ ಪುತ್ತೂರಿನ ರಸ್ತೆಗಳು ನದಿಯಂತಾಗಿ, ಜನ ಜೀವನ ಅಸ್ತವ್ಯಸ್ತವಾಗಿತ್ತು. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದೆ ಈ ಅವಾಂತರಕ್ಕೆ ಕಾರಣ ಎಂದು ಕಿಡಿಕಾರಿದರು.

karnataka weather Forecast

ಬೆಳಗಾವಿಯಲ್ಲೂ ಧಾರಾಕಾರ ಮಳೆ

ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಬೆಳಗಾವಿ ನಗರ ಸೇರಿ ಜಿಲ್ಲೆಯ ಹಲವಡೆ ಭಾರಿ ಮಳೆಗೆ ಬೀದಿ ಬದಿ ವ್ಯಾಪಾರಸ್ಥರು ಹೈರಾಣಾದರಿ. ಕಳೆದ ಹಲವು ದಿನಗಳಿಂದ ಬಿಸಿಲಿಗೆ ತತ್ತರಿಸಿದ ಜನಕ್ಕೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಕೊಡಗಿಗೆ ಎನ್‍ಡಿಆರ್‍ಎಫ್ ತಂಡ ಭೇಟಿ

ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಎದುರಿಸುವಲ್ಲಿ ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸುವ ಸಂಬಂಧ ಈಗಾಗಲೇ ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಎನ್‌ಡಿಆರ್‌ಎಫ್‌ ತಂಡವು ಸೋಮವಾರ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರನ್ನು ಭೇಟಿ ಆಗಿದೆ. ಈ ವೇಳೆ ಎನ್‍ಡಿಆರ್‍ಎಫ್‍ನ ಅಜಯ್ ಕುಮಾರ್ ನೇತೃತ್ವದ ತಂಡವು ಜಿಲ್ಲಾಧಿಕಾರಿ ಜತೆಗೆ ಮಳೆಗಾಲದಲ್ಲಿ ಅನುಸರಿಸಬೇಕಾದ ಕಾರ್ಯ ಚಟುವಟಿಕೆ ಬಗ್ಗೆ ಚರ್ಚಿಸಿದರು.

karnataka weather Forecast

ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಮಳೆ ಸಂಬಂಧ ಹವಾಮಾನ ಇಲಾಖೆಯಿಂದ ಕಾಲಕಾಲಕ್ಕೆ ಬಿಡುಗಡೆ ಆಗುವ ಮಾಹಿತಿಯನ್ನು ಅಪ್‍ಡೇಟ್ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಚ್ಚರವಹಿಸಿ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಇದೇ ವೇಳೆ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ, ಎನ್‍ಡಿಆರ್‍ಎಫ್ ತಂಡ ಪ್ರಮುಖರು ಇದ್ದರು. ಎನ್‍ಡಿಆರ್‍ಎಫ್ ತಂಡವು ಬೆಂಗಳೂರಿನ ಆರ್‍ಆರ್‍ಸಿ ವಿಭಾಗದಿಂದ ಆಗಮಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Karnataka Rain : ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಭಾನುವಾರ ಸುರಿದ ಎರಡು ಗಂಟೆಯ ಮಳೆಗೆ ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗಿದೆ. 133 ವರ್ಷದ ದಾಖಲೆಯನ್ನು ಬೆಂಗಳೂರು ಮಳೆ ರೆಕಾರ್ಡ್ ಬ್ರೇಕ್ ಮಾಡಿದೆ. ಜತೆಗೆ ಸೋಮವಾರವು ಹಲವೆಡೆ ಮಳೆಯು ಅಬ್ಬರಿಸಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Rain) ಜೂನ್‌ ಮೊದಲ ವಾರವೇ ಮಳೆಯಲ್ಲಿ ರೆಕಾರ್ಡ್‌ ಬ್ರೇಕ್‌ ಮಾಡಿದೆ. ಜೂ.2ರ ಭಾನುವಾರ ಬೆಂಗಳೂರಿನಲ್ಲಿ 111.2 mm ಮಳೆಯಾಗಿದೆ. ಈ ಮೂಲಕ 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರಿನಲ್ಲಿ 1891ರ ಜೂನ್ 16ರಂದು 101.6 mm ಮಳೆ ಆಗಿತ್ತು. ಆದರೆ ನಿನ್ನೆ ಭಾನುವಾರ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ (Karnataka Rain) ಮುರಿದಿದೆ ಎಂದು ವಿಸ್ತಾರ ನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಾಖಲೆಯ ಮಳೆ ಅಬ್ಬರದ ಡಿಟೈಲ್ಸ್‌

ವರ್ಷ- ಮಳೆ ಪ್ರಮಾಣ
1891ರ ಜೂನ್ 16ರಂದು 101.6 mm
2013ರ ಜೂನ್‌ 1ರಂದು 100mm
2009ರ ಜೂನ್ 11ರಂದು 89.6 mm
2024ರ ಜೂನ್‌ 2ರಂದು 111.2 mm

ಇದನ್ನೂ ಓದಿ: Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

ಚಿಕ್ಕಮಗಳೂರಲ್ಲಿ ಮಳೆಗೆ 50 ಎಕರೆ ಅಡಿಕೆ ತೋಟ ಜಲಾವೃತ

ಚಿಕ್ಕಮಗಳೂರು ಬಯಲುಸೀಮೆ ಭಾಗದಲ್ಲಿ ಸೋಮವಾರ (ಜೂ. 3) ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ 50 ಎಕರೆ ಅಡಿಕೆ ತೋಟ ಜಲಾವೃತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು, ಸಾದರಹಳ್ಳಿ ಗ್ರಾಮಗಳಲ್ಲಿ ಘಟನೆ ನಡೆದಿದೆ. ಗ್ರಾಮದ ಬಸವರಾಜು, ಲೋಕೇಶ್ ಸೇರಿದಂತೆ ಹಲವು ರೈತರ ತೋಟ ನೀರುಪಾಲಾಗಿದೆ. ಇನ್ನೂ ಚಿಕ್ಕಮಗಳೂರು, ಮುಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್ ಪುರದಲ್ಲಿ ನಿರಂತರ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ, ಕಿಗ್ಗಾ, ಬಸರಿ ಕಟ್ಟೆ ಭಾಗದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಾವಣಗೆರೆಯಲ್ಲಿ ಕೊಚ್ಚಿ ಹೋದ ಮಂಡಲೂರು ಸೇತುವೆ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಮಂಡಲೂರು ಸೇತುವೆ ಕೊಚ್ಚಿ ಹೋಗಿದೆ. ದಾವಣಗೆರೆಯ ಮಂಡಲೂರಿನಿಂದ ಕಾಟಿಹಳ್ಳಿ ತಾಂಡಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಕೊಚ್ಚಿ ಹೋದ ಕಾರಣದಿಂದ ಸಂಚಾರಕ್ಕೆ ಅಡಚಣೆ ಆಗಿತ್ತು. ಮಂಡಲೂರು ಗ್ರಾಮಕ್ಕೆ ಬರಲು ಹೋಗಲು ಆಗದೆ ಕಾಟಿಹಳ್ಳಿ ತಾಂಡದ ಜನರಿಗೆ ತೊಂದರೆ ಅನುಭವಿಸಿದರು. ಸೇತುವೆ ತುರ್ತು ಕಾಮಗಾರಿ ಆರಂಭಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಡಗಿಗೂ ಎಂಟ್ರಿ ಕೊಟ್ಟ ಮುಂಗಾರು ಮಳೆ

ಸೋಮವಾರ ಕೊಡಗು ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಬಿಸಿಲ ವಾತವರಣವಿತ್ತು. ಸೋಮವಾರ ಮಧ್ಯಾಹ್ನದ ನಂತರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮನ್ಸೂನ್ ಮಾದರಿಯ ವಾತಾವರಣ ಕಂಡು ಬಂತು. ಮಳೆಯಿಂದಾಗಿ ಕೊಡಗಿನ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿದೆ. ಇತ್ತ ದಿಢೀರ್‌ ಮಳೆಗೆ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ನಾಶ

ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಆರ್ಭಟಕ್ಕೆ ಮೊಳಕಾಲ್ಮುರು ತಾಲೂಕಿನಲ್ಲಿ ಅವ್ಯವಸ್ಥೆ ಆಗಿದೆ. ಪಕ್ಕುರ್ತಿ ಗ್ರಾಮದಲ್ಲಿ ಮಳೆಯಿಂದಾಗಿ ಶೇಂಗಾ, ಹತ್ತಿ, ಕಲ್ಲಂಗಡಿ, ಕನಕಾಂಬರ ಬೆಳೆ ನಾಶವಾಗಿದೆ. ಮಳೆ ರಭಸಕ್ಕೆ ನಾಲ್ಕು ಬೋರ್ವೆಲ್,ವಿದ್ಯುತ್ ಪರಿಕರ,ಪೈಪ್ ಲೈನ್ ಕೊಚ್ಚಿ ಹೋಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Shivamogga Lok Sabha Constituency: ಗೀತಾ ಶಿವರಾಜ್‌ ಕುಮಾರ್‌ ಜತೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ.ಎಸ್.‌ ಈಶ್ವರಪ್ಪ ಅವರು ಸ್ಪರ್ಧಿಸಿರುವುದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಚುನಾವಣೆ ಫಲಿತಾಂಶವು ಇನ್ನಿಲ್ಲದಷ್ಟು ಕುತೂಹಲ ಕೆರಳಿಸಿದೆ. ಇನ್ನು ಬಿ.ವೈ.ರಾಘವೇಂದ್ರ ಅವರಿಗೆ ತಂದೆ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಲವಿದೆ.

VISTARANEWS.COM


on

Shivamogga Lok Sabha Constituency
Koo

ಶಿವಮೊಗ್ಗ: ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವೂ (Shivamogga Lok Sabha Constituency) ಒಂದಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೊಬ್ಬ ಮಾಜಿ ಸಿಎಂ ಎಸ್‌.ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ (Geetha Shivarajkumar) ಅವರು ಕಣಕ್ಕಿಳಿದಿದ್ದಾರೆ. ಇನ್ನು, ಬಂಡಾಯದ ಬಾವುಟ ಬೀಸಿರುವ ಕೆ.ಎಸ್.ಈಶ್ವರಪ್ಪ (KS Eshwarappa) ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ದು, ತ್ರಿಕೋನ ಕದನ ಏರ್ಪಟ್ಟಿದೆ. ಹಾಗಾಗಿ, ಇದು ಎಲ್ಲರಿಗೂ ಪ್ರತಿಷ್ಠೆಯ ಕಣವಾಗಿದೆ.

ರಾಘವೇಂದ್ರ ಬಲವೇನು?

ಹಾಗೆ ನೋಡಿದರೆ, ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಹಲವು ರೀತಿಯ ಅನುಕೂಲಕರ ವಾತಾವರಣವಿದೆ. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಿದೆ. ಬಿ.ಎಸ್‌.ಯಡಿಯೂರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ. ರಾಘವೇಂದ್ರ ಅವರ ಸಹೋದರ ಬಿ.ವೈ.ವಿಜಯೇಂದ್ರ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ. ಅದರಲ್ಲೂ, ಸಂಸದರಾಗಿ ಬಿ.ವೈ.ರಾಘವೇಂದ್ರ ಅವರು ರೈಲು ಸಂಪರ್ಕ ಸೇರಿ ಹಲವು ರೀತಿಯ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ನರೇಂದ್ರ ಮೋದಿ ಅವರ ಅಲೆಯೂ ಇಲ್ಲಿ ಕೆಲಸ ಮಾಡುವ ಸಾಧ್ಯತೆ ಇದೆ. ಹಾಗಾಗಿ, ರಾಘವೇಂದ್ರ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ.

BY Raghavendra

ಗೀತಾ ರಣತಂತ್ರ ಹೀಗಿತ್ತು

ಮತ್ತೊಂದೆಡೆ, ಎಸ್.‌ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್‌ ಕುಮಾರ್‌ ಅವರು ಎರಡನೇ ಬಾರಿ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಈ ಬಾರಿ ರಣತಂತ್ರ ರೂಪಿಸಿದ್ದಾರೆ. ಶಿವರಾಜ್‌ ಕುಮಾರ್‌ ಅವರ ವರ್ಚಸ್ಸು, ಎಸ್‌. ಬಂಗಾರಪ್ಪ ಅವರ ಹೆಸರು, ಸಹೋದರ, ಸಚಿವ ಮಧು ಬಂಗಾರಪ್ಪ ನೆರವಿನ ಬಲದೊಂದಿಗೆ ಅವರು ಅಬ್ಬರದ ಪ್ರಚಾರ ಕೈಗೊಂಡಿರುವ ಕಾರಣ ಬಿ.ವೈ.ರಾಘವೇಂದ್ರ ಅವರಿಗೆ ಗೆಲುವು ಸುಲಭವಲ್ಲ ಎಂದು ಹೇಳಲಾಗುತ್ತಿದೆ.

Congress candidate Geetha Shivarajkumar's roadshow in Shivamogga

ಇವರಿಬ್ಬರ ಮಧ್ಯೆ, ಕೆ.ಎಸ್.ಈಶ್ವರಪ್ಪ ಅವರು ಪುತ್ರ ಕಾಂತೇಶ್‌ಗೆ ಟಿಕೆಟ್‌ ನೀಡಲಿಲ್ಲ ಎಂದು ಬಿಜೆಪಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಚುನಾವಣೆ ಕಣಕ್ಕಿಳಿದಿದ್ದಾರೆ. ಕಟ್ಟಾ ಆರೆಸ್ಸೆಸ್ಸಿಗರಾಗಿರುವ ಕೆ.ಎಸ್.ಈಶ್ವರಪ್ಪ ಅವರು ಹಿಂದುತ್ವದ ನೆಲೆಗಟ್ಟಿನಲ್ಲಿ ಮತಯಾಚನೆ ಮಾಡಿದ್ದಾರೆ. ಹಾಗಾಗಿ, ಇವರು ಮತಗಳನ್ನು ಒಡೆದಿದ್ದರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲ ಕಾರಣಗಳಿಂದಾಗಿ ಶಿವಮೊಗ್ಗ ಲೋಕಸಭೆ ಕ್ಷೇತ್ರವು ಎಲ್ಲರಿಗೂ ಪ್ರತಿಷ್ಠೆಯ ಕಣವಾಗಿದೆ.

KS Eshwarappa

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು 2.23 ಲಕ್ಷ ಮತಗಳ ಅಂತರದಲ್ಲಿ ಜೆಡಿಎಸ್‌ನ ಮಧು ಬಂಗಾರಪ್ಪ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2014ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಯಿಂದ ಸ್ಪರ್ಧಿಸಿ ಸುಮಾರು 3 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆಗ ಎಸ್.‌ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಕೂಡ ಸ್ಪರ್ಧಿಸಿ, ಮೂರನೇ ಸ್ಥಾನ ಪಡೆದಿದ್ದರು. ಈಗ ಮತ್ತೆ ಗೀತಾ ಶಿವರಾಜ್‌ ಕುಮಾರ್‌ ಅವರು ಕಣಕ್ಕಿಳಿದಿದ್ದಾರೆ.

ಇದನ್ನೂ ಓದಿ: Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

Continue Reading

ಶಿವಮೊಗ್ಗ

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Road Accident : ಎದುರಿಗೆ ಬರುತ್ತಿದ್ದ ಬೈಕ್‌ ಅನ್ನು ತಪ್ಪಿಸಲು ಹೋಗಿ ರಸ್ತೆ ಬದಿಯಲ್ಲಿ ನಡೆದುಹೋಗುತ್ತಿದ್ದ ಮಹಿಳೆಗೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರೊಂದು ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಹನಸವಾಡಿ ಗ್ರಾಮದ ಮಂಜಮ್ಮ (45) ಎಂಬುವವರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ಈ ಅಪಘಾತ ನಡೆದಿದೆ.

ಮಹಿಳೆಗೆ ಗುದ್ದಿದ ಕಾರು ನೇರವಾಗಿ ಹೋಟೆಲ್‌ಗೆ ನುಗ್ಗಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದಾಗ ಎದುರಿಗೆ ಬರುತ್ತಿದ್ದ ಬೈಕ್ ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇನ್ನೂ ನಜ್ಜುಗಜ್ಜಾಗಿದ್ದ ಕಾರನ್ನು ತೆರವು ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಶಿವಮೊಗ್ಗದಲ್ಲಿ ವೃದ್ಧೆ ಬರ್ಬರ ಕೊಲೆ; ಅನ್ಯಕೋಮಿನ ಹುಡುಗನಿಂದ ಮಾರಣಾಂತಿಕ ಹಲ್ಲೆ

ಚೇಸ್‌ ಮಾಡಿ ಕಾರಿಗೆ ಕಲ್ಲು ಹೊಡೆದ ಅಪರಿಚಿತ

ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣಗಳು ನಿಲ್ಲುತ್ತಲೇ ಇಲ್ಲ. ಮಹದೇವಪುರದ ವಿಬ್ ಗಯಾರ್ ಶಾಲೆ ಬಳಿ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತನೊಬ್ಬ ಕಾರಿಗೆ ಕಲ್ಲು ಹೊಡೆದಿದ್ದಾನೆ. ದೀಪಕ್ ಜೈನ್ ಎಂಬುವವರ ಕಾರನ್ನು ಹಿಂಬಾಲಿಸಿ ನಂತರ ಅಡ್ಡ ಹಾಕಿ ಕಲ್ಲಿನಿಂದ ಮಿರರ್ ಜಖಂ ಮಾಡಿದ್ದಾನೆ. ಅಪರಿಚಿತನ ಕೃತ್ಯವು ಡ್ಯಾಶ್‌ಬೋರ್ಡ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರಿಗೆ ಟ್ಯಾಗ್ ಮಾಡಿ ದೀಪಕ್ ಜೈನ್ ದೂರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Road Accident
ಕರ್ನಾಟಕ22 mins ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

T20 World Cup 2024
ಕ್ರೀಡೆ32 mins ago

T20 World Cup 2024: ದೂರದರ್ಶನದಲ್ಲಿಯೂ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​ ಪಂದ್ಯಾವಳಿ

Uttara Kannada Lok Sabha Constituency
ಉತ್ತರ ಕನ್ನಡ36 mins ago

Uttara Kannada Lok Sabha Constituency: ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ?

Dr. K Sudhakar
ಕರ್ನಾಟಕ44 mins ago

Dr. K Sudhakar: ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ; ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್

Rave Party
ಕರ್ನಾಟಕ1 hour ago

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

K Kavitha
ದೇಶ1 hour ago

K Kavitha: ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ ಜುಲೈ 3ರವರೆಗೆ ವಿಸ್ತರಣೆ; ಸಾಕ್ಷ್ಯ ನಾಶದ ಆರೋಪ

MS Dhoni Europe Trip
ಕ್ರೀಡೆ1 hour ago

MS Dhoni Europe Trip: ಐಪಿಎಲ್​ ಮುಗಿಸಿ ಕುಟುಂಬದ ಜತೆ ಯುರೋಪ್​ಗೆ ಪ್ರವಾಸ ಹೋದ ಧೋನಿ

Lok Sabha Election Result 2024 Live
ದೇಶ2 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Job Alert
ಉದ್ಯೋಗ2 hours ago

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Viral News
ವೈರಲ್ ನ್ಯೂಸ್2 hours ago

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌