Site icon Vistara News

Hit and Run: ಶಿವಮೊಗ್ಗದಲ್ಲಿ ಹಿಟ್ ಆ್ಯಂಡ್ ರನ್, ಒಬ್ಬ ಸಾವು, ಇಬ್ಬರಿಗೆ ಗಾಯ

hit and run

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರರೊಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ.

ಶಿವಮೊಗ್ಗದ ತಾಳಗುಪ್ಪ- ಸಿದ್ದಾಪುರ ಮಾರ್ಗದ ಮನಮನೆಯಲ್ಲಿ ಈ ದುರ್ಘಟನೆ ನಡೆದಿದೆ. ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಕಾರು ಪರಾರಿಯಾಗಿದೆ. ಶಿವಮೊಗ್ಗದ ಲಯನ್ ಸಫಾರಿಯ ನಿವೃತ್ತ ವಾಚ್‌ಮನ್ ಜಿ.ನಾಗರಾಜಪ್ಪ (62) ಎಂಬವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಹಿತ್ಲಕೊಪ್ಪ ಗ್ರಾಮದ ಮಾರಿಜಾತ್ರೆ ಮುಗಿಸಿಕೊಂಡು ಬೈಕ್‌ ಸವಾರರು ವಾಪಸ್ಸಾಗುತ್ತಿದ್ದಾಗ ಘಟನೆ ನಡೆದಿದೆ. ಎರಡು ಬೈಕ್‌ಗಳಲ್ಲಿ ಮೂವರು ಸಾಗರ ತಾಲೂಕು ಶಿರವಾಳ ಗ್ರಾಮಕ್ಕೆ ವಾಪಾಸ್ಸಾಗುತ್ತಿದ್ದರು. ಉಳಿದಿಬ್ಬರು ಸವಾರರಿಗೆ ಗಾಯಗಳಾಗಿದ್ದು, ಒಬ್ಬಾತನ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: Bengaluru Road Accident: ಅಪಘಾತವಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಎಎಸ್‌ಐ ಸಾವು; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬಸ್ಥರು

Exit mobile version