ಕುವೆಂಪು ವಿವಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳ ಕ್ಷಮೆ ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ - Vistara News

ಶಿಕ್ಷಣ

ಕುವೆಂಪು ವಿವಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳ ಕ್ಷಮೆ ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕುವೆಂಪು ವಿಶ್ವವಿದ್ಯಾಲಯವೂ ತನ್ನ 31 ಹಾಗೂ 32ನೇ ಘಟಿಕೋತ್ಸವ ಸಮಾರಂಭವನ್ನು ಗುರುವಾರ ಆಯೋಜಿಸಿತ್ತು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಪದವಿ ಪ್ರದಾನ ಮಾಡಿದರು.

VISTARANEWS.COM


on

ಗೌರವ ಡಾಕ್ಟರೇಟ್
ಗೌರವ ಡಾಕ್ಟರೇಟ್ ಪದವಿ ಪ್ರದಾನ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಕೋವಿಡ್‌ ಕಾರಣದಿಂದಾಗಿ ಕುವೆಂಪು ವಿಶ್ವವಿದ್ಯಾಲಯವೂ ತನ್ನ ಘಟಿಕೋತ್ಸವ ಸಮಾರಂಭಕ್ಕೆ ತಡೆಹಾಕಿತ್ತು. ಇದೀಗ ಮೂರನೇ ಅಲೆಯಲ್ಲಿ ಕೋವಿಡ್‌ ಕ್ಷಿಣಿಸುತ್ತಿದ್ದ ಬೆನ್ನಲ್ಲೇ ವಿಶ್ವವಿದ್ಯಾಲಯ ಒಂದೇ ದಿನ ಎರಡು ಘಟಿಕೋತ್ಸವ ಕಾರ್ಯಕ್ರಮ ನಡೆಸಿದೆ. ಸಮಾರಂಭಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿ ಪದವಿ ಪ್ರದಾನ ಮಾಡಿದರು.

ಇದನ್ನೂ ಓದಿ | ರಾಷ್ಟ್ರಕವಿ ಕುವೆಂಪು ಮತ್ತು ನಾಡಗೀತೆಗೆ ಅವಮಾನ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ

ಬಳಿಕ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕುವೆಂಪು ವಿಶ್ವವಿದ್ಯಾಲಯ ರಾಜ್ಯದ ಅಗ್ರಗಣ್ಯ ವಿಶ್ವವಿದ್ಯಾಲಯಗಳಲ್ಲಿ ಒಂದು. ರಾಷ್ಟ್ರಕವಿ ಕುವೆಂಪು ಹೆಸರು ಈ ವಿಶ್ವವಿದ್ಯಾಲಯಕ್ಕೆ ಇರುವುದು ಪ್ರೇರಣಾದಾಯಕವಾಗಿದ್ದು, ರಾಷ್ಟ್ರ- ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿದೆ. ಗೌರವ ಡಾಕ್ಟರೇಟ್ ಪಡೆದ ಎಲ್ಲ 6  ಮಹನೀಯರೂ ತಮ್ಮ  ಕ್ಷೇತ್ರಗಳಲ್ಲಿ ಮಹತ್ತರ ಕಾರ್ಯ ಮಾಡಿದ್ದಾರೆ. ಅವರ ಈ ಕಾರ್ಯ ಮುಂದಿನ ದಿನಗಳಲ್ಲೂ ಉನ್ನತ ಮಟ್ಟದಲ್ಲಿ  ಮಾಡುವಂತಾಗಲಿ ಎಂದರು. ಸ್ವರ್ಣ ಪದಕ, ಪಿಎಚ್ ಡಿ ಇತರ ಪದವಿ ಪಡೆದ ಎಲ್ಲರ ಭವಿಷ್ಯ ಉಜ್ವಲವಾಗಲಿ ಎಂದರು.

ಎರಡು ವರ್ಷಗಳ ಘಟಿಕೋತ್ಸವ ಒಂದೇ ದಿನ ನಡೆಸಿದ ಕಾರಣ ನೂರಾರು ವಿದ್ಯಾರ್ಥಿಗಳಿಗೆ ಕಡಿಮೆ ಸಮಯದಲ್ಲಿ ವೇದಿಕೆ ಮೇಲೆ ಎಲ್ಲರಿಗೂ ಪದವಿ ಪ್ರದಾನ ಮಾಡುವುದು ಅಸಾಧ್ಯವಾಗಿತ್ತು. ಹೀಗಾಗಿ ಕೆಲವರಿಗಷ್ಟೇ ಪದವಿ ಪ್ರದಾನ ಮಾಡಲಾಯಿತು. ಇದನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ರಾಜ್ಯಪಾಲರು, ʼಕಾರ್ಯಕ್ರಮದಲ್ಲಿ ಎಲ್ಲರಿಗೂ ಪದವಿ ಪ್ರದಾನ ಮಾಡದಿರುವುದಕ್ಕೆ ಇದೇ ವೇಳೆ ಕ್ಷಮೆ ಇರಲಿʼ ಎಂದರು.

ಸರ್ಕಾರದ ಯೋಜನೆಗಳ ಲಾಭ ಪಡೆಯುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು

ಪ್ರಧಾನಿ ನರೇಂದ್ರ ಮೋದಿ ಎನ್ಇಪಿ ಜಾರಿಗೊಳಿಸಿದ್ದು, ವಿದ್ಯಾರ್ಥಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಲಾಭ ಪಡೆದು ತಮ್ಮ ಗುರಿ ಸಾಧಿಸಿಕೊಳ್ಳಬೇಕು. 21ನೇ ಶತಮಾನದಲ್ಲಿ ಇಡೀ ದೇಶದಲ್ಲಿ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ದೇಶದ ಉಜ್ವಲ ಭವಿಷ್ಯದ ದೃಷ್ಟಿಯಿಂದ ಏನು ಮಾಡಬಹುದು ಎಂಬ ಬಗ್ಗೆ ಚರ್ಚೆಯಾಗಲಿ. ಆತ್ಮನಿರ್ಭರ ಭಾರತದತ್ತ ಸಾಗಲು ನಾವೆಲ್ಲ ಕೈಜೋಡಿಸೋಣ ಎಂದರು. ಅಂಧ ಕ್ರಿಕೆಟಿಗ ಮಹಾಂತೇಶ್ ಕಿವಡಸಣ್ಣವರ್ ಹೆಸರು ಪ್ರಸ್ತಾಪಿಸಿದ ರಾಜ್ಯಪಾಲರು, ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ನುಡಿದರು.

ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ಮಾತನಾಡಿ, ಪ್ರತಿ ವಿದ್ಯಾರ್ಥಿಯಲ್ಲಿ ವಿಶಿಷ್ಟ ಸಾಮರ್ಥ್ಯಗಳನ್ನು ಬೆಳೆಸುವುದು, ಸೃಜನಶೀಲತೆ, ವಿಮರ್ಶಾತ್ಮಕ ಪ್ರಜ್ಞೆ, ತರ್ಕಬದ್ಧ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೊಸ ಮಾರ್ಗಗಳನ್ನು ಅನ್ವೇಷಿಸಲು ಪ್ರೋತ್ಸಾಹಿಸುವುದು ಎನ್‌ಇಪಿ ಉದ್ದೇಶವಾಗಿದೆ. ಹೊಸ ಶಿಕ್ಷಣ ನೀತಿಯು ಬೋಧನೆ ಮತ್ತು ಕಲಿಕೆಯಲ್ಲಿ ತಂತ್ರಜ್ಞಾನದ ಬಳಕೆಯನ್ನು ಪ್ರೋತ್ಸಾಹಿಸುತ್ತದೆ. ಇದು ಕಲಿಕೆಯಲ್ಲಿನ ಭಾಷಾ ತೊಡಕುಗಳನ್ನು ನಿವಾರಿಸುತ್ತದೆ. ಸೃಜನಶೀಲತೆ ಮತ್ತು ನಾವೀನ್ಯತೆಗಳಿಗೆ ಸಮಾನ ಅವಕಾಶಗಳನ್ನು ನೀಡಿ, ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸುವುದು ಮತ್ತು ಭಾರತವನ್ನು ಶಕ್ತಿಶಾಲಿಯಾದ ಜ್ಞಾನಾಧಾರಿತವಾದ ಸಮಾಜವನ್ನಾಗಿ ರೂಪಿಸುವುದಾಗಿದೆ ಎಂದರು.

ಗೌರವ ಡಾಕ್ಟರೇಟ್‌ ಪದವಿ ಪ್ರದಾನ

31ರ ಘಟಿಕೋತ್ಸವದಲ್ಲಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಾ. ಡಿ.ಎಚ್.ಶಂಕರಮೂರ್ತಿ, ಶಿಕ್ಷಣ ತಜ್ಞೆ ಡಾ. ಗೀತಾ ನಾರಾಯಣ ಮತ್ತು ಯೋಗ ಗುರು ಭ.ಮ. ಶ್ರೀಕಾಂಠರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಯಿತು. 32ನೇ ಘಟಿಕೋತ್ಸವದಲ್ಲಿ ಶಿಕ್ಷಣ ತಜ್ಞ, ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿವಿಯ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ, ಅಂಧ ಕ್ರಿಕೆಟಿಗ ಮಹಾಂತೇಶ್ ಜಿ. ಕಿವಡಸಣ್ಣವರ್, ಯೋಗ ಗುರು ಬಾ.ಸು. ಅರವಿಂದ್ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು.

31ರ ಘಟಿಕೋತ್ಸವದಲ್ಲಿ ಕನ್ನಡ ಅಧ್ಯಯನ ವಿಭಾಗದ ಪ್ರಣೀತಾ ಎಂ.ಟಿ ಅವರಿಗೆ ಅತಿ ಹೆಚ್ಚು 8 ಸ್ವರ್ಣ ಪದಕ ಮತ್ತು 2 ನಗದು ಬಹುಮಾನ ಲಭಿಸಿದ್ದರೆ, 32ನೇ ಘಟಿಕೋತ್ಸವದಲ್ಲಿ ಕನ್ನಡ ಅಧ್ಯಯನ ವಿಭಾಗದ ದಿವ್ಯಾ ಹೆಚ್.ಎನ್. ಅವರಿಗೆ ಅತಿ ಹೆಚ್ಚು 11 ಸ್ವರ್ಣ ಪದಕ ಮತ್ತು 2 ನಗದು ಬಹುಮಾನ ಸಿಕ್ಕಿದೆ.

ಇದನ್ನೂ ಓದಿ: ಒಂದೇ ಬಾರಿಗೆ ಎರಡು ವರ್ಷಗಳ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಕುವೆಂಪು ವಿಶ್ವವಿದ್ಯಾಲಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Result 2024) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾ ಬಸಪ್ಪ ಕೊಣ್ಣೂರ ಮತ್ತು ತೃತೀಯ ಸ್ಥಾನ ಪಡೆದ ನವನೀತ್ ಕೆ.ಸಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತ್ಯೇಕವಾಗಿ ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ್ದಾರೆ. ಇದೇ ವೇಳೆ ಇಬ್ಬರು ವಿದ್ಯಾರ್ಥಿಗಳು ಓದಿದ ಮೊರಾರ್ಜಿ ವಸತಿ ಶಾಲೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು 1.5 ಕೋಟಿ ರೂ. ಅನುದಾನ ನೀಡುವುದಾಗಿ ತಿಳಿಸಿದ್ದಾರೆ.

ಇಬ್ಬರ ಶಿಕ್ಷಣಕ್ಕೆ ವೈಯಕ್ತಿಕ ನೆರವು ಘೋಷಿಸಿದ ಸಿಎಂ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ‌ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅಂಕಿತಾ ಹಾಗೂ ತೃತೀಯ ರ‍್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿದರು.‌

ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ತಿಳಿಸಿದರು.

ಇದನ್ನೂ ಓದಿ | SSLC Result : ರಾಜ್ಯ ಶಿಕ್ಷಣ ಗುಣಮಟ್ಟ ಕುಸಿತ, ICSE-CBSE ಕಡೆ ವಲಸೆ; ಇಲಾಖೆ ವಿರುದ್ಧ ಕ್ಯಾಮ್ಸ್‌ ಕಟು ಟೀಕೆ

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯವಾದ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಹೇಳಿದರು.

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಅಂಕಿತಾ

ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅಂಕಿತಾ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಈ ವೇಳೆ ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.

ಅಂಕಿತಾಗೆ 5 ಲಕ್ಷ, ನವನೀತ್‌ಗೆ 2 ಲಕ್ಷ ಪ್ರೋತ್ಸಾಹ ಧನ ನೀಡಿದ ಡಿಸಿಎಂ ಡಿಕೆಶಿ

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಓದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಬಾಗಲಕೋಟೆ ಮುಧೋಳದ ಅಂಕಿತಾಗೆ 5 ಲಕ್ಷ ರೂ. ನೀಡಿ ಹಾಗೂ 3ನೇ ಸ್ಥಾನ ಪಡೆದ ಮಂಡ್ಯದ ನವನೀತ್‌ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಅಂಕಿತಾ, ಆಕೆಯ ಪೋಷಕರು ಮತ್ತು ಶಾಲೆಯವರು, ನವನೀತ್ ಅವರ ಕುಟುಂಬದವರು ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ಶಾಲೆಯಲ್ಲಿ ಓದಿ 3ನೇ ರ‍್ಯಾಂಕ್ ಗಳಿಸಿರುವ ಮಂಡ್ಯದ ನವನೀತ್ ಕೂಡ ಆಗಮಿಸಿದ್ದರು.

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್‌ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ, ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅವರು, ಮೊನ್ನೆ 10ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣುಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ.

ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ. ಇನ್ನು ಮಂಡ್ಯದ ನವನೀತ್ ಕೂಡ ಸರಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ ಎಂದರು.

ಇದನ್ನೂ ಓದಿ | CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

Continue Reading

ಉತ್ತರ ಕನ್ನಡ

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Uttara Kannada News: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ಭಾವ ರಾಮಾಯಣ- ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ ಆರಂಭವಾದವು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

VISTARANEWS.COM


on

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
Koo

ಗೋಕರ್ಣ: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಭಾವ ರಾಮಾಯಣ-ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ (Uttara Kannada News) ಆರಂಭವಾದವು.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ‌ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

ರಾಮಾಯಣದ ಅನುಸಂಧಾನ ಅನಿರ್ವಚನೀಯ ಆನಂದವನ್ನು ಕೊಡುವಂಥದ್ದು. ಬದುಕಿಗೆ ಯಾವುದು ಹಿತ ಯಾವುದು ಅಹಿತ ಎನ್ನುವುದನ್ನು ರಾಮಾಯಣ ತಿಳಿಸಿಕೊಡುತ್ತದೆ. ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ವಿಶ್ಲೇಷಿಸಿದರು.

ಇದನ್ನೂ ಓದಿ: Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ರಾಮಾಯಣವನ್ನು ವಾಲ್ಮೀಕಿ ಸೀತಾಚರಿತೆ ಎಂದೂ ಕರೆದಿದ್ದಾರೆ. ರಾಮಾವತರಣದ ಕೊನೆಯಲ್ಲಿ ಬ್ರಹ್ಮ ಹೇಳುವಂತೆ ರಾಮ ಸಾಕ್ಷಾತ್ ವಿಷ್ಣುವಿನ ಅವತಾರ, ಸೀತೆ ಲಕ್ಷ್ಮಿಯ ಅವತಾರ. ರಾವಣ ಸಂಹಾರಕ್ಕಾಗಿ ವಿಷ್ಣು ಮನುಷ್ಯ ರೂಪದಲ್ಲಿ ಭುವಿಗೆ ಅವತರಿಸುತ್ತಾನೆ ಎಂದು ಶ್ರೀಗಳು ತಿಳಿಸಿದರು. ಬದುಕಿನಲ್ಲಿ ನಮಗೆ ಬೇಕಾದ ಎಲ್ಲವನ್ನೂ ಕೊಡುವಂಥದ್ದು ರಾಮಾಯಣ. ಇದರ ಅನುಸಂಧಾನದ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದರು.

ಝೂಮ್ ಮಾಧ್ಯಮದ ಮೂಲಕ ಶ್ರೀಗಳು ತರಗತಿ ನಡೆಸಿಕೊಟ್ಟರು. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಕೂಡಾ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

ಕಾರ್ಯಕ್ರಮದಲ್ಲಿ ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಪ್ರೊ.ಕೆ.ಎಸ್.ಕಣ್ಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಕೃತ ವಿವಿ ಕುಲಸಚಿವ ಡಾ.ರಾಮಕೃಷ್ಣ ಭಟ್ ಕೂಟೇಲು ನಿರೂಪಿಸಿದರು.

Continue Reading

ಬೆಂಗಳೂರು

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

Bengaluru News: ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರ್ಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ. 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಆರೋಪಿಸಿದ್ದಾರೆ.

VISTARANEWS.COM


on

former MLC Arun Shahapur latest Statement
Koo

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ (Congress Party) ಆಡಳಿತಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರವು ತನ್ನ ದುರಾಡಳಿತದ ಮೂಲಕ ಶಿಕ್ಷಣ (Education) ಕ್ಷೇತ್ರವನ್ನು ಹಾಳುಗೆಡವಿದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ (Bengaluru News) ಆರೋಪಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಶಿಕ್ಷಣ ವ್ಯವಸ್ಥೆಯಡಿ ರಾಜ್ಯ ಪಠ್ಯಕ್ರಮದಲ್ಲಿ ಒಂದು ಕೋಟಿಗೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 9 ಲಕ್ಷದಷ್ಟು ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಸರ್ಕಾರ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಇಲಾಖೆಯನ್ನು ನಿರ್ವಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಟೀಕಿಸಿದ ಅವರು, 1 ಕೋಟಿ ಮಕ್ಕಳ ಭವಿಷ್ಯವನ್ನು ಅತಂತ್ರಕ್ಕೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

10ನೇ ತರಗತಿ ಪರೀಕ್ಷೆ ಬರೆದ 9 ಲಕ್ಷದಷ್ಟು ವಿದ್ಯಾರ್ಥಿಗಳು ಮತ್ತು ಪಾಲಕರು ಆತಂಕದಲ್ಲಿದ್ದಾರೆ. ಕೆಎಸ್‍ಇಎಪಿ ಮೂಲಕ ಪರೀಕ್ಷೆ ನಡೆಸಿದ್ದಾರೆ. ಯಶಸ್ವಿ ಪರೀಕ್ಷೆ ನಡೆಸಿದ್ದಾಗಿ ಹೇಳಿದ್ದಾರೆ. ಸ್ವಾತಂತ್ರ್ಯ ಬಂದ ಬಳಿಕ ಅತ್ಯಂತ ಕೆಟ್ಟ ಪರೀಕ್ಷೆ ನಡೆದಿದ್ದರೆ ಅದು ಮಧು ಬಂಗಾರಪ್ಪ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಂದು ಟೀಕಿಸಿದರು.

ಸೂತ್ರದ ಗೊಂಬೆಯಾಗಿದ್ದ ಶಿಕ್ಷಣ ಸಚಿವರು

ಪಠ್ಯಪುಸ್ತಕದಲ್ಲಿನ ಪಾಠಗಳನ್ನು ಕಿತ್ತು ಹಾಕುವುದಾಗಿ ಹೇಳುವ ಮೂಲಕ ಈ ಸರ್ಕಾರ ಕಾರ್ಯಾರಂಭ ಮಾಡಿದೆ. ಶಿಕ್ಷಣ, ಪಠ್ಯದ ವಿಚಾರ ಶಿಕ್ಷಣ ತಜ್ಞರ ಮಟ್ಟದಲ್ಲಿ, ಇಲಾಖೆ ಮಟ್ಟದಲ್ಲಿ ನಿರ್ಧಾರವಾಗುತ್ತಿತ್ತು. ಆದರೆ, ಕಳೆದ ವರ್ಷ ಅದು ಕ್ಯಾಬಿನೆಟ್‍ನಲ್ಲಿ ನಿರ್ಧಾರವಾಗಿದೆ. ಇವರು ಕನ್ನಡದ 10 ಪಾಠ, ಸಮಾಜ ವಿಜ್ಞಾನದ 10 ಪಾಠಗಳನ್ನು ತೆಗೆದುಹಾಕಿ ಮೊಟ್ಟ ಮೊದಲ ಬಾರಿಗೆ ರಾಜಕೀಯಕರಣಗೊಳಿಸುವ ಕಾರ್ಯಕ್ಕೆ ಈಗಿನ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಕೈ ಹಾಕಿದ್ದರು. ಶಿಕ್ಷಣ ಸಚಿವರು ಸೂತ್ರದ ಗೊಂಬೆಯಾಗಿದ್ದರು ಎಂದು ಅರುಣ್ ಶಹಾಪುರ ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಇವತ್ತು ಇಡೀ ಕರ್ನಾಟಕದಲ್ಲಿ ಚುನಾವಣಾ ಚಾಣಕ್ಯರ ಕಪಿಮುಷ್ಟಿಗೆ ಸಿಲುಕಿದೆ. ಚುನಾವಣಾ ಚಾಣಕ್ಯರೇ ಕಾಂಗ್ರೆಸ್ಸಿನ ನೀತಿ ನಿರೂಪಿಸುತ್ತಿದ್ದಾರೆ. ಪಾಠಗಳು ಯಾವುದೇ ಶಾಲೆಯಲ್ಲಿ ಮಕ್ಕಳ ವರೆಗೆ ತಲುಪಲಿಲ್ಲ. ಎನ್‍ಇಪಿ ಜಾರಿ ಇಲ್ಲ ಎಂಬ ಗೊಂದಲಗಳಿಗೆ ಕೈಹಾಕಿದ್ದರು. ಕೊನೆಗೆ ಪರೀಕ್ಷೆಯು ಪ್ರಹಸನ ಎಂಬಂತೆ ನಡೆದಿದೆ ಎಂದು ತಿಳಿಸಿದರು. 5ನೇ ತರಗತಿ, 8ನೇ ತರಗತಿ, 9ನೇ ತರಗತಿ, 11ನೇ ತರಗತಿ ಪರೀಕ್ಷೆ ನಡೆಯುತ್ತದೆಯೋ ಇಲ್ಲವೋ ಎಂಬ ವಿಚಾರ ದಿನವೂ ಬೆಳಿಗ್ಗೆ ಪಾಲಕರಿಗೆ ತಲೆನೋವಾಗಿ ಪರಿಗಣಮಿಸಿತ್ತು ಎಂದರು.

ಇದನ್ನೂ ಓದಿ: Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

ಈ ಪರೀಕ್ಷೆಗಳ ಬಗ್ಗೆ ಈಗಲೂ ದೃಢ ನಿಲುವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿಲ್ಲ. 10ನೇ ತರಗತಿ ಹಾಗೂ ಪಿಯುಸಿಗೆ 3 ಪರೀಕ್ಷೆ (10- 1,2,3), (ಪಿಯು- 1,2,3) ಮಾಡಲು ಹೊರಟವರು ಮಕ್ಕಳ, ಪಾಲಕರ ಒತ್ತಡ, ಗೊಂದಲವನ್ನು ಯೋಚಿಸಿಲ್ಲ. ಯಾವ ಪರೀಕ್ಷೆ, ಪರೀಕ್ಷೆ ಬರೆದವರು ಯಾರು, ಯಾರಿಂದ ಮೌಲ್ಯಮಾಪನ ಎಂಬ ದೊಡ್ಡ ಗೊಂದಲಕ್ಕೆ ಇದು ಕಾರಣವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಗೂ ಈ ಕುರಿತು ಸ್ಪಷ್ಟತೆ ಇಲ್ಲ. 3 ಪರೀಕ್ಷೆ ಇವರೇನು ಪುಕ್ಕಟೆ ಮಾಡುತ್ತಾರಾ ಎಂದರು.

ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ?

ಒಂದು ಪರೀಕ್ಷೆಗೆ ರೂ. 410, 2 ಪರೀಕ್ಷೆಗೆ 510, 3 ಆದರೆ 710 ರೂ. ಪಾವತಿಸಬೇಕು. ಪರೀಕ್ಷೆ ಎಂದರೆ ಸರ್ಕಾರಕ್ಕೆ ಒಂದು ಉದ್ಯಮವೇ? ಪ್ರತಿಯೊಂದು 10ನೇ ಪರೀಕ್ಷೆ ನಡೆಯುವ ಕೇಂದ್ರಕ್ಕೆ ವೆಬ್ ಕಾಸ್ಟಿಂಗ್ ಅಳವಡಿಸಲು ಆದೇಶ ಮಾಡಿ ಒತ್ತಡ ಹೇರುವ ಹಾಗೂ ಯಾಕಾದರೂ ಪರೀಕ್ಷಾ ಕೇಂದ್ರ ಮಾಡಿದ್ದೇವೋ ಎಂದು ಯೋಚಿಸುವ ಪರಿಸ್ಥಿತಿಯನ್ನು ಸರ್ಕಾರ ನಿರ್ಮಿಸಿತ್ತು ಎಂದು ದೂರಿದರು.

ಪರೀಕ್ಷೆ ಸಂದರ್ಭದಲ್ಲಿ ಎಲ್ಲಿ ತಮ್ಮ ನೌಕರಿಗೆ ಕುತ್ತಾಗುವುದೋ ಎಂಬ ಆತಂಕ ಶಿಕ್ಷಕರಲ್ಲಿತ್ತು. ವೆಬ್ ಕಾಸ್ಟಿಂಗ್ ಬಗ್ಗೆ ಯಾವುದೇ ಶಿಕ್ಷಕರಿಗೆ ಪರಿಕಲ್ಪನೆ ಇರಲಿಲ್ಲ. ತರಬೇತಿ, ಮಾಹಿತಿಯೂ ಇರಲಿಲ್ಲ ಎಂದರು.

10ನೇ ತರಗತಿ ಪರೀಕ್ಷೆ ಎಂದರೆ ಮಕ್ಕಳನ್ನು ಭಯದ ವಾತಾವರಣದಲ್ಲಿ ಇಡಲಾಯಿತು. 10ನೇ ತರಗತಿ ಪರೀಕ್ಷೆಯಲ್ಲಿ ನೈಜ ಮೌಲ್ಯಮಾಪನ ಮಾಡಿದ್ದರೆ ಫಲಿತಾಂಶ ಪಾತಾಳಕ್ಕೆ ಕುಸಿಯಲಿದೆ ಎಂಬುದು ಅವರಿಗೆ ಅರ್ಥವಾಯಿತು. ಇಡೀ ರಾಜ್ಯದ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಡಯಟ್ ಮತ್ತು ಇಲಾಖೆಯನ್ನು ಕತ್ತಲಲ್ಲಿ ಇಡಲಾಯಿತು. ಇವರು ಸ್ಥಾಪಿಸಿದ ಕೆಎಸ್‍ಇಇ ಮೂಲಕ ಉತ್ತೀರ್ಣ ಅಂಕವನ್ನು 35ರಿಂದ 25ಕ್ಕೆ ಇಳಿಸಿದ್ದಾರೆ. ಇದು ಶಿಕ್ಷಣ ಕ್ಷೇತ್ರ ಹಾಳು ಮಾಡಿದ ಈ ಸರ್ಕಾರದ ಸಾಧನೆ ಎಂದು ಟೀಕಿಸಿದರು.

ಇದನ್ನೂ ಓದಿ: Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಶಾಸಕ ಪಿ. ರಾಜೀವ್, ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಇದ್ದರು.

Continue Reading

ಮಂಡ್ಯ

CBSE Class 10 Results: ಸತತ 9ನೇ ಬಾರಿಗೆ ಶೇ.100 ಫಲಿತಾಂಶ; ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಅಮೋಘ ಸಾಧನೆ

CBSE Class 10 Results: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿರುವ ಪ್ರತಿಷ್ಠಿತ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಅಮೋಘ ಸಾಧನೆ ಮಾಡಿದೆ.

VISTARANEWS.COM


on

CBSE Class 10 Results
Koo

ಮಂಡ್ಯ: 2024-24ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶ (CBSE Class 10 Results) ಸೋಮವಾರ ಪ್ರಕಟಗೊಂಡಿದ್ದು, ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿರುವ ಪ್ರತಿಷ್ಠಿತ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ. 100 ಫಲಿತಾಂಶ ದಾಖಲಿಸುವ ಮೂಲಕ ಅಮೋಘ ಸಾಧನೆ ಮಾಡಿದೆ. ಈ ಬಾರಿ ಪರೀಕ್ಷೆಗೆ 56 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗುವ ಮೂಲಕ ಸತತ 9ನೇ ಬಾರಿ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್ ಶೇ.100 ಫಲಿತಾಂಶ ದಾಖಲಿಸಿ ರಾಜ್ಯದ ಗಮನ ಸೆಳೆದಿದೆ.

ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಧನಂಜಯ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 23 ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಶ್ರೇಣಿಯಲ್ಲಿ 24 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಗೋರ್ವಧನ್ ಗೌಡ ಶೇ. 95, (ಇಂಗ್ಲಿಷ್ 88, ಕನ್ನಡ 96, ಗಣಿತ 97, ವಿಜ್ಞಾನ 95, ಸಮಾಜ 98) ಸಾನ್ವಿ ಯು ಗೌಡ ಶೇ.90, (ಇಂಗ್ಲಿಷ್ 94, ಕನ್ನಡ 98, ಗಣಿತ 66, ವಿಜ್ಞಾನ 95, ಸಮಾಜ 95) ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದ ಪ್ರಶಾಂತ ವಾತಾವರಣದಲ್ಲಿ 2013ರಲ್ಲಿ ಪ್ರಾರಂಭವಾದ ಅಕ್ಷರ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ರೈತಾಪಿ ವರ್ಗದ ಮಕ್ಕಳು, ಗ್ರಾಮೀಣ ಪ್ರದೇಶದ ಮಕ್ಕಳು ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ | CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ಗ್ರಾಮೀಣ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಒದಗಿಸುತ್ತಿರುವುದು ಅಕ್ಷರ ಶಾಲೆಯ ಹೆಗ್ಗಳಿಕೆಯಾಗಿದ್ದು, ಜಿಲ್ಲೆಯಾದ್ಯಂತ ಪೋಷಕರ ನೆಚ್ಚಿನ ಶಾಲೆಯಾಗಿ ಮನೆಮಾತಾಗಿದೆ. ಪೋಷಕರಿಗೆ ಹೆಚ್ಚಿನ ಹೊರಯಾಗಬಾರದು ಎಂಬ ನಿಟ್ಟಿನಲ್ಲಿ ಕಡಿಮೆ ಫೀಸ್ ಪಡೆದು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಹಲವು ರಾಜ್ಯಗಳ ಶಿಕ್ಷಕರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾದ್ದು, ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಸುವಲ್ಲಿ ಇದು ನೆರವಾಗುತ್ತಿದೆ. ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಒಲಿಂಪಿಕ್ಸ್‌ ಮಾದರಿಯ ಸ್ವಿಮ್ಮಿಂಗ್ ಫೂಲ್, ಅತ್ಯಾಧುನಿಕ ಲೈಬ್ರರಿ, ಕಂಪ್ಯೂಟರ್ ಲ್ಯಾಬ್ ಸೇರಿದಂತೆ ಸಕಲ ಸೌಲಭ್ಯ ಒದಗಿಸಲಾಗಿದೆ. ಹಾಸ್ಟೆಲ್, ಶಾಲಾ ವಾಹನ ವ್ಯವಸ್ಥೆಯೂ ಲಭ್ಯವಿದೆ.

Continue Reading
Advertisement
CAA
ದೇಶ9 mins ago

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Single Screen Theaters
ಸಿನಿಮಾ13 mins ago

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

Pushpa 2
ಪ್ರಮುಖ ಸುದ್ದಿ19 mins ago

Pushpa 2 : ಪುಷ್ಪಾ 2 ಬಿಡುಗಡೆ ದಿನ ಮುಂದೂಡಿಕೆಯಾಗುತ್ತದೆಯೇ? ಚಿತ್ರ ತಂಡದ ಸ್ಪಷ್ಟನೆಯೇನು?

HD Revanna case Revanna gets interim bail in Holenarasipura sexual assault case
ಕರ್ನಾಟಕ38 mins ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Murder case in Belgavi
ಬೆಳಗಾವಿ39 mins ago

Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Sunil Chhetri
ಕ್ರೀಡೆ1 hour ago

Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

Fire Accident
ದೇಶ1 hour ago

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

XVU300
ಆಟೋಮೊಬೈಲ್1 hour ago

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Namrata Gowda Holiday Look in Red Ruffle Layered Maxi Dress
ಫ್ಯಾಷನ್1 hour ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್1 hour ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು7 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌