ಒಂದೇ ಬಾರಿಗೆ ಎರಡು ವರ್ಷಗಳ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಕುವೆಂಪು ವಿಶ್ವವಿದ್ಯಾಲಯ - Vistara News

ಶಿಕ್ಷಣ

ಒಂದೇ ಬಾರಿಗೆ ಎರಡು ವರ್ಷಗಳ ಘಟಿಕೋತ್ಸವಕ್ಕೆ ಸಾಕ್ಷಿಯಾಗ್ತಿದೆ ಕುವೆಂಪು ವಿಶ್ವವಿದ್ಯಾಲಯ

ಕುವೆಂಪು ವಿಶ್ವವಿದ್ಯಾಲಯ ತನ್ನ ಘಟಿಕೋತ್ಸವದಲ್ಲಿ ಏಳು ಗಣ್ಯರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಲು ತೀರ್ಮಾನಿಸಿದ್ದು, ಜೂನ್‌ 16 ರಂದು ಅದ್ಧೂರಿ ಘಟಿಕೋತ್ಸವಕ್ಕೆ ಸಜ್ಜಾಗಿದೆ.

VISTARANEWS.COM


on

ಕುಲಪತಿ ಪ್ರೊ. ವೀರಭದ್ರಪ್ಪ ಸುದ್ದಿಗೋಷ್ಠಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಸಾಂಕ್ರಾಮಿಕ ಕೊರೊನಾ ಸೋಂಕಿನಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಕುಂಠಿತವಾಗಿದ್ದು ಸುಳ್ಳಲ್ಲ. ಅದೆಷ್ಟೊ ಘಟಿಕೋತ್ಸವ ಸಮಾರಂಭಗಳು ಬೆರಳಣಿಕಯಷ್ಟೇ ವಿದ್ಯಾರ್ಥಿಗಳೊಂದಿಗೆ ಮುಗಿದು ಹೋಗಿದ್ದವು. ಇದೀಗ ಕೋವಿಡ್‌ ತೀವ್ರತೆ ಕಡಿಮೆಯಾದ ಬೆನ್ನಲ್ಲೇ ವಿಶ್ವವಿದ್ಯಾಲಯಗಳು ಸರದಿಯಲ್ಲಿ ಘಟಿಕೋತ್ಸವ ನಡೆಸಲು ಸಿದ್ದತೆ ನಡೆಸಿಕೊಂಡಿದೆ. ಈಗಾಗಲೇ ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ನಗರ ವಿವಿ, ರಾಜೀವ್‌ ಗಾಂಧಿ ಆರೋಗ್ಯ ವಿವಿ ಘಟಿಕೋತ್ಸವ ನಡೆಸಿವೆ. ಇದೀಗ ಕುವೆಂಪು ವಿಶ್ವವಿದ್ಯಾಲಯ ಎರಡು ವರ್ಷದ ಘಟಿಕೋತ್ಸವ ನಡೆಸುತ್ತಿದೆ.

ಇದನ್ನೂ ಓದಿ |ರಾಷ್ಟ್ರಕವಿ ಕುವೆಂಪು ಮತ್ತು ನಾಡಗೀತೆಗೆ ಅವಮಾನ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ

ಈ ಸಂಬಂಧ ಮಂಗಳವಾರ ಕುವೆಂಪು ವಿವಿ ಕುಲಪತಿ ಪ್ರೊ. ವೀರಭದ್ರಪ್ಪ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತಾನಾಡಿದ ಅವರು, ಜೂನ್‌ 16ರಂದು ವಿಶ್ವವಿದ್ಯಾಲಯದ 31 ಮತ್ತು 32ನೇ ವರ್ಷದ ವಾರ್ಷಿಕ ಘಟಿಕೋತ್ಸವ ನಡೆಸಲಾಗುತ್ತಿದೆ. ಇದಕ್ಕೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೊಟ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ, ಸಿಎಫ್‌ಟಿಆರ್‌ಐ ನಿರ್ದೇಶಕಿ ಡಾ. ಶ್ರೀದೇವಿ ಎ ಸಿಂಗ್ ಭಾಗಿಯಾಗಲಿದ್ದಾರೆ.

31 ಮತ್ತು 32ನೇ ಘಟಿಕೋತ್ಸವದಲ್ಲಿ ತಲಾ 3 ರಂತೆ 6 ಗಣ್ಯರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಗುತ್ತಿದೆ. 31ನೇ ಘಟಿಕೋತ್ಸವದಲ್ಲಿ ಡಿ.ಎಚ್. ಶಂಕರಮೂರ್ತಿ, ಗೀತಾ ನಾರಾಯಣನ್, ಭ.ಮ. ಶ್ರೀಕಂಠ ಹಾಗೂ 32ನೇ ಘಟಿಕೋತ್ಸವದಲ್ಲಿ ಪ್ರೊ.ಟಿ.ವಿ. ಕಟ್ಟಿಮನಿ, ಮಹಾಂತೇಶ್ ಜಿ. ಕಿವಡಸಣ್ಣವರ್, ಬಾ.ಸು. ಅರವಿಂದ ಅವವರಿಗೆ ನೀಡಲಾಗುತ್ತಿದೆ. 32ನೇ ಘಟಿಕೋತ್ಸವದಲ್ಲಿ 129 ಅಭ್ಯರ್ಥಿಗಳು ಪಿಎಚ್‌ಡಿ ಪದವಿಗೆ ಅರ್ಹರಾಗಿದ್ದು, ಒಟ್ಟು 20,638 ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳುತ್ತಿದ್ದಾರೆ.

232 ಸ್ವರ್ಣ ಪದಕ 66 ವಿದ್ಯಾರ್ಥಿಗಳಿಗೆ ಹಾಗೂ 15 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಪ್ರದಾನ ಮಾಡಲಾಗುತ್ತಿದೆ. ಕನ್ನಡ ಅಧ್ಯಯನ ವಿಭಾಗದ ದಿವ್ಯಾ ಎಚ್.ಎನ್ 11 ಸ್ವರ್ಣ ಪದಕ ಮತ್ತು 2 ನಗದು ಬಹುಮಾನ ಪಡೆದು ಅತಿ ಹೆಚ್ಚು ಪದಕ ಪಡೆದ ಸಾಲಿನಲ್ಲಿ ಇದ್ದಾರೆ ಎಂದು ವೀರಭದ್ರಪ್ಪ ಮಾಹಿತಿ ನೀಡಿದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ವಿದೇಶಕ್ಕೆ ಪರಾರಿಯಾದ ಯುವಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET-UG: ನೀಟ್‌ ಪರೀಕ್ಷೆ ವೇಳೆ ವಂಚನೆ; 10 ಲಕ್ಷ ರೂ.ಗೆ ಬೇಡಿಕೆ ಇಟ್ಟ ಶಿಕ್ಷಕ ಸೇರಿ ಮೂವರ ವಿರುದ್ಧ ಬಿತ್ತು ಕೇಸು

NEET-UG: ನೀಟ್-ಯುಜಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

NEET-UG
Koo

ಗಾಂಧಿನಗರ: ನೀಟ್-ಯುಜಿ (NEET-UG) ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಆರು ಅಭ್ಯರ್ಥಿಗಳಿಂದ ತಲಾ 10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಅವರನ್ನು ತೇರ್ಗಡೆ ಮಾಡುವುದಾಗಿ ಭರವಸೆ ನೀಡಿದ್ದ ಆರೋಪದ ಮೇಲೆ ಶಾಲಾ ಶಿಕ್ಷಕ ಮತ್ತು ಇತರ ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಗೋಧ್ರಾದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಭಾನುವಾರ (ಮೇ 5) ನೀಟ್-ಯುಜಿ ಪರೀಕ್ಷೆ ನಡೆಸಿತ್ತು. ಈ ವೇಳೆ ಗೋಧ್ರಾ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಕಲು ನಡೆದಿದೆ ಎಂಬ ಸುಳಿವು ಜಿಲ್ಲಾಧಿಕಾರಿಗೆ ದೊರೆತ ನಂತರ ತನಿಖೆ ನಡೆಸಲಾಗಿತ್ತು. ಈ ವೇಳೆ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳು

ಸದ್ಯ ಭೌತಶಾಸ್ತ್ರ ಶಿಕ್ಷಕ ತುಷಾರ್ ಭಟ್ ಮತ್ತು ಪರಶುರಾಮ್ ರಾಯ್, ಆರಿಫ್ ವೋರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತುಷಾರ್ ಭಟ್‌ ಕಾರಿನಲ್ಲಿ 7 ಲಕ್ಷ ರೂ. ಪತ್ತೆಯಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಇದು ಅಭ್ಯರ್ಥಿಯೊಬ್ಬರನ್ನು ಮೆರಿಟ್ ಪಟ್ಟಿಗೆ ಸೇರಿಸಲು ಸಹಾಯ ಮಾಡುವಂತೆ ವೋರಾ ಮುಂಗಡವಾಗಿ ಪಾವತಿಸಿದ ಮೊತ್ತ ಎಂದು ಪೊಲೀಸರು ತಿಳಿಸಿದ್ದಾರೆ.

ವಂಚನೆ ಹೇಗೆ?

ವಿಚಾರಣೆ ವೇಳೆ ವಂಚನೆಯ ಜಾಲದ ವಿವರ ಬೆಳಕಿಗೆ ಬಂದಿದೆ. ಆರೋಪಿಗಳು ಮತ್ತು ಕೆಲವು ನೀಟ್-ಯುಜಿ ಆಕಾಂಕ್ಷಿಗಳ ನಡುವೆ ಒಪ್ಪಂದ ನಡೆದಿತ್ತು. ಅದರ ಪ್ರಕಾರ ಅಭ್ಯರ್ಥಿಗಳು ತಮಗೆ ಗೊತ್ತಿಲ್ಲದ ಪ್ರಶ್ನೆಗೆ ಉತ್ತರ ಬರೆಯದೆ ಹಾಗೆ ಖಾಲಿ ಬಿಡಬೇಕಿತ್ತು. ಪರೀಕ್ಷೆಯ ನಂತರ ಉತ್ತರ ಪತ್ರಿಕೆಯನ್ನು ಸಂಗ್ರಹಿಸಿ ಆ ಖಾಲಿ ಸ್ಥಳವನ್ನು ಭರ್ತಿ ಮಾಡುವುದಾಗಿ ಒಪ್ಪಂದ ನಡೆದಿತ್ತು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ಜಿಲ್ಲಾ ಶಿಕ್ಷಣ ಅಧಿಕಾರಿಯ ದೂರಿನ ಮೇರೆಗೆ ಗೋಧ್ರಾ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯ್ ಜಲರಾಮ್ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತುಷಾರ್ ಭಟ್ ನೀಟ್‌ ಕೇಂದ್ರದ ಉಪ ಅಧೀಕ್ಷಕರಾಗಿ ನೇಮಕಗೊಂಡಿದ್ದರು. ತನಿಖೆ ವೇಳೆ ಅವರ ಮೊಬೈಲ್‌ನಲ್ಲಿ ಸಾಕ್ಷಿ ದೊರೆತಿದೆ. ಪರಶುರಾಮ್ ರಾಯ್ ವ್ಯಾಟ್‌ಆ್ಯಪ್‌ ಮೂಲಕ ಕಳುಹಿಸಿದ 16 ಅಭ್ಯರ್ಥಿಗಳ ಪಟ್ಟಿ ಕಂಡು ಬಂದಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಪಟ್ಟಿಯ ಬಗ್ಗೆ ಕೇಳಿದಾಗ ತುಷಾರ್‌ ಭಟ್‌, ಇವರು ತಮ್ಮ ಕೇಂದ್ರದಲ್ಲಿ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಎಂದು ಹೇಳಿದ್ದಾರೆ. ಈ ಅಭ್ಯರ್ಥಿಗಳು ಬಿಟ್ಟಿರುವ ಪ್ರಶ್ನೆಗಳಿಗೆ ಉತ್ತರಿಸಲು ತಲಾ 10 ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾ ಶಿಕ್ಷಣ ಅಧಿಕಾರಿ ಕಿರಿತ್ ಪಟೇಲ್ ತಿಳಿಸಿದ್ದಾರೆ.

ಸದ್ಯ ತುಷಾರ್‌ ಭಟ್‌ ಅವರ ಮೊಬೈಲ್‌ ಫೋನ್‌, ನಗದು ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಮೂವರು ಆರೋಪಿಗಳ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಲಾಗಿದೆ ಎಂದು ಗೋಧ್ರಾ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Continue Reading

ಉತ್ತರ ಕನ್ನಡ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

SSLC Result 2024: ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ. ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.

VISTARANEWS.COM


on

Koo

ಗೋಕರ್ಣ: ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ (SSLC Result 2024) ಸತತ ಮೂರನೇ ವರ್ಷ ಶೇಕಡಾ 100 ಫಲಿತಾಂಶ ಸಾಧಿಸಿದ್ದಾರೆ.

ಸಾರ್ವಭೌಮ ಗುರುಕುಲ ಪಾರಂಪರಿಕ ಮತ್ತು ನವಯುಗದ ಸಮನ್ವಯ ಶಿಕ್ಷಣ ನೀಡುವ ದೇಶದ ಏಕೈಕ ಸಂಸ್ಥೆಯಾಗಿದ್ದು, ಪಾರಂಪರಿಕ ವಿಭಾಗದಲ್ಲಿ ಸಾಧನೆ ಮಾಡುವ ಜತೆಜತೆಗೆ ನವಯುಗ ಶಿಕ್ಷಣದಲ್ಲೂ ಯಾವುದೇ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ನಾವು ಕಡಿಮೆ ಇಲ್ಲ ಎನ್ನುವುದನ್ನು ಈ ಸಾಧನೆ ತೋರಿಸಿಕೊಟ್ಟಿದೆ ಎಂದು ಮಾರ್ಗದರ್ಶಕರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ವಿದ್ಯಾರ್ಥಿಗಳ ಸಾಧನೆಯನ್ನು ಕೊಂಡಾಡಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

ವಿವಿವಿ ಅಂಕಗಳಿಕೆ ಶಿಕ್ಷಣಕ್ಕೆ ಒತ್ತು ನೀಡದೇ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ. ಆದಾಗ್ಯೂ ಅಂಕ ಗಳಿಕೆಯಲ್ಲೂ ನಮ್ಮ ವಿದ್ಯಾರ್ಥಿಗಳು ಮುಂದಿರುವುದು ಸಂಸ್ಥೆಯ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ. ದೇಶದ ಭಾವಿ ಪ್ರಜೆಗಳ ಭದ್ರ ಭವಿಷ್ಯದ ಅಡಿಪಾಯ ಇದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ಎಂದು ಅವರು ಆಶೀರ್ವದಿಸಿದ್ದಾರೆ.

ಪರೀಕ್ಷೆ ತೆಗೆದುಕೊಂಡ 33 ವಿದ್ಯಾರ್ಥಿಗಳ ಪೈಕಿ 19 ಮಂದಿ ಅತ್ಯುನ್ನತ ದರ್ಜೆಯಲ್ಲಿ 13 ಮಂದಿ ಪ್ರಥಮ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಭಟ್ಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಪನ್ನಗ ಎಸ್. ಭಟ್ 613 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದಿದ್ದರೆ, 603 ಅಂಕ ಗಳಿಸಿದ ರಾಮಚಂದ್ರ ಉಪಾಧ್ಯ ಎರಡನೇ ಸ್ಥಾನ ಗಳಿಸಿದ್ದಾರೆ. ತಲಾ 600 ಅಂಕಗಳನ್ನು ಪಡೆದ ಎನ್. ತನ್ವಿ ಗೌರಿ ಮತ್ತು ಸುಮುಖ ಹೆಗಡೆ ಜಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಅತ್ಯುತ್ತಮ ಸಾಧನೆಗೆ ಕಾರಣವಾಗಿರುವ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಹೆಗಡೆ, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಪಾರಂಪರಿಕ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮಾ ಮತ್ತಿತರರು ಅಭಿನಂದಿಸಿದ್ದಾರೆ.

Continue Reading

ಉತ್ತರ ಕನ್ನಡ

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

SSLC Result 2024: 2023-24 ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿದೆ. ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದು ವಿಶೇಷವಾಗಿದೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಯಲ್ಲಾಪುರದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡಾ ಉತ್ತಮ ಸಾಧನೆ ಮಾಡಿದ್ದು ಶೇ.98.24 ಫಲಿತಾಂಶ ಪಡೆದಿದೆ.

VISTARANEWS.COM


on

Yallapur Vishwadarshana Group of institutions performed well in SSLC Result 2024
Koo

ಯಲ್ಲಾಪುರ: 2023-24ನೇ ಸಾಲಿನ ರಾಜ್ಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢಶಾಲೆಗಳು ಉತ್ತಮ ಸಾಧನೆ ತೋರಿವೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.98.48 ಫಲಿತಾಂಶ ದಾಖಲಿಸಿದ್ದು, ಶಾಲೆಯ ವಿದ್ಯಾರ್ಥಿನಿ ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಅದೇ ರೀತಿ ಇಡಗುಂದಿಯ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣಗೊಂಡು ನೂರಕ್ಕೆ ನೂರು ಫಲಿತಾಂಶ ದಾಖಲಿಸಿ ಗಮನ ಸೆಳೆದಿದ್ದಾರೆ. ಪಟ್ಟಣದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯುೂ ಕೂಡ ಉತ್ತಮ ಸಾಧನೆ ಮಾಡಿದ್ದು, ಶೇ.98.24 ಫಲಿತಾಂಶ ಪಡೆದಿದೆ.

ಇದನ್ನೂ ಓದಿ: Olive Oil Benefits: ಆಲಿವ್‌ ಎಣ್ಣೆ ಕೇವಲ ಅಡುಗೆಗಲ್ಲ, ಮುಖದ ಚರ್ಮ ಹಾಗೂ ಕೂದಲ ಸೌಂದರ್ಯಕ್ಕೂ ಬೇಕು!

ಈ ಕುರಿತು ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ ಅವರು ಸಂತಸ ವ್ಯಕ್ತಪಡಿಸಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಮೂಹವು ನಿರಂತರವಾಗಿ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾದ ಪದವಿಪೂರ್ವ ಕಾಲೇಜು ಇದ್ದು, ಇಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಬಹುದಾಗಿದೆ. ಹತ್ತನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಸ್ವಂತ ಊರಿನಲ್ಲಿಯೇ ಮುಂದಿನ ಶಿಕ್ಷಣಕ್ಕಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆ: ಶೇ.98.48 ಫಲಿತಾಂಶ

ಪ್ರಣತಿ ವಿ. ಮೆಣಸುಮನೆ 625ಕ್ಕೆ 620 ಅಂಕ ಗಳಿಸಿ ಶೇ. 99.20 ಫಲಿತಾಂಶದೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಶಾಲೆಗೆ ಪ್ರಥಮ ಸ್ಥಾನ, ಸಿಂಚನಾ ಎಸ್. ಭಟ್ಟ 615 ಅಂಕ ಗಳಿಸಿ ಶೇ.98.40 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ, ತೇಜಸ್ ಎಸ್. ಹೆಗಡೆ 609 ಅಂಕ ಗಳಿಸಿ ಶೇ.97.44 ಫಲಿತಾಂಶದೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು 66 ವಿದ್ಯಾರ್ಥಿಗಳಲ್ಲಿ 33 ಡಿಸ್ಟಿಂಕ್ಷನ್‌ನಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ದರ್ಜೆ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿಶ್ವದರ್ಶನ ಪ್ರೌಢಶಾಲೆ ಇಡಗುಂದಿ: ಶೇ. 100% ಫಲಿತಾಂಶ ಸಾಧನೆ

ತಾಲೂಕಿನ ಇಡಗುಂದಿಯಲ್ಲಿರುವ ವಿಶ್ವದರ್ಶನ ಪ್ರೌಢಶಾಲೆಯು ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 35 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 22 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಗಣೇಶ ಶಾಂತಾರಾಮ ದೇಸಾಯಿ 587 (93.92%) ಪ್ರಥಮ ಸ್ಥಾನ, ನಂದಿತಾ ಮಹೇಶ ತಾಮ್ಸೆ 583 (93.28%) ದ್ವಿತೀಯ ಸ್ಥಾನ ಹಾಗೂ ಸುಬ್ರಹ್ಮಣ್ಯ ನಾರಾಯಣ ಭಟ್ಟ 571 (91.36%) ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆ, ಯಲ್ಲಾಪುರ: ಶೇ. 98.24 ಫಲಿತಾಂಶ

ಅನನ್ಯ ನಾಗೇಶ ಹೆಗಡೆ 579 ಅಂಕ ಗಳಿಸಿ ಪ್ರಥಮ ಸ್ಥಾನ, ವೇದಶ್ರೀ ವೆಂಕಟರಮಣ ಭಟ್ಟ 570 ಅಂಕ ಗಳಿಸಿ ದ್ವಿತೀಯ ಸ್ಥಾನ, ಪವನ್ ಚಂದ್ರಕಾಂತ ಮರಾಠಿ 563 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಒಟ್ಟು 57 ವಿದ್ಯಾರ್ಥಿಗಳಲ್ಲಿ 10 ವಿಧ್ಯಾರ್ಥಿಗಳು ಡಿಸ್ಟಿಂಕ್ಷನ್ 33 ವಿಧ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Continue Reading

ಕರ್ನಾಟಕ

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

SSLC Result 2024: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಹಾಸನ ಜಿಲ್ಲೆಯಲ್ಲಿ ಅಪರೂಪದ ಪ್ರಸಂಗ ನಡೆದಿದೆ. ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್ ಆಗಿದ್ದಾರೆ. ಸಕಲೇಶಪುರ ತಾಲೂಕಿನ ಚಿನ್ನಳ್ಳಿ ಗ್ರಾಮದಲ್ಲಿ ಎರಡನೇ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ 38 ವರ್ಷದ ಜ್ಯೋತಿ.ಪಿ.ಆರ್. ಉತ್ತೀರ್ಣರಾಗಿದ್ದಾರೆ.

VISTARANEWS.COM


on

Mother passed SSLC exam with her son in Hassan
Koo

ಹಾಸನ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದ್ದು, ಹಾಸನ ಜಿಲ್ಲೆಯಲ್ಲಿ ಅಪರೂಪದ ಪ್ರಸಂಗ ನಡೆದಿದೆ. ಎಸ್‌ಎಸ್‌‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್ ಆಗಿದ್ದಾರೆ. ಸಕಲೇಶಪುರ ತಾಲೂಕಿನ ಚಿನ್ನಳ್ಳಿ ಗ್ರಾಮದಲ್ಲಿ ಎರಡನೇ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ 38 ವರ್ಷದ ಜ್ಯೋತಿ ಪಿ.ಆರ್. ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ತಾಯಿ-ಮಗ ಪಾಸ್‌

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಸಿದ್ದಣ್ಯಯ್ಯ ಹೈಸ್ಕೂಲ್‍ನಲ್ಲಿ ಮಗ ನಿತಿನ್ ಸಿ.ಬಿ. ಜತೆ ತಾಯಿ ಜ್ಯೋತಿ ಪಿ.ಆರ್. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದರು. 250 ಅಂಕ ಪಡೆದು ಜ್ಯೋತಿ ಪಿ.ಆರ್. ಉತ್ತಿರ್ಣರಾಗಿದ್ದಾರೆ. ನಿತಿನ್‌ ಸಿ.ಬಿ. 582 ಅಂಕ ಪಡೆದಿದ್ದಾರೆ. ಬಾಳ್ಳುಪೇಟೆಯಲ್ಲಿರುವ ವಿವೇಕ ಕಾನ್ವೆಂಟ್‍ನಲ್ಲಿ ನಿತಿನ್ ಸಿ.ಬಿ. ಓದುತ್ತಿದ್ದಾರೆ.

ಕುಟುಂಬದಲ್ಲಿ ಮನೆ ಮಾಡಿದ ಸಂಭ್ರಮ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಉತ್ತೀರ್ಣರಾಗಿದ್ದಕ್ಕೆ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

SSLC Result 2024: ಎಸ್‌ಎಸ್‌ಎಲ್‌ಸಿ ‌ಉತ್ತರ ಪತ್ರಿಕೆ ಮರು ಮೌಲ್ಯಮಾಪನ, ಮರುಎಣಿಕೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್‌ನಲ್ಲಷ್ಟೆ ಅವಕಾಶ

ರಾಜ್ಯಾದ್ಯಂತ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Result 2024) ಫಲಿತಾಂಶವು ಮೇ 9ರಂದು ಪ್ರಕಟಿಸಲಾಗಿದೆ. ಇದೀಗ ಪರೀಕ್ಷೆಯ ಉತ್ತರ ಪತ್ರಿಕೆಗಳ ಪ್ರತಿಗಳನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದೆ. ಸ್ಕ್ಯಾನ್‌ ಪ್ರತಿ, ಮರು ಎಣಿಕೆ ಮತ್ತು ಮರುಮೌಲ್ಯಮಾಪನಕ್ಕೆ ಮಂಡಳಿಯ ವೆಬ್‌ಸೈಟ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Karnataka Weather : ಕೊಡಗು, ಕೊಪ್ಪಳ ಸೇರಿ ಹಲವೆಡೆ ಅಬ್ಬರಿಸುತ್ತಿರುವ ಗಾಳಿ- ಮಳೆ; ನಾಳೆಗೂ ವಾರ್ನಿಂಗ್‌

ಮೇ 9ರಿಂದ 16ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಯನ್ನು ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 13ರಿಂದ 22ವರೆಗೆ ಅರ್ಜಿ ಸಲ್ಲಿಸಬಹುದು ಜತೆಗೆ ಶುಲ್ಕವನ್ನು ಪಾವತಿಬಹುದಾಗಿದೆ.

ಇನ್ನೂ ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಬದಲಿಗೆ ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕಿದೆ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಯನ್ನು ಪಡೆಯಬೇಕು.

ಸ್ಕ್ಯಾನ್‌ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದರೆ, ಅದನ್ನೂ ಖಚಿತಪಡಿಸಿಕೊಂಡ ನಂತರವಷ್ಟೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಗೊಳಿಸಲಾಗಿದೆ. ಮರುಎಣಿಕೆ ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಇನ್ನೂ ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರು ಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ, ನಂತರ ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: Sensex Crash : ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ, ಸೆನ್ಸೆಕ್ಸ್​ 1100 ಅಂಕಗಳಷ್ಟು ಪತನ

ಸಹಾಯವಾಣಿಗೆ ಕರೆ ಮಾಡಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪಡೆಯುವ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಯಾವುದೇ ಮಾಹಿತಿ ಪಡೆಯಬಹುದಾಗಿದೆ. ಹೀಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಹಾಯವಾಣಿಯನ್ನು ಆರಂಭವಿಸಿದೆ. ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 080 23310075, 23310076ಕ್ಕೆ ಕರೆ ಮಾಡಬಹುದು.

Continue Reading
Advertisement
Viral News
ವೈರಲ್ ನ್ಯೂಸ್4 mins ago

Viral News: ಕುಡಿದ ಮತ್ತಿನಲ್ಲಿ ಪೊಲೀಸ್‌ ಪೇದೆಯ ಕೈ ಕಚ್ಚಿ, ಬಟ್ಟೆ ಹರಿದು ಹಲ್ಲೆ ಮಾಡಿದ ಮಹಿಳೆಯರು

Laila Khan
ಸಿನಿಮಾ13 mins ago

Laila Khan: ಮಲತಂದೆಯಿಂದಲೇ ಹತ್ಯೆಯಾದ ಜಗ್ಗೇಶ್‌ ಚಿತ್ರದ ನಾಯಕಿ; 13 ವರ್ಷಗಳ ಬಳಿಕ ತೀರ್ಪು ಪ್ರಕಟ

Kantilal Bhuria
ದೇಶ14 mins ago

Kantilal Bhuria: ಒಬ್ಬನಿಗೆ ಇಬ್ಬರು ಹೆಂಡತಿಯರು ಇದ್ದರೆ ಕಾಂಗ್ರೆಸ್‌ನಿಂದ 2 ಲಕ್ಷ ರೂ. ಎಂದ ಕೈ ನಾಯಕ; ಬಿಜೆಪಿ ಟೀಕೆ

Union Minister Pralhad Joshi latest Statement in hubli
ಕರ್ನಾಟಕ26 mins ago

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ: ಸಚಿವ ಪ್ರಲ್ಹಾದ್‌ ಜೋಶಿ

Rahul gandhi
ದೇಶ44 mins ago

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Madhavi Latha
ದೇಶ47 mins ago

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

Covishield Vaccine
ಪ್ರಮುಖ ಸುದ್ದಿ58 mins ago

Covishield: ಭಾರತದಲ್ಲೂ ಎಲ್ಲಾ ಕೋವಿಡ್ ಲಸಿಕೆಗಳ ಸೈಡ್‌ ಎಫೆಕ್ಟ್‌ ಪರಿಶೀಲಿಸಿ: ವೈದ್ಯರ ಒತ್ತಾಯ

Kannada New Movie
ಸಿನಿಮಾ1 hour ago

Kannada New Movie: ‘ಗಾಡ್ ಪ್ರಾಮಿಸ್’ ಚಿತ್ರಕ್ಕೆ ಮುನ್ನುಡಿ; ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ

Aravind Kejriwal
ಪ್ರಮುಖ ಸುದ್ದಿ2 hours ago

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

KIA bengaluru terminal 2
ಪ್ರಮುಖ ಸುದ್ದಿ2 hours ago

Terminal 2: ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ; ವಿಮಾನ ಹಾರಾಟ ಅಸ್ತವ್ಯಸ್ತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ2 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ5 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ11 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ19 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ20 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌